Homeಮುಖಪುಟಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು 44 ಶಾಸಕರು ಸಿದ್ಧರಿದ್ದಾರೆ: ರಾಜ್ಯಪಾಲರ ಭೇಟಿ ಬಳಿಕ ಬಿಜೆಪಿ ನಾಯಕ...

ಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು 44 ಶಾಸಕರು ಸಿದ್ಧರಿದ್ದಾರೆ: ರಾಜ್ಯಪಾಲರ ಭೇಟಿ ಬಳಿಕ ಬಿಜೆಪಿ ನಾಯಕ ಹೇಳಿಕೆ

- Advertisement -
- Advertisement -

ಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು ನಲವತ್ತ ನಾಲ್ಕು ಶಾಸಕರು ಸಿದ್ಧರಿದ್ದಾರೆ ಎಂದು ಬಿಜೆಪಿ ಶಾಸಕ ಥೋಕ್ಚೋಮ್ ರಾಧೇಶ್ಯಾಮ್ ಸಿಂಗ್ ಬುಧವಾರ (ಮೇ.28) ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರನ್ನು ಭೇಟಿಯಾದ ನಂತರ ಹೇಳಿದ್ದಾರೆ.

ರಾಧೇಶ್ಯಾಮ್ ಸಿಂಗ್, ಇತರ ಒಂಬತ್ತು ಶಾಸಕರೊಂದಿಗೆ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ.

“ಜನರ ಆಶಯದಂತೆ 44 ಶಾಸಕರು ಸರ್ಕಾರ ರಚಿಸಲು ಸಿದ್ಧರಿದ್ದಾರೆ. ನಾವು ಇದನ್ನು ರಾಜ್ಯಪಾಲರಿಗೆ ತಿಳಿಸಿದ್ದೇವೆ. ಈ ಸಮಸ್ಯೆಗೆ ಯಾವ ಪರಿಹಾರಗಳಿವೆ ಎಂಬುದರ ಕುರಿತು ನಾವು ಚರ್ಚಿಸಿದ್ದೇವೆ” ಎಂದು ಸಿಂಗ್ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ.

“ನಾವು ಹೇಳಿದ್ದನ್ನು ರಾಜ್ಯಪಾಲರು ಕೇಳಿಸಿಕೊಂಡಿದ್ದಾರೆ. ಜನರ ಹಿತಾಸಕ್ತಿಗಾಗಿ ಅವರು ಕ್ರಮ ಕೈಗೊಳ್ಳುತ್ತಾರೆ” ಎಂದು ಸಿಂಗ್ ತಿಳಿಸಿದ್ದಾರೆ.

“ಸರ್ಕಾರ ರಚಿಸಲು ಹಕ್ಕು ಮಂಡಿಸುತ್ತೀರಾ?” ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಂಗ್, “ಬಿಜೆಪಿಯ ಕೇಂದ್ರ ನಾಯಕತ್ವವು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ” ಎಂದಿದ್ದಾರೆ.

“ಆದಾಗ್ಯೂ, ನಾವು ಸಿದ್ಧರಿದ್ದೇವೆ ಎಂದು ತಿಳಿಸುವುದು ಸರ್ಕಾರ ರಚಿಸಲು ಹಕ್ಕು ಮಂಡಿಸುವುದಕ್ಕೆ ಸಮಾನವಾಗಿದೆ. ಸ್ಪೀಕರ್ ಟಿ. ಸತ್ಯಬ್ರತ ಅವರು 44 ಶಾಸಕರನ್ನು ಪ್ರತ್ಯೇಕವಾಗಿ ಮತ್ತು ಜಂಟಿಯಾಗಿ ಭೇಟಿ ಮಾಡಿದ್ದಾರೆ. ಹೊಸ ಸರ್ಕಾರ ರಚನೆಯನ್ನು ವಿರೋಧಿಸುವವರು ಯಾರೂ ಇಲ್ಲ” ಎಂದು ಸಿಂಗ್ ಹೇಳಿದ್ದಾರೆ.

“ಜನರು ತುಂಬಾ ಕಷ್ಟಗಳನ್ನು ಎದುರಿಸುತ್ತಿದ್ದಾರೆ. ಹಿಂದಿನ ಅವಧಿಯಲ್ಲಿ, ಕೋವಿಡ್‌ನಿಂದಾಗಿ ಎರಡು ವರ್ಷಗಳು ಕಳೆದುಹೋಗಿದ್ದವು. ಈ ಅವಧಿಯಲ್ಲಿ, ಸಂಘರ್ಷದಿಂದಾಗಿ ಇನ್ನೂ ಎರಡು ವರ್ಷಗಳು ಕಳೆದುಹೋಗಿವೆ” ಎಂದು ರಾಧೇಶ್ಯಾಮ್ ಸಿಂಗ್ ಹೇಳಿಕೆ ನೀಡದ್ದಾರೆ.

ಮೇ 2023ರಲ್ಲಿ ಭುಗಿಲೆದ್ದ ಮೈತೇಯಿ ಮತ್ತು ಕುಕಿ-ಝೋ ಸಮುದಾಯಗಳ ನಡುವಿನ ಜನಾಂಗೀಯ ಸಂಘರ್ಷವನ್ನು ಸರ್ಕಾರ ನಿಭಾಯಿಸಿದ ರೀತಿ ಬಗ್ಗೆ ಟೀಕೆಗಳ ನಡುವೆ, ಬಿಜೆಪಿ ನಾಯಕ ಎನ್. ಬಿರೇನ್ ಸಿಂಗ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹಾಗಾಗಿ, ಕಳೆದ ಫೆಬ್ರವರಿಯಿಂದ ಮಣಿಪುರ ರಾಷ್ಟ್ರಪತಿ ಆಳ್ವಿಕೆಯಲ್ಲಿದೆ.

60 ಸದಸ್ಯ ಬಲದ ವಿಧಾನಸಭೆಯಲ್ಲಿ ಪ್ರಸ್ತುತ 59 ಶಾಸಕರಿದ್ದು, ಒಬ್ಬರು ಶಾಸಕರ ಮರಣದಿಂದಾಗಿ ಒಂದು ಸ್ಥಾನ ಖಾಲಿ ಇದೆ.

ಬಿಜೆಪಿ ನೇತೃತ್ವದ ಒಕ್ಕೂಟದಲ್ಲಿ 32 ಮೈತೇಯಿ ಶಾಸಕರು, ಮೂವರು ಮಣಿಪುರಿ ಮುಸ್ಲಿಂ ಶಾಸಕರು ಮತ್ತು ಒಂಬತ್ತು ನಾಗಾ ಶಾಸಕರು ಸೇರಿ ಒಟ್ಟು 44 ಜನರಿದ್ದಾರೆ.

ಕಾಂಗ್ರೆಸ್‌ನ ಐವರು ಶಾಸಕರಿದ್ದು, ಅವರೆಲ್ಲರೂ ಮೈತೇಯಿ ಸಮುದಾಯಕ್ಕೆ ಸೇರಿದವರು.

ಉಳಿದ 10 ಶಾಸಕರು ಕುಕಿಗಳು. ಅವರಲ್ಲಿ ಏಳು ಮಂದಿ ಕಳೆದ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಗೆದ್ದವರು. ಇಬ್ಬರು ಕುಕಿ ಪೀಪಲ್ಸ್ ಅಲೈಯನ್ಸ್‌ಗೆ ಸೇರಿದವರು ಮತ್ತು ಒಬ್ಬರು ಸ್ವತಂತ್ರರು.

ಸರ್ಕಾರಿ ಬಸ್ಸಿನ ವಿಂಡ್ ಶೀಲ್ಡ್ ಮೇಲೆ ಬರೆದಿದ್ದ ಮಣಿಪುರ ರಾಜ್ಯದ ಹೆಸರನ್ನು ಭದ್ರತಾ ಪಡೆಗಳು ಮರೆಮಾಡಿದ್ದಕ್ಕೆ ಮೈತೇಯಿ ಜನವಸತಿ ಪ್ರದೇಶವಾದ ಇಂಫಾಲ್ ಕಣಿವೆಯಲ್ಲಿ ಭಾರೀ ಪ್ರತಿಭಟನೆಗಳು ನಡೆಯುತ್ತಿರುವ ಮಧ್ಯೆ ಸರ್ಕಾರ ರಚನೆಯೆ ಬೆಳವಣಿಗೆ ನಡೆದಿದೆ.

ಮೇ 20ರಂದು ಗ್ವಾಲ್ತಾಬಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ರಾಜ್ಯಪಾಲರು ಕ್ಷಮೆಯಾಚಿಸಬೇಕು. ಸರ್ಕಾರದ ಮುಖ್ಯ ಕಾರ್ಯದರ್ಶಿ, ಡಿಜಿಪಿ ಮತ್ತು ಭದ್ರತಾ ಸಲಹೆಗಾರ ​​ರಾಜೀನಾಮೆ ನೀಡಬೇಕು ಎಂದು ಮೈತೇಯಿ ಗುಂಪುಗಳು ಒತ್ತಾಯಿಸಿವೆ.

ಮೇ 2023ರಲ್ಲಿ 250ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಜನಾಂಗೀಯ ಕಲಹ ಪ್ರಾರಂಭವಾದಾಗಿನಿಂದ, ಮೈತೇಯಿ ಗುಂಪುಗಳು ಯಾವುದೇ ಶಾಂತಿ ಪ್ರಕ್ರಿಯೆಯಲ್ಲಿ ರಾಜ್ಯದ ಪ್ರಾದೇಶಿಕ ಸಮಗ್ರತೆಯ ಬಗ್ಗೆ ಮಾತುಕತೆಗೆ ಅವಕಾಶವಿಲ್ಲ ಎಂದು ವಾದಿಸುತ್ತಿವೆ. ಆದರೆ, ಕುಕಿ-ಝೋ ಸಂಘಟನೆಗಳು ಬಿಕ್ಕಟ್ಟನ್ನು ಪರಿಹರಿಸಲು ಏಕೈಕ ಪರಿಹಾರವೆಂದರೆ ತಮ್ಮ ಸಮುದಾಯ ವಾಸಿಸುವ ಬೆಟ್ಟದ ಜಿಲ್ಲೆಗಳಿಗೆ ಪ್ರತ್ಯೇಕ ಆಡಳಿತವನ್ನು ರಚಿಸುವುದು ಎಂದು ಪ್ರತಿಪಾದಿಸುತ್ತಿವೆ.

ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಕೈಗೊಂಡಿರುವ ಹಲವಾರು ಕ್ರಮಗಳಿಂದಾಗಿ ಇತ್ತೀಚಿನ ತಿಂಗಳುಗಳಲ್ಲಿ ರಾಜ್ಯದಲ್ಲಿ ಹಿಂಸಚಾರ ಕಡಿಮೆಯಾಗುತ್ತಿದ್ದ ಎನ್ನಲಾಗುತ್ತಿತ್ತು. ಈ ನಡುವೆ ಗ್ವಾಲ್ತಾಬಿ ಘಟನೆಯಿಂದ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ ಎಂದು ವರದಿಗಳು ಹೇಳಿವೆ.

ಮಣಿಪುರದಲ್ಲಿ ಶಾಂತಿ ಕಾಪಾಡುವಲ್ಲಿ ರಾಷ್ಟ್ರಪತಿ ಆಳ್ವಿಕೆ ವಿಫಲ: ಕಾಂಗ್ರೆಸ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...