Homeಮುಖಪುಟಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು 44 ಶಾಸಕರು ಸಿದ್ಧರಿದ್ದಾರೆ: ರಾಜ್ಯಪಾಲರ ಭೇಟಿ ಬಳಿಕ ಬಿಜೆಪಿ ನಾಯಕ...

ಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು 44 ಶಾಸಕರು ಸಿದ್ಧರಿದ್ದಾರೆ: ರಾಜ್ಯಪಾಲರ ಭೇಟಿ ಬಳಿಕ ಬಿಜೆಪಿ ನಾಯಕ ಹೇಳಿಕೆ

- Advertisement -
- Advertisement -

ಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು ನಲವತ್ತ ನಾಲ್ಕು ಶಾಸಕರು ಸಿದ್ಧರಿದ್ದಾರೆ ಎಂದು ಬಿಜೆಪಿ ಶಾಸಕ ಥೋಕ್ಚೋಮ್ ರಾಧೇಶ್ಯಾಮ್ ಸಿಂಗ್ ಬುಧವಾರ (ಮೇ.28) ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರನ್ನು ಭೇಟಿಯಾದ ನಂತರ ಹೇಳಿದ್ದಾರೆ.

ರಾಧೇಶ್ಯಾಮ್ ಸಿಂಗ್, ಇತರ ಒಂಬತ್ತು ಶಾಸಕರೊಂದಿಗೆ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ.

“ಜನರ ಆಶಯದಂತೆ 44 ಶಾಸಕರು ಸರ್ಕಾರ ರಚಿಸಲು ಸಿದ್ಧರಿದ್ದಾರೆ. ನಾವು ಇದನ್ನು ರಾಜ್ಯಪಾಲರಿಗೆ ತಿಳಿಸಿದ್ದೇವೆ. ಈ ಸಮಸ್ಯೆಗೆ ಯಾವ ಪರಿಹಾರಗಳಿವೆ ಎಂಬುದರ ಕುರಿತು ನಾವು ಚರ್ಚಿಸಿದ್ದೇವೆ” ಎಂದು ಸಿಂಗ್ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ.

“ನಾವು ಹೇಳಿದ್ದನ್ನು ರಾಜ್ಯಪಾಲರು ಕೇಳಿಸಿಕೊಂಡಿದ್ದಾರೆ. ಜನರ ಹಿತಾಸಕ್ತಿಗಾಗಿ ಅವರು ಕ್ರಮ ಕೈಗೊಳ್ಳುತ್ತಾರೆ” ಎಂದು ಸಿಂಗ್ ತಿಳಿಸಿದ್ದಾರೆ.

“ಸರ್ಕಾರ ರಚಿಸಲು ಹಕ್ಕು ಮಂಡಿಸುತ್ತೀರಾ?” ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಂಗ್, “ಬಿಜೆಪಿಯ ಕೇಂದ್ರ ನಾಯಕತ್ವವು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ” ಎಂದಿದ್ದಾರೆ.

“ಆದಾಗ್ಯೂ, ನಾವು ಸಿದ್ಧರಿದ್ದೇವೆ ಎಂದು ತಿಳಿಸುವುದು ಸರ್ಕಾರ ರಚಿಸಲು ಹಕ್ಕು ಮಂಡಿಸುವುದಕ್ಕೆ ಸಮಾನವಾಗಿದೆ. ಸ್ಪೀಕರ್ ಟಿ. ಸತ್ಯಬ್ರತ ಅವರು 44 ಶಾಸಕರನ್ನು ಪ್ರತ್ಯೇಕವಾಗಿ ಮತ್ತು ಜಂಟಿಯಾಗಿ ಭೇಟಿ ಮಾಡಿದ್ದಾರೆ. ಹೊಸ ಸರ್ಕಾರ ರಚನೆಯನ್ನು ವಿರೋಧಿಸುವವರು ಯಾರೂ ಇಲ್ಲ” ಎಂದು ಸಿಂಗ್ ಹೇಳಿದ್ದಾರೆ.

“ಜನರು ತುಂಬಾ ಕಷ್ಟಗಳನ್ನು ಎದುರಿಸುತ್ತಿದ್ದಾರೆ. ಹಿಂದಿನ ಅವಧಿಯಲ್ಲಿ, ಕೋವಿಡ್‌ನಿಂದಾಗಿ ಎರಡು ವರ್ಷಗಳು ಕಳೆದುಹೋಗಿದ್ದವು. ಈ ಅವಧಿಯಲ್ಲಿ, ಸಂಘರ್ಷದಿಂದಾಗಿ ಇನ್ನೂ ಎರಡು ವರ್ಷಗಳು ಕಳೆದುಹೋಗಿವೆ” ಎಂದು ರಾಧೇಶ್ಯಾಮ್ ಸಿಂಗ್ ಹೇಳಿಕೆ ನೀಡದ್ದಾರೆ.

ಮೇ 2023ರಲ್ಲಿ ಭುಗಿಲೆದ್ದ ಮೈತೇಯಿ ಮತ್ತು ಕುಕಿ-ಝೋ ಸಮುದಾಯಗಳ ನಡುವಿನ ಜನಾಂಗೀಯ ಸಂಘರ್ಷವನ್ನು ಸರ್ಕಾರ ನಿಭಾಯಿಸಿದ ರೀತಿ ಬಗ್ಗೆ ಟೀಕೆಗಳ ನಡುವೆ, ಬಿಜೆಪಿ ನಾಯಕ ಎನ್. ಬಿರೇನ್ ಸಿಂಗ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹಾಗಾಗಿ, ಕಳೆದ ಫೆಬ್ರವರಿಯಿಂದ ಮಣಿಪುರ ರಾಷ್ಟ್ರಪತಿ ಆಳ್ವಿಕೆಯಲ್ಲಿದೆ.

60 ಸದಸ್ಯ ಬಲದ ವಿಧಾನಸಭೆಯಲ್ಲಿ ಪ್ರಸ್ತುತ 59 ಶಾಸಕರಿದ್ದು, ಒಬ್ಬರು ಶಾಸಕರ ಮರಣದಿಂದಾಗಿ ಒಂದು ಸ್ಥಾನ ಖಾಲಿ ಇದೆ.

ಬಿಜೆಪಿ ನೇತೃತ್ವದ ಒಕ್ಕೂಟದಲ್ಲಿ 32 ಮೈತೇಯಿ ಶಾಸಕರು, ಮೂವರು ಮಣಿಪುರಿ ಮುಸ್ಲಿಂ ಶಾಸಕರು ಮತ್ತು ಒಂಬತ್ತು ನಾಗಾ ಶಾಸಕರು ಸೇರಿ ಒಟ್ಟು 44 ಜನರಿದ್ದಾರೆ.

ಕಾಂಗ್ರೆಸ್‌ನ ಐವರು ಶಾಸಕರಿದ್ದು, ಅವರೆಲ್ಲರೂ ಮೈತೇಯಿ ಸಮುದಾಯಕ್ಕೆ ಸೇರಿದವರು.

ಉಳಿದ 10 ಶಾಸಕರು ಕುಕಿಗಳು. ಅವರಲ್ಲಿ ಏಳು ಮಂದಿ ಕಳೆದ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಗೆದ್ದವರು. ಇಬ್ಬರು ಕುಕಿ ಪೀಪಲ್ಸ್ ಅಲೈಯನ್ಸ್‌ಗೆ ಸೇರಿದವರು ಮತ್ತು ಒಬ್ಬರು ಸ್ವತಂತ್ರರು.

ಸರ್ಕಾರಿ ಬಸ್ಸಿನ ವಿಂಡ್ ಶೀಲ್ಡ್ ಮೇಲೆ ಬರೆದಿದ್ದ ಮಣಿಪುರ ರಾಜ್ಯದ ಹೆಸರನ್ನು ಭದ್ರತಾ ಪಡೆಗಳು ಮರೆಮಾಡಿದ್ದಕ್ಕೆ ಮೈತೇಯಿ ಜನವಸತಿ ಪ್ರದೇಶವಾದ ಇಂಫಾಲ್ ಕಣಿವೆಯಲ್ಲಿ ಭಾರೀ ಪ್ರತಿಭಟನೆಗಳು ನಡೆಯುತ್ತಿರುವ ಮಧ್ಯೆ ಸರ್ಕಾರ ರಚನೆಯೆ ಬೆಳವಣಿಗೆ ನಡೆದಿದೆ.

ಮೇ 20ರಂದು ಗ್ವಾಲ್ತಾಬಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ರಾಜ್ಯಪಾಲರು ಕ್ಷಮೆಯಾಚಿಸಬೇಕು. ಸರ್ಕಾರದ ಮುಖ್ಯ ಕಾರ್ಯದರ್ಶಿ, ಡಿಜಿಪಿ ಮತ್ತು ಭದ್ರತಾ ಸಲಹೆಗಾರ ​​ರಾಜೀನಾಮೆ ನೀಡಬೇಕು ಎಂದು ಮೈತೇಯಿ ಗುಂಪುಗಳು ಒತ್ತಾಯಿಸಿವೆ.

ಮೇ 2023ರಲ್ಲಿ 250ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಜನಾಂಗೀಯ ಕಲಹ ಪ್ರಾರಂಭವಾದಾಗಿನಿಂದ, ಮೈತೇಯಿ ಗುಂಪುಗಳು ಯಾವುದೇ ಶಾಂತಿ ಪ್ರಕ್ರಿಯೆಯಲ್ಲಿ ರಾಜ್ಯದ ಪ್ರಾದೇಶಿಕ ಸಮಗ್ರತೆಯ ಬಗ್ಗೆ ಮಾತುಕತೆಗೆ ಅವಕಾಶವಿಲ್ಲ ಎಂದು ವಾದಿಸುತ್ತಿವೆ. ಆದರೆ, ಕುಕಿ-ಝೋ ಸಂಘಟನೆಗಳು ಬಿಕ್ಕಟ್ಟನ್ನು ಪರಿಹರಿಸಲು ಏಕೈಕ ಪರಿಹಾರವೆಂದರೆ ತಮ್ಮ ಸಮುದಾಯ ವಾಸಿಸುವ ಬೆಟ್ಟದ ಜಿಲ್ಲೆಗಳಿಗೆ ಪ್ರತ್ಯೇಕ ಆಡಳಿತವನ್ನು ರಚಿಸುವುದು ಎಂದು ಪ್ರತಿಪಾದಿಸುತ್ತಿವೆ.

ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಕೈಗೊಂಡಿರುವ ಹಲವಾರು ಕ್ರಮಗಳಿಂದಾಗಿ ಇತ್ತೀಚಿನ ತಿಂಗಳುಗಳಲ್ಲಿ ರಾಜ್ಯದಲ್ಲಿ ಹಿಂಸಚಾರ ಕಡಿಮೆಯಾಗುತ್ತಿದ್ದ ಎನ್ನಲಾಗುತ್ತಿತ್ತು. ಈ ನಡುವೆ ಗ್ವಾಲ್ತಾಬಿ ಘಟನೆಯಿಂದ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ ಎಂದು ವರದಿಗಳು ಹೇಳಿವೆ.

ಮಣಿಪುರದಲ್ಲಿ ಶಾಂತಿ ಕಾಪಾಡುವಲ್ಲಿ ರಾಷ್ಟ್ರಪತಿ ಆಳ್ವಿಕೆ ವಿಫಲ: ಕಾಂಗ್ರೆಸ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...