Homeಮುಖಪುಟಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು 44 ಶಾಸಕರು ಸಿದ್ಧರಿದ್ದಾರೆ: ರಾಜ್ಯಪಾಲರ ಭೇಟಿ ಬಳಿಕ ಬಿಜೆಪಿ ನಾಯಕ...

ಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು 44 ಶಾಸಕರು ಸಿದ್ಧರಿದ್ದಾರೆ: ರಾಜ್ಯಪಾಲರ ಭೇಟಿ ಬಳಿಕ ಬಿಜೆಪಿ ನಾಯಕ ಹೇಳಿಕೆ

- Advertisement -
- Advertisement -

ಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು ನಲವತ್ತ ನಾಲ್ಕು ಶಾಸಕರು ಸಿದ್ಧರಿದ್ದಾರೆ ಎಂದು ಬಿಜೆಪಿ ಶಾಸಕ ಥೋಕ್ಚೋಮ್ ರಾಧೇಶ್ಯಾಮ್ ಸಿಂಗ್ ಬುಧವಾರ (ಮೇ.28) ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರನ್ನು ಭೇಟಿಯಾದ ನಂತರ ಹೇಳಿದ್ದಾರೆ.

ರಾಧೇಶ್ಯಾಮ್ ಸಿಂಗ್, ಇತರ ಒಂಬತ್ತು ಶಾಸಕರೊಂದಿಗೆ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ.

“ಜನರ ಆಶಯದಂತೆ 44 ಶಾಸಕರು ಸರ್ಕಾರ ರಚಿಸಲು ಸಿದ್ಧರಿದ್ದಾರೆ. ನಾವು ಇದನ್ನು ರಾಜ್ಯಪಾಲರಿಗೆ ತಿಳಿಸಿದ್ದೇವೆ. ಈ ಸಮಸ್ಯೆಗೆ ಯಾವ ಪರಿಹಾರಗಳಿವೆ ಎಂಬುದರ ಕುರಿತು ನಾವು ಚರ್ಚಿಸಿದ್ದೇವೆ” ಎಂದು ಸಿಂಗ್ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ.

“ನಾವು ಹೇಳಿದ್ದನ್ನು ರಾಜ್ಯಪಾಲರು ಕೇಳಿಸಿಕೊಂಡಿದ್ದಾರೆ. ಜನರ ಹಿತಾಸಕ್ತಿಗಾಗಿ ಅವರು ಕ್ರಮ ಕೈಗೊಳ್ಳುತ್ತಾರೆ” ಎಂದು ಸಿಂಗ್ ತಿಳಿಸಿದ್ದಾರೆ.

“ಸರ್ಕಾರ ರಚಿಸಲು ಹಕ್ಕು ಮಂಡಿಸುತ್ತೀರಾ?” ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಂಗ್, “ಬಿಜೆಪಿಯ ಕೇಂದ್ರ ನಾಯಕತ್ವವು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ” ಎಂದಿದ್ದಾರೆ.

“ಆದಾಗ್ಯೂ, ನಾವು ಸಿದ್ಧರಿದ್ದೇವೆ ಎಂದು ತಿಳಿಸುವುದು ಸರ್ಕಾರ ರಚಿಸಲು ಹಕ್ಕು ಮಂಡಿಸುವುದಕ್ಕೆ ಸಮಾನವಾಗಿದೆ. ಸ್ಪೀಕರ್ ಟಿ. ಸತ್ಯಬ್ರತ ಅವರು 44 ಶಾಸಕರನ್ನು ಪ್ರತ್ಯೇಕವಾಗಿ ಮತ್ತು ಜಂಟಿಯಾಗಿ ಭೇಟಿ ಮಾಡಿದ್ದಾರೆ. ಹೊಸ ಸರ್ಕಾರ ರಚನೆಯನ್ನು ವಿರೋಧಿಸುವವರು ಯಾರೂ ಇಲ್ಲ” ಎಂದು ಸಿಂಗ್ ಹೇಳಿದ್ದಾರೆ.

“ಜನರು ತುಂಬಾ ಕಷ್ಟಗಳನ್ನು ಎದುರಿಸುತ್ತಿದ್ದಾರೆ. ಹಿಂದಿನ ಅವಧಿಯಲ್ಲಿ, ಕೋವಿಡ್‌ನಿಂದಾಗಿ ಎರಡು ವರ್ಷಗಳು ಕಳೆದುಹೋಗಿದ್ದವು. ಈ ಅವಧಿಯಲ್ಲಿ, ಸಂಘರ್ಷದಿಂದಾಗಿ ಇನ್ನೂ ಎರಡು ವರ್ಷಗಳು ಕಳೆದುಹೋಗಿವೆ” ಎಂದು ರಾಧೇಶ್ಯಾಮ್ ಸಿಂಗ್ ಹೇಳಿಕೆ ನೀಡದ್ದಾರೆ.

ಮೇ 2023ರಲ್ಲಿ ಭುಗಿಲೆದ್ದ ಮೈತೇಯಿ ಮತ್ತು ಕುಕಿ-ಝೋ ಸಮುದಾಯಗಳ ನಡುವಿನ ಜನಾಂಗೀಯ ಸಂಘರ್ಷವನ್ನು ಸರ್ಕಾರ ನಿಭಾಯಿಸಿದ ರೀತಿ ಬಗ್ಗೆ ಟೀಕೆಗಳ ನಡುವೆ, ಬಿಜೆಪಿ ನಾಯಕ ಎನ್. ಬಿರೇನ್ ಸಿಂಗ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹಾಗಾಗಿ, ಕಳೆದ ಫೆಬ್ರವರಿಯಿಂದ ಮಣಿಪುರ ರಾಷ್ಟ್ರಪತಿ ಆಳ್ವಿಕೆಯಲ್ಲಿದೆ.

60 ಸದಸ್ಯ ಬಲದ ವಿಧಾನಸಭೆಯಲ್ಲಿ ಪ್ರಸ್ತುತ 59 ಶಾಸಕರಿದ್ದು, ಒಬ್ಬರು ಶಾಸಕರ ಮರಣದಿಂದಾಗಿ ಒಂದು ಸ್ಥಾನ ಖಾಲಿ ಇದೆ.

ಬಿಜೆಪಿ ನೇತೃತ್ವದ ಒಕ್ಕೂಟದಲ್ಲಿ 32 ಮೈತೇಯಿ ಶಾಸಕರು, ಮೂವರು ಮಣಿಪುರಿ ಮುಸ್ಲಿಂ ಶಾಸಕರು ಮತ್ತು ಒಂಬತ್ತು ನಾಗಾ ಶಾಸಕರು ಸೇರಿ ಒಟ್ಟು 44 ಜನರಿದ್ದಾರೆ.

ಕಾಂಗ್ರೆಸ್‌ನ ಐವರು ಶಾಸಕರಿದ್ದು, ಅವರೆಲ್ಲರೂ ಮೈತೇಯಿ ಸಮುದಾಯಕ್ಕೆ ಸೇರಿದವರು.

ಉಳಿದ 10 ಶಾಸಕರು ಕುಕಿಗಳು. ಅವರಲ್ಲಿ ಏಳು ಮಂದಿ ಕಳೆದ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಗೆದ್ದವರು. ಇಬ್ಬರು ಕುಕಿ ಪೀಪಲ್ಸ್ ಅಲೈಯನ್ಸ್‌ಗೆ ಸೇರಿದವರು ಮತ್ತು ಒಬ್ಬರು ಸ್ವತಂತ್ರರು.

ಸರ್ಕಾರಿ ಬಸ್ಸಿನ ವಿಂಡ್ ಶೀಲ್ಡ್ ಮೇಲೆ ಬರೆದಿದ್ದ ಮಣಿಪುರ ರಾಜ್ಯದ ಹೆಸರನ್ನು ಭದ್ರತಾ ಪಡೆಗಳು ಮರೆಮಾಡಿದ್ದಕ್ಕೆ ಮೈತೇಯಿ ಜನವಸತಿ ಪ್ರದೇಶವಾದ ಇಂಫಾಲ್ ಕಣಿವೆಯಲ್ಲಿ ಭಾರೀ ಪ್ರತಿಭಟನೆಗಳು ನಡೆಯುತ್ತಿರುವ ಮಧ್ಯೆ ಸರ್ಕಾರ ರಚನೆಯೆ ಬೆಳವಣಿಗೆ ನಡೆದಿದೆ.

ಮೇ 20ರಂದು ಗ್ವಾಲ್ತಾಬಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ರಾಜ್ಯಪಾಲರು ಕ್ಷಮೆಯಾಚಿಸಬೇಕು. ಸರ್ಕಾರದ ಮುಖ್ಯ ಕಾರ್ಯದರ್ಶಿ, ಡಿಜಿಪಿ ಮತ್ತು ಭದ್ರತಾ ಸಲಹೆಗಾರ ​​ರಾಜೀನಾಮೆ ನೀಡಬೇಕು ಎಂದು ಮೈತೇಯಿ ಗುಂಪುಗಳು ಒತ್ತಾಯಿಸಿವೆ.

ಮೇ 2023ರಲ್ಲಿ 250ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಜನಾಂಗೀಯ ಕಲಹ ಪ್ರಾರಂಭವಾದಾಗಿನಿಂದ, ಮೈತೇಯಿ ಗುಂಪುಗಳು ಯಾವುದೇ ಶಾಂತಿ ಪ್ರಕ್ರಿಯೆಯಲ್ಲಿ ರಾಜ್ಯದ ಪ್ರಾದೇಶಿಕ ಸಮಗ್ರತೆಯ ಬಗ್ಗೆ ಮಾತುಕತೆಗೆ ಅವಕಾಶವಿಲ್ಲ ಎಂದು ವಾದಿಸುತ್ತಿವೆ. ಆದರೆ, ಕುಕಿ-ಝೋ ಸಂಘಟನೆಗಳು ಬಿಕ್ಕಟ್ಟನ್ನು ಪರಿಹರಿಸಲು ಏಕೈಕ ಪರಿಹಾರವೆಂದರೆ ತಮ್ಮ ಸಮುದಾಯ ವಾಸಿಸುವ ಬೆಟ್ಟದ ಜಿಲ್ಲೆಗಳಿಗೆ ಪ್ರತ್ಯೇಕ ಆಡಳಿತವನ್ನು ರಚಿಸುವುದು ಎಂದು ಪ್ರತಿಪಾದಿಸುತ್ತಿವೆ.

ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಕೈಗೊಂಡಿರುವ ಹಲವಾರು ಕ್ರಮಗಳಿಂದಾಗಿ ಇತ್ತೀಚಿನ ತಿಂಗಳುಗಳಲ್ಲಿ ರಾಜ್ಯದಲ್ಲಿ ಹಿಂಸಚಾರ ಕಡಿಮೆಯಾಗುತ್ತಿದ್ದ ಎನ್ನಲಾಗುತ್ತಿತ್ತು. ಈ ನಡುವೆ ಗ್ವಾಲ್ತಾಬಿ ಘಟನೆಯಿಂದ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ ಎಂದು ವರದಿಗಳು ಹೇಳಿವೆ.

ಮಣಿಪುರದಲ್ಲಿ ಶಾಂತಿ ಕಾಪಾಡುವಲ್ಲಿ ರಾಷ್ಟ್ರಪತಿ ಆಳ್ವಿಕೆ ವಿಫಲ: ಕಾಂಗ್ರೆಸ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....