Homeಮುಖಪುಟಅಣ್ಣಾ ವಿವಿ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಜ್ಞಾನಶೇಖರನ್ ದೋಷಿ ಎಂದ ಕೋರ್ಟ್

ಅಣ್ಣಾ ವಿವಿ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಜ್ಞಾನಶೇಖರನ್ ದೋಷಿ ಎಂದ ಕೋರ್ಟ್

- Advertisement -
- Advertisement -

ಚೆನ್ನೈನ ಮಹಿಳಾ ನ್ಯಾಯಾಲಯವು ಅಣ್ಣಾ ವಿಶ್ವವಿದ್ಯಾಲಯದ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಜ್ಞಾನಶೇಖರನ್ ತಪ್ಪಿತಸ್ಥ ಎಂದು ಬುಧವಾರ (ಮೇ.28) ಘೋಷಿಸಿದೆ.

ಜ್ಞಾನಶೇಖರನ್ ವಿರುದ್ಧದ ಎಲ್ಲಾ 11 ಆರೋಪಗಳು ವಿಧಿವಿಜ್ಞಾನ ಸಾಕ್ಷ್ಯಗಳು ಮತ್ತು ಇತರ ಪುರಾವೆಗಳ ಮೂಲಕ ಸಾಬೀತಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಈ ಪ್ರಕರಣವು ಕಳೆದ ವರ್ಷ ಡಿಸೆಂಬರ್ 23ರಂದು ರಾತ್ರಿ 8 ಗಂಟೆ ಸುಮಾರಿಗೆ ನಡೆದ ಘಟನೆಗೆ ಸಂಬಂಧಿಸಿದೆ. ಅಂದು ಕ್ಯಾಂಪಸ್ ಬಳಿ ಬಿರಿಯಾನಿ ಅಂಗಡಿ ನಡೆಸುತ್ತಿದ್ದ ಕೊಟ್ಟೂರು ನಿವಾಸಿ ಜ್ಞಾನಶೇಖರನ್, ವಿಶ್ವವಿದ್ಯಾಲಯದ ಆವರಣಕ್ಕೆ ನುಗ್ಗಿ ನಿರ್ಜನ ಪ್ರದೇಶದಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆಕೆಯ ಪುರುಷ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಗ್ರೇಟರ್ ಚೆನ್ನೈ ಪೊಲೀಸರು ಜ್ಞಾನಶೇಖರನ್ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಪೊಲೀಸರ ಪ್ರಕಾರ, ಆರೋಪಿ ತನ್ನ ದುಷ್ಕೃತ್ಯವನ್ನು ವಿಡಿಯೋ ಚಿತ್ರೀಕರಿಸಿ ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತನನ್ನು ಬ್ಲ್ಯಾಕ್‌ಮೇಲ್ ಮಾಡಿದ್ದ ಎನ್ನಲಾಗಿದೆ.

ಜ್ಞಾನಶೇಖರನ್ ಬಂಧನದ ನಂತರ, ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಕಾರ್ಯಕರ್ತರೊಂದಿಗೆ ಆತ ಇದ್ದ ಫೋಟೋಗಳು ವೈರಲ್ ಆಗಿತ್ತು. ಇದು ಪ್ರಕರಣ ರಾಜಕೀಯ ತಿರುವು ಪಡೆಯಲು ಕಾರಣವಾಗಿತ್ತು. ಡಿಎಂಕೆ ಆರಂಭದಲ್ಲಿ ಆರೋಪಿಯೊಂದಿಗಿನ ಸಂಬಂಧವನ್ನು ನಿರಾಕರಿಸಿದರೂ, ವಿರೋಧ ಪಕ್ಷಗಳು ಆತ ಡಿಎಂಕೆ ಪಕ್ಷದಲ್ಲಿ ಸ್ಥಾನ ಹೊಂದಿದ್ದಾರೆಂದು ಆರೋಪಿಸಿ ಫೋಟೋಗಳನ್ನು ಬಿಡುಗಡೆ ಮಾಡಿತ್ತು.

ಬಿಜೆಪಿ ರಾಜ್ಯ ಘಟಕದ ನಾಯಕ ಕೆ. ಅಣ್ಣಾಮಲೈ ಅವರು ಜ್ಞಾನಶೇಖರನ್ ಡಿಎಂಕೆ ವಿದ್ಯಾರ್ಥಿ ವಿಭಾಗದ ಪದಾಧಿಕಾರಿ ಎಂದು ಆರೋಪಿಸಿದ್ದರು ಮತ್ತು ಡಿಎಂಕೆ ನಾಯಕರೊಂದಿಗೆ ಆರೋಪಿ ಇದ್ದ ಫೋಟೋಗಳನ್ನು ಹಂಚಿಕೊಂಡಿದ್ದರು.

ತಮಿಳುನಾಡು ಕಾನೂನು ಸಚಿವ ಎಸ್. ರೆಗುಪತಿ ಅವರು ಜ್ಞಾನಶೇಖರನ್ ಪಕ್ಷದ ಪದಾಧಿಕಾರಿಯಲ್ಲ ಎಂದು ಹೇಳುವ ಮೂಲಕ ಈ ಆರೋಪಗಳನ್ನು ನಿರಾಕರಿಸಿದ್ದರು. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕೂಡ ವಿಧಾನಸಭೆಯಲ್ಲಿ ಆರೋಪಿ ಡಿಎಂಕೆ ಸದಸ್ಯರಲ್ಲದಿದ್ದರೂ, ಅವರು ಡಿಎಂಕೆ ಪರ ಸಹಾನುಭೂತಿ ಹೊಂದಿದ್ದರು ಎಂದು ಸ್ಪಷ್ಟಪಡಿಸಿದ್ದರು.

“ಚೆನ್ನೈ ವಿದ್ಯಾರ್ಥಿನಿಯ ಪ್ರಕರಣದಲ್ಲಿ ಬಂಧಿಸಲ್ಪಟ್ಟ ವ್ಯಕ್ತಿ ಡಿಎಂಕೆ ಸದಸ್ಯರಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ಅವರು ಡಿಎಂಕೆ ಬೆಂಬಲಿಗರು, ನಾವು ಅದನ್ನು ನಿರಾಕರಿಸುವುದಿಲ್ಲ” ಎಂದು ಸ್ಟಾಲಿನ್ ಹೇಳಿದ್ದರು.

ಈ ಹಿಂದೆ ಜ್ಞಾನಶೇಖರನ್ ಅವರು ಪ್ರಕರಣದಿಂದ ತನ್ನನ್ನು ಮುಕ್ತಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ತನ್ನ ವಿರುದ್ಧ ಯಾವುದೇ ಸಾಕ್ಷ್ಯಗಳು ಇಲ್ಲ. ಅನುಮಾನದ ಮೇಲೆ ಬಂಧಿಸಲಾಗಿದೆ ಎಂದು ಹೇಳಿದ್ದರು. ತಮಿಳುನಾಡು ಪೊಲೀಸರು ಆರೋಪಿಯ ಅರ್ಜಿಗೆ ಪ್ರತಿ ಅರ್ಜಿ ಸಲ್ಲಿಸಿದ್ದರು. ಎರಡೂ ಕಡೆಯ ವಾದಗಳನ್ನು ನ್ಯಾಯಾಲಯ ಆಲಿಸಿತ್ತು.

ಮದ್ರಾಸ್ ಹೈಕೋರ್ಟ್ ನಿರ್ದೇಶನದಂತೆ, ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿತ್ತು. ನಂತರ ಎಸ್‌ಐಟಿ ಮಹಿಳಾ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಿತ್ತು.

ಮಹಿಳಾ ನ್ಯಾಯಾಲಯವು ಜ್ಞಾನಶೇಖರನ್ ವಿರುದ್ಧ ಲೈಂಗಿಕ ಕಿರುಕುಳ, ಬಿಎನ್‌ಎಸ್‌ಎಸ್, ಐಟಿ ಕಾಯ್ದೆ ಮತ್ತು ತಮಿಳುನಾಡು ಮಹಿಳಾ ಕಿರುಕುಳ ತಡೆ ಕಾಯ್ದೆ ಸೇರಿದಂತೆ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ವಿವಿಧ ಸೆಕ್ಷನ್‌ಗಳಡಿ ಆರೋಪಗಳನ್ನು ಹೊರಿಸಿದೆ.

ತನ್ನ ತಾಯಿಯ ಅನಾರೋಗ್ಯದ ಕಾರಣ ನೀಡಿ ಶಿಕ್ಷೆಯಲ್ಲಿ ವಿನಾಯ್ತಿ ನೀಡುವಂತೆ ಜ್ಞಾನಶೇಖರನ್ ಕೋರಿದ್ದಾರೆ. ಜೂನ್ 2ರಂದು ನ್ಯಾಯಾಲಯ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ.

ಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು 44 ಶಾಸಕರು ಸಿದ್ಧರಿದ್ದಾರೆ: ರಾಜ್ಯಪಾಲರ ಭೇಟಿ ಬಳಿಕ ಬಿಜೆಪಿ ನಾಯಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...