Homeಕರ್ನಾಟಕಮುಸ್ಲಿಂ ಮೀಸಲು ಮಸೂದೆ ಮತ್ತೆ ವಾಪಸ್: ಸುಪ್ರೀಂ ತೀರ್ಪು ಉಲ್ಲೇಖಿಸಿದ ರಾಜ್ಯಪಾಲರು

ಮುಸ್ಲಿಂ ಮೀಸಲು ಮಸೂದೆ ಮತ್ತೆ ವಾಪಸ್: ಸುಪ್ರೀಂ ತೀರ್ಪು ಉಲ್ಲೇಖಿಸಿದ ರಾಜ್ಯಪಾಲರು

- Advertisement -
- Advertisement -

ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇಕಡ 4ರಷ್ಟು ಮೀಸಲಾತಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ರೂಪಿಸಿರುವ ‘ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ಕೆಟಿಪಿಪಿ) ತಿದ್ದುಪಡಿ’ ಮಸೂದೆಯನ್ನು ರಾಷ್ಟ್ರಪತಿ ಅಂಕಿತಕ್ಕೆ ಕಾಯ್ದಿರಿಸಿ ಎರಡನೇ ಬಾರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ರಾಜ್ಯ ಸರ್ಕಾರಕ್ಕೆ ಹಿಂದಿರುಗಿಸಿದ್ದಾರೆ ಎಂದು ವರದಿಯಾಗಿದೆ.

ವಿಧಾನಮಂಡಲದ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದ ಮಸೂದೆಯನ್ನು ಏಪ್ರಿಲ್ 1ರಂದು ಮೊದಲ ಬಾರಿಗೆ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಏಪ್ರಿಲ್ 15ರಂದು ಆರು ಪುಟಗಳ ಪತ್ರದೊಂದಿಗೆ ರಾಜ್ಯಪಾಲರು ಮಸೂದೆಯನ್ನು ಸರ್ಕಾರಕ್ಕೆ ಹಿಂದಿರುಗಿಸಿದ್ದರು.

“ಧರ್ಮಾಧಾರಿತ ಮೀಸಲಾತಿಗೆ ದೇಶದ ಸಂವಿಧಾನದಲ್ಲಿ ಅವಕಾಶ ಇಲ್ಲ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಅಲ್ಲದೆ, ಮಸೂದೆಯನ್ನು ರಾಷ್ಟ್ರಪತಿಯ ಪರಿಶೀಲನೆಗೆ ಬಿಡುವುದು ಸೂಕ್ತವೆಂದು ಭಾವಿಸಿದ್ದೇನೆ ಎಂದು ಹೇಳಿದ್ದರು.

ರಾಜ್ಯ ಸರ್ಕಾರ ಕಳೆದವಾರ ಮಸೂದೆಯನ್ನು ಮತ್ತೆ ರಾಜ್ಯಪಾಲರಿಗೆ ಕಳುಹಿಸಿತ್ತು. ರಾಷ್ಟ್ರಪತಿ ಪರಿಶೀಲನೆಗೆ ಕಾಯ್ದಿರಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲರನ್ನು ಕೋರಿತ್ತು.

ಎರಡನೇ ಬಾರಿಯೂ ಮಸೂದೆಯನ್ನು ರಾಜ್ಯ ಸರ್ಕಾರಕ್ಕೆ ವಾಪಸ್ ಕಳುಹಿಸಿರುವ ರಾಜ್ಯಪಾಲರು, ಮೊದಲ ಬಾರಿ ಕಳುಹಿಸಿದ್ದ ಸಂದರ್ಭದಲ್ಲಿ ವ್ಯಕ್ತಪಡಿಸಿದ್ದ ಅಭಿಪ್ರಾಯವನ್ನೇ ತಿಳಿಸಿದ್ದಾರೆ. ಅಲ್ಲದೆ, ತಮಿಳುನಾಡು ಸರ್ಕಾರ ಮತ್ತು ಅಲ್ಲಿನ ರಾಜ್ಯಪಾಲರ ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಅಂಶಗಳನ್ನು ಉಲ್ಲೇಖಿಸಿದ್ದಾರೆ ಎಂದು ವರದಿಗಳು ಹೇಳಿವೆ.

“ಸಾಂವಿಧಾನಿಕ ಬಿಕ್ಕಟ್ಟು ಎದುರಾಗುವ ಸಂದರ್ಭದಲ್ಲಿ ರಾಷ್ಟ್ರಪತಿ ಮಾತ್ರ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ. ರಾಜ್ಯಪಾಲರಿಗೆ ಸಾಂವಿಧಾನಿಕ ನ್ಯಾಯಾಲಯಗಳಿಂದ ಅಭಿಪ್ರಾಯ ಪಡೆಯಲು ಅಧಿಕಾರವಿಲ್ಲ. ಮಸೂದೆಯು ಸಾಂವಿಧಾನಿಕ ಅಂಶಗಳನ್ನು ಹೊಂದಿರುವುದರಿಂದ ಮರು ಪರಿಶೀಲಿಸಲು ಕಷ್ಟವಾಗುತ್ತಿದೆ. ಹಾಗಾಗಿ, ರಾಷ್ಟ್ರಪತಿಯ ಪರಿಶೀಲನೆಗೆ ಕಾಯ್ದಿರಿಸಿದ್ದೇನೆ” ಎಂದು ರಾಜ್ಯಪಾಲರು ಉಲ್ಲೇಖಿಸಿದ್ದಾರೆ.

ಅಲ್ಲದೆ, “ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡುವ ವಿಚಾರ ಪ್ರಸ್ತುತ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯ ಹಂತದಲ್ಲಿ ಇರುವುದರಿಂದ, ಈ ವಿಷಯದಲ್ಲಿ ಮಧ್ಯ ಪ್ರವೇಶಿಸುವುದು ಸೂಕ್ತವಲ್ಲ ಎಂದು ಭಾವಿಸಿದ್ದೇನೆ. ಈ ಕಾರಣಕ್ಕೆ ಮಸೂದೆಗೆ ಅಂಕಿತ ಹಾಕದೆ ರಾಷ್ಟ್ರಪತಿಯ ಪರಿಶೀಲನೆಗೆ ಬಿಡಲು ನಿರ್ಧರಿಸಿದ್ದೇನೆ” ಎಂದು ರಾಜ್ಯಪಾಲರು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖಿಸಿ ತಿರುಗೇಟು ಕೊಟ್ಟ ರಾಜ್ಯಪಾಲರು

ಮಸೂದೆಗಳ ಕುರಿತು ನಿರ್ಧಾರ ತೆಗೆದುಕೊಳ್ಳುವ ವಿಚಾರಕ್ಕೆ ಸಂಬಂಧಪಟ್ಟಂತೆ ತಮಿಳುನಾಡು ರಾಜ್ಯ ಸರ್ಕಾರ ಮತ್ತು ಅಲ್ಲಿನ ರಾಜ್ಯಪಾಲರ ನಡುವಿನ ಬಿಕ್ಕಟ್ಟು ಸಂಬಂಧ ಸುಪ್ರೀಂ ಕೋರ್ಟ್ ಇತ್ತೀಚೆಗೆ ಮಹತ್ವದ ತೀರ್ಪು ನೀಡಿತ್ತು.

ರಾಜ್ಯ ಸರ್ಕಾದೊಂದಿಗೆ ದ್ವೇಷ ಸಾಧಿಸಿದಂತೆ ಮಸೂದೆಗಳ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳದೆ ತನ್ನಲ್ಲೇ ಬಾಕಿ ಉಳಿಸಿಕೊಂಡಿದ್ದ ತಮಿಳುನಾಡು ರಾಜ್ಯಪಾಲ ಆರ್‌.ಎನ್‌ ರವಿ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ನ್ಯಾಯಾಲಯವೇ ನೇರವಾಗಿ ಸುಮಾರು 10 ಮಸೂದೆಗಳನ್ನು ಅಂಗೀಕರಿಸಿತ್ತು.

ಕಾರ್ಯಾಂಗ ಮತ್ತು ನ್ಯಾಯಾಂಗಕ್ಕೆ ಸಂಬಂಧಪಟ್ಟಂತೆ ಅತಿ ಮಹತ್ವದ ಈ ತೀರ್ಪನ್ನು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಬಿಜೆಪಿಯೇತರ ರಾಜ್ಯಗಳ ಸಿಎಂಗಳು ಸ್ವಾಗತಿಸಿದ್ದರು. ಈಗ ಅದೇ ತೀರ್ಪಿನ ಅಂಶಗಳನ್ನು ಮುಂದಿಟ್ಟು ರಾಜ್ಯಪಾಲರು ಸರ್ಕಾರಕ್ಕೆ ತಿರುಗೇಟು ಕೊಟ್ಟಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪಿನ ಪ್ಯಾರಾಗ್ರಾಫ್ 412 ಅನ್ನು ಉಲ್ಲೇಖಿಸಿರುವ ರಾಜ್ಯಪಾಲರು,”ರಾಜ್ಯಪಾಲರಿಗೆ ಸಾಂವಿಧಾನಿಕ ನ್ಯಾಯಾಲಯಗಳಿಂದ ಅಭಿಪ್ರಾಯ ಪಡೆಯಲು ಅಧಿಕಾರವಿಲ್ಲ. ಮಸೂದೆಯು ಸಾಂವಿಧಾನಿಕ ಅಂಶಗಳನ್ನು ಹೊಂದಿರುವುದರಿಂದ ಮರು ಪರಿಶೀಲಿಸಲು ಕಷ್ಟವಾಗುತ್ತಿದೆ. ಹಾಗಾಗಿ, ರಾಷ್ಟ್ರಪತಿಯ ಪರಿಶೀಲನೆಗೆ ಕಾಯ್ದಿರಿಸಿದ್ದೇನೆ” ಎಂದಿದ್ದಾರೆ.

ಮುಂದುವರಿದು, “ಮುಸ್ಲಿಮರ ಮೀಸಲಾತಿಗೆ ಸಂಬಂಧಿಸಿದ ವಿಷಯವು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವುದರಿಂದ, ಈ ಹಂತದಲ್ಲಿ ಮಧ್ಯಪ್ರವೇಶಿಸದಿರುವುದು ಸೂಕ್ತವೆಂದು ನಾನು ಭಾವಿಸುತ್ತೇನೆ. ಏಕೆಂದರೆ ಈ ವಿಷಯವು ಸಂವಿಧಾನದ 14 ಮತ್ತು 15 ನೇ ವಿಧಿಗಳು ಹಾಗೂ ವಿವಿಧ ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್‌ನ ತೀರ್ಪುಗಳಿಂದ ವಿಧಿಸಲಾದ ನಿರ್ಬಂಧಗಳನ್ನು ಒಳಗೊಂಡಿದೆ” ಎಂದು ಹೇಳಿದ್ದಾರೆ.

ಏನಿದು ಮುಸ್ಲಿಂ ಮೀಸಲು ಮಸೂದೆ?

ನಿಜವಾಗಿಯೂ ಇದು ಮುಸ್ಲಿಂ ಮೀಸಲು ಮಸೂದೆಯಲ್ಲ. ಮಸೂದೆಗೆ ತಿದ್ದುಪಡಿ ತಂದು ಮುಸ್ಲಿಮರಿಗೆ ಕಾಮಗಾರಿಗಳ ಗುತ್ತಿಗೆಯಲ್ಲಿ ಮೀಸಲಾತಿ ಕಲ್ಪಿಸಲು ಅವಕಾಶ ಮಾಡಿಕೊಟ್ಟಿರುವುದರಿಂದ ಮುಸ್ಲಿಂ ಮೀಸಲು ಮಸೂದೆ ಎನ್ನಲಾಗುತ್ತಿದೆ.

1999ರ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಕಾಯ್ದೆಗೆ ತಿದ್ದುಪಡಿ ತಂದು, ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ಮಸೂದೆ, 2025ಕ್ಕೆ ವಿಧಾನಮಂಡಲದ ಅನುಮೋದನೆ ಪಡೆಯಲಾಗಿದೆ. ಇದು ರಾಜ್ಯಪಾಲರ ಅಂಕಿತಕ್ಕೆ ಅಥವಾ ರಾಷ್ಟ್ರಪತಿಯ ಪರಿಶೀಲನೆಗೆ ಬಾಕಿಯಿದೆ.

ತಿದ್ದುಪಡಿ ಮಸೂದೆಯಲ್ಲಿ ರೂ. 2 ಕೋಟಿವರೆಗಿನ ಸಿವಿಲ್ ಕೆಲಸಗಳ ಸರ್ಕಾರಿ ಟೆಂಡರ್‌ಗಳಲ್ಲಿ ಮತ್ತು ರೂ. 1 ಕೋಟಿವರೆಗಿನ ಸರಕು/ಸೇವೆಗಳ ಸಂಗ್ರಹಣೆಯಲ್ಲಿ ಮುಸ್ಲಿಂ ಗುತ್ತಿಗೆದಾರರಿಗೆ 4 ಶೇಕಡ ಮೀಸಲಾತಿ ಪರಿಚಯಿಸಲಾಗಿದೆ. ನಿರುದ್ಯೋಗವನ್ನು ಪರಿಹರಿಸುವ ಮತ್ತು ಹಿಂದುಳಿದ ವರ್ಗಗಳ ವರ್ಗ 2ಬಿಯ (ಮುಸ್ಲಿಮರು) ಒಳಗೊಳ್ಳುವಿಕೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಬಿಜೆಪಿಯವರು Sorry ಸಾವರ್ಕರ್‌ರನ್ನು ಅಕ್ಷರಶಃ ಪಾಲನೆ ಮಾಡುತ್ತಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...