Homeಮುಖಪುಟಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು ಬಳಸುವ 'ಡಾರ್ಕ್ ಪ್ಯಾಟರ್ನ್ಸ್' ತೊಡೆದುಹಾಕುವಂತೆ ಕೇಂದ್ರ ಸರ್ಕಾರ ಸೂಚನೆ

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು ಬಳಸುವ ‘ಡಾರ್ಕ್ ಪ್ಯಾಟರ್ನ್ಸ್’ ತೊಡೆದುಹಾಕುವಂತೆ ಕೇಂದ್ರ ಸರ್ಕಾರ ಸೂಚನೆ

- Advertisement -
- Advertisement -

ಗ್ರಾಹಕ ರಕ್ಷಣಾ ನಿಯಮಗಳನ್ನು ಅನುಸರಿಸಲು ಬೇಕಾಗಿ ಡಾರ್ಕ್ ಪ್ಯಾಟರ್ನ್‌ಗಳನ್ನು ವಿಶ್ಲೇಷಿಸಲು ಮತ್ತು ತೊಡೆದುಹಾಕಲು ಸ್ವಯಂ-ಆಡಿಟ್‌ಗಳನ್ನು ನಡೆಸುವಂತೆ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಹ್ಲಾದ್ ಜೋಶಿ ಎಲ್ಲಾ ಇ-ಕಾಮರ್ಸ್ ಕಂಪನಿಗಳಿಗೆ ಸೂಚನೆ ನೀಡಿದ್ದಾರೆ. ದೆಹಲಿಯಲ್ಲಿ ಇ-ಕಾಮರ್ಸ್ ಸಂಬಂಧಪಟ್ಟವರ ಜೊತೆಗೆ ನಡೆದ ಸಭೆಯ ನಂತರ ಸಚಿವರು ಈ ನಿರ್ದೇಶನ ನೀಡಿದ್ದಾರೆ ಎಂದು ವರದಿಯಾಗಿದೆ. ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು

ರಾಷ್ಟ್ರೀಯ ಗ್ರಾಹಕ ಸಹಾಯವಾಣಿಯಲ್ಲಿ ವರದಿಯಾದ ಡಾರ್ಕ್ ಪ್ಯಾಟರ್ನ್‌ಗಳ ಕುರಿತು ಗ್ರಾಹಕರ ದೂರುಗಳಲ್ಲಿ ತೀವ್ರ ಹೆಚ್ಚಳ ಕಂಡುಬಂದಿದ್ದು, ಹಾಗಾಗಿ ಸಚಿವರು ಈ ಕ್ರಮ ಕೈಗೊಂಡಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಇದನ್ನೂ ಓದಿ – ಡಾರ್ಕ್ ಪ್ಯಾಟರ್ನ್ಸ್ ಎಂಬ ಆಧುನಿಕ ಕಾಲದ ಆಧುನಿಕ ಶೋಷಣೆ!

ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು ಬಳಸುವ ದಾರಿ ತಪ್ಪಿಸುವ ಅಭ್ಯಾಸಗಳನ್ನು ಪರಿಹರಿಸಲು ಹೆಚ್ಚು ಪರಿಣಾಮಕಾರಿ ತಂತ್ರಗಳನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಈ ಸಭೆ ಹೊಂದಿದೆ. ಈ ಸಮಸ್ಯೆಗಳ ಬಗ್ಗೆ ಇ-ಕಾಮರ್ಸ್ ಕಂಪನಿಗಳಿಗೆ ಶಿಕ್ಷಣ ನೀಡಲು ಜಂಟಿ ಕಾರ್ಯ ಸಮೂಹದ ರಚನೆಯನ್ನು ಜೋಶಿ ಪ್ರಸ್ತಾಪಿಸಿದ್ದಾರೆ. 

“ಡಾರ್ಕ್ ಪ್ಯಾಟರ್ನ್” ಎಂದರೆ ಬಳಕೆದಾರರನ್ನು ದಾರಿತಪ್ಪಿಸುವ ಅಥವಾ ಅವರನ್ನು ಅನಪೇಕ್ಷಿತ ಆಯ್ಕೆಗಳನ್ನು ಮಾಡುವಂತೆ ಒತ್ತಾಯಿಸುವ ಬಳಕೆದಾರ ಇಂಟರ್ಫೇಸ್‌ಗಳಲ್ಲಿ (ವೆಬ್ ಪುಟಗಳಂತಹ) ಬಳಸಲಾಗುವ ವಂಚನೆ ಮಾಡುವ ವಿನ್ಯಾಸ ತಂತ್ರವಾಗಿದೆ. ಈ ಅಭ್ಯಾಸವು ಗ್ರಾಹಕರ ಸ್ವಾಯತ್ತತೆ, ನಿರ್ಧಾರ ತೆಗೆದುಕೊಳ್ಳುವಿಕೆ ಮತ್ತು ಒಟ್ಟಾರೆ ಆಯ್ಕೆಯನ್ನು ದುರ್ಬಲಗೊಳಿಸುತ್ತದೆ.

ಡಾರ್ಕ್ ಪ್ಯಾಟರ್ನ್‌ಗಳಿಗೆ ಕೆಲವು ಉದಾಹರಣೆಗಳೆಂದರೆ, ಗ್ರಾಹಕರು ವಹಿವಾಟುಗಳನ್ನು ಅರ್ಥಮಾಡಿಕೊಳ್ಳಲು ಕಷ್ಟಕರವಾಗಿಸುವುದು ಅಥವಾ ರದ್ದುಗೊಳಿಸಲು ಕಷ್ಟಕರವಾಗಿಸುವುದು, ಮುಗಿಯದ ಸ್ಕ್ರೋಲಿಂಗ್, ಆಟೋಪ್ಲೇ ವೀಡಿಯೊಗಳು ಅಥವಾ ನಿರಂತರ ನೋಟಿಫಿಕೇಷನ್‌ಗಳಂತಹ ವೈಶಿಷ್ಟ್ಯಗಳನ್ನು ಬಳಸುವುದು ಸೇರಿವೆ. ಸರ್ಕಾರವು 13 ನಿರ್ದಿಷ್ಟ ಡಾರ್ಕ್ ಪ್ಯಾಟರ್ನ್‌ಗಳನ್ನು ಗುರುತಿಸಿದೆ.

ಮೋಸಗೊಳಿಸುವ ಆನ್‌ಲೈನ್ ಅಭ್ಯಾಸಗಳನ್ನು ನಿರ್ಮೂಲನೆ ಮಾಡುವ ಕುರಿತು ಮಾತನಾಡಲು ಗ್ರಾಹಕ ವ್ಯವಹಾರಗಳ ಇಲಾಖೆ ಬುಧವಾರ ಪ್ರಮುಖ ಇ-ಕಾಮರ್ಸ್ ಕಂಪನಿಗಳಾದ ಅಮೆಜಾನ್, ಸ್ವಿಗ್ಗಿ, ಫ್ಲಿಪ್‌ಕಾರ್ಟ್, ಜೊಮಾಟೊ, ಮೇಕ್‌ಮೈಟ್ರಿಪ್, ಮೆಟಾ, ವಾಟ್ಸಾಪ್, ಓಲಾ ಮತ್ತು ಆಪಲ್ ಸೇರಿದಂತೆ ಎಲ್ಲಾ ಪಾಲುದಾರರ ಪ್ರತಿನಿಧಿಗಳ ಸಭೆಯನ್ನು ಕರೆದಿದೆ.

ಡಾರ್ಕ್ ಪ್ಯಾಟರ್ನ್‌ಗಳನ್ನು ಪರಿಹರಿಸಲು ಸರ್ಕಾರ ಈಗಾಗಲೇ ವಿವರವಾದ ಮಾರ್ಗಸೂಚಿಗಳನ್ನು ಅಭಿವೃದ್ಧಿಪಡಿಸಿದೆ. ಎಲ್ಲಾ ಕಂಪನಿಗಳು ಮಾರ್ಗಸೂಚಿಗಳನ್ನು ಸಂಪೂರ್ಣವಾಗಿ ಅನುಸರಿಸಬೇಕು ಮತ್ತು ಅವುಗಳನ್ನು ತಮ್ಮ ಆಂತರಿಕ ಆಡಳಿತ ಮತ್ತು ಗ್ರಾಹಕ ರಕ್ಷಣಾ ಕಾರ್ಯವಿಧಾನಗಳಲ್ಲಿ ಸಂಯೋಜಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇತ್ತೀಚೆಗಷ್ಟೆ, ಟ್ಯಾಕ್ಸಿ ಮತ್ತು ಬೈಕ್ ಸೇವೆಯ ಕಂಪನಿಗಳಾದ ಉಬರ್ ಮತ್ತು ರಾಪಿಡೊಗಳು, ವೇಗವಾಗಿ ಸೇವೆ ಬೇಕೆಂದರೆ ಮುಂಚಿತವಾಗಿ ಟಿಪ್ ಪಾವತಿಸಲು ಬಳಕೆದಾರರ ಮೇಲೆ ಒತ್ತಡ ಹೇರುತ್ತಿದೆ ಎಂದು ಆರೋಪಿಸಿ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (CCPA) ನೋಟಿಸ್ ನೀಡಿತ್ತು.

ಇಂತಹ ಅಭ್ಯಾಸಗಳನ್ನು “ಅನ್ಯಾಯ ವ್ಯಾಪಾರ” ಎಂದು ಪರಿಗಣಿಸಲಾಗುತ್ತದೆ ಮತ್ತು ಅದನ್ನು ನಿಲ್ಲಿಸಬೇಕು ಎಂದು ಜೋಶಿ ಹೇಳಿದ್ದರು. ಟಿಪ್ಪಿಂಗ್ ಐಚ್ಛಿಕವಾಗಿರಬೇಕು, ಗ್ರಾಹಕರು ತಮ್ಮ ಸೇವಾ ಅನುಭವದ ಆಧಾರದ ಮೇಲೆ ಈ ಮೊತ್ತವನ್ನು ನಿರ್ಧರಿಸುತ್ತಾರೆ ಎಂದು ಅವರು ಒತ್ತಿ ಹೇಳಿದ್ದರು.

ಎಡ್‌ಟೆಕ್, ಟ್ರಾವೆಲ್, ಏರ್‌ಲೈನ್ಸ್, ಇಕಾಮರ್ಸ್, ಕ್ವಿಕ್ ಕಾಮರ್ಸ್, ಆನ್‌ಲೈನ್ ಬ್ಯಾಂಕಿಂಗ್ ಮತ್ತು ಪಾವತಿಗಳು, ಟ್ಯಾಕ್ಸಿ ಅಪ್ಲಿಕೇಶನ್‌ಗಳು ಮತ್ತು ಒಟಿಟಿ ಪ್ಲಾಟ್‌ಫಾರ್ಮ್‌ಗಳು ಅತಿ ಹೆಚ್ಚು ಡಾರ್ಕ್ ಪ್ಯಾಟರ್ನ್‌ಗಳನ್ನು ಅಭ್ಯಾಸ ಮಾಡಿಕೊಂಡಿವೆ ಎಂದು ಗ್ರಾಹಕರ ಜಾಗೃತಿ ಮೂಡಿಸುವ ಲೋಕಲ್‌ಸರ್ಕಲ್ಸ್ ಹೇಳಿದೆ. ಈ ವೇಳೆ 392 ಜಿಲ್ಲೆಗಳಲ್ಲಿ ಆನ್‌ಲೈನ್ ಸಮೀಕ್ಷೆ ನಡೆಸಿ 2.30 ಲಕ್ಷ ಗ್ರಾಹಕರೊಂದಿಗೆ ಲೋಕಲ್‌ಸರ್ಕಲ್ಸ್‌ ಸಮಾಲೋಚನೆ ನಡೆಸಿತ್ತು.  ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ: ಡಾರ್ಕ್ ಪ್ಯಾಟರ್ನ್ಸ್ | ಆಧುನಿಕ ಕಾಲದ ಆಧುನಿಕ ಶೋಷಣೆ!

ಡಾರ್ಕ್ ಪ್ಯಾಟರ್ನ್ಸ್ | ಆಧುನಿಕ ಕಾಲದ ಆಧುನಿಕ ಶೋಷಣೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...