Homeಮುಖಪುಟಆಪರೇಷನ್ ಸಿಂಧೂರ ಭಾರತದ ರಾಷ್ಟ್ರೀಯ ಗೆಲುವು, ದೇವರು ನಮ್ಮೊಂದಿಗಿದ್ದನೆಂದು ಭಾವಿಸಿ: ಐಎಎಫ್ ಮುಖ್ಯಸ್ಥ

ಆಪರೇಷನ್ ಸಿಂಧೂರ ಭಾರತದ ರಾಷ್ಟ್ರೀಯ ಗೆಲುವು, ದೇವರು ನಮ್ಮೊಂದಿಗಿದ್ದನೆಂದು ಭಾವಿಸಿ: ಐಎಎಫ್ ಮುಖ್ಯಸ್ಥ

- Advertisement -
- Advertisement -

ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು “ರಾಷ್ಟ್ರೀಯ ವಿಜಯ” ಎಂದು ಗುರುವಾರ ಶ್ಲಾಘಿಸಿರುವ ಐಎಎಫ್ ಮುಖ್ಯಸ್ಥ ಏರ್‌ ಚೀಫ್‌ ಮಾರ್ಸಲ್ ಅಮರ್ ಪ್ರೀತ್ ಸಿಂಗ್ ಅವರು, ಎಲ್ಲಾ ಭಾರತೀಯ ಪಡೆಗಳು ಅದನ್ನು ಅತ್ಯಂತ ವೃತ್ತಿಪರ ರೀತಿಯಲ್ಲಿ ಕಾರ್ಯಗತಗೊಳಿಸಲು ಒಗ್ಗೂಡಿದವು ಎಂದು ಹೇಳಿದ್ದಾರೆ. ಆಪರೇಷನ್ ಸಿಂಧೂರ ಭಾರತದ

ನವ ದೆಹಲಿಯಲ್ಲಿ ನಡೆದ ಸಿಐಐ ವ್ಯವಹಾರ ಶೃಂಗಸಭೆಯಲ್ಲಿ ಮಾತನಾಡಿದ ಅವೆರು, “ನಾವು ಸತ್ಯದ ಹಾದಿಯನ್ನು ಹಿಡಿಯುತ್ತಿದ್ದೇವೆ, ದೇವರು ನಮ್ಮೊಂದಿಗಿದ್ದಾನೆ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದ್ದಾರೆ.

“ನಾವು ಮಾತನಾಡುತ್ತಿರುವ ಈ ಆಪರೇಷನ್ ಸಿಂಧೂರ ರಾಷ್ಟ್ರೀಯ ವಿಜಯ. ಪ್ರತಿಯೊಬ್ಬ ಭಾರತೀಯನಿಗೂ ನಾನು ಧನ್ಯವಾದ ಹೇಳುತ್ತೇನೆ. ಪ್ರತಿಯೊಬ್ಬ ಭಾರತೀಯನು ಇದನ್ನು ಬಯಸಿದ್ದನು… ಮತ್ತು ಈ ವಿಜಯದ ಕಡೆಗೆ ನೋಡುತ್ತಿದ್ದನು ಎಂದು ನನಗೆ ಖಚಿತವಾಗಿದೆ” ಎಂದು ಅಮರ್ ಪ್ರೀತ್ ಅವರು ಹೇಳಿದ್ದಾರೆ.

“ಇದು ಎಲ್ಲರೂ, ಎಲ್ಲಾ ಸಂಸ್ಥೆಗಳು, ಎಲ್ಲಾ ಪಡೆಗಳು ಬಹಳ ವೃತ್ತಿಪರ ರೀತಿಯಲ್ಲಿ ನಿರ್ವಹಿಸಿದ ಕಾರ್ಯಾಚರಣೆ ಎಂದು ಪದೇ ಪದೇ ಹೇಳಲಾಗುತ್ತಿರುವಂತೆ, ನಾವೆಲ್ಲರೂ ಒಗ್ಗೂಡಿದ್ದೇವೆ… ಮತ್ತು ಸತ್ಯವು ನಿಮ್ಮೊಂದಿಗಿದ್ದಾಗ, ಎಲ್ಲವೂ ತನ್ನಿಂದ ತಾನೆ ನಡೆಯುತ್ತದೆ” ಎಂದು ಅವರು ಹೇಳಿದ್ದಾರೆ.

ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಮೇ 7 ರ ಆರಂಭದಲ್ಲಿ ಆಪರೇಷನ್ ಸಿಂಧೂರ ಅನ್ನು ಪ್ರಾರಂಭಿಸಲಾಯಿತು. ಪಾಕಿಸ್ತಾನದ ಆಕ್ರಮಣಗಳಿಗೆ ಎಲ್ಲಾ ನಂತರದ ಪ್ರತೀಕಾರಗಳನ್ನು ಈ ಕಾರ್ಯಾಚರಣೆಯ ಅಡಿಯಲ್ಲಿ ನಡೆಸಲಾಯಿತು. ಆಪರೇಷನ್ ಸಿಂಧೂರ ಭಾರತದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನಕ್ಸಲ್ ಬಸವರಾಜು ಮೃತದೇಹದ ಅಂತ್ಯಕ್ರಿಯೆ: ಪೊಲೀಸರ ವಿರುದ್ಧ ಕುಟುಂಬಸ್ಥರಿಂದ ನ್ಯಾಯಾಂಗ ನಿಂದನೆ ಅರ್ಜಿ

ನಕ್ಸಲ್ ಬಸವರಾಜು ಮೃತದೇಹದ ಅಂತ್ಯಕ್ರಿಯೆ: ಪೊಲೀಸರ ವಿರುದ್ಧ ಕುಟುಂಬಸ್ಥರಿಂದ ನ್ಯಾಯಾಂಗ ನಿಂದನೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಪಿಯೂಷ್ ಗೋಯಲ್-ರಾಹುಲ್ ಗಾಂಧಿ ನಡುವೆ ವಾಕ್ಸಮರ

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವ ಪಿಯೂಷ್ ಗೋಯಲ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವೆ ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ಕುರಿತು ತೀವ್ರ ವಾಕ್ಸಮರ ನಡೆದಿದೆ. ಶುಕ್ರವಾರ...

ಮೀರತ್‌| ‘ಲವ್ ಜಿಹಾದ್’ ಆರೋಪದ ಮೇಲೆ ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿದ ಬಜರಂಗದಳ ಕಾರ್ಯಕರ್ತರು; ಪ್ರಕರಣ ದಾಖಲು

ಪ್ರೇಮಿಗಳ ದಿನದಂದು ರೆಸ್ಟೋರೆಂಟ್‌ನಲ್ಲಿ ಹಿಂದೂ ಮಹಿಳೆಯನ್ನು ಭೇಟಿಯಾಗುವಾಗ ತನ್ನ ಧಾರ್ಮಿಕ ಗುರುತನ್ನು ಮರೆಮಾಡಿದ್ದಾರೆ ಎಂದು ಆರೋಪಿಸಿದ ಬಜರಂಗದಳ ಸದಸ್ಯರು, ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿರುವ ಘಟನೆ ಮೀರತ್‌ನಲ್ಲಿ ನಡೆದಿದೆ. ದಾಳಿಕೋರರ ವಿರುದ್ಧ ಪ್ರಕರಣ...

ತೆಲಂಗಾಣ ಸ್ಥಳೀಯ ಸಂಸ್ಥೆ ಚುನಾವಣೆ : ಪ್ರಾಬಲ್ಯ ಮೆರೆದ ಕಾಂಗ್ರೆಸ್, ಬಲ ಕಳೆದುಕೊಂಡ ಬಿಆರ್‌ಎಸ್‌

ತೆಲಂಗಾಣದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಶುಕ್ರವಾರ (ಫೆ.13) ಪ್ರಕಟಗೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ ರಾಜ್ಯದಾದ್ಯಂತ ಪ್ರಾಬಲ್ಯ ಮೆರೆದಿದೆ. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಒಟ್ಟು 2,996 ವಾರ್ಡ್‌ಗಳ ಪೈಕಿ ಕಾಂಗ್ರೆಸ್ 1,537 ವಾರ್ಡ್‌ಗಳನ್ನು ಗೆದ್ದುಕೊಂಡಿದೆ. ಈ...

ಗಾಜಾ ಕುರಿತು ತೀರ್ಪುಗಾರರ ಹೇಳಿಕೆಗೆ ವಿರೋಧ; ಬರ್ಲಿನ್ ಚಲನಚಿತ್ರೋತ್ಸವದಿಂದ ಹಿಂದೆ ಸರಿದ ಅರುಂಧತಿ ರಾಯ್

ಬರ್ಲಿನ್ ಚಲನಚಿತ್ರೋತ್ಸವದಿಂದ ಹಿಂದೆ ಸರಿಯಲು ನಿರ್ಧರಿಸಿದ್ದೇನೆ ಎಂದು ಬರಹಗಾರ್ತಿ ಅರುಂಧತಿ ರಾಯ್ ಹೇಳಿದ್ದಾರೆ. ತೀರ್ಪುಗಾರರ ಅಧ್ಯಕ್ಷೆ ವಿಮ್ ವೆಂಡರ್ಸ್ ಅವರು, ಗಾಜಾ ಕುರಿತು ಪ್ರಶ್ನಿಸಿದಾಗ 'ರಾಜಕೀಯ ವಿಷಯಗಳಲ್ಲಿ ತೊಡಗಿಸಿಕೊಳ್ಳಲು ಇಷ್ಟಪಡುವುದಿಲ್ಲ' ಎಂದು ಹೇಳಿದ್ದರು. ಈ...

‘ಮಾನವೀಯತೆಯೇ ಏಕೈಕ ಧರ್ಮ..’; ಹಳ್ಳಿಯನ್ನು ಜಾತಿ ಮುಕ್ತ ಎಂದು ಘೋಷಿಸಿದ ಮಹಾರಾಷ್ಟ್ರದ ಸೌಂದಲ ಗ್ರಾಮ

ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯ ಸೌಂದಲ ಗ್ರಾಮವು ತನ್ನನ್ನು ತಾನು 'ಜಾತಿ ಮುಕ್ತ' ಎಂದು ಘೋಷಿಸಿಕೊಂಡಿದ್ದು, ಸಂವಿಧಾನದ ಪೀಠಿಕೆ ಮೌಲ್ಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಮಾರ್ಗದರ್ಶಿ ತತ್ವವಾಗಿ ಅಳವಡಿಸಿಕೊಂಡಿದೆ. ಫೆಬ್ರವರಿ 5 ರಂದು ನಡೆದ...

ಸಿಎಂ ಸಿದ್ದರಾಮಯ್ಯ ಹೆಸರಿನಲ್ಲಿ ನಕಲಿ ವರ್ಗಾವಣೆ ಪತ್ರ ಹಂಚಿಕೆ: ದೂರು ದಾಖಲು

ಮಂಡ್ಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ ಮೋಹನ್ ಅವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ನಿಯೋಜಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ನಕಲಿ...

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...