Homeಮುಖಪುಟನಕ್ಸಲ್ ಬಸವರಾಜು ಮೃತದೇಹದ ಅಂತ್ಯಕ್ರಿಯೆ: ಪೊಲೀಸರ ವಿರುದ್ಧ ಕುಟುಂಬಸ್ಥರಿಂದ ನ್ಯಾಯಾಂಗ ನಿಂದನೆ ಅರ್ಜಿ

ನಕ್ಸಲ್ ಬಸವರಾಜು ಮೃತದೇಹದ ಅಂತ್ಯಕ್ರಿಯೆ: ಪೊಲೀಸರ ವಿರುದ್ಧ ಕುಟುಂಬಸ್ಥರಿಂದ ನ್ಯಾಯಾಂಗ ನಿಂದನೆ ಅರ್ಜಿ

- Advertisement -
- Advertisement -

ಆಂಧ್ರ ಪ್ರದೇಶ ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ (ಮಾವೋವಾದಿ) ಪ್ರಧಾನ ಕಾರ್ಯದರ್ಶಿ ನಂಬಲ ಕೇಶವ ರಾವ್ ಅಲಿಯಾಸ್ ಬಸವರಾಜು ಅವರ ಮೃತದೇಹದ ಅಂತ್ಯಕ್ರಿಯೆ ನೆರವೇರಿಸಿದ ಪೊಲೀಸರ ವಿರುದ್ದ ಕುಟುಂಬಸ್ಥರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.

ಪೊಲೀಸರು ಉದ್ದೇಶಪೂರ್ವಕವಾಗಿ ಅವಿಧೇಯತೆ ತೋರಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಮೇ 21ರಂದು ಛತ್ತೀಸ್‌ಗಢದ ನಾರಾಯಣಪುರ ಪ್ರದೇಶದ ಅಬುಜ್ಮರ್ ಅರಣ್ಯದಲ್ಲಿ ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ) ನಡೆಸಿದ ಎನ್‌ಕೌಂಟರ್‌ನಲ್ಲಿ ಬಲಿಯಾದವರಲ್ಲಿ ಬಸವರಾಜು ಕೂಡ ಒಬ್ಬರು.

ಶವ ಪರೀಕ್ಷೆ ಪೂರ್ಣಗೊಳಿಸಿದ ನಂತರ ಬಸವರಾಜು ಸೇರಿದಂತೆ ಏಳು ಮಾವೋವಾದಿ ನಾಯಕರ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸುವಂತೆ ಮೇ 24ರಂದು ಆಂಧ್ರ ಪ್ರದೇಶ ಹೈಕೋರ್ಟ್ ಪೊಲೀಸರಿಗೆ ನಿರ್ದೇಶಿಸಿತ್ತು. ತೆಲಂಗಾಣ ಮತ್ತು ಆಂಧ್ರ ಪ್ರದೇಶದ ಮೃತರ ಕುಟುಂಬಸ್ದರು ಮೇ 22ರಿಂದ ನಾರಾಯಣಪುರ ಜಿಲ್ಲಾಸ್ಪತ್ರೆಯ ಹೊರಗೆ ಬೀಡು ಬಿಟ್ಟಿದ್ದರು. ಆದರೂ, ಮೃತದೇಹಗಳನ್ನು ಹಸ್ತಾಂತರಿಸದೆ ಮೇ 26ರಂದು ಪೊಲೀಸರು ಅಂತ್ಯಕ್ರಿಯೆ ನಡೆಸಿದ್ದಾರೆ.

ಮೃತದೇಹಗಳನ್ನು ತಮ್ಮ ಊರಿಗೆ ತೆಗೆದುಕೊಂಡು ಹೋಗಿ ಧಾರ್ಮಿಕ ಪದ್ಧತಿಗಳ ಪ್ರಕಾರ ಅಂತಿಮ ವಿಧಿವಿಧಾನಗಳನ್ನು ನಡೆಸಲು ಮೃತರ ಕುಟುಂಬಸ್ಥರು ಬಯಸಿದ್ದರು. ಆದರೆ, ಏಳು ಶವಗಳಿಗೆ “ಯಾವುದೇ ಕಾನೂನುಬದ್ಧ ಹಕ್ಕುದಾರರು” ಇರಲಿಲ್ಲ ಎಂದು ಹೇಳಿ ಪೊಲೀಸರು ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ ಎಂದು ಆರೋಪಿಸಲಾಗಿದೆ.

“ಉನ್ನತ ಶ್ರೇಣಿಯ ನಕ್ಸಲ್ ಕೇಡರ್ ಸಿಪಿಐ ಮಾವೋವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ಬಸವರಾಜು ಅವರದ್ದು ಸೇರಿದಂತೆ 7 ನಕ್ಸಲರ ಮೃತದೇಹಗಳಿಗೆ ಸ್ಪಷ್ಟ ಕಾನೂನು ಹಕ್ಕುದಾರರು ಇರಲಿಲ್ಲ. ಹಾಗಾಗಿ, ಎಕ್ಸಿಕ್ಯೂಟಿವ್ ಮ್ಯಾಜಿಸ್ಟ್ರೇಟ್ ಅವರ ಸೂಕ್ತ ಆದೇಶದೊಂದಿಗೆ ಕಾನೂನು ಕಾರ್ಯವಿಧಾನದ ಪ್ರಕಾರ ನಾರಾಯಣಪುರದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ. ಮಾವೋವಾದಿ ಕೇಡರ್ ಕೋಸಿ ಅಲಿಯಾಸ್ ಹಂಗಿ ಅವರ ಮೃತದೇಹದ ಅಂತ್ಯಕ್ರಿಯೆಯನ್ನು ಕೂಡ ಅವರ ಕುಟುಂಬ ಸದಸ್ಯರು ನಾರಾಯಣಪುರದಲ್ಲಿ ನೆರವೇರಿಸಿದ್ದಾರೆ” ಎಂದು ಪೊಲೀಸ್ ಹೇಳಿಕೆ ತಿಳಿಸಿದೆ.

“ಹಕ್ಕುದಾರರು ಇಲ್ಲದಿದ್ದ ನಕ್ಸಲರ ಮೃತ ದೇಹಗಳನ್ನು ಸೂಕ್ತ ಕಾನೂನು ವಿಧಾನಗಳನ್ನು ಅನುಸರಿಸಿ ಅಂತ್ಯಕ್ರಿಯೆ ನಡೆಸುವಾಗ ಎಲ್ಲಾ ರೀತಿಯ ಮೂಲಭೂತ ಮತ್ತು ಮಾನವೀಯ ಗೌರವವನ್ನು ನೀಡಲಾಗಿದೆ” ಎಂದು ಪೊಲೀಸರು ಹೇಳಿದ್ದಾರೆ.

ನಾವು ನಿಜವಾದ ಕುಟುಂಬ ಸದಸ್ಯರು ಎಂದು ದೃಢೀಕರಿಸಲು ಪ್ರಮಾಣಪತ್ರ ಕೊಡಬೇಕಾಗಿತ್ತು. ಅದಕ್ಕಾಗಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮತ್ತು ಆಸ್ಪತ್ರೆ ನಡುವೆ ಅಲೆದಾಟ ಮಡಬೇಕಾಯಿತು ಎಂದು ಕುಟುಂಬಸ್ಥರು ಹೇಳಿಕೊಂಡಿದ್ದಾಗಿ ವರದಿಯಾಗಿದೆ.

ನಕ್ಸಲ್ ಬಸವರಾಜ್ ಮೃತದೇಹವನ್ನು ಕುಟುಂಬಕ್ಕೆ ನೀಡದೆ ಬಲತ್ಕಾರವಾಗಿ ತಾವೇ ಅಂತ್ಯಕ್ರಿಯೆ ನಡೆಸಿದ ಛತ್ತೀಸ್‌ಗಢ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...