Homeಮುಖಪುಟಗಿಗ್ ಕಾರ್ಮಿಕರ ಕಾಯ್ದೆಗೆ ಸುಗ್ರೀವಾಜ್ಞೆ | ಐತಿಹಾಸಿಕ ಹೆಜ್ಜೆ ಎಂದ ರಾಹುಲ್ ಗಾಂಧಿ

ಗಿಗ್ ಕಾರ್ಮಿಕರ ಕಾಯ್ದೆಗೆ ಸುಗ್ರೀವಾಜ್ಞೆ | ಐತಿಹಾಸಿಕ ಹೆಜ್ಜೆ ಎಂದ ರಾಹುಲ್ ಗಾಂಧಿ

- Advertisement -
- Advertisement -

ಫ್ಲಾಟ್‌ಫಾರ್ಮ್‌ ಆಧಾರಿತ ಗಿಗ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವ ಗುರಿಯನ್ನು ಹೊಂದಿರುವ ಕಾನೂನಿಗೆ ಸುಗ್ರೀವಾಜ್ಞೆಯನ್ನು ಹೊರಡಿಸಿರುವ ಕರ್ನಾಟಕ ಸರ್ಕಾರದ ಕ್ರಮವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಶ್ಲಾಘಿಸಿದ್ದಾರೆ. ದೇಶದ ಪ್ರತಿ ರಾಜ್ಯಕ್ಕೂ ಪಕ್ಷದ ದೃಷ್ಟಿಕೋನ ಇದಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ಗಿಗ್ ಕಾರ್ಮಿಕರ ಕಾಯ್ದೆಗೆ

ಮಂಗಳವಾರ ಹೊರಡಿಸಲಾದ ಸುಗ್ರೀವಾಜ್ಞೆಯು ಕಲ್ಯಾಣ ಮಂಡಳಿಯ ಸ್ಥಾಪನೆ ಮತ್ತು ಗಿಗ್ ಕಾರ್ಮಿಕರಿಗಾಗಿ ಮೀಸಲಾದ ಕಲ್ಯಾಣ ನಿಧಿಯನ್ನು ರಚಿಸುವ ಪ್ರಸ್ತಾಪವನ್ನು ಹೊಂದಿದೆ.

” ‘ರೇಟಿಂಗ್ ನಹಿ, ಹಕ್ ಚಾಹಿಯೇ’. ‘ಇನ್ಸಾನ್ ಹೈ ಹಮ್, ಗುಲಾಮ್ ನಹಿ’. ಗಿಗ್ ಕಾರ್ಮಿಕರ ಈ ಪ್ರಬಲ ಮಾತುಗಳು ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ನನ್ನ ಮನಸ್ಸಿನಲ್ಲಿ ಉಳಿದವು,” ಎಂದು ರಾಹುಲ್ ಗಾಂಧಿ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

“ಕರ್ನಾಟಕದ ನಮ್ಮ ಕಾಂಗ್ರೆಸ್ ಸರ್ಕಾರ ಗಿಗ್ ಕಾರ್ಮಿಕರ ಹಕ್ಕುಗಳು, ಘನತೆ ಮತ್ತು ರಕ್ಷಣೆಯನ್ನು ಖಾತರಿಪಡಿಸುವ ಸುಗ್ರೀವಾಜ್ಞೆಯನ್ನು ಹೊರಡಿಸುವ ಮೂಲಕ ಐತಿಹಾಸಿಕ ಹೆಜ್ಜೆ ಇಟ್ಟಿದೆ… ಈ ಕಾರ್ಮಿಕರು ನಮಗೆ ಆಹಾರವನ್ನು ತರುತ್ತಾರೆ, ಅಗತ್ಯ ವಸ್ತುಗಳನ್ನು ತಲುಪಿಸುತ್ತಾರೆ ಮತ್ತು ಸೆಕೆ, ಚಳಿ ಮತ್ತು ಮಳೆಯಲ್ಲಿ ನಮ್ಮನ್ನು ಸುರಕ್ಷಿತವಾಗಿ ಇರಿಸುತ್ತಾರೆ” ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ರಾಹುಲ್ ಹೇಳಿದ್ದಾರೆ.

ಇಷ್ಟೆಲ್ಲ ಕಷ್ಟ ಬಂದದೂ, ಅವರನ್ನು ಯಾವುದೆ ವಿವರಣೆಯಿಲ್ಲದೆ ಅವರ ಅಪ್ಲಿಕೇಶನ್‌ಗಳಿಂದ ಹೆಚ್ಚಾಗಿ ನಿರ್ಬಂಧಿಸಲಾಗುತ್ತದೆ, ಅನಾರೋಗ್ಯ ರಜೆ ನಿರಾಕರಿಸಲಾಗುತ್ತದೆ ಮತ್ತು ಅಪಾರದರ್ಶಕ ಅಲ್ಗಾರಿದಮ್‌ಗಳ ಪ್ರಕಾರ ಅವರಿಗೆ ಪಾವತಿ ಮಾಡಲಾಗುತ್ತದೆ ಎಂದು ರಾಹುಲ್ ಹೇಳಿದ್ದಾರೆ. “ನಾವು ಅದನ್ನು ಬದಲಾಯಿಸುತ್ತಿದ್ದೇವೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ಕರ್ನಾಟಕದ ಹೊಸ ಸುಗ್ರೀವಾಜ್ಞೆಯು ಸಾಮಾಜಿಕ ಭದ್ರತೆ, ನ್ಯಾಯಯುತ ಒಪ್ಪಂದಗಳು, ಅಲ್ಗಾರಿದಮಿಕ್ ವೇತನದಲ್ಲಿ ಪಾರದರ್ಶಕತೆ ಮತ್ತು ಅನಿಯಂತ್ರಿತ ನಿರ್ಬಂಧವನ್ನು ಕೊನೆಗೊಳಿಸುತ್ತದೆ ಎಂದು ಅವರು ಹೇಳಿದ್ದಾರೆ.

“ನಾವೀನ್ಯತೆ ಮತ್ತು ನ್ಯಾಯವಾಗಿ ನಡೆಯುವ ಮೂಲಕ ತಂತ್ರಜ್ಞಾನವು ಜನರಿಗೆ ಸೇವೆ ಸಲ್ಲಿಸಬೇಕು. ರಾಜಸ್ಥಾನವು ದಾರಿ ತೋರಿಸಿದೆ. ಕರ್ನಾಟಕ ಕಾರ್ಯನಿರ್ವಹಿಸಿದೆ. ತೆಲಂಗಾಣ ಮುಂದಿನ ಗುರಿ” ಎಂದು ಅವರು ಹೇಳಿದ್ದಾರೆ.

ರಾಹುಲ್ ಗಾಂಧಿಯವರ ಪ್ರಕಾರ, ಗಿಗ್ ಮತ್ತು ಪ್ಲಾಟ್‌ಫಾರ್ಮ್ ಕೆಲಸವು ಹೊಸ ಅವಕಾಶಗಳನ್ನು ಸೃಷ್ಟಿಸುತ್ತಿದೆ ಮತ್ತು ಕೆಲಸದ ಸಂಬಂಧಗಳನ್ನು ಮರುರೂಪಿಸುತ್ತಿದೆ. ಹಾಗಾಗಿ ಕಾರ್ಮಿಕರ ಹಕ್ಕುಗಳ ಈ ಹೊಸ ವ್ಯವಸ್ಥೆಯ ಕೇಂದ್ರದಲ್ಲಿರಬೇಕು ಎಂದು ಹೇಳಿದ್ದಾರೆ. “ಇದು ನಮ್ಮ ದೃಷ್ಟಿಕೋನ ಮತ್ತು ನಾವು ಅದನ್ನು ಪ್ರತಿ ರಾಜ್ಯಕ್ಕೆ ಮತ್ತು ರಾಷ್ಟ್ರಕ್ಕೆ ಕೊಂಡೊಯ್ಯುತ್ತೇವೆ” ಎಂದು ಅವರು ಹೇಳಿದ್ದಾರೆ.

ಕರ್ನಾಟಕ ಪ್ಲಾಟ್‌ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿಯು 15 ಸದಸ್ಯರನ್ನು ಹೊಂದಿರುತ್ತದೆ. ಕಾರ್ಮಿಕ ಸಚಿವರ ನೇತೃತ್ವದ ಇರುವ ಈ ಮಂಡಳಿಯಲ್ಲಿ ನಾಲ್ವರು ಗಿಗ್ ಕಾರ್ಮಿಕರು, ನಾಲ್ವರು ಗಿಗ್ ಅಗ್ರಿಗೇಟರ್‌ಗಳ ಪ್ರತಿನಿಧಿಗಳು ಮತ್ತು ಕ್ಷೇತ್ರದಲ್ಲಿ ಅನುಭವ ಹೊಂದಿರುವ ನಾಗರಿಕ ಸಮಾಜದ ಇಬ್ಬರು ಪ್ರತಿನಿಧಿಗಳನ್ನು ಹೊಂದಿರುತ್ತದೆ. ಅವರೆಲ್ಲರನ್ನೂ ರಾಜ್ಯ ಸರ್ಕಾರವು ನಾಮನಿರ್ದೇಶನ ಮಾಡುತ್ತದೆ. ಗಿಗ್ ಕಾರ್ಮಿಕರ ಕಾಯ್ದೆಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನಕ್ಸಲ್ ಬಸವರಾಜು ಮೃತದೇಹದ ಅಂತ್ಯಕ್ರಿಯೆ: ಪೊಲೀಸರ ವಿರುದ್ಧ ಕುಟುಂಬಸ್ಥರಿಂದ ನ್ಯಾಯಾಂಗ ನಿಂದನೆ ಅರ್ಜಿ

ನಕ್ಸಲ್ ಬಸವರಾಜು ಮೃತದೇಹದ ಅಂತ್ಯಕ್ರಿಯೆ: ಪೊಲೀಸರ ವಿರುದ್ಧ ಕುಟುಂಬಸ್ಥರಿಂದ ನ್ಯಾಯಾಂಗ ನಿಂದನೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...