Homeಅಂತರಾಷ್ಟ್ರೀಯಕೀನ್ಯಾದ ಕ್ರಾಂತಿಕಾರಿ ಲೇಖಕ, ಹೋರಾಟಗಾರ ಗೂಗಿ ವಾ ಥಿಯೊಂಗೊ ನಿಧನ

ಕೀನ್ಯಾದ ಕ್ರಾಂತಿಕಾರಿ ಲೇಖಕ, ಹೋರಾಟಗಾರ ಗೂಗಿ ವಾ ಥಿಯೊಂಗೊ ನಿಧನ

- Advertisement -
- Advertisement -

ಸ್ವಾತಂತ್ರ್ಯಾ ನಂತರದ ರಾಜಕೀಯ ಪ್ರಮುಖರ ಕಟು ಟೀಕೆಗಳ ಕಾರಣಕ್ಕೆ ಜೈಲು ಮತ್ತು ಎರಡು ದಶಕಗಳ ಗಡಿಪಾರು ಶಿಕ್ಷೆಗೆ ಗುರಿಯಾಗಿದ್ದ ಕೀನ್ಯಾದ ಪ್ರಸಿದ್ಧ ಕಾದಂಬರಿಕಾರ ಹಾಗೂ ನಾಟಕಕಾರ ಗೂಗಿ ವಾ ಥಿಯೊಂಗೊ ಅವರು ತನ್ನ 87ನೇ ವಯಸ್ಸಿನಲ್ಲಿ ಅಮೆರಿಕದ ಅಟ್ಲಾಂಟ್ಲಾದಲ್ಲಿ ನಿಧನರಾಗಿದ್ದಾರೆ.

ಈ ವಿಚಾರವನ್ನು ಕೀನ್ಯಾದ ಅಧ್ಯಕ್ಷ ವಿಲಿಯಂ ರುಟೊ ಮತ್ತು ಗೂಗಿ ಅವರ ಮಗಳು ವಾಂಜಿಕು ವಾ ಥಿಯೊಂಗೊ ಖಚಿತಪಡಿಸಿದ್ದಾರೆ.

ಬ್ರಿಟನ್‌ನಿಂದ ಸ್ವಾತಂತ್ರ್ಯಕ್ಕಾಗಿ ನಡೆದ ಸಶಸ್ತ್ರ ‘ಮೌ ಮೌ’ ಹೋರಾಟದಲ್ಲಿ ಪಾಲ್ಗೊಂಡಿದ್ದ, ಅದರಲ್ಲೇ ರೂಪುಗೊಂಡ ಥಿಯೊಂಗೊ ಅವರು, ತಮ್ಮ ಬರಹಗಳಲ್ಲಿ ವಸಾಹತುಶಾಹಿ ಆಳ್ವಿಕೆ ಮತ್ತು ಅದರ ಅನೇಕ ಸವಲತ್ತುಗಳನ್ನು ಪಡೆದ ಕೀನ್ಯಾದ ನಾಯಕರನ್ನು ಕಟುವಾಗಿ ಟೀಕಿಸುತ್ತಿದ್ದರು.

ಡಿಸೆಂಬರ್ 1977ರಲ್ಲಿ, ರೈತರು ಮತ್ತು ಕಾರ್ಮಿಕರು ಥಿಯೊಂಗೊ ಅವರ ‘ಗಹಿಕ ದೀಂಡಾ’ (ನಾನು ಬಯಸಿದಾಗ ಮದುವೆಯಾಗುತ್ತೇನೆ) ನಾಟಕವನ್ನು ಪ್ರದರ್ಶಿಸಿದ ನಂತರ, ಯಾವುದೇ ಆರೋಪಗಳಿಲ್ಲದೆ ಥಿಯೊಂಗೊ ಅವರನ್ನು ಬಂಧಿಸಿ ಬಿಗಿ ಭದ್ರತೆಯ ಜೈಲಿನಲ್ಲಿ ಒಂದು ವರ್ಷ ಇಡಲಾಗಿತ್ತು.

ಕೀನ್ಯಾ ಸಮಾಜದಲ್ಲಿನ ಅಸಮಾನತೆಗಳ ಬಗೆಗಿನ ಟೀಕೆಯಿಂದ ಕೋಪಗೊಂಡ ಅಧಿಕಾರಿಗಳು, ನಾಟಕ ಆಯೋಜಿಸಿದ್ದ ರಂಗಮಂದಿರವನ್ನು ನೆಲಸಮ ಮಾಡಲು ಮೂರು ಟ್ರಕ್‌ಗಳಲ್ಲಿ ಪೊಲೀಸರನ್ನು ಕಳುಹಿಸಿದ್ದರು ಎಂದು ಥಿಯೊಂಗೊ ನಂತರ ಹೇಳಿದ್ದರು.

ಮಾಜಿ ಅಧ್ಯಕ್ಷ ಡೇನಿಯಲ್ ಅರಪ್ ಮೋಯಿ ಅವರ ಭದ್ರತಾ ಪಡೆಗಳು ತನ್ನನ್ನು ಬಂಧಿಸಿ ಕೊಲ್ಲಲು ಯೋಜನೆಗಳನ್ನು ರೂಪಿಸಿವೆ ಎಂದು ತಿಳಿದ ನಂತರ, 1982ರಲ್ಲಿ ಥಿಯೊಂಗೊ ದೇಶ ತೊರೆದು ಕ್ಯಾಲಿಫೋರ್ನಿಯಾ ಸೇರಿಕೊಂಡಿದ್ದರು. ಅಲ್ಲಿ ಇರ್ವಿನ್ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಮತ್ತು ತುಲನಾತ್ಮಕ ಸಾಹಿತ್ಯದ ಪ್ರಾಧ್ಯಾಪಕರಾಗಿದ್ದರು.

ವ್ಯಾಪಕ ಬಂಧನಗಳು, ಹತ್ಯೆಗಳು ಮತ್ತು ರಾಜಕೀಯ ವಿರೋಧಿಗಳಿಗೆ ಚಿತ್ರಹಿಂಸೆ ನೀಡುತ್ತಿದ್ದ ಮಾಜಿ ಅಧ್ಯಕ್ಷ ಮೋಯಿ ಅವರ ಎರಡು ದಶಕದ ಆಡಳಿತ ಕೊನೆಗೊಂಡ ಬಳಿಕ, 2004ರಲ್ಲಿ ಥಿಯೊಂಗೊ ದೇಶಕ್ಕೆ ವಾಪಾಸಾಗಿದ್ದರು.

ಇತ್ತೀಚಿನ ವರ್ಷಗಳಲ್ಲಿ ಥಿಯೊಂಗೊ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂಬ ವರದಿಗಳು ಬಂದಿತ್ತು. ಅವರು ಗುರುವಾರ (ಮೇ.29) ಅಮೆರಿಕದಲ್ಲಿ ನಿಧನರಾಗಿದ್ದಾರೆ ಎಂದು ಅಧ್ಯಕ್ಷ ವಿಲಿಯಂ ರುಟೊ ಮಾಹಿತಿ ನೀಡಿದ್ದಾರೆ.

“ಕೀನ್ಯಾದ ಅಕ್ಷರಗಳ ದಂತಕಥೆ ಕೊನೆಯ ಬಾರಿಗೆ ತನ್ನ ಪೆನ್ನು ಕೆಳಗಿಟ್ಟಿದ್ದಾರೆ” ಎಂದು ರುಟೊ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

“ಯಾವಾಗಲೂ ಧೈರ್ಯಶಾಲಿಯಾಗಿದ್ದ ಅವರು, ನಮ್ಮ ಸ್ವಾತಂತ್ರ್ಯ, ಸಾಮಾಜಿಕ ನ್ಯಾಯ ಹಾಗೂ ರಾಜಕೀಯ ಮತ್ತು ಆರ್ಥಿಕ ಶಕ್ತಿಯ ಬಳಕೆ ಮತ್ತು ದುರುಪಯೋಗದ ಬಗ್ಗೆ ನಾವು ಹೇಗೆ ಯೋಚಿಸುತ್ತೇವೆ ಎಂಬುದರ ಮೇಲೆ ಅಳಿಸಲಾಗದ ಪ್ರಭಾವ ಬೀರಿದ್ದರು” ಎಂದಿದ್ದಾರೆ.

2004ರಲ್ಲಿ ಕೀನ್ಯಾಕ್ಕೆ ಹಿಂದಿರುಗಿದ ನಂತರ ಥಿಯೊಂಗೊ ಅವರು ಮಾಜಿ ಅಧ್ಯಕ್ಷ ಮೋಯಿ ವಿರುದ್ಧ ಯಾವುದೇ ದ್ವೇಷ ಹೊಂದಿಲ್ಲ ಎಂದು ಹೇಳಿದ್ದರೂ, ಮೂರು ವರ್ಷಗಳ ನಂತರ ರಾಯಿಟರ್ಸ್‌ಗೆ ನೀಡಿದ ಸಂದರ್ಶನದಲ್ಲಿ ಕೀನ್ಯಾದವರು ಆ ಯುಗದ ದುರುಪಯೋಗಗಳನ್ನು ಮರೆಯಬಾರದು ಎಂದು ಹೇಳಿದ್ದರು.

“22 ವರ್ಷಗಳ ಸರ್ವಾಧಿಕಾರದ ಪರಿಣಾಮಗಳು ನಮ್ಮೊಂದಿಗೆ ದೀರ್ಘಕಾಲ ಇರುತ್ತವೆ. ನಾವು ಆ ಅವಧಿಗೆ ಮರಳುವುದನ್ನು ಮತ್ತೊಮ್ಮೆ ನೋಡಲು ನಾನು ಇಷ್ಟಪಡುವುದಿಲ್ಲ” ಎಂದಿದ್ದರು.

ಥಿಯೊಂಗೊ ಅವರ ಅತ್ಯಂತ ಪ್ರಸಿದ್ಧ ಕೃತಿಗಳಲ್ಲಿ ‘ಮೌ ಮೌ’ ಹೋರಾಟವನ್ನು ವಿವರಿಸುವ ಅವರ ಚೊಚ್ಚಲ ಕಾದಂಬರಿ “ವೀಪ್ ನಾಟ್ ಚೈಲ್ಡ್” ಮತ್ತು ಜೈಲಿನಲ್ಲಿದ್ದಾಗ ಟಾಯ್ಲೆಟ್ ಪೇಪರ್‌ನಲ್ಲಿ ಬರೆದ “ಡೆವಿಲ್ ಆನ್ ದಿ ಕ್ರಾಸ್” ಸೇರಿವೆ.

1980ರ ದಶಕದಲ್ಲಿ ಕೀನ್ಯಾದ ಹಿಂದಿನ ವಸಾಹತುಶಾಹಿ ಯಜಮಾನ ಆಮದು ಮಾಡಿದ ಭಾಷೆಗೆ ವಿದಾಯ ಹೇಳುತ್ತಿರುವುದಾಗಿ ಹೇಳಿದ್ದ ಥಿಯೊಂಗೊ ಇಂಗ್ಲಿಷ್ ತ್ಯಜಿಸಿ ತಮ್ಮ ಮಾತೃಭಾಷೆ ಗಿಕುಯುನಲ್ಲಿ ಬರೆಯಲು ಪ್ರಾರಂಭಿಸಿದರು.

1938ರ ಜನವರಿ 5ರಂದು ಕೀನ್ಯಾದ ಲಿಮುರು ಎಂಬಲ್ಲಿ ಜನಿಸಿದ ಥಿಯೊಂಗೊ ಅವರು, ಜಾಗತಿಕ ಸಾಹಿತ್ಯದ ಸಂದರ್ಭದಲ್ಲಿ ತಮ್ಮ ಅಸಾಧಾರಣ ವ್ಯಕ್ತಿತ್ವ ಮತ್ತು ಪ್ರತಿಭೆಗೆ ಹೆಸರಾದವರು.

ಚಿನುವಾ ಅಚಿಬೆ ಅವರ ಸಾಹಿತ್ಯದಂತೆ ಇವರ ಕೃತಿಗಳನ್ನೂ ವಿವಿಧ ಲೇಖಕರು ಕನ್ನಡಕ್ಕೆ ಅನುವಾದಿಸಿದ್ದಾರೆ. ‘ವೀಪ್ ನಾಟ್-ಚೈಲ್ಡ್, ‘ದಿ ರಿವರ್ ಬಿಟ್ವೀನ್’, ‘ಎ ಗ್ರೈನ್ ಆಫ್ ವೀಟ್ ಆನ್ ದಿ ಕ್ರಾಸ್’, ‘ವಿಜರ್ಡ್ ಆಫ್ ದಿ ಕ್ರೊ’ ಥಿಯೊಂಗೊ ಅವರ ಪ್ರಮುಖ ಕಾದಂಬರಿಗಳು.

ಕಾದಂಬರಿಗಳ ಜೊತೆ ಹಲವು ನಾಟಕಗಳನ್ನೂ ಥಿಯೊಂಗೊ ರಚಿಸಿದ್ದಾರೆ. ಸಾಹಿತ್ಯ, ಸಂಸ್ಕೃತಿ, ರಾಜಕೀಯ ಸ್ವರೂಪದ ಬಗ್ಗೆ ಹಲವಾರು ಪ್ರಬಂಧಗಳನ್ನೂ ಬರೆದಿದ್ದಾರೆ. ಇವರ ಬಹು ಚರ್ಚಿತ ಲೇಖನಗಳು ಕನ್ನಡಕ್ಕೆ ಅನುವಾದಗೊಂಡಿವೆ.

ಥಿಯೊಂಗೊ ಅವರನ್ನು ಪೂರ್ವ ಆಫ್ರಿಕಾದ ಪ್ರಮುಖ ಕಾದಂಬರಿಕಾರ ಎಂದು ಪರಿಗಣಿಸಲಾಗಿದೆ. ಅವರ ಜನಪ್ರಿಯ ‘ವೀಪ್ ನಾಟ್-ಚೈಲ್ಡ್’ (1964) ಪೂರ್ವ ಆಫ್ರಿಕನ್ ಒಬ್ಬರಿಂದ ಇಂಗ್ಲಿಷ್‌ನಲ್ಲಿ ಪ್ರಕಟವಾದ ಮೊದಲ ಪ್ರಮುಖ ಕಾದಂಬರಿಯಾಗಿದೆ.

ಥಿಯೊಂಗೊ ಅವರು 1963ರಲ್ಲಿ ಉಗಾಂಡಾದ ಕಂಪಾಲಾದ ಮಕೆರೆರೆ ವಿಶ್ವವಿದ್ಯಾಲಯದಿಂದ ಮತ್ತು 1964ರಲ್ಲಿ ಇಂಗ್ಲೆಂಡ್‌ನ ಯಾರ್ಕ್‌ಷೈರ್‌ನ ಲೀಡ್ಸ್‌ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದಾರೆ. ಲೀಡ್ಸ್‌ನಲ್ಲಿ ಪದವಿ ಪಡೆದ ಬಳಿಕ ಥಿಯೊಂಗೊ ಅವರು ಕೀನ್ಯಾದ ನೈರೋಬಿ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿ ಮತ್ತು ಅಮೆರಿಕದ ಇಲಿನಾಯ್ಸ್‌ನ ಇವಾನ್‌ಸ್ಟನ್‌ನ ನಾರ್ತ್‌ವೆಸ್ಟರ್ನ್ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್‌ನ ಸಂದರ್ಶಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. 1972ರಿಂದ 1977ರವರೆಗೆ ನೈರೋಬೊ ವಿಶ್ವವಿದ್ಯಾಲಯದಲ್ಲಿ ಥಿಯೊಂಗೊ ಹಿರಿಯ ಉಪನ್ಯಾಸಕರಾಗಿ ಮತ್ತು ಸಾಹಿತ್ಯ ವಿಭಾಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಸಾಕ್ಷಿದಾರರಿಗೆ ಬೆದರಿಕೆ: ನ್ಯಾಯಾಧೀಶರಿಗೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

ನೂತನ ರಾಜ್ಯಪಾಲ ಆರ್.ಎನ್ ರವಿ ಅವರನ್ನು 'ಬಿಜೆಪಿ ಕೇಡರ್' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಲೇವಡಿ ಮಾಡಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸಚಿವಾಲಯ 'ನಬನ್ನಾ' ಮತ್ತು ರಾಜ್ಯಪಾಲರ ನಿವಾಸ...

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...

ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...

ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ. ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ...

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...

ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ...