Homeಅಂತರಾಷ್ಟ್ರೀಯಕೀನ್ಯಾದ ಕ್ರಾಂತಿಕಾರಿ ಲೇಖಕ, ಹೋರಾಟಗಾರ ಗೂಗಿ ವಾ ಥಿಯೊಂಗೊ ನಿಧನ

ಕೀನ್ಯಾದ ಕ್ರಾಂತಿಕಾರಿ ಲೇಖಕ, ಹೋರಾಟಗಾರ ಗೂಗಿ ವಾ ಥಿಯೊಂಗೊ ನಿಧನ

- Advertisement -
- Advertisement -

ಸ್ವಾತಂತ್ರ್ಯಾ ನಂತರದ ರಾಜಕೀಯ ಪ್ರಮುಖರ ಕಟು ಟೀಕೆಗಳ ಕಾರಣಕ್ಕೆ ಜೈಲು ಮತ್ತು ಎರಡು ದಶಕಗಳ ಗಡಿಪಾರು ಶಿಕ್ಷೆಗೆ ಗುರಿಯಾಗಿದ್ದ ಕೀನ್ಯಾದ ಪ್ರಸಿದ್ಧ ಕಾದಂಬರಿಕಾರ ಹಾಗೂ ನಾಟಕಕಾರ ಗೂಗಿ ವಾ ಥಿಯೊಂಗೊ ಅವರು ತನ್ನ 87ನೇ ವಯಸ್ಸಿನಲ್ಲಿ ಅಮೆರಿಕದ ಅಟ್ಲಾಂಟ್ಲಾದಲ್ಲಿ ನಿಧನರಾಗಿದ್ದಾರೆ.

ಈ ವಿಚಾರವನ್ನು ಕೀನ್ಯಾದ ಅಧ್ಯಕ್ಷ ವಿಲಿಯಂ ರುಟೊ ಮತ್ತು ಗೂಗಿ ಅವರ ಮಗಳು ವಾಂಜಿಕು ವಾ ಥಿಯೊಂಗೊ ಖಚಿತಪಡಿಸಿದ್ದಾರೆ.

ಬ್ರಿಟನ್‌ನಿಂದ ಸ್ವಾತಂತ್ರ್ಯಕ್ಕಾಗಿ ನಡೆದ ಸಶಸ್ತ್ರ ‘ಮೌ ಮೌ’ ಹೋರಾಟದಲ್ಲಿ ಪಾಲ್ಗೊಂಡಿದ್ದ, ಅದರಲ್ಲೇ ರೂಪುಗೊಂಡ ಥಿಯೊಂಗೊ ಅವರು, ತಮ್ಮ ಬರಹಗಳಲ್ಲಿ ವಸಾಹತುಶಾಹಿ ಆಳ್ವಿಕೆ ಮತ್ತು ಅದರ ಅನೇಕ ಸವಲತ್ತುಗಳನ್ನು ಪಡೆದ ಕೀನ್ಯಾದ ನಾಯಕರನ್ನು ಕಟುವಾಗಿ ಟೀಕಿಸುತ್ತಿದ್ದರು.

ಡಿಸೆಂಬರ್ 1977ರಲ್ಲಿ, ರೈತರು ಮತ್ತು ಕಾರ್ಮಿಕರು ಥಿಯೊಂಗೊ ಅವರ ‘ಗಹಿಕ ದೀಂಡಾ’ (ನಾನು ಬಯಸಿದಾಗ ಮದುವೆಯಾಗುತ್ತೇನೆ) ನಾಟಕವನ್ನು ಪ್ರದರ್ಶಿಸಿದ ನಂತರ, ಯಾವುದೇ ಆರೋಪಗಳಿಲ್ಲದೆ ಥಿಯೊಂಗೊ ಅವರನ್ನು ಬಂಧಿಸಿ ಬಿಗಿ ಭದ್ರತೆಯ ಜೈಲಿನಲ್ಲಿ ಒಂದು ವರ್ಷ ಇಡಲಾಗಿತ್ತು.

ಕೀನ್ಯಾ ಸಮಾಜದಲ್ಲಿನ ಅಸಮಾನತೆಗಳ ಬಗೆಗಿನ ಟೀಕೆಯಿಂದ ಕೋಪಗೊಂಡ ಅಧಿಕಾರಿಗಳು, ನಾಟಕ ಆಯೋಜಿಸಿದ್ದ ರಂಗಮಂದಿರವನ್ನು ನೆಲಸಮ ಮಾಡಲು ಮೂರು ಟ್ರಕ್‌ಗಳಲ್ಲಿ ಪೊಲೀಸರನ್ನು ಕಳುಹಿಸಿದ್ದರು ಎಂದು ಥಿಯೊಂಗೊ ನಂತರ ಹೇಳಿದ್ದರು.

ಮಾಜಿ ಅಧ್ಯಕ್ಷ ಡೇನಿಯಲ್ ಅರಪ್ ಮೋಯಿ ಅವರ ಭದ್ರತಾ ಪಡೆಗಳು ತನ್ನನ್ನು ಬಂಧಿಸಿ ಕೊಲ್ಲಲು ಯೋಜನೆಗಳನ್ನು ರೂಪಿಸಿವೆ ಎಂದು ತಿಳಿದ ನಂತರ, 1982ರಲ್ಲಿ ಥಿಯೊಂಗೊ ದೇಶ ತೊರೆದು ಕ್ಯಾಲಿಫೋರ್ನಿಯಾ ಸೇರಿಕೊಂಡಿದ್ದರು. ಅಲ್ಲಿ ಇರ್ವಿನ್ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಮತ್ತು ತುಲನಾತ್ಮಕ ಸಾಹಿತ್ಯದ ಪ್ರಾಧ್ಯಾಪಕರಾಗಿದ್ದರು.

ವ್ಯಾಪಕ ಬಂಧನಗಳು, ಹತ್ಯೆಗಳು ಮತ್ತು ರಾಜಕೀಯ ವಿರೋಧಿಗಳಿಗೆ ಚಿತ್ರಹಿಂಸೆ ನೀಡುತ್ತಿದ್ದ ಮಾಜಿ ಅಧ್ಯಕ್ಷ ಮೋಯಿ ಅವರ ಎರಡು ದಶಕದ ಆಡಳಿತ ಕೊನೆಗೊಂಡ ಬಳಿಕ, 2004ರಲ್ಲಿ ಥಿಯೊಂಗೊ ದೇಶಕ್ಕೆ ವಾಪಾಸಾಗಿದ್ದರು.

ಇತ್ತೀಚಿನ ವರ್ಷಗಳಲ್ಲಿ ಥಿಯೊಂಗೊ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂಬ ವರದಿಗಳು ಬಂದಿತ್ತು. ಅವರು ಗುರುವಾರ (ಮೇ.29) ಅಮೆರಿಕದಲ್ಲಿ ನಿಧನರಾಗಿದ್ದಾರೆ ಎಂದು ಅಧ್ಯಕ್ಷ ವಿಲಿಯಂ ರುಟೊ ಮಾಹಿತಿ ನೀಡಿದ್ದಾರೆ.

“ಕೀನ್ಯಾದ ಅಕ್ಷರಗಳ ದಂತಕಥೆ ಕೊನೆಯ ಬಾರಿಗೆ ತನ್ನ ಪೆನ್ನು ಕೆಳಗಿಟ್ಟಿದ್ದಾರೆ” ಎಂದು ರುಟೊ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

“ಯಾವಾಗಲೂ ಧೈರ್ಯಶಾಲಿಯಾಗಿದ್ದ ಅವರು, ನಮ್ಮ ಸ್ವಾತಂತ್ರ್ಯ, ಸಾಮಾಜಿಕ ನ್ಯಾಯ ಹಾಗೂ ರಾಜಕೀಯ ಮತ್ತು ಆರ್ಥಿಕ ಶಕ್ತಿಯ ಬಳಕೆ ಮತ್ತು ದುರುಪಯೋಗದ ಬಗ್ಗೆ ನಾವು ಹೇಗೆ ಯೋಚಿಸುತ್ತೇವೆ ಎಂಬುದರ ಮೇಲೆ ಅಳಿಸಲಾಗದ ಪ್ರಭಾವ ಬೀರಿದ್ದರು” ಎಂದಿದ್ದಾರೆ.

2004ರಲ್ಲಿ ಕೀನ್ಯಾಕ್ಕೆ ಹಿಂದಿರುಗಿದ ನಂತರ ಥಿಯೊಂಗೊ ಅವರು ಮಾಜಿ ಅಧ್ಯಕ್ಷ ಮೋಯಿ ವಿರುದ್ಧ ಯಾವುದೇ ದ್ವೇಷ ಹೊಂದಿಲ್ಲ ಎಂದು ಹೇಳಿದ್ದರೂ, ಮೂರು ವರ್ಷಗಳ ನಂತರ ರಾಯಿಟರ್ಸ್‌ಗೆ ನೀಡಿದ ಸಂದರ್ಶನದಲ್ಲಿ ಕೀನ್ಯಾದವರು ಆ ಯುಗದ ದುರುಪಯೋಗಗಳನ್ನು ಮರೆಯಬಾರದು ಎಂದು ಹೇಳಿದ್ದರು.

“22 ವರ್ಷಗಳ ಸರ್ವಾಧಿಕಾರದ ಪರಿಣಾಮಗಳು ನಮ್ಮೊಂದಿಗೆ ದೀರ್ಘಕಾಲ ಇರುತ್ತವೆ. ನಾವು ಆ ಅವಧಿಗೆ ಮರಳುವುದನ್ನು ಮತ್ತೊಮ್ಮೆ ನೋಡಲು ನಾನು ಇಷ್ಟಪಡುವುದಿಲ್ಲ” ಎಂದಿದ್ದರು.

ಥಿಯೊಂಗೊ ಅವರ ಅತ್ಯಂತ ಪ್ರಸಿದ್ಧ ಕೃತಿಗಳಲ್ಲಿ ‘ಮೌ ಮೌ’ ಹೋರಾಟವನ್ನು ವಿವರಿಸುವ ಅವರ ಚೊಚ್ಚಲ ಕಾದಂಬರಿ “ವೀಪ್ ನಾಟ್ ಚೈಲ್ಡ್” ಮತ್ತು ಜೈಲಿನಲ್ಲಿದ್ದಾಗ ಟಾಯ್ಲೆಟ್ ಪೇಪರ್‌ನಲ್ಲಿ ಬರೆದ “ಡೆವಿಲ್ ಆನ್ ದಿ ಕ್ರಾಸ್” ಸೇರಿವೆ.

1980ರ ದಶಕದಲ್ಲಿ ಕೀನ್ಯಾದ ಹಿಂದಿನ ವಸಾಹತುಶಾಹಿ ಯಜಮಾನ ಆಮದು ಮಾಡಿದ ಭಾಷೆಗೆ ವಿದಾಯ ಹೇಳುತ್ತಿರುವುದಾಗಿ ಹೇಳಿದ್ದ ಥಿಯೊಂಗೊ ಇಂಗ್ಲಿಷ್ ತ್ಯಜಿಸಿ ತಮ್ಮ ಮಾತೃಭಾಷೆ ಗಿಕುಯುನಲ್ಲಿ ಬರೆಯಲು ಪ್ರಾರಂಭಿಸಿದರು.

1938ರ ಜನವರಿ 5ರಂದು ಕೀನ್ಯಾದ ಲಿಮುರು ಎಂಬಲ್ಲಿ ಜನಿಸಿದ ಥಿಯೊಂಗೊ ಅವರು, ಜಾಗತಿಕ ಸಾಹಿತ್ಯದ ಸಂದರ್ಭದಲ್ಲಿ ತಮ್ಮ ಅಸಾಧಾರಣ ವ್ಯಕ್ತಿತ್ವ ಮತ್ತು ಪ್ರತಿಭೆಗೆ ಹೆಸರಾದವರು.

ಚಿನುವಾ ಅಚಿಬೆ ಅವರ ಸಾಹಿತ್ಯದಂತೆ ಇವರ ಕೃತಿಗಳನ್ನೂ ವಿವಿಧ ಲೇಖಕರು ಕನ್ನಡಕ್ಕೆ ಅನುವಾದಿಸಿದ್ದಾರೆ. ‘ವೀಪ್ ನಾಟ್-ಚೈಲ್ಡ್, ‘ದಿ ರಿವರ್ ಬಿಟ್ವೀನ್’, ‘ಎ ಗ್ರೈನ್ ಆಫ್ ವೀಟ್ ಆನ್ ದಿ ಕ್ರಾಸ್’, ‘ವಿಜರ್ಡ್ ಆಫ್ ದಿ ಕ್ರೊ’ ಥಿಯೊಂಗೊ ಅವರ ಪ್ರಮುಖ ಕಾದಂಬರಿಗಳು.

ಕಾದಂಬರಿಗಳ ಜೊತೆ ಹಲವು ನಾಟಕಗಳನ್ನೂ ಥಿಯೊಂಗೊ ರಚಿಸಿದ್ದಾರೆ. ಸಾಹಿತ್ಯ, ಸಂಸ್ಕೃತಿ, ರಾಜಕೀಯ ಸ್ವರೂಪದ ಬಗ್ಗೆ ಹಲವಾರು ಪ್ರಬಂಧಗಳನ್ನೂ ಬರೆದಿದ್ದಾರೆ. ಇವರ ಬಹು ಚರ್ಚಿತ ಲೇಖನಗಳು ಕನ್ನಡಕ್ಕೆ ಅನುವಾದಗೊಂಡಿವೆ.

ಥಿಯೊಂಗೊ ಅವರನ್ನು ಪೂರ್ವ ಆಫ್ರಿಕಾದ ಪ್ರಮುಖ ಕಾದಂಬರಿಕಾರ ಎಂದು ಪರಿಗಣಿಸಲಾಗಿದೆ. ಅವರ ಜನಪ್ರಿಯ ‘ವೀಪ್ ನಾಟ್-ಚೈಲ್ಡ್’ (1964) ಪೂರ್ವ ಆಫ್ರಿಕನ್ ಒಬ್ಬರಿಂದ ಇಂಗ್ಲಿಷ್‌ನಲ್ಲಿ ಪ್ರಕಟವಾದ ಮೊದಲ ಪ್ರಮುಖ ಕಾದಂಬರಿಯಾಗಿದೆ.

ಥಿಯೊಂಗೊ ಅವರು 1963ರಲ್ಲಿ ಉಗಾಂಡಾದ ಕಂಪಾಲಾದ ಮಕೆರೆರೆ ವಿಶ್ವವಿದ್ಯಾಲಯದಿಂದ ಮತ್ತು 1964ರಲ್ಲಿ ಇಂಗ್ಲೆಂಡ್‌ನ ಯಾರ್ಕ್‌ಷೈರ್‌ನ ಲೀಡ್ಸ್‌ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದಾರೆ. ಲೀಡ್ಸ್‌ನಲ್ಲಿ ಪದವಿ ಪಡೆದ ಬಳಿಕ ಥಿಯೊಂಗೊ ಅವರು ಕೀನ್ಯಾದ ನೈರೋಬಿ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿ ಮತ್ತು ಅಮೆರಿಕದ ಇಲಿನಾಯ್ಸ್‌ನ ಇವಾನ್‌ಸ್ಟನ್‌ನ ನಾರ್ತ್‌ವೆಸ್ಟರ್ನ್ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್‌ನ ಸಂದರ್ಶಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. 1972ರಿಂದ 1977ರವರೆಗೆ ನೈರೋಬೊ ವಿಶ್ವವಿದ್ಯಾಲಯದಲ್ಲಿ ಥಿಯೊಂಗೊ ಹಿರಿಯ ಉಪನ್ಯಾಸಕರಾಗಿ ಮತ್ತು ಸಾಹಿತ್ಯ ವಿಭಾಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಸಾಕ್ಷಿದಾರರಿಗೆ ಬೆದರಿಕೆ: ನ್ಯಾಯಾಧೀಶರಿಗೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...