Homeಮುಖಪುಟಸುಪ್ರಿಯ ಸುಳೆಯನ್ನು ಮಂತ್ರಿ ಮಾಡುವ ಆಫರ್‌ ಅನ್ನು ಮೋದಿ ನೀಡಿದ್ದರು: ಶರದ್‌ ಪವಾರ್‌

ಸುಪ್ರಿಯ ಸುಳೆಯನ್ನು ಮಂತ್ರಿ ಮಾಡುವ ಆಫರ್‌ ಅನ್ನು ಮೋದಿ ನೀಡಿದ್ದರು: ಶರದ್‌ ಪವಾರ್‌

- Advertisement -
- Advertisement -

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಮುಂದೆ ಪ್ರಧಾನಿ ನರೇಂದ್ರ ಮೋದಿ ಅವರು “ಒಟ್ಟಾಗಿ ಕೆಲಸ ಮಾಡುವ” ಪ್ರಸ್ತಾಪವನ್ನು ಮುಂದಿಟ್ಟಿದ್ದರು. ಆದರೆ ಒಟ್ಟಿಗೆ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿಯವರಿಗೆ ಸ್ಪಷ್ಟಪಡಿಸಿದೆ ಎಂದು ಶರದ್‌ ಪವಾರ್ ಹೇಳಿದ್ದಾರೆ.

ಸೋಮವಾರ ಮರಾಠಿ ಟಿವಿ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಈ ವಿಷಯ ಬಹಿರಂಗಪಡಿಸಿರುವ ಶರದ್‌ ಪವಾರ್‌, “ನಾವು ಒಟ್ಟಿಗೆ ಕೆಲಸ ಮಾಡಬೇಕೆಂದು ಮೋದಿ ಪ್ರಸ್ತಾಪಿಸಿದರು. ನಮ್ಮ ವೈಯಕ್ತಿಕ ಸಂಬಂಧಗಳು ತುಂಬಾ ಚೆನ್ನಾಗಿವೆ ಮತ್ತು ಅವುಗಳು ಹಾಗೇ ಉಳಿಯಬೇಕು, ಹಾಗಾಗಿ ನಾವು ಒಟ್ಟಿಗೆ ಕೆಲಸ ಮಾಡಲು ಸಾಧ್ಯವಿಲ್ಲ” ಎಂದು ನಾನು ಅವರಿಗೆ ಹೇಳಿದೆ ಎಂದಿದ್ದಾರೆ.

ಮೋದಿ ಸರ್ಕಾರವು ಅವರನ್ನು ಭಾರತದ ರಾಷ್ಟ್ರಪತಿಗಳನ್ನಾಗಿ ಮಾಡಲು ಮುಂದಾಗಿದೆ ಎಂಬ ವರದಿಗಳನ್ನು ಶರದ್‌ ಪವಾರ್ ತಳ್ಳಿಹಾಕಿದ್ದಾರೆ. “ಆದರೆ ಮೋದಿ ನೇತೃತ್ವದ ಸಂಪುಟದಲ್ಲಿ ಪವಾರ್‌ ಮಗಳಾದ ಸುಪ್ರಿಯ ಸುಳೆಯವರನ್ನು ಮಂತ್ರಿಯನ್ನಾಗಿ ಮಾಡುವ ಪ್ರಸ್ತಾಪವಿತ್ತು” ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಬೆಳವಣಿಗೆಗಳ ಮಧ್ಯೆಯೇ ಪವಾರ್ ಕಳೆದ ತಿಂಗಳು ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದರು.

ಕಳೆದ ತಿಂಗಳು ರಾಜ್ಯಸಭೆಯ 250 ನೇ ಅಧಿವೇಶನದಲ್ಲಿ ಮಾತನಾಡುವಾಗ ಪ್ರಧಾನಿ ಮೋದಿ ಅವರು ಶರದ್‌  ಪವಾರ್ ಅವರನ್ನು ಶ್ಲಾಘಿಸಿದ್ದರು. ಅಲ್ಲಿ ಬಿಜೆಪಿ ಸೇರಿದಂತೆ ಕೆಲವು ಪಕ್ಷಗಳು ಸಂಸತ್ತಿನ ಮಾನದಂಡಗಳನ್ನು ಹೇಗೆ ಪಾಲಿಸಬೇಕು ಎಂಬುದರ ಕುರಿತು ಎನ್‌ಸಿಪಿಯಿಂದ ಕಲಿಯಬೇಕು ಎಂದು ಮೋದಿ ಹೇಳಿದ್ದರು.

2016 ರಲ್ಲಿ, ಮೋದಿಯವರು ಪವಾರ್ ಅವರ ಆಹ್ವಾನದ ಮೇರೆಗೆ ಪುಣೆಯ ವಸಂತದಾದ ಸಕ್ಕರೆ ಸಂಸ್ಥೆಗೆ ಭೇಟಿ ನೀಡಿದಾಗ, ಅವರು ಎನ್‌ಸಿಪಿ ಮುಖ್ಯಸ್ಥ ಪವಾರ್‌ರನ್ನು ಸಾರ್ವಜನಿಕ ಜೀವನದಲ್ಲಿ ಇತರರಿಗೆ ಮಾದರಿಯಾಗಿದ್ದಾರೆ ಎಂದು ಹೊಗಳಿದ್ದರು.

“ನನಗೆ ಪವಾರ್ ಬಗ್ಗೆ ವೈಯಕ್ತಿಕವಾಗಿ ಗೌರವವಿದೆ. ನಾನು ಗುಜರಾತ್ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಅವರು ನನ್ನ ಬೆರಳು ಹಿಡಿದು ನಡೆಯಲು ಸಹಾಯ ಮಾಡಿದ್ದರು. ಇದನ್ನು ಸಾರ್ವಜನಿಕವಾಗಿ ಉಚ್ಚರಿಸಲು ನನಗೆ ಹೆಮ್ಮೆ ಇದೆ” ಎಂದು ಪ್ರಧಾನಿ ಮೋದಿ ಹೇಳಿದ್ದರು.

“ಅಜಿತ್ ಪವಾರ್‌ ಏಕಾಏಕಿ ಫಡ್ನವೀಸ್‌ಗೆ ಬೆಂಬಲ ನೀಡಿದ ವಿಷಯ ತಿಳಿದಾಗ, ನಾನು ಮೊದಲು ಸಂಪರ್ಕಿಸಿದ ವ್ಯಕ್ತಿ ಉದ್ಧವ್‌ ಠಾಕ್ರೆ. ಏನಾಯಿತು ಎಂಬುದು ಸರಿಯಾಗಿ ಗೊತ್ತಿಲ್ಲ. ಆದರೆ ನಾನು ಬಂಡಾಯವನ್ನು ಶಮನಮಾಡುತ್ತೇನೆ ಎಂದು ಅವರಿಗೆ ವಿಶ್ವಾಸ ಕೊಟ್ಟಿದ್ದೆ” ಎಂದು ಪವಾರ್ ಹೇಳಿದ್ದಾರೆ.

“ಅಜಿತ್ ಪವಾರ್‌ ಅವರ ಕ್ರಮಕ್ಕೆ ನನ್ನ ಬೆಂಬಲ ಇಲ್ಲ ಎಂದು ಎನ್‌ಸಿಪಿಯಲ್ಲಿರುವ ಎಲ್ಲರಿಗೂ ತಿಳಿದಾಗ, ಅವರೊಂದಿಗೆ ಇದ್ದ ‍ಶಾಸಕರು ಕೂಡ ನಮ್ಮ ಜೊತೆ ಬಂದರು ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...