Homeಕರ್ನಾಟಕಬಲವಂತದ ಭೂಸ್ವಾಧೀನ ವಿರೋಧಿಸಿ ಸಂಯುಕ್ತ ಹೋರಾಟದಿಂದ 'ದೇವನಹಳ್ಳಿ ಚಲೋ'

ಬಲವಂತದ ಭೂಸ್ವಾಧೀನ ವಿರೋಧಿಸಿ ಸಂಯುಕ್ತ ಹೋರಾಟದಿಂದ ‘ದೇವನಹಳ್ಳಿ ಚಲೋ’

- Advertisement -
- Advertisement -

ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟದ 1150ನೇ ದಿನವಾದ ಗುರುವಾರ ರೈತರನ್ನು ಬೆಂಬಲಿಸಿ ‘ಸಂಯುಕ್ತ ಹೋರಾಟ- ಕರ್ನಾಟಕ’ ಸಂಘಟನೆಗಳ ಒಕ್ಕೂಟ ದೇವನಹಳ್ಳಿಯ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿತು.

ಕರ್ನಾಟಕದ ವಿವಿಧ ಭಾಗಗಳಿಂದ ರೈತ, ಕಾರ್ಮಿಕ, ದಲಿತ ಸಂಘಟನೆಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿ, ಚನ್ನರಾಯಪಟ್ಟಣ ರೈತರ ಸುದೀರ್ಘ ಹೋರಾಟವನ್ನು ಮೆಲುಕು ಹಾಕಿದರು. “ಇಂತಹ ಪ್ರಾಮಾಣಿಕ ಹೋರಾಟಕ್ಕೆ ಸೋಲಾಗಬಾರದು, ನಾವು ಯಾವುದೇ ಕಾರಣಕ್ಕೂ ಈ ಹೋರಾಟವನ್ನು ಸೋಲಲು ಬಿಡಬಾರದು” ಎಂದು ಪ್ರತಿಪಾದಿಸಿದರು.

ಸಭೆಯನ್ನುದ್ದೇಶಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಯಶವಂತ್, “ಬಂಡವಾಳಶಾಹಿಗಳ ಪರವಾಗಿರುವ ಈ ಸರ್ಕಾರಗಳು ಎಂದಿಗೂ ರೈತರ ಪರವಾಗಿಲ್ಲ, ಯಾವ ಪಕ್ಷದ ಸರ್ಕಾರಗಳು ಕೂಡ ಇದಕ್ಕೆ ಹೊರತಾಗಿಲ್ಲ. ಈ ಸುದೀರ್ಘ ಚನ್ನರಾಯಪಟ್ಟಣ ಹೋರಾಟಕ್ಕೆ ದೆಹಲಿ ಹೋರಾಟದ ಸ್ಪೂರ್ತಿ ಇದೆ. ಅಲ್ಲಿ ರೈತರು ಸರ್ವಾಧಿಕಾರಿ ಆದೇಶವನ್ನು ಹಿಮ್ಮೆಟ್ಟಿಸಿದಂತೆ, ಇಲ್ಲಿ ಭೂಮಿ ಕಸಿಯುತ್ತಿರುವ ಕಾರ್ಪೊರೇಟ್‌ ಪರವಾದ ಸರ್ಕಾರವನ್ನು ನಾವು ಹಿಮ್ಮೆಟ್ಟಿಸಲೇಬೇಕು, ನಾವು ಖಂಡಿತ ಗೆಲ್ಲುತ್ತೇವೆ” ಎಂದರು.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಮಾತನಾಡಿ, “ಸರ್ಕಾರಗಳಿಗೆ ಈ ಭೂಮಿ ಕೇವಲ ಮಾರಾಟದ ಸರಕಷ್ಟೇ. ಆದರೆ, ಇಲ್ಲಿನ ರೈತರಿಗೆ ಇದು ಬದುಕು. ಆದ್ದರಿಂದಲೇ, ಯಾವುದೇ ಕಾರಣಕ್ಕೂ ನಾವು ಭೂಮಿ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ದೇವನಹಳ್ಳಿ ಚನ್ನರಾಯಪಟ್ಟಣ ರೈತರು ಈ ಐತಿಹಾಸಿಕ ಹೋರಾಟ ನಡೆಸುತ್ತಿದ್ದು, ಈ ಹೋರಾಟ ಇಂದು ಬರಿಯ ದೇವನಹಳ್ಳಿಯ ಹೋರಾಟವಾಗಿ ಮಾತ್ರ ಉಳಿದಿಲ್ಲ. ಇಡೀ ರಾಜ್ಯದ ಹೋರಾಟ. ಇಡೀ ರಾಜ್ಯದ ರೈತ ಸಂಘಟನೆಗಳು ಮತ್ತು ಇತರ ಎಲ್ಲ ಪ್ರಗತಿಪರ ಸಂಘಟನೆಗಳು ಈ ಹೋರಾಟವನ್ನು ಪ್ರತಿಷ್ಠೆಯಾಗಿ ಪರಿಗಣಿಸಿ, ಜೂನ್ 25ಕ್ಕೆ ‘ದೇವನಹಳ್ಳಿ ಚಲೋ ಹೆಸರಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಎಲ್ಲ ಹೋರಾಟಗಾರರು, ಬೆಂಬಲಿಗರು ಸೇರಿ ಪ್ರತಿರೋಧವನ್ನು ವ್ಯಕ್ತಪಡಿಸೋಣ. ಇದು ಕನಿಷ್ಠ 10,000 ಜನರನ್ನು ಒಳಗೊಂಡ ಬೃಹತ್ ಕಾರ್ಯಕ್ರಮವಾಗಬೇಕು. ಇದಕ್ಕಾಗಿ ಸಂಯುಕ್ತ ಹೋರಾಟ ಕರ್ನಾಟಕದ ಎಲ್ಲ ಸಹಭಾಗಿ ಸಂಘಟನೆಗಳು ರಾಜ್ಯದ ವಿವಿಧ ಭಾಗಗಳಿಂದ ತಮ್ಮ ಕಾರ್ಯಕರ್ತರುಗಳನ್ನು ಇಲ್ಲಿಗೆ ಕರೆತರಲಿವೆ” ಎಂದು ಸಭೆಯ ನಿರ್ಧಾರವನ್ನು ಪ್ರಕಟಿಸಿದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್‌ ಮಾತನಾಡಿ, “ಹಿಂದಿನ ಕೋಮುವಾದಿ ಸರ್ಕಾರವನ್ನು ಸೋಲಿಸಲು ನಾವೇ ಹಗಲಿರುಳು ಶ್ರಮಿಸಿ ಅಸ್ತಿತ್ವಕ್ಕೆ ತಂದ ಸರ್ಕಾರ ಇದು. ಆದರೆ, ಸಿದ್ದರಾಮಯ್ಯನವರ ಸರ್ಕಾರದ ಮೇಲಿಟ್ಟಿದ್ದ ನಂಬಿಕೆ ಸಂಪೂರ್ಣ ಹುಸಿಯಾಗಿದೆ. ವಿರೋಧ ಪಕ್ಷದಲ್ಲಿದ್ದಾಗ ರೈತರ ಪರವಾಗಿ, ಬಡವರ ಪರವಾಗಿ ನಿಲ್ಲುವುದಾಗಿ ಹೇಳಿ ಜನರನ್ನು ನಂಬಿಸಿ ಅಧಿಕಾರಕ್ಕೆ ಬಂದ ಸರ್ಕಾರ ಇದು. ಚನ್ನರಾಯಪಟ್ಟಣ ರೈತರು ಧರಣಿ ನಡೆಸುತ್ತಿರುವಾಗ ಅಲ್ಲಿಗೆ ಬಂದು, ‘ಫಲವತ್ತಾದ ಕೃಷಿ ಭೂಮಿಯನ್ನು ಯಾವುದೇ ಕಾರಣಕ್ಕೂ ಭೂಸ್ವಾಧೀನ ಮಾಡಿಕೊಳ್ಳಬಾರದು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಬಲವಂತದ ಭೂಸ್ವಾಧೀನವನ್ನು ಮಾಡುವುದಿಲ್ಲ. ಈ ಭೂಸ್ವಾಧೀನವನ್ನು ಕೈಬಿಡುತ್ತೇವೆ’ ಎಂದು ಹೇಳಿದ್ದ ಮುಖ್ಯಮಂತ್ರಿಗಳು ಇಂದು ವಚನಭ್ರಷ್ಟರಾಗಿದ್ದಾರೆ. ಅಲ್ಲದೆ, ಚುನಾವಣೆಯ ಸಮಯದಲ್ಲಿ ರೈತರ ಜೊತೆಗಿರುವುದಾಗಿ ಹೇಳಿದ್ದ ಕೆ.ಹೆಚ್. ಮುನಿಯಪ್ಪನವರು ರೈತರ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ. ಆದ್ದರಿಂದ, ಎಲ್ಲ ಸಂಘಟನೆಗಳು ಚನ್ನರಾಯಪಟ್ಟಣ ರೈತರ ಜೊತೆಗೆ ನಿಂತು ಅವರನ್ನು ಗೆಲ್ಲಿಸಲೇಬೇಕು. ಈ ಕಾರ್ಪೊರೇಟ್‌ ಪರವಾದ ಸರ್ಕಾರಗಳನ್ನು ಹಿಮ್ಮೆಟ್ಟಿಸಲೇಬೇಕು” ಎಂದು ಮಾತನಾಡಿದರು.

ಭೂಮಿ ಮತ್ತು ವಸತಿ ಹೋರಾಟ ಸಮಿತಿಯ ನೂರ್ ಶ್ರೀಧರ್‌ ಮಾತನಾಡಿ, “ಸದಾ ರೈತರ ಪರವಾಗಿ ಇರುವುದಾಗಿ ಹೇಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತು ಇಂದಿನ ಕಾಂಗ್ರೆಸ್ ಸರ್ಕಾರ ಭೂಮಿ ವಿಷಯಕ್ಕೆ ಸಂಬಂಧಿಸಿದಂತೆ ರೈತ ವಿರೋಧಿಯಾಗಿ ನಡೆದುಕೊಳ್ಳುತ್ತಿರುವುದು, ಜನ ವಿರೋಧಿಗಳಾಗಿ ನಡೆದುಕೊಳ್ಳುತ್ತಿರುವುದು ಸಹಿಸಲು ಸಾಧ್ಯವಿಲ್ಲ. ಒಂದು ಕಡೆ ರೈತರ ಕೈಯಲ್ಲಿರುವ ಭೂಮಿಯನ್ನು ಭೂಸ್ವಾಧೀನದ ಮೂಲಕ ಕಸಿದುಕೊಳ್ಳುವ ಪ್ರಯತ್ನವಾಗುತ್ತಿದ್ದರೆ, ಮತ್ತೊಂದೆಡೆ ಬಗರ್ ಹುಕುಂ ಸಾಗುವಳಿದಾರರಿಗೆ ಭೂ ಹಂಚಿಕೆ ಮಾಡದಿರುವುದು ಈ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಎತ್ತಿ ತೋರಿಸುತ್ತಿದೆ. ಇಂತಹ ಜನ ವಿರೋಧಿ ಸರ್ಕಾರವನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದರು.

“ಚನ್ನರಾಯಪಟ್ಟಣ ಹೋರಾಟದ ಹಾದಿಯಲ್ಲಿ ಎಲ್ಲ ರೀತಿಯ ಪ್ರತಿರೋಧಗಳನ್ನು, ಪ್ರತಿಭಟನೆಗಳನ್ನು ಮಾಡುತ್ತಲೇ ಬಂದಿದೆ. ಆದರೆ ಜೂನ್ 25ರಂದು ನಡೆಯಲಿರುವ ‘ದೇವನಹಳ್ಳಿ ಚಲೋ’ ಹಿಂದಿನ ಹೋರಾಟದಂತೆ ಮತ್ತೊಂದು ಹೋರಾಟವಾಗಿರುವುದಿಲ್ಲ. ಇದು ನಿರ್ಣಾಯಕ ಹೋರಾಟ. ಯಾವುದೇ ಕಾರಣಕ್ಕೂ ನಾವು ಬರಿಗೈಯಲ್ಲಿ ವಾಪಸ್ ಹೋಗುವ ಪ್ರಶ್ನೆಯೇ ಇಲ್ಲ. ಅದಕ್ಕೆ ಇಲ್ಲಿನ ರೈತರು ತಮ್ಮ ಮನೆಯ ದನ, ಕರು, ಕುರಿ ಎಲ್ಲವುಗಳ ಜೊತೆ ಬಂದು ಸೇರಿಕೊಳ್ಳೋಣ. ಅದನ್ನೂ ಮೀರಿ ಹೇಗೆ ಭೂಸ್ವಾಧೀನ ಮಾಡುತ್ತಾರೋ ನೋಡೋಣ, ತಾಕತ್ತಿದ್ದರೆ ಒಂದಿಂಚು ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಲಿ, ಇದು ಸರ್ಕಾರಕ್ಕೆ ಹೋರಾಟಗಾರರ ಸವಾಲು ” ಅವರು ಹಾಕಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಾದ ಚಾಮರಸ ಮಾಲಿ ಪಾಟೀಲ್, “ನಾವು ಅಭಿವೃದ್ಧಿಯ ವಿರೋಧಿಗಳಲ್ಲ. ಕೃಷಿಗೆ ಯೋಗ್ಯವಲ್ಲದ ಬರಡು ಭೂಮಿಗಳು ಮತ್ತು ಅತಿಯಾದ ನೀರಾವರಿಯ ಕಾರಣಕ್ಕೆ ಉಂಟಾಗಿರುವ ಜೌಗು ಭೂಮಿಗಳು ನಮ್ಮಲ್ಲಿ ಸಾಕಷ್ಟು ಇವೆ. ಅಂತಹ ಕಡೆಗಳಲ್ಲಿ ಧಾರಾಳವಾಗಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲಿ. ಆದರೆ, ಈ ಸರ್ಕಾರಗಳಿಗೆ ಕೈಗಾರಿಕೆಗಳನ್ನು ಸ್ಥಾಪನೆ ಮಾಡುವ ಉದ್ದೇಶವಿಲ್ಲ ಕೆಐಎಡಿಬಿ ಹೆಸರಿನಲ್ಲಿ ರಿಯಲ್ ಎಸ್ಟೇಟ್ ದಂಧೆ ನಡೆಸುತ್ತಿದ್ದಾರೆ” ಎಂದು ದೂರಿದರು.

ಸಭೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷರಾದ ಯು. ಬಸವರಾಜು, ಸಿ.ಐ.ಟಿ.ಯು. ಸಂಘಟನೆಯ ಮೀನಾಕ್ಷಿ ಸುಂದರಂ, ವರಲಕ್ಷ್ಮಿ, ಭೂಮಿ ಮತ್ತು ವಸತಿ ಹೋರಾಟ ಸಮಿತಿಯ ಮರಿಯಪ್ಪ, ಹೋರಾಟಗಾರರಾದ ಕಾರಳ್ಳಿ ಶ್ರೀನಿವಾಸ್, ಪ್ರಭಾ ಬೆಳವಂಗಲ, ನವೀನ್, ಚಂದ್ರ ತೇಜಸ್ವಿ, ರಮೇಶ್ ಸಂಕ್ರಾಂತಿ ಮುಂತಾದ ವಿವಿಧ ಸಂಘಟನೆಗಳ ಮುಖಂಡರು, ರೈತ ನಾಯಕರುಗಳು, ಮತ್ತು 13 ಹಳ್ಳಿಗಳ ರೈತರು ಭಾಗವಹಿಸಿದ್ದರು.

ಬೆಂಗಳೂರು| ರಾತ್ರೋರಾತ್ರಿ ದಲಿತರ ಮನೆ, ದೇವಸ್ಥಾನ ಧ್ವಂಸ ಆರೋಪ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...