Homeಮುಖಪುಟಪಹಲ್ಗಾಮ್ ದಾಳಿಗೆ ಕೋಮು ಬಣ್ಣ ಬಳಿದು ವಿವಾದ ಸೃಷ್ಟಿಸಿದ ಶಂಕಿತ ಭಯೋತ್ಪಾದಕಿ ಪ್ರಜ್ಞಾ ಸಿಂಗ್ ಠಾಕೂರ್

ಪಹಲ್ಗಾಮ್ ದಾಳಿಗೆ ಕೋಮು ಬಣ್ಣ ಬಳಿದು ವಿವಾದ ಸೃಷ್ಟಿಸಿದ ಶಂಕಿತ ಭಯೋತ್ಪಾದಕಿ ಪ್ರಜ್ಞಾ ಸಿಂಗ್ ಠಾಕೂರ್

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು “ಹಿಂದೂಗಳ ಮೇಲೆ ಮುಸ್ಲಿಮರು ನಡೆಸಿದ ದಾಳಿ” ಎಂದು ಶಂಕಿತ ಭಯೋತ್ಪಾದಕಿ, ಬಿಜೆಪಿ ನಾಯಕಿ ಪ್ರಜ್ಞಾ ಸಿಂಗ್ ಠಾಕೂರ್ ಎಂದು ಹೇಳಿದ ವಿವಾದ ಸೃಷ್ಟಿಸುವ ಮೂಲಕ ಘಟನೆಗೆ ಕೋಮು ಬಣ್ಣ ಹಚ್ಚಿದ್ದಾರೆ. ಪ್ರಚೋದನಕಾರಿ ಹೇಳಿಕೆಗಳಿಗೆ ಹೆಸರುವಾಸಿಯಾದ ಅವರು 2008 ರ ಮಾಲೆಗಾಂವ್ ಸ್ಫೋಟದ ಶಂಕಿತ ಭಯೋತ್ಪಾದಕಿಯಾಗಿದ್ದಾರೆ. ಪಹಲ್ಗಾಮ್ ದಾಳಿಗೆ ಕೋಮು ಬಣ್ಣ

ಮಾಜಿ ಬಿಜೆಪಿ ಸಂಸದೆಯೂ ಆಗಿರುವ ಶಂಕಿತ ಭಯೋತ್ಪಾದಕಿ ಪ್ರಜ್ಞಾ ಗುರುವಾರ ಇಂದೋರ್‌ನಲ್ಲಿ ನಡೆದ ಮಹಾರಾಣಾ ಪ್ರತಾಪ್ ಜಯಂತಿಯಂದು ಈ ಹೇಳಿಕೆ ನೀಡಿದ್ದಾರೆ. ಬಲಪಂಥೀಯ ಸಂಘಟನೆ ಕರ್ಣಿ ಸೇನಾ ಭಾರತ್ ಆಯೋಜಿಸಿದ್ದ ‘ಪ್ರತಾಪ್ ಪರಾಕ್ರಮ್ ಯಾತ್ರೆ’ಯ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ ಅವರು ಈ ಹೇಳಿಕೆ ನೀಡಿದ್ದಾರೆ.

“ಭಯೋತ್ಪಾದಕರು ಜನರ ಧಾರ್ಮಿಕ ಗುರುತುಗಳನ್ನು ಖಚಿತಪಡಿಸಿಕೊಂಡ ನಂತರ ಅಮಾಯಕರನ್ನು ಕೊಂದು ನಮ್ಮ ಸಹೋದರಿಯರನ್ನು ವಿಧವೆಯನ್ನಾಗಿ ಮಾಡಿದ ರೀತಿಯನ್ನು ಮುಸ್ಲಿಮರು ಹಿಂದೂಗಳ ಮೇಲೆ ನಡೆಸಿದ ದಾಳಿ ಎಂದು ಕರೆಯಬೇಕು” ಎಂದು ಅವರು ಹೇಳಿದ್ದಾರೆ.

“ಅಂತಹ ದಾಳಿಗಳು ನಡೆದಾಗಲೆಲ್ಲಾ ಹಿಂದೂಗಳು ಮುಸ್ಲಿಮರು ಮತ್ತು ಮುಸ್ಲಿಂ ಭಯೋತ್ಪಾದಕರ ಮೇಲೆಯೂ ದಾಳಿ ಮಾಡಬೇಕು” ಎಂದು ಅವರು ಹೇಳಿದ್ದು ವಿವಾದ ಸೃಷ್ಟಿಸಿದ್ದಾರೆ.

“ಇಂದಿನ ಪರಿಸ್ಥಿತಿ ಮಹಾರಾಣಾ ಪ್ರತಾಪ್ ಮೊಘಲರ ವಿರುದ್ಧ ಧೈರ್ಯದಿಂದ ಹೋರಾಡಿದಾಗ ಇದ್ದಂತೆಯೇ ಇದೆ. ಅದೇ ರೀತಿ, ಮೊಘಲರು ಇನ್ನೂ ನಮ್ಮನ್ನು ಮತ್ತು ನಮ್ಮ ದೇಶವನ್ನು ವಿಭಜಿಸುವ ಕೆಲಸ ಮಾಡುತ್ತಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ ನಾವು ನಮಗಾಗಿ ನಿಲ್ಲಬೇಕಾಗುತ್ತದೆ.” ಎಂದು ಅವರು ಹೇಳಿದ್ದಾರೆ.

“ಮಹಾರಾಣಾ ಪ್ರತಾಪ್, ಶಿವಾಜಿ ಮಹಾರಾಜ್ ಮತ್ತು ಪೃಥ್ವಿರಾಜ್ ಚೌಹಾಣ್ ಸೇರಿದಂತೆ ನಮ್ಮ ಎಲ್ಲಾ ಮಹಾನ್ ಆಡಳಿತಗಾರರು ಶತ್ರುಗಳನ್ನು ಎಂದಿಗೂ ಭಾಯಿ (ಸಹೋದರ) ಎಂದು ಸಂಬೋಧಿಸಬಾರದು ಎಂಬುದನ್ನು ನಮಗೆ ತೋರಿಸಿದ್ದಾರೆ. ಆದರೆ ಇಂದಿನ ದಿನಗಳಲ್ಲಿ ಜನರು ತಮ್ಮ ಸ್ವಂತ ಸಹೋದರರನ್ನು ಭಾಯಿ ಎಂದು ಸಂಬೋಧಿಸುವುದಿಲ್ಲ. ಬದಲಾಗಿ ಅವರು ವಿದರ್ಮಿಗಳನ್ನು (ಇತರ ಧಾರ್ಮಿಕ ನಂಬಿಕೆಗಳನ್ನು ಹೊಂದಿರುವವರು) ಭಾಯಿ ಎಂದು ಸಂಬೋಧಿಸುತ್ತಾರೆ.” ಎಂದು ಅವರು ತಿಳಿಸಿದ್ದಾರೆ.

ನೀವು ಅವರನ್ನು ಭಾಯಿ ಎಂದು ಕರೆಯುವುದನ್ನು ನಿಲ್ಲಿಸಿದ ದಿನ, ನೀವು ಸುರಕ್ಷಿತವಾಗಿರುತ್ತೀರಿ ಎಂಬುದನ್ನು ನೆನಪಿನಲ್ಲಿಡಿ ಎಂದು ಶಂಕಿತ ಭಯೋತ್ಪಾದಕಿ ತನ್ನ ಮುಸ್ಲಿಂ ದ್ವೇಷವನ್ನು ಕಾರಿಕೊಂಡಿದ್ದು, ದೇಶದ ಸೌಹಾರ್ದತೆ ಮತ್ತು ಬ್ರಾತೃತ್ವವನ್ನು ಹಾಳುಗೆಡವಲು ಪ್ರಯತ್ನಿಸಿದ್ದಾರೆ.

ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿದ್ದಕ್ಕಾಗಿ ಭಾರತೀಯ ಸಶಸ್ತ್ರ ಪಡೆಗಳು ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಅವರು ಹೊಗಳಿದ್ದಾರೆ. “ಯುದ್ಧವನ್ನು ಏಕೆ ನಿಲ್ಲಿಸಲಾಯಿತು ಎಂದು ಜನರು ಕೇಳಿದರು. ಯುದ್ಧವು ಸಮಾನರ ನಡುವೆ ನಡೆಯುತ್ತದೆ, ಆನೆ ಎಂದಿಗೂ ನಾಯಿಯೊಂದಿಗೆ ಹೋರಾಡುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಶಂಕಿತ ಭಯೋತ್ಪಾದಕಿಯೊಂದಿಗೆ ಇಂದೋರ್ -2 ರ ಬಿಜೆಪಿ ಶಾಸಕ ರಮೇಶ್ ಮೆಂಡೋಲಾ ಕೂಡ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿದ್ದರು ಎಂದು ವರದಿ ಹೇಳಿದೆ. ಪಹಲ್ಗಾಮ್ ದಾಳಿಗೆ ಕೋಮು ಬಣ್ಣ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮುಸ್ಲಿಂ ಜಿಲ್ಲಾಧಿಕಾರಿಯನ್ನು ಪಾಕಿಸ್ತಾನಿ ಎಂದ ಬಿಜೆಪಿ ನಾಯಕ | ಕ್ಷಮೆಯಾಚಿಸುವಂತೆ ಸೂಚಿಸಿದ ಕರ್ನಾಟಕ ಹೈಕೋರ್ಟ್

ಮುಸ್ಲಿಂ ಜಿಲ್ಲಾಧಿಕಾರಿಯನ್ನು ಪಾಕಿಸ್ತಾನಿ ಎಂದ ಬಿಜೆಪಿ ನಾಯಕ | ಕ್ಷಮೆಯಾಚಿಸುವಂತೆ ಸೂಚಿಸಿದ ಕರ್ನಾಟಕ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...