Homeಮುಖಪುಟಪಹಲ್ಗಾಮ್ ದಾಳಿಗೆ ಕೋಮು ಬಣ್ಣ ಬಳಿದು ವಿವಾದ ಸೃಷ್ಟಿಸಿದ ಶಂಕಿತ ಭಯೋತ್ಪಾದಕಿ ಪ್ರಜ್ಞಾ ಸಿಂಗ್ ಠಾಕೂರ್

ಪಹಲ್ಗಾಮ್ ದಾಳಿಗೆ ಕೋಮು ಬಣ್ಣ ಬಳಿದು ವಿವಾದ ಸೃಷ್ಟಿಸಿದ ಶಂಕಿತ ಭಯೋತ್ಪಾದಕಿ ಪ್ರಜ್ಞಾ ಸಿಂಗ್ ಠಾಕೂರ್

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು “ಹಿಂದೂಗಳ ಮೇಲೆ ಮುಸ್ಲಿಮರು ನಡೆಸಿದ ದಾಳಿ” ಎಂದು ಶಂಕಿತ ಭಯೋತ್ಪಾದಕಿ, ಬಿಜೆಪಿ ನಾಯಕಿ ಪ್ರಜ್ಞಾ ಸಿಂಗ್ ಠಾಕೂರ್ ಎಂದು ಹೇಳಿದ ವಿವಾದ ಸೃಷ್ಟಿಸುವ ಮೂಲಕ ಘಟನೆಗೆ ಕೋಮು ಬಣ್ಣ ಹಚ್ಚಿದ್ದಾರೆ. ಪ್ರಚೋದನಕಾರಿ ಹೇಳಿಕೆಗಳಿಗೆ ಹೆಸರುವಾಸಿಯಾದ ಅವರು 2008 ರ ಮಾಲೆಗಾಂವ್ ಸ್ಫೋಟದ ಶಂಕಿತ ಭಯೋತ್ಪಾದಕಿಯಾಗಿದ್ದಾರೆ. ಪಹಲ್ಗಾಮ್ ದಾಳಿಗೆ ಕೋಮು ಬಣ್ಣ

ಮಾಜಿ ಬಿಜೆಪಿ ಸಂಸದೆಯೂ ಆಗಿರುವ ಶಂಕಿತ ಭಯೋತ್ಪಾದಕಿ ಪ್ರಜ್ಞಾ ಗುರುವಾರ ಇಂದೋರ್‌ನಲ್ಲಿ ನಡೆದ ಮಹಾರಾಣಾ ಪ್ರತಾಪ್ ಜಯಂತಿಯಂದು ಈ ಹೇಳಿಕೆ ನೀಡಿದ್ದಾರೆ. ಬಲಪಂಥೀಯ ಸಂಘಟನೆ ಕರ್ಣಿ ಸೇನಾ ಭಾರತ್ ಆಯೋಜಿಸಿದ್ದ ‘ಪ್ರತಾಪ್ ಪರಾಕ್ರಮ್ ಯಾತ್ರೆ’ಯ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ ಅವರು ಈ ಹೇಳಿಕೆ ನೀಡಿದ್ದಾರೆ.

“ಭಯೋತ್ಪಾದಕರು ಜನರ ಧಾರ್ಮಿಕ ಗುರುತುಗಳನ್ನು ಖಚಿತಪಡಿಸಿಕೊಂಡ ನಂತರ ಅಮಾಯಕರನ್ನು ಕೊಂದು ನಮ್ಮ ಸಹೋದರಿಯರನ್ನು ವಿಧವೆಯನ್ನಾಗಿ ಮಾಡಿದ ರೀತಿಯನ್ನು ಮುಸ್ಲಿಮರು ಹಿಂದೂಗಳ ಮೇಲೆ ನಡೆಸಿದ ದಾಳಿ ಎಂದು ಕರೆಯಬೇಕು” ಎಂದು ಅವರು ಹೇಳಿದ್ದಾರೆ.

“ಅಂತಹ ದಾಳಿಗಳು ನಡೆದಾಗಲೆಲ್ಲಾ ಹಿಂದೂಗಳು ಮುಸ್ಲಿಮರು ಮತ್ತು ಮುಸ್ಲಿಂ ಭಯೋತ್ಪಾದಕರ ಮೇಲೆಯೂ ದಾಳಿ ಮಾಡಬೇಕು” ಎಂದು ಅವರು ಹೇಳಿದ್ದು ವಿವಾದ ಸೃಷ್ಟಿಸಿದ್ದಾರೆ.

“ಇಂದಿನ ಪರಿಸ್ಥಿತಿ ಮಹಾರಾಣಾ ಪ್ರತಾಪ್ ಮೊಘಲರ ವಿರುದ್ಧ ಧೈರ್ಯದಿಂದ ಹೋರಾಡಿದಾಗ ಇದ್ದಂತೆಯೇ ಇದೆ. ಅದೇ ರೀತಿ, ಮೊಘಲರು ಇನ್ನೂ ನಮ್ಮನ್ನು ಮತ್ತು ನಮ್ಮ ದೇಶವನ್ನು ವಿಭಜಿಸುವ ಕೆಲಸ ಮಾಡುತ್ತಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ ನಾವು ನಮಗಾಗಿ ನಿಲ್ಲಬೇಕಾಗುತ್ತದೆ.” ಎಂದು ಅವರು ಹೇಳಿದ್ದಾರೆ.

“ಮಹಾರಾಣಾ ಪ್ರತಾಪ್, ಶಿವಾಜಿ ಮಹಾರಾಜ್ ಮತ್ತು ಪೃಥ್ವಿರಾಜ್ ಚೌಹಾಣ್ ಸೇರಿದಂತೆ ನಮ್ಮ ಎಲ್ಲಾ ಮಹಾನ್ ಆಡಳಿತಗಾರರು ಶತ್ರುಗಳನ್ನು ಎಂದಿಗೂ ಭಾಯಿ (ಸಹೋದರ) ಎಂದು ಸಂಬೋಧಿಸಬಾರದು ಎಂಬುದನ್ನು ನಮಗೆ ತೋರಿಸಿದ್ದಾರೆ. ಆದರೆ ಇಂದಿನ ದಿನಗಳಲ್ಲಿ ಜನರು ತಮ್ಮ ಸ್ವಂತ ಸಹೋದರರನ್ನು ಭಾಯಿ ಎಂದು ಸಂಬೋಧಿಸುವುದಿಲ್ಲ. ಬದಲಾಗಿ ಅವರು ವಿದರ್ಮಿಗಳನ್ನು (ಇತರ ಧಾರ್ಮಿಕ ನಂಬಿಕೆಗಳನ್ನು ಹೊಂದಿರುವವರು) ಭಾಯಿ ಎಂದು ಸಂಬೋಧಿಸುತ್ತಾರೆ.” ಎಂದು ಅವರು ತಿಳಿಸಿದ್ದಾರೆ.

ನೀವು ಅವರನ್ನು ಭಾಯಿ ಎಂದು ಕರೆಯುವುದನ್ನು ನಿಲ್ಲಿಸಿದ ದಿನ, ನೀವು ಸುರಕ್ಷಿತವಾಗಿರುತ್ತೀರಿ ಎಂಬುದನ್ನು ನೆನಪಿನಲ್ಲಿಡಿ ಎಂದು ಶಂಕಿತ ಭಯೋತ್ಪಾದಕಿ ತನ್ನ ಮುಸ್ಲಿಂ ದ್ವೇಷವನ್ನು ಕಾರಿಕೊಂಡಿದ್ದು, ದೇಶದ ಸೌಹಾರ್ದತೆ ಮತ್ತು ಬ್ರಾತೃತ್ವವನ್ನು ಹಾಳುಗೆಡವಲು ಪ್ರಯತ್ನಿಸಿದ್ದಾರೆ.

ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿದ್ದಕ್ಕಾಗಿ ಭಾರತೀಯ ಸಶಸ್ತ್ರ ಪಡೆಗಳು ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಅವರು ಹೊಗಳಿದ್ದಾರೆ. “ಯುದ್ಧವನ್ನು ಏಕೆ ನಿಲ್ಲಿಸಲಾಯಿತು ಎಂದು ಜನರು ಕೇಳಿದರು. ಯುದ್ಧವು ಸಮಾನರ ನಡುವೆ ನಡೆಯುತ್ತದೆ, ಆನೆ ಎಂದಿಗೂ ನಾಯಿಯೊಂದಿಗೆ ಹೋರಾಡುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಶಂಕಿತ ಭಯೋತ್ಪಾದಕಿಯೊಂದಿಗೆ ಇಂದೋರ್ -2 ರ ಬಿಜೆಪಿ ಶಾಸಕ ರಮೇಶ್ ಮೆಂಡೋಲಾ ಕೂಡ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿದ್ದರು ಎಂದು ವರದಿ ಹೇಳಿದೆ. ಪಹಲ್ಗಾಮ್ ದಾಳಿಗೆ ಕೋಮು ಬಣ್ಣ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮುಸ್ಲಿಂ ಜಿಲ್ಲಾಧಿಕಾರಿಯನ್ನು ಪಾಕಿಸ್ತಾನಿ ಎಂದ ಬಿಜೆಪಿ ನಾಯಕ | ಕ್ಷಮೆಯಾಚಿಸುವಂತೆ ಸೂಚಿಸಿದ ಕರ್ನಾಟಕ ಹೈಕೋರ್ಟ್

ಮುಸ್ಲಿಂ ಜಿಲ್ಲಾಧಿಕಾರಿಯನ್ನು ಪಾಕಿಸ್ತಾನಿ ಎಂದ ಬಿಜೆಪಿ ನಾಯಕ | ಕ್ಷಮೆಯಾಚಿಸುವಂತೆ ಸೂಚಿಸಿದ ಕರ್ನಾಟಕ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...