Homeಕರ್ನಾಟಕಸಂವಿಧಾನ-ಜನ ವಿರೋಧಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ನಿಮ್ಮ ವಿರುದ್ಧವೇ ಕ್ರಮ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

ಸಂವಿಧಾನ-ಜನ ವಿರೋಧಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ನಿಮ್ಮ ವಿರುದ್ಧವೇ ಕ್ರಮ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

- Advertisement -
- Advertisement -

ಸಂವಿಧಾನದ ಆಶಯ ಮತ್ತು ಧ್ಯೇಯೋದ್ದೇಶಗಳಿಗೆ ಯಾರೂ ವಿರುದ್ಧವಾಗಿ ಕಾರ್ಯನಿರ್ವಹಿಸಬಾರದು. ಅಂತಹ ಶಕ್ತಿಗಳು ಬೆಳೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು, ಮೊಳಕೆಯಲ್ಲೇ ಚಿವುಟಿ ಹಾಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಶುಕ್ರವಾರ ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ ಜೊತೆ ಸಭೆ ನಡೆಸಿದ ಸಿಎಂ, ಸಂವಿಧಾನ ವಿರೋಧಿ ಶಕ್ತಿಗಳನ್ನು ಮಟ್ಟ ಹಾಕುವುದು ಡಿಸಿ, ಸಿಇಒಗಳ ಜವಾಬ್ದಾರಿ ತಾನೇ? ಎಂದು ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದರು.

ಹಿಂದಿನ ಸಭೆಯಲ್ಲಿ ನೀಡಿದ ಸೂಚನೆಗಳು, ತೆಗೆದುಕೊಂಡ ನಿರ್ಣಯಗಳಿಗೆ ಸಂಬಂಧಪಟ್ಟಂತೆ ಕೆಲವು ಇಲಾಖೆಗಳು ಶೇಕಡ 100ರಷ್ಟು ಪ್ರಗತಿ ತೋರಿಸಿಲ್ಲ. ಇದನ್ನು ಸಹಿಸಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ರಾಜಿಯಿಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ಮೇಲೆ ನಿಷ್ಠುರವಾಗಿ ಕ್ರಮ ಕೈಗೊಳ್ಳುವುದು ನಮಗೆ ಅನಿವಾರ್ಯ ಆಗುತ್ತದೆ ಎಂದು ಸಿಎಂ ಹೇಳಿದರು.

ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿಗಳು ಮತ್ತು ಸಿಇಒಗಳು ತಮ್ಮ ಅಹಂ ಬದಿಗೊತ್ತಿ ಸಮನ್ವಯದಿಂದ ಕೆಲಸ ಮಾಡಿದರೆ ಮಾತ್ರ ರಾಜ್ಯದ ಸಮಗ್ರ ಅಭಿವೃದ್ಧಿ ಸಾಧ್ಯ. ಈ ಉದ್ದೇಶಕ್ಕೇ ನೀವುಗಳು ಐಎಎಸ್‌ ಮಾಡಿರುವುದು. ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

10 ಅಕ್ಟೋಬರ್ 1949 ರಂದು ಸಂವಿಧಾನ ಜಾರಿ ಸಭೆಯಲ್ಲಿ ಇಂಡಿಯನ್‌ ಸಿವಿಲ್‌ ಸರ್ವಿಸ್ ಬೇಕಾ ಎಂದು ಚರ್ಚೆ ಆಗಿ ಐಎಎಸ್‌ ಬೇಕು ಎನ್ನುವ ನಿರ್ಧಾರಕ್ಕೆ ಬರಲಾಗಿದೆ. ಆ ಸಭೆಯಲ್ಲಿ ವಲ್ಲಭಾಬಾಯಿ ಪಟೇಲರು “ದೇಶವನ್ನು ನೈಜ ಸ್ವಾತಂತ್ರ್ಯ ಹೋರಾಟಗಳ ಆಶಯದಲ್ಲಿ ಮುನ್ನಡೆಸಲು ಐಎಎಸ್‌ ಸೇವೆ ಇರಬೇಕು. ಇದರ ನೈಜ ಕಾಳಜಿಯನ್ನು ನೀವು ಅರ್ಥ ಮಾಡಿಕೊಳ್ಳಬೇಕು ಎಂದಿದ್ದರು”.

“ವಲ್ಲಭಬಾಯಿ ಅವರ ಮಾತನ್ನು ನಾವು ಅರ್ಥಮಾಡಿಕೊಳ್ಳಬೇಕು. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲಸ ಮಾಡುವವರ ವಿರುದ್ಧ ಮತ್ತು ಜನಪರ ಆಶಯಗಳಿಗೆ ಸ್ಪಂದಿಸದಿದ್ದರೆ ಅವರ ವಿರುದ್ಧ ನಾವು ಕ್ರಮ ಕೈಗೊಳ್ಳಬೇಕಾಗುತ್ತದೆ. ನೀವೆಲ್ಲ ಸಂವಿಧಾನ ಓದಿದ್ದೀರಿ, ಅದರ ಆಶಯಗಳಿಗೆ, ಧ್ಯೇಯೋದ್ದೇಶಗಳಿಗೆ ಬದ್ದರಾಗಿದ್ದೀರಿ ಎಂದು ನಂಬಿದ್ದೇನೆ. ಇದನ್ನು ಕಾರ್ಯರೂಪಕ್ಕೆ ತರುವುದರಲ್ಲಿ ವಿಫಲರಾದವರ ವಿರುದ್ಧ ನಾನು ನಿರ್ಧಾಕ್ಷಣ್ಯ ಕ್ರಮ ಕೈಗೊಳ್ಳಲು ನಿರ್ಧಿರಿಸಿದ್ದೇನೆ” ಎಂದು ಸಿಎಂ ಅಧಿಕಾರಿಗಳನ್ನು ಎಚ್ಚರಿಸಿದರು.

ಸಂವಿಧಾನ ವಿರೋಧಿ, ಜನ ವಿರೋಧಿ ದುಷ್ಟ ಶಕ್ತಿಗಳು ಕೆಲವು ಕಡೆ ಬಾಲ ಬಿಚ್ಚುತ್ತಿವೆ. ಅವರು ಎಷ್ಟೇ ಪ್ರಭಾವಿಗಳು ಆಗಿರಲಿ, ಕಾನೂನು ಹಾಳು ಮಾಡಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಿ. ಇಲ್ಲದಿದ್ದರೆ ನಿಮ್ಮ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಸಿಎಂ ತಾಕೀತು ಮಾಡಿದರು.

ಕಾನೂನು ಸುವ್ಯವಸ್ಥೆ ಹದಗೆಟ್ಟರೆ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಇವೆರಡಕ್ಕೂ ನೇರಾ ನೇರಾ ಸಂಬಂಧವಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅಭಿವೃದ್ಧಿ ಕುಂಟಿತವಾದಂತೆ. ಇದಕ್ಕೆ ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳು ನೇರ ಹೊಣೆಯಾಗುತ್ತಾರೆ ಎಂದರು.

ನಾವು ಜನರ ತೆರಿಗೆ ದುಡ್ಡಿನಲ್ಲಿ ಆಡಳಿತ ನಡೆಸುತ್ತಿದ್ದೇವೆ. ನಾವು ಮತ್ತು ನೀವು ಎಲ್ಲಾ ಸವಲತ್ತುಗಳನ್ನು ಅನುಭವಿಸುತ್ತಿರುವುದು ಜನರ ತೆರಿಗೆ ಹಣದಿಂದ ಎನ್ನುವುದನ್ನು ಮರೆಯಬಾರದು. ಕಾರು, ಮನೆ ಸೇರಿ ಎಲ್ಲಾ ಸವಲತ್ತುಗಳನ್ನು ನಾವು ಕೊಟ್ಟಿರುವುದು ತೆರಿಗೆ ಹಣದಲ್ಲಿ. ಆದ್ದರಿಂದ ಜನಪರ ಧೋರಣೆಯಲ್ಲಿ ಕೆಲಸ ಮಾಡಬೇಕು. ಇದೇ ಪ್ರಜಾಪ್ರಭುತ್ವದ ಮೂಲ ಆಶಯ ಎಂದು ಹೇಳಿದರು.

ಜಿಲ್ಲಾ ಮಟ್ಟದ ಶಾಂತಿ ಸಮಿತಿ ಅಧ್ಯಕ್ಷರು ಜಿಲ್ಲಾಧಿಕಾರಿಗಳೇ ಆಗಿರ್ತಾರೆ. ಶಾಂತಿ ಕಾಪಾಡಲು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಅದನ್ನು ಬಿಟ್ಟು ಶಾಂತಿಭಂಗ ಆದ ಮೇಲೆ ಪೋಸ್ಟ್‌ ಮಾರ್ಟಂ ಮಾಡುತ್ತಾ ಕೂರಬಾರದು. ಮೊದಲೇ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ಏನು ಸಮಸ್ಯೆ ನಿಮಗೆ ಎಂದು ಪ್ರಶ್ನಿಸಿದರು.

ಬಾಲ್ಯ ವಿವಾಹ ಆಗುವುದು ಜಿಲ್ಲಾಧಿಕಾರಿಗಳ ಗಮನಕ್ಕೆ ಏಕೆ ಬರುವುದಿಲ್ಲ? ನಿಮ್ಮ ಕೆಳಗಿನವರು ನಿಮಗೆ ವರದಿ ಮಾಡುವುದಿಲ್ಲವೇ? ಕೆಳಗಿನವರು ನಿಮಗೆ ಹೇಳದಿದ್ದರೆ ನಿಮಗೆ ದಕ್ಷತೆ ಇಲ್ಲ ಎಂದು ಅರ್ಥ. ನಿಮಗೆ ಅಧಿಕಾರಿಗಳ ಮೇಲೆ ನಿಯಂತ್ರಣ ಇಲ್ಲ, ನಿಮ್ಮ ಬಗ್ಗೆ ಅವರಿಗೆ ಭಯ ಇಲ್ಲ ಎಂದೇ ಅರ್ಥ ಎಂದು ತರಾಟೆಗೆ ತೆಗೆದುಕೊಂಡರು.

ಈ ವರ್ಷ 700 ಬಾಲ್ಯ ವಿವಾಹ ನಡೆದಿದೆ. ಬಾಲ್ಯದಲ್ಲೇ ತಾಯಂದಿರಾದ ಘಟನೆಗಳೂ ವರದಿಗಳಾಗಿವೆ. ಈ ಬಗ್ಗೆ ಹಲವು ಕಡೆ ಎಫ್‌ಐಆರ್‌ ಕೂಡ ದಾಖಲಾಗಿಲ್ಲ ಎನ್ನುವುದು ನನ್ನ ಗಮನಕ್ಕೆ ಬಂದಿದೆ. ಸ್ವಾತಂತ್ರ್ಯ ಬಂದು ಇಷ್ಟ ವರ್ಷಗಳಾದರೂ 7೦೦ ಬಾಲ್ಯ ವಿವಾಹ ನಡೆಯುತ್ತಿದೆ ಎಂದರೆ ಹೇಗೆ? ಬಾಲ್ಯವಿವಾಹ ತಡೆಗೆ ಕಾಯ್ದೆ, ಕಾನೂನುಗಳಿವೆ. ಆದರೂ ಇದನ್ನು ಪರಿಣಾಮಕಾರಿಯಾಗಿ ಕೆಲವು ಕಡೆ ಬಳಸಿಲ್ಲ. ಇದು ತಪ್ಪಲ್ಲವೇ ಎಂದು ಸಿಎಂ ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದರು.

ಬಲವಂತದ ಭೂಸ್ವಾಧೀನ ವಿರೋಧಿಸಿ ಸಂಯುಕ್ತ ಹೋರಾಟದಿಂದ ‘ದೇವನಹಳ್ಳಿ ಚಲೋ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...