Homeಮುಖಪುಟಜಮ್ಮು ಕಾಶ್ಮೀರದಲ್ಲಿ 370 ನೇ ವಿಧಿ ರದ್ದತಿಯನ್ನು ಶ್ಲಾಘಿಸಿದ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್

ಜಮ್ಮು ಕಾಶ್ಮೀರದಲ್ಲಿ 370 ನೇ ವಿಧಿ ರದ್ದತಿಯನ್ನು ಶ್ಲಾಘಿಸಿದ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್

- Advertisement -
- Advertisement -

ಜಮ್ಮು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಮಾಜಿ ವಿದೇಶಾಂಗ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಶುಕ್ರವಾರ ಶ್ಲಾಘಿಸಿದ್ದು, ಅದನ್ನು ರದ್ದುಗೊಳಿಸಿರುವುದರಿಂದ ಪ್ರದೇಶದಲ್ಲಿ ಸಮೃದ್ಧಿ ಮತ್ತು ಪ್ರಜಾಪ್ರಭುತ್ವದ ಪ್ರಗತಿ ಉಂಟಾಗಿದೆ ಎಂದು ಹೇಳಿದ್ದಾರೆ.

“ಕಾಶ್ಮೀರವು ದೀರ್ಘಕಾಲದವರೆಗೆ ಒಂದು ಪ್ರಮುಖ ಸಮಸ್ಯೆಯನ್ನು ಅನುಭವಿಸುತ್ತಿತ್ತು. ಅದರಲ್ಲಿ ಹೆಚ್ಚಿನವು ಸಂವಿಧಾನದ 370 ಎಂಬ ವಿಧಿಯಿಂದ ಉಂಟಾಗಿತ್ತು. ಈ ವಿಧಿಯಿಂದಾಗಿ ಕಾಶ್ಮೀರ ದೇಶದ ಉಳಿದ ಭಾಗಗಳಿಂದ ಪ್ರತ್ಯೇಕವಾಗಿದೆ ಎಂಬ ಭಾವನೆಯನ್ನು ನೀಡಿತ್ತು. ಆದರೆ 370 ನೇ ವಿಧಿಯನ್ನು ರದ್ದುಗೊಳಿಸಲಾಯಿತು ಮತ್ತು ಅಂತಿಮವಾಗಿ ಅದನ್ನು ಕೊನೆಗೊಳಿಸಲಾಯಿತು” ಎಂದು ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.

ಅವರು ಭಾರತೀಯ ಸರ್ವಪಕ್ಷ ಸಂಸದೀಯ ನಿಯೋಗದ ಭಾಗವಾಗಿ ಇಂಡೋನೇಷ್ಯಾದ ಚಿಂತಕರ ಚಾವಡಿ ಮತ್ತು ಶೈಕ್ಷಣಿಕ ಸದಸ್ಯರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

“ವಿಧಿಯನ್ನು ರದ್ದು ಮಾಡಿದ ನಂತರ ಶೇಕಡಾ 65 ರಷ್ಟು ಭಾಗವಹಿಸುವಿಕೆಯೊಂದಿಗೆ ಚುನಾವಣೆ ನಡೆಯಿತು. ಇಂದು ಕಾಶ್ಮೀರದಲ್ಲಿ ಚುನಾಯಿತ ಸರ್ಕಾರವಿದೆ. ಆದರೆ ಜನರು ಕಾಶ್ಮೀರಕ್ಕೆ ಬಂದಿರುವ ಸಮೃದ್ಧಿಯನ್ನು ರದ್ದುಗೊಳಿಸಲು ಬಯಸುತ್ತಾರೆ. ಇದು ಸರಿಯಲ್ಲ” ಎಂದು ಖುರ್ಷಿದ್ ಹೇಳಿದ್ದಾರೆ.

ಜನತಾದಳ (ಯುನೈಟೆಡ್) ಸಂಸದ ಸಂಜಯ್ ಕುಮಾರ್ ಝಾ ನೇತೃತ್ವದ ನಿಯೋಗವು ಆಪರೇಷನ್ ಸಿಂಧೂರ ಕುರಿತ ಭಾರತದ ರಾಜತಾಂತ್ರಿಕ ಸಂಪರ್ಕದ ಭಾಗವಾಗಿ ಬುಧವಾರ ಜಕಾರ್ತಾ ತಲುಪಿತ್ತು.

ಈ ನಿಯೋಗದಲ್ಲಿ ಅಪರಾಜಿತಾ ಸಾರಂಗಿ (ಬಿಜೆಪಿ), ಅಭಿಷೇಕ್ ಬ್ಯಾನರ್ಜಿ (ಟಿಎಂಸಿ), ಬ್ರಿಜ್ ಲಾಲ್ (ಬಿಜೆಪಿ), ಜಾನ್ ಬ್ರಿಟ್ಟಾಸ್ (ಸಿಪಿಐ-ಎಂ), ಪ್ರಧಾನ್ ಬರುವಾ (ಬಿಜೆಪಿ), ಮತ್ತು ಹೇಮಾಂಗ್ ಜೋಶಿ ಮತ್ತು ಫ್ರಾನ್ಸ್‌ಗೆ ಭಾರತದ ಮಾಜಿ ರಾಯಭಾರಿ ಮತ್ತು ಬಹ್ರೇನ್ ಮೋಹನ್ ಕುಮಾರ್ ಕೂಡ ಇದ್ದಾರೆ.

ಖುರ್ಷಿದ್ ಅವರ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಮುಖ್ತಾರ್ ಅಬ್ಬಾಸ್ ನಖ್ವಿ, ವಿಧಿ ರದ್ದತಿಯ ನಂತರ, ಜಮ್ಮು ಕಾಶ್ಮೀರದ ಜನರು ಪ್ರಗತಿ ಮತ್ತು ರಾಜಕೀಯ ಪ್ರಕ್ರಿಯೆಯ ಭಾಗವಾಗಿದ್ದಾರೆ ಎಂದು ಹೇಳಿದ್ದಾರೆ.

“ತಳಮಟ್ಟ ವಾಸ್ತವವನ್ನು ಅರ್ಥಮಾಡಿಕೊಳ್ಳುವ ಯಾರಾದರೂ ಕಾಂಗ್ರೆಸ್‌ನಂತೆ ಸುಳ್ಳು ಪ್ರಚಾರವನ್ನು ಹರಡುವುದಿಲ್ಲ. 370 ನೇ ವಿಧಿಯನ್ನು ರದ್ದುಪಡಿಸಿದ ನಂತರ, ಜಮ್ಮು ಕಾಶ್ಮೀರದ ಜನರು ಪ್ರಗತಿ, ಸಮೃದ್ಧಿ ಮತ್ತು ರಾಜಕೀಯ ಪ್ರಕ್ರಿಯೆಯಲ್ಲಿ ಪಾಲುದಾರರಾಗಿದ್ದಾರೆ ಎಂಬುದು ನಿಜ. ಹಿಂದೆಂದೂ ಸಂಭವಿಸದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಈಗ ನಡೆದಿವೆ ಎಂದು ನೀವು ನೆನಪಿಸಿಕೊಳ್ಳಬಹುದು. ವಿಧಾನಸಭೆ ಮತ್ತು ಸಂಸತ್ತಿಗೆ ಚುನಾವಣೆಗಳು ಸಹ ನಡೆದಿವೆ. ಇದರೊಂದಿಗೆ, ಪ್ರತ್ಯೇಕತಾವಾದಿಗಳು ಮತ್ತು ಭಯೋತ್ಪಾದಕರ ಪ್ರಾಬಲ್ಯ ಕುಸಿಯಿತು.” ಎಂದು ಹೇಳಿದ್ದಾರೆ.

ಖುರ್ಷಿದ್ ಅವರ ಹೇಳಿಕೆಯನ್ನು ಉಲ್ಲೇಖಿಸಿದ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಮೇಲೆ ವಾಗ್ದಾಳಿ ಮಾಡಿದ್ದಾರೆ. “370 ರ ಬಗ್ಗೆ ತಮ್ಮ ಅಭಿಪ್ರಾಯ ನೀಡಿದ ಕಾರಣಕ್ಕೆ ಕಾಂಗ್ರೆಸ್ ಪಕ್ಷವು ಸಲ್ಮಾನ್ ಖುರ್ಷಿದ್ ಅವರನ್ನು ‘ಸೂಪರ್ ಪ್ರವಕ್ತ’ ಎಂದು ಹೆಸರಿಸದಿರಲಿ ಎಂದು ಆಶಿಸುತ್ತೇವೆ.” ಎಂದು ಹೇಳಿದ್ದಾರೆ.

“370 ನೇ ವಿಧಿ ಹೊರಗಿನವರಿಗೆ ಜಮ್ಮು ಕಾಶ್ಮೀರ ಭಾರತದಿಂದ ಪ್ರತ್ಯೇಕವಾಗಿದೆ ಎಂಬ ಭಾವನೆಯನ್ನು ನೀಡಿತ್ತು. ಆದರೆ ಅದರ ರದ್ದತಿ, ಹೆಚ್ಚಿನ ಮತದಾನ ಮತ್ತು ಚುನಾಯಿತ ಸರ್ಕಾರವು ಅದು ಭಾರತಕ್ಕೆ ಅವಿಭಾಜ್ಯ ಭಾಗವಾಗಿದೆ ಎಂದು ಸಾಬೀತುಪಡಿಸುತ್ತದೆ. 370 ನೇ ವಿಧಿಯನ್ನು ತಮ್ಮ ಕುಟುಂಬದ ತಪ್ಪು ಎಂದು ರಾಹುಲ್ ಗಾಂಧಿ ಒಪ್ಪಿಕೊಳ್ಳುತ್ತಾರೆಯೇ ಮತ್ತು ಸಲ್ಮಾನ್ ಖುರ್ಷಿದ್ ಈಗ ಅದನ್ನು ತೆಗೆದುಹಾಕಿದ್ದಕ್ಕಾಗಿ ಶ್ಲಾಘಿಸಿದ್ದಾರೆ!” ಎಂದು ನಖ್ವಿ ಹೇಳಿದ್ದಾರೆ. ಜಮ್ಮು ಕಾಶ್ಮೀರದಲ್ಲಿ 370

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉತ್ತರ ಪ್ರದೇಶ| ಸರ್ಕಾರಿ ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ಪತ್ನಿಯೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಪತ್ರಕರ್ತ

ಉತ್ತರ ಪ್ರದೇಶ| ಸರ್ಕಾರಿ ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ಪತ್ನಿಯೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಪತ್ರಕರ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...