Homeಮುಖಪುಟಗೋಮಾಂಸ ಮಾರಾಟ ಆರೋಪ; ದೆಹಲಿ ವಿಶ್ವವಿದ್ಯಾಲಯ ಬಳಿಯ ಅಂಗಡಿ ಮಾಲೀಕನಿಗೆ ಹಲ್ಲೆ

ಗೋಮಾಂಸ ಮಾರಾಟ ಆರೋಪ; ದೆಹಲಿ ವಿಶ್ವವಿದ್ಯಾಲಯ ಬಳಿಯ ಅಂಗಡಿ ಮಾಲೀಕನಿಗೆ ಹಲ್ಲೆ

- Advertisement -
- Advertisement -

ದೆಹಲಿ ವಿಶ್ವವಿದ್ಯಾಲಯದ (ಡಿಯು) ಬಳಿಯ ಅಂಗಡಿಯವನ ಮೇಲೆ ಬಲಪಂಥೀಯ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ಆತನ ದಿನಸಿ ಅಂಗಡಿಯಿಂದ ಮಾಂಸ ಖರೀದಿಸಿದ ಬಾಲಕನೊಬ್ಬ ಅದು ಗೋಮಾಂಸ ಎಂದು ಹೇಳಿಕೊಂಡ ನಂತರ ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು

ಮೇ 28 ರ ಬುಧವಾರದಂದು ಡಿಯುನ ಉತ್ತರ ಕ್ಯಾಂಪಸ್‌ನಲ್ಲಿ ಈ ಘಟನೆ ನಡೆದಿದೆ. ವಿಜಯ್ ನಗರದ ನಾರ್ತ್ ಈಸ್ಟ್ ಸ್ಟೋರ್‌ನ ಮಾಲೀಕರಾದ ಚಮನ್ ಕುಮಾರ್ ಅವರ ಪತ್ನಿ ಮತ್ತು ಇಬ್ಬರು ಮಕ್ಕಳಿಗೆ ಕಿರುಕುಳ ನೀಡಿ ಹಲ್ಲೆ ಮಾಡಲಾಗಿದೆ.

ಬಲಪಂಥೀಯ ಸಂಘಟನೆ ಬೆಂಬಲಿಗರು ಚಮನ್ ಕುಮಾರ್ ಅವರನ್ನು ಎಳೆದುಕೊಂಡು ಹೋಗುತ್ತಿರುವ ವಿಡಿಯೋಗಳು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಕಾಣಿಸಿಕೊಂಡಿವೆ. “ರಾಷ್ಟ್ರದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲಿರಿ” ಎಂಬ ಘೋಷಣೆಗಳು ಸಹ ಕೇಳಿಬಂದಿವೆ.

ಹಲ್ಲೆ ಬಿಡಿಸಲು ಮಧ್ಯಪ್ರವೇಶಿಸಲು ಪ್ರಯತ್ನಿಸಿದವರನ್ನೂ ಥಳಿಸಲಾಯಿತು. ಕೋಪಗೊಂಡ ಗುಂಪು ಅವರ ಧರ್ಮವನ್ನು ಕೇಳಿ; ಅವರು ಮಾಂಸವನ್ನೂ ತಿನ್ನಬೇಕು ಎಂದು ಒತ್ತಾಯಿಸಿದೆ.

ಮಾಹಿತಿಯ ಮೇರೆಗೆ ಪೊಲೀಸರು ಆಗಮಿಸಿ ಚಮನ್ ಕುಮಾರ್ ಮತ್ತು ಅವರ ಕುಟುಂಬವನ್ನು ರಕ್ಷಿಸಿದರು. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಡಿಸಿಪಿ (ವಾಯುವ್ಯ) ಭೀಷಮ್ ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಗೋಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಅನುಮಾನದ ಮೇಲೆ, ಕೆಲವು ಸಾರ್ವಜನಿಕರು ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದಾರೆ. ಅವರಿಗೆ ವೈದ್ಯಕೀಯ ನೆರವು ನೀಡಲಾಗಿದೆ. ಗೋಮಾಂಸವೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸಲು ಮಾಂಸದ ಮಾದರಿಯನ್ನು ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ. ವಿಧಿವಿಜ್ಞಾನ ವರದಿ ಮತ್ತು ಪೂರ್ಣ ವಿಚಾರಣೆ ಪೂರ್ಣಗೊಂಡ ನಂತರ, ಕಾನೂನಿನ ನಿಬಂಧನೆಗಳ ಪ್ರಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಪೊಲೀಸ್ ಅಧಿಕಾರಿ ಹೇಳಿದರು.

ಮರುದಿನ, ದೆಹಲಿಯ ವಿದ್ಯಾರ್ಥಿ ಒಕ್ಕೂಟ (ಎಸ್‌ಎಫ್‌ಐ) ಮಾಡೆಲ್ ಟೌನ್ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆಯನ್ನು ಆಯೋಜಿಸಿತು. “ಪೊಲೀಸರು ಸ್ಥಳಕ್ಕೆ ಬಂದ ನಂತರವೂ, ಗುಂಪಿನಲ್ಲಿದ್ದ ಪುರುಷರು ಮಹಿಳಾ ವಿದ್ಯಾರ್ಥಿನಿಯರಾದ ನಮ್ಮನ್ನು, ನಮ್ಮ ಮೇಲೆ ಕೂಗುತ್ತಾ, ನಮ್ಮನ್ನು ತಳ್ಳುತ್ತಾ ಮತ್ತು ಬೀದಿಗಳಲ್ಲಿ ನಮ್ಮನ್ನು ಹಿಂಬಾಲಿಸುವ ಮೂಲಕ ಕಿರುಕುಳ ನೀಡಿದರು. ಗುಂಪು ಮನೆ ತಲುಪವವರೆಗೂ ನಮ್ಮನ್ನು ಹಿಂಬಾಲಿಸಿತು” ಎಂದು ವಿದ್ಯಾರ್ಥಿಗಳು ಹೇಳಿದರು.

ದೆಹಲಿ ವಿಶ್ವವಿದ್ಯಾಲಯದ ಎಸ್‌ಎಫ್‌ಐ ಸಹ-ಸಂಚಾಲಕಿ ಸಿಮ್ರನ್ ಅವರ ಪ್ರಕಾರ, ಅಂಗಡಿ ಮಾಲೀಕರಿಗೆ ಸಹಾಯ ಮಾಡಲು ಪ್ರಯತ್ನಿಸಿದ ವಿದ್ಯಾರ್ಥಿಗಳನ್ನು ಬಲಪಂಥೀಯ ಬೆಂಬಲಿಗರು ಬಂಧಿಸಿ, ಹಲ್ಲೆ ನಡೆಸಿ ಹಿಂಬಾಲಿಸಿದ್ದಾರೆ. “ಕ್ಯಾಂಪಸ್ ಪ್ರದೇಶಗಳಲ್ಲಿ ಈಗಾಗಲೇ ಸಾಕಷ್ಟು ಅನ್ಯದ್ವೇಷವನ್ನು ಎದುರಿಸುತ್ತಿರುವ ವಲಸೆ ವಿದ್ಯಾರ್ಥಿಗಳ ಮೇಲೆ ದಾಳಿ ಮಾಡುವ ಅಪಾಯಕಾರಿ ಪ್ರಯತ್ನ ಇದು” ಎಂದು ಹೇಳಿದ್ದಾರೆ.

ಉತ್ತರ ಪ್ರದೇಶ| ಸರ್ಕಾರಿ ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ಪತ್ನಿಯೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಪತ್ರಕರ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...