Homeಮುಖಪುಟಬೆದರಿಕೆ ನನಗೇನು ಹೊಸತಲ್ಲ; ತಪ್ಪೆಂದು ಮನವರಿಕೆ ಆಗುವವರೆಗೆ ಕ್ಷಮೆಯಾಚಿಸಲ್ಲ: ಕಮಲ್ ಹಾಸನ್

ಬೆದರಿಕೆ ನನಗೇನು ಹೊಸತಲ್ಲ; ತಪ್ಪೆಂದು ಮನವರಿಕೆ ಆಗುವವರೆಗೆ ಕ್ಷಮೆಯಾಚಿಸಲ್ಲ: ಕಮಲ್ ಹಾಸನ್

- Advertisement -
- Advertisement -

“ಕನ್ನಡ ಭಾಷೆಯು ತಮಿಳಿನಿಂದ ಹುಟ್ಟಿದೆ” ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ಖ್ಯಾತ ನಟ-ರಾಜಕಾರಣಿ ಕಮಲ್ ಹಾಸನ್ ಅವರು, ತನ್ನ ಹೇಳಿಗೆ ಕ್ಷಮೆಯಾಚಿಸುವುದಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ. “ನಾನು ಹೇಳಿದ್ದ ತಪ್ಪು ಎಂದು ನನಗೆ ಮನವರಿಕೆ ಆಗುವವರೆಗೆ ಕ್ಷಮೆಯಾಚಿಸುವುದಿಲ್ಲ” ಎಂದು ಹೇಳಿದ್ದಾರೆ. ತಪ್ಪೆಂದು ಮನವರಿಕೆ ಆಗುವವರೆಗೆ

ಚೆನ್ನೈನಲ್ಲಿ ನಡೆದ ತಮ್ಮ ಮುಂಬರುವ ಚಿತ್ರ ಥಗ್ ಲೈಫ್‌ನ ಪ್ರಚಾರ ಕಾರ್ಯಕ್ರಮದಲ್ಲಿ ಅವರು ನೀಡಿದ ಹೇಳಿಕೆ ರಾಜ್ಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡ ಪರ ಸಂಘಟನೆಗಳು ಚಿತ್ರವನ್ನು ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿದ್ದು, ಅವರ ಹೇಳಿಕೆಗೆ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿವೆ.

ಕನ್ನಡಿಗರ ಆಕ್ರೋಶಕ್ಕೆ ಪ್ರತಿಕ್ರಿಯಿಸಿದ ಮಕ್ಕಳ್ ನೀಧಿ ಮೈಯಂ (ಎಂಎನ್‌ಎಂ) ಮುಖ್ಯಸ್ಥರೂ ಆಗಿರುವ ಕಮಲ್, ತಾನು ಈ ಹಿಂದೆಯೂ ಇಂತಹ ಬೆದರಿಕೆಗಳನ್ನು ಎದುರಿಸಿದ್ದೇನೆ ಮತ್ತು ಯಾವುದೇ ಮುಜುಗರಕ್ಕೊಳಗಾಗಿಲ್ಲ ಎಂದು ಹೇಳಿದ್ದಾರೆ. ಕಮಲ್ ಹಾಸನ್ ಅವರು ಮುಂದಿನ ತಿಂಗಳು ತಮಿಳುನಾಡು ಆಡಳಿತಾರೂಢ ಡಿಎಂಕೆ ಬೆಂಬಲದೊಂದಿಗೆ ರಾಜ್ಯಸಭೆಗೆ ಪ್ರವೇಶಿಸುವ ನಿರೀಕ್ಷೆಯಿದೆ.

“ನನಗೆ ಮೊದಲು ಕೂಡಾ ಬೆದರಿಕೆ ಬಂದಿದೆ… ಆದರೆ ಪ್ರೀತಿ ಯಾವಾಗಲೂ ಗೆಲ್ಲುತ್ತದೆ” ಎಂದು ಅವರು ಹೇಳಿದ್ದು, ಕರ್ನಾಟಕ, ಆಂಧ್ರಪ್ರದೇಶ ಮತ್ತು ಕೇರಳದ ಮೇಲಿನ ತಮ್ಮ ಪ್ರೀತಿಯನ್ನು ಪುನರುಚ್ಚರಿಸಿದ್ದಾರೆ. “ಒಂದು ಕಾರ್ಯಸೂಚಿ ಹೊಂದಿರುವವರು ಮಾತ್ರ ಬೇರೆ ರೀತಿಯಲ್ಲಿ ಅನುಮಾನಿಸುತ್ತಾರೆ.” ಎಂದು ಅವರು ಹೇಳಿದ್ದಾರೆ.

ದಕ್ಷಿಣದ ಎಲ್ಲಾ ಭಾಷೆಗಳು ಮತ್ತು ಸಂಸ್ಕೃತಿಗಳನ್ನು ತಾನು ಗೌರವಿಸುತ್ತಿದ್ದು, ಆದರೂ ತಮ್ಮ ಹೇಳಿಕೆಗೆ ಬದ್ಧರಾಗಿರುವುದಾಗಿ ಮತ್ತು ತಾವು ತಪ್ಪು ಮಾಡಿರುವುದಾಗಿ ಮನವರಿಕೆಯಾದರೆ ಮಾತ್ರ ಕ್ಷಮೆಯಾಚಿಸುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. “ನಾನು ತಪ್ಪಾಗಿದ್ದರೆ, ನಾನು ಕ್ಷಮೆಯಾಚಿಸುತ್ತೇನೆ. ಒಂದು ವೇಳೆ ತಪ್ಪಿಲ್ಲದಿದ್ದರೆ ನಾನು ಕ್ಷಮೆ ಯಾಚಿಸುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಪ್ರಜಾಪ್ರಭುತ್ವ ಮೌಲ್ಯಗಳಿಗೆ ತಮ್ಮ ಬದ್ಧತೆಯನ್ನು ಒತ್ತಿ ಹೇಳಿದ ಅವರು, “ಇದು ಪ್ರಜಾಪ್ರಭುತ್ವ. ನಾನು ಕಾನೂನು ಮತ್ತು ನ್ಯಾಯವನ್ನು ನಂಬುತ್ತೇನೆ” ಎಂದು ಅವರು ಹೇಳಿದ್ದಾರೆ.

ಕಮಲ್ ಹಾಸನ್ ಅವರ ಹೇಳಿಕೆಯ ವಿರುದ್ಧ ಕನ್ನಡ ಸಂಘಟನೆಗಳು ಮತ್ತು ರಾಜಕಾರಣಿಗಳಿಂದ ತೀವ್ರವಾದ ಟೀಕೆಗಳು ವ್ಯಕ್ತವಾಗಿವೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ಅಧ್ಯಕ್ಷ ಎಂ. ನರಸಿಂಹಲು ಅವರು ಪ್ರತಿಕ್ರಿಯಿಸಿ, ಕಮಲ್ ಹಾಸನ್ ಅವರ ಕನ್ನಡ “ತಮಿಳಿನಿಂದ ಹುಟ್ಟಿದೆ” ಎಂಬ ಹೇಳಿಕೆಯ ಕುರಿತು ಅವರೊಂದಿಗೆ ಮಾತನಾಡಲು ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.

“ಅನೇಕ ಕನ್ನಡ ಸಂಘಟನೆಗಳು ಅವರ ಚಲನಚಿತ್ರವನ್ನು ನಿಷೇಧಿಸಬೇಕೆಂದು ಒತ್ತಾಯಿಸಿವೆ. ಅವರು ಹೇಳಿದ್ದು ತಪ್ಪು ಎಂದು ನಾವು ನಂಬುತ್ತೇವೆ ಮತ್ತು ಅವರೊಂದಿಗೆ ಮಾತನಾಡಲು ಪ್ರಯತ್ನಿಸುತ್ತಿದ್ದೇವೆ” ಎಂದು ನರಸಿಂಹಲು ಹೇಳಿದ್ದಾರೆ.

ಕಮಲ್ ಹಾಸನ್ ನಾಳೆಯೊಳಗೆ ಕ್ಷಮೆಯಾಚಿಸದಿದ್ದರೆ, ಕರ್ನಾಟಕದಲ್ಲಿ ಅವರ ಚಲನಚಿತ್ರ ಬಿಡುಗಡೆಯನ್ನು ಚೇಂಬರ್ ವಿರೋಧಿಸುತ್ತದೆ ಎಂದು ಕೆಎಫ್‌ಸಿಸಿಯ ಮಾಜಿ ಮುಖ್ಯಸ್ಥ ಸಾ ರಾ ಗೋವಿಂದು ಎಚ್ಚರಿಸಿದ್ದಾರೆ. “ನಾವು ಕನ್ನಡ ಹೋರಾಟಗಾರರನ್ನು ಬೆಂಬಲಿಸುತ್ತೇವೆ ಮತ್ತು ತೀವ್ರವಾಗಿ ಪ್ರತಿಭಟಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಭಾಷಾ ವಿಷಯಗಳ ಬಗ್ಗೆ ಎಲ್ಲಾ ಕನ್ನಡಿಗರು ಒಂದಾಗಬೇಕು ಎಂದು ಕೆಎಫ್‌ಸಿಸಿ ಮಾಜಿ ಅಧ್ಯಕ್ಷೆ ಜಯಮಾಲಾ ಹೇಳಿದ್ದಾರೆ. “ಅವರ ಹೇಳಿಕೆ ತಿಳಿದೋ ತಿಳಿಯದೆಯೋ ತಪ್ಪಾಗಿದೆ. ತಪ್ಪನ್ನು ಒಪ್ಪಿಕೊಂಡು ವಿಷಾದ ವ್ಯಕ್ತಪಡಿಸುವುದರಲ್ಲಿ ಯಾವುದೇ ತಪ್ಪಿಲ್ಲ” ಎಂದು ಅವರು ಹೇಳಿದ್ದಾರೆ.


ತಪ್ಪೆಂದು ಮನವರಿಕೆ ಆಗುವವರೆಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತೆಲಂಗಾಣ| ಭದ್ರಾದ್ರಿ ಕೊಥಗುಡೆಮ್‌ನಲ್ಲಿ 17 ಮಾವೋವಾದಿಗಳು ಪೊಲೀಸರಿಗೆ ಶರಣು

ತೆಲಂಗಾಣ| ಭದ್ರಾದ್ರಿ ಕೊಥಗುಡೆಮ್‌ನಲ್ಲಿ 17 ಮಾವೋವಾದಿಗಳು ಪೊಲೀಸರಿಗೆ ಶರಣು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...