Homeಮುಖಪುಟಬೆದರಿಕೆ ನನಗೇನು ಹೊಸತಲ್ಲ; ತಪ್ಪೆಂದು ಮನವರಿಕೆ ಆಗುವವರೆಗೆ ಕ್ಷಮೆಯಾಚಿಸಲ್ಲ: ಕಮಲ್ ಹಾಸನ್

ಬೆದರಿಕೆ ನನಗೇನು ಹೊಸತಲ್ಲ; ತಪ್ಪೆಂದು ಮನವರಿಕೆ ಆಗುವವರೆಗೆ ಕ್ಷಮೆಯಾಚಿಸಲ್ಲ: ಕಮಲ್ ಹಾಸನ್

- Advertisement -
- Advertisement -

“ಕನ್ನಡ ಭಾಷೆಯು ತಮಿಳಿನಿಂದ ಹುಟ್ಟಿದೆ” ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ಖ್ಯಾತ ನಟ-ರಾಜಕಾರಣಿ ಕಮಲ್ ಹಾಸನ್ ಅವರು, ತನ್ನ ಹೇಳಿಗೆ ಕ್ಷಮೆಯಾಚಿಸುವುದಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ. “ನಾನು ಹೇಳಿದ್ದ ತಪ್ಪು ಎಂದು ನನಗೆ ಮನವರಿಕೆ ಆಗುವವರೆಗೆ ಕ್ಷಮೆಯಾಚಿಸುವುದಿಲ್ಲ” ಎಂದು ಹೇಳಿದ್ದಾರೆ. ತಪ್ಪೆಂದು ಮನವರಿಕೆ ಆಗುವವರೆಗೆ

ಚೆನ್ನೈನಲ್ಲಿ ನಡೆದ ತಮ್ಮ ಮುಂಬರುವ ಚಿತ್ರ ಥಗ್ ಲೈಫ್‌ನ ಪ್ರಚಾರ ಕಾರ್ಯಕ್ರಮದಲ್ಲಿ ಅವರು ನೀಡಿದ ಹೇಳಿಕೆ ರಾಜ್ಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡ ಪರ ಸಂಘಟನೆಗಳು ಚಿತ್ರವನ್ನು ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿದ್ದು, ಅವರ ಹೇಳಿಕೆಗೆ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿವೆ.

ಕನ್ನಡಿಗರ ಆಕ್ರೋಶಕ್ಕೆ ಪ್ರತಿಕ್ರಿಯಿಸಿದ ಮಕ್ಕಳ್ ನೀಧಿ ಮೈಯಂ (ಎಂಎನ್‌ಎಂ) ಮುಖ್ಯಸ್ಥರೂ ಆಗಿರುವ ಕಮಲ್, ತಾನು ಈ ಹಿಂದೆಯೂ ಇಂತಹ ಬೆದರಿಕೆಗಳನ್ನು ಎದುರಿಸಿದ್ದೇನೆ ಮತ್ತು ಯಾವುದೇ ಮುಜುಗರಕ್ಕೊಳಗಾಗಿಲ್ಲ ಎಂದು ಹೇಳಿದ್ದಾರೆ. ಕಮಲ್ ಹಾಸನ್ ಅವರು ಮುಂದಿನ ತಿಂಗಳು ತಮಿಳುನಾಡು ಆಡಳಿತಾರೂಢ ಡಿಎಂಕೆ ಬೆಂಬಲದೊಂದಿಗೆ ರಾಜ್ಯಸಭೆಗೆ ಪ್ರವೇಶಿಸುವ ನಿರೀಕ್ಷೆಯಿದೆ.

“ನನಗೆ ಮೊದಲು ಕೂಡಾ ಬೆದರಿಕೆ ಬಂದಿದೆ… ಆದರೆ ಪ್ರೀತಿ ಯಾವಾಗಲೂ ಗೆಲ್ಲುತ್ತದೆ” ಎಂದು ಅವರು ಹೇಳಿದ್ದು, ಕರ್ನಾಟಕ, ಆಂಧ್ರಪ್ರದೇಶ ಮತ್ತು ಕೇರಳದ ಮೇಲಿನ ತಮ್ಮ ಪ್ರೀತಿಯನ್ನು ಪುನರುಚ್ಚರಿಸಿದ್ದಾರೆ. “ಒಂದು ಕಾರ್ಯಸೂಚಿ ಹೊಂದಿರುವವರು ಮಾತ್ರ ಬೇರೆ ರೀತಿಯಲ್ಲಿ ಅನುಮಾನಿಸುತ್ತಾರೆ.” ಎಂದು ಅವರು ಹೇಳಿದ್ದಾರೆ.

ದಕ್ಷಿಣದ ಎಲ್ಲಾ ಭಾಷೆಗಳು ಮತ್ತು ಸಂಸ್ಕೃತಿಗಳನ್ನು ತಾನು ಗೌರವಿಸುತ್ತಿದ್ದು, ಆದರೂ ತಮ್ಮ ಹೇಳಿಕೆಗೆ ಬದ್ಧರಾಗಿರುವುದಾಗಿ ಮತ್ತು ತಾವು ತಪ್ಪು ಮಾಡಿರುವುದಾಗಿ ಮನವರಿಕೆಯಾದರೆ ಮಾತ್ರ ಕ್ಷಮೆಯಾಚಿಸುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. “ನಾನು ತಪ್ಪಾಗಿದ್ದರೆ, ನಾನು ಕ್ಷಮೆಯಾಚಿಸುತ್ತೇನೆ. ಒಂದು ವೇಳೆ ತಪ್ಪಿಲ್ಲದಿದ್ದರೆ ನಾನು ಕ್ಷಮೆ ಯಾಚಿಸುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಪ್ರಜಾಪ್ರಭುತ್ವ ಮೌಲ್ಯಗಳಿಗೆ ತಮ್ಮ ಬದ್ಧತೆಯನ್ನು ಒತ್ತಿ ಹೇಳಿದ ಅವರು, “ಇದು ಪ್ರಜಾಪ್ರಭುತ್ವ. ನಾನು ಕಾನೂನು ಮತ್ತು ನ್ಯಾಯವನ್ನು ನಂಬುತ್ತೇನೆ” ಎಂದು ಅವರು ಹೇಳಿದ್ದಾರೆ.

ಕಮಲ್ ಹಾಸನ್ ಅವರ ಹೇಳಿಕೆಯ ವಿರುದ್ಧ ಕನ್ನಡ ಸಂಘಟನೆಗಳು ಮತ್ತು ರಾಜಕಾರಣಿಗಳಿಂದ ತೀವ್ರವಾದ ಟೀಕೆಗಳು ವ್ಯಕ್ತವಾಗಿವೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ಅಧ್ಯಕ್ಷ ಎಂ. ನರಸಿಂಹಲು ಅವರು ಪ್ರತಿಕ್ರಿಯಿಸಿ, ಕಮಲ್ ಹಾಸನ್ ಅವರ ಕನ್ನಡ “ತಮಿಳಿನಿಂದ ಹುಟ್ಟಿದೆ” ಎಂಬ ಹೇಳಿಕೆಯ ಕುರಿತು ಅವರೊಂದಿಗೆ ಮಾತನಾಡಲು ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.

“ಅನೇಕ ಕನ್ನಡ ಸಂಘಟನೆಗಳು ಅವರ ಚಲನಚಿತ್ರವನ್ನು ನಿಷೇಧಿಸಬೇಕೆಂದು ಒತ್ತಾಯಿಸಿವೆ. ಅವರು ಹೇಳಿದ್ದು ತಪ್ಪು ಎಂದು ನಾವು ನಂಬುತ್ತೇವೆ ಮತ್ತು ಅವರೊಂದಿಗೆ ಮಾತನಾಡಲು ಪ್ರಯತ್ನಿಸುತ್ತಿದ್ದೇವೆ” ಎಂದು ನರಸಿಂಹಲು ಹೇಳಿದ್ದಾರೆ.

ಕಮಲ್ ಹಾಸನ್ ನಾಳೆಯೊಳಗೆ ಕ್ಷಮೆಯಾಚಿಸದಿದ್ದರೆ, ಕರ್ನಾಟಕದಲ್ಲಿ ಅವರ ಚಲನಚಿತ್ರ ಬಿಡುಗಡೆಯನ್ನು ಚೇಂಬರ್ ವಿರೋಧಿಸುತ್ತದೆ ಎಂದು ಕೆಎಫ್‌ಸಿಸಿಯ ಮಾಜಿ ಮುಖ್ಯಸ್ಥ ಸಾ ರಾ ಗೋವಿಂದು ಎಚ್ಚರಿಸಿದ್ದಾರೆ. “ನಾವು ಕನ್ನಡ ಹೋರಾಟಗಾರರನ್ನು ಬೆಂಬಲಿಸುತ್ತೇವೆ ಮತ್ತು ತೀವ್ರವಾಗಿ ಪ್ರತಿಭಟಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಭಾಷಾ ವಿಷಯಗಳ ಬಗ್ಗೆ ಎಲ್ಲಾ ಕನ್ನಡಿಗರು ಒಂದಾಗಬೇಕು ಎಂದು ಕೆಎಫ್‌ಸಿಸಿ ಮಾಜಿ ಅಧ್ಯಕ್ಷೆ ಜಯಮಾಲಾ ಹೇಳಿದ್ದಾರೆ. “ಅವರ ಹೇಳಿಕೆ ತಿಳಿದೋ ತಿಳಿಯದೆಯೋ ತಪ್ಪಾಗಿದೆ. ತಪ್ಪನ್ನು ಒಪ್ಪಿಕೊಂಡು ವಿಷಾದ ವ್ಯಕ್ತಪಡಿಸುವುದರಲ್ಲಿ ಯಾವುದೇ ತಪ್ಪಿಲ್ಲ” ಎಂದು ಅವರು ಹೇಳಿದ್ದಾರೆ.


ತಪ್ಪೆಂದು ಮನವರಿಕೆ ಆಗುವವರೆಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತೆಲಂಗಾಣ| ಭದ್ರಾದ್ರಿ ಕೊಥಗುಡೆಮ್‌ನಲ್ಲಿ 17 ಮಾವೋವಾದಿಗಳು ಪೊಲೀಸರಿಗೆ ಶರಣು

ತೆಲಂಗಾಣ| ಭದ್ರಾದ್ರಿ ಕೊಥಗುಡೆಮ್‌ನಲ್ಲಿ 17 ಮಾವೋವಾದಿಗಳು ಪೊಲೀಸರಿಗೆ ಶರಣು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...