Homeಕರ್ನಾಟಕಅಡಿಕೆ ಹಾಳೆ ರಫ್ತಿಗೆ ಅಮೆರಿಕದಿಂದ ಅಡ್ಡಿ; ನಿವಾರಿಸುವಂತೆ ಕೇಂದ್ರಕ್ಕೆ KPRS ಆಗ್ರಹ

ಅಡಿಕೆ ಹಾಳೆ ರಫ್ತಿಗೆ ಅಮೆರಿಕದಿಂದ ಅಡ್ಡಿ; ನಿವಾರಿಸುವಂತೆ ಕೇಂದ್ರಕ್ಕೆ KPRS ಆಗ್ರಹ

- Advertisement -
- Advertisement -

ಭಾರತದಿಂದ ರಫ್ತಾಗುವ ಅಡಿಕೆ ಹಾಳೆಯಿಂದ ತಯಾರಿಸಿದ ತಟ್ಟೆ, ಲೋಟ ಮತ್ತಿತರ ಊಟದ ಪರಿಕರಗಳು ಆರೋಗ್ಯಕ್ಕೆ ಹಾನಿಕರ ಹಾಗೂ ಕ್ಯಾನ್ಸರ್‌ಕಾರಕ ಎಂದು ಅಮೆರಿಕದ ಆಹಾರ ಮತ್ತು ಔಷಧ ಆಡಳಿತ ಸಂಸ್ಥೆ (FDA) ಮೇ 8 ,2025 ರಂದು ಹೊರಡಿಸಿರುವ ಆಮದು ನಿರ್ಬಂಧವನ್ನು ತೆರವುಗೊಳಿಸಲು ಪ್ರಧಾನ ಮಂತ್ರಿ ಹಾಗೂ ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸಿದೆ. ಅಡಿಕೆ ಹಾಳೆ ರಫ್ತಿಗೆ

ಅಮೆರಿಕದ ಈ ನಿರ್ಭಂದವು ಅಮೆರಿಕ ಮಾತ್ರವಲ್ಲದೆ ಇಡಿ ಜಗತ್ತಿನ ಅಡಿಕೆ ಹಾಳೆ ಮಾರುಕಟ್ಟೆ ಮೇಲೆ ಕರಾಳ ಪರಿಣಾಮ ಬೀರುತ್ತಿದೆ. ಅಡಿಕೆ ಹಾಳೆಗಳಿಂದ ತಯಾರಾಗುತ್ತಿದ್ದ ಊಟದ ಪರಿಕರಗಳು ಜಾಗತಿಕವಾಗಿ ಸುಮಾರು ಮೂರುವರೆ ಸಾವಿರ ಕೋಟಿ ವಹಿವಾಟು ಇದ್ದು ಇದರಲ್ಲಿ ಕರ್ನಾಟಕ ರಾಜ್ಯದ ಕೊಡುಗೆಯೇ ಸುಮಾರು ಎರಡೂವರೆ ಸಾವಿರ ಕೋಟಿ ರೂಪಾಯಿಗಳಷ್ಟಿದೆ ಎಂದು ರೈತ ಸಂಘಟನೆ ಹೇಳಿದೆ.

ದೇಶದಲ್ಲೇ ಅತಿ ದೊಡ್ಡ ಅಡಿಕೆ ಬೆಳೆ ಬೆಳೆಯುವ ರಾಜ್ಯ ಕರ್ನಾಟಕವಾಗಿದ್ದು, ಈ ನಿರ್ಭಂಧದಿಂದ ಅಡಿಕೆ ಬೆಳೆಗಾರರು ಸೇರಿದಂತೆ ಈ ಉದ್ಯಮದಲ್ಲಿ ತೊಡಗಿರುವ ಸಹಸ್ರಾರು ಜನರ ಉದ್ಯೋಗದ ಮೇಲೆ ದುಷ್ಪರಿಣಾಮಗಳು ಕಂಡು ಬರುತ್ತಿದೆ ಎಂದು ಅದು ತಿಳಿಸಿದೆ.

ದಕ್ಷಿಣ ಕನ್ನಡ ಮುಂತಾದ ಜಿಲ್ಲೆಗಳಿಂದ ನಡೆಯುತ್ತಿದ್ದ ರಪ್ತು ವಹಿವಾಟು ತೀವ್ರ ಪ್ರಮಾಣದಲ್ಲಿ ಕುಸಿದಿದೆ. ಎಲೆ ಚುಕ್ಕಿ ರೋಗ, ಕೊಳೆ ರೋಗ ಮುಂತಾದ ಸಮಸ್ಯೆಗಳು ಸೇರಿದಂತೆ ಹಲವಾರು ವರ್ಷಗಳ ಬೆಲೆ ಕುಸಿತದ ಸಮಸ್ಯೆ ಅನುಭವಿಸಿ ಸತತ ನಷ್ಟದ ನಂತರ ಈ ವರ್ಷ ಸ್ವಲ್ಪ ಉತ್ತಮ ಬೆಲೆ ಪಡೆಯುವ ನಿರೀಕ್ಷೆಯಲ್ಲಿ ಇರುವಾಗಲೇ ಇಂತಹ ನಿರ್ಬಂಧಗಳು ಅಡಿಕೆ ಬೆಳೆಗಾರರನ್ನು‌ ಮತ್ತಷ್ಟು ಕಷ್ಟಕ್ಕೆ ಸಿಲುಕಿಸುತ್ತದೆ ಎಂದು ಕೆಪಿಆರ್‌ಎಸ್ ಹೇಳಿದೆ.

ಅದ್ದರಿಂದ ಅಡಿಕೆ ಬೆಳೆ ಬೆಳೆಯುವ ಪ್ರದೇಶದ ಸಂಸತ್ ಸದಸ್ಯರು ಪ್ರಧಾನ ಮಂತ್ರಿಯ ಮೇಲೆ ಈ ತೊಡಕು ನಿವಾರಿಸುವಂತೆ ಒತ್ತಡ ತರಬೇಕು ಮತ್ತು ರಾಜ್ಯ ಸರ್ಕಾರ ಕೂಡ ತಕ್ಷಣ ಕೇಂದ್ರ ಸರ್ಕಾರವನ್ನು ಈ ಬಗ್ಗೆ ಒತ್ತಾಯಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸಿದೆ.

ಒಂದು ಕಡೆ ತನ್ನ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಯಾವುದೆ ರೀತಿಯ ಸುಂಕ ವಿಧಿಸದಂತೆ ಅಮೆರಿಕ ಹಾಗೂ ಯೂರೋಪಿಯನ್ ದೇಶಗಳು ಭಾರತದ ಮೇಲೆ ಒತ್ತಡ ಹಾಗೂ ಬೆದರಿಕೆ ಹಾಕುತ್ತಿವೆ. ಅದೆ ಸಂದರ್ಭದಲ್ಲಿ ಭಾರತದ ಸರಕುಗಳು ತನ್ನ ದೇಶದೊಳಗೆ ಬರದಂತೆ ಸುಂಕ ಮತ್ತು ಸುಂಕಯೇತರ ಅಡ್ಡಿ ಸೃಷ್ಟಿಸುತ್ತಿದೆ ಎಂದು ಕೆಪಿಆರ್‌ಎಸ್‌ ಆತಂಕ ವ್ಯಕ್ತಪಡಿಸಿದೆ.

ಇತ್ತೀಚೆಗೆ ಮಾವು ಬೆಳೆಯನ್ನು ಇಂತಹದ್ದೆ ನೆಪ ಒಡ್ಡಿ ತಿರಸ್ಕರಿಸಿದ್ದರಿಂದ ಕೋಟ್ಯಾಂತರ ರೂ ಬೆಳೆ ನಾಶವಾಗಿದೆ ಎಂದು ಹೇಳಿರುವ ಸಂಘಟನೆಯು, ರಬ್ಬರ್ ಬೆಳೆಗೂ ಕೂಡ ಅರಣ್ಯ ನಾಶ ಮಾಡಿ ಬೆಳೆದಿಲ್ಲ ಎಂದು ಸರ್ಟಿಫಿಕೇಟ್ ಒದಗಿಸಲು ನಿರ್ಬಂಧ ಒಡ್ಡುತ್ತಿವೆ ಎಂದು ಹೇಳಿದೆ.

ಮುಕ್ತ ವ್ಯಾಪಾರ ಒಪ್ಪಂದಕ್ಕೆ ಒಳಪಡಿಸಲು ಇತ್ತೀಚಿನ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಸಂದರ್ಭವನ್ನು ಕೂಡ ದುರುಪಯೋಗ ಮಾಡಿಕೊಂಡಿದೆ. ಇಂತಹ ಕತ್ತು ಹಿಸುಕುವ ಅಮೆರಿಕ ಕ್ರಮಗಳನ್ನು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಟುವಾಗಿ ಖಂಡಿಸುತ್ತಿಲ್ಲ ಎಂದು ಸಂಘಟನೆಯು ಆರೋಪಿಸಿದೆ.

ಚೀನಾ ಮತ್ತಿತರ ದೇಶಗಳ ರೀತಿ ತಿರುಗೇಟು ನೀಡಿ ನಮ್ಮ ದೇಶದ ಸ್ವಾವಲಂಬನೆ ಮತ್ತು ರೈತರ ಹಿತ ಕಾಪಾಡುವ ಕ್ರಮ ಕೈಗೊಳ್ಳದೇ ಟ್ರಂಪ್ ನ ಅಡಿಯಾಳಾಗಿ ಕೇಂದ್ರ ಸರ್ಕಾರ ವರ್ತಿಸುತ್ತಿದೆ ಎಂದು ಹೇಳಿರುವ ಸಂಘಟನೆಯು, ಕೇಂದ್ರ ಸರ್ಕಾರ ಮೇಲಿಂದ ಮೇಲೆ ಅಮೆರಿಕದ ಒತ್ತಡಗಳಿಗೆ ಮಣಿಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗುಜರಾತ್‌ | ವಿದ್ಯಾರ್ಥಿನಿಯರ ಶಾಲಾ ಪ್ರವಾಸಗಳಲ್ಲಿ ಮಹಿಳಾ ಪೊಲೀಸರು ಕಡ್ಡಾಯ

ಗುಜರಾತ್‌ | ವಿದ್ಯಾರ್ಥಿನಿಯರ ಶಾಲಾ ಪ್ರವಾಸಗಳಲ್ಲಿ ಮಹಿಳಾ ಪೊಲೀಸರು ಕಡ್ಡಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...