Homeಕರ್ನಾಟಕಅನುಮತಿಯಿಲ್ಲದೆ ಸಿಡಿಆರ್ ಪಡೆಯುವ ಕ್ರಮ| ಪೊಲೀಸ್ ರಾಜ್ಯವಾದೀತು: ಹೈಕೋರ್ಟ್ ಎಚ್ಚರಿಕೆ

ಅನುಮತಿಯಿಲ್ಲದೆ ಸಿಡಿಆರ್ ಪಡೆಯುವ ಕ್ರಮ| ಪೊಲೀಸ್ ರಾಜ್ಯವಾದೀತು: ಹೈಕೋರ್ಟ್ ಎಚ್ಚರಿಕೆ

- Advertisement -
- Advertisement -

‘ಪೊಲೀಸರು ತಮ್ಮ ಇಚ್ಛೆಗೆ ಅನುಗುಣವಾಗಿ ಕರೆ ವಿವರ ದಾಖಲೆ (ಸಿಡಿಆರ್‌) ಪಡೆಯುವ ಅಧಿಕಾರ ಚಲಾಯಿಸುತ್ತಾ ಹೋದರೆ, ಅದು ಪೊಲೀಸ್ ರಾಜ್ಯವಾಗುತ್ತದೆ’ ಎಂದು ಹೈಕೋರ್ಟ್ ಎಚ್ಚರಿಸಿದೆ.

‘ನಾನು ಪೊಲೀಸ್‌ ಅಧಿಕಾರಿಯಾಗಿದ್ದೇನೆ ಎಂಬ ಅಧಿಕಾರದ ಏಕೈಕ ಗತ್ತಿನಲ್ಲಿ, ಯಾವುದೇ ಪೊಲೀಸ್ ಅಧಿಕಾರಿ, ಯಾವುದೇ ವ್ಯಕ್ತಿಯ ಮೊಬೈಲ್ ಫೋನ್‌ನ ಸಿಡಿಆರ್‌ ಅನ್ನು ಕಾನೂನುಬದ್ಧ ತನಿಖಾ ಅಗತ್ಯದ ಅನುಮತಿ ಇಲ್ಲದೆ ಪಡೆಯಲು ಸಾಧ್ಯವಿಲ್ಲ’ ಎಂದು ಗುರುವಾರ ಸ್ಪಷ್ಟಪಡಿಸಿದೆ.

ಮಹಿಳೆಯೊಬ್ಬರ ಸಿಡಿಆರ್ ಅನ್ನು ಅಕ್ರಮವಾಗಿ ಪಡೆದ ಆರೋಪ ಎದುರಿಸುತ್ತಿರುವ ಬ್ಯಾಟರಾಯನಪುರ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಎಂ.ವಿ ವಿದ್ಯಾ ಅವರು ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸುವಂತೆ ಕೋರಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರ ರಜಾಕಾಲೀನ ಏಕಸದಸ್ಯ ಪೀಠ ವಜಾಗೊಳಿಸಿದೆ.

ಅರ್ಜಿದಾರರ ಪರ ವಕೀಲ ಸತ್ಯನಾರಾಯಣ್ ಚಾಲ್ಕೆ ವಾದ ಮಂಡಿಸಿ, “ವಿದ್ಯಾ ತಮ್ಮ ಅಧಿಕೃತ ಕರ್ತವ್ಯ ನಿರ್ವಹಿಸುವ ನಿಟ್ಟಿನಲ್ಲಿ, ಕರ್ನಾಟಕ ಪೊಲೀಸ್ ಕಾಯ್ದೆಯ ಸೆಕ್ಷನ್‌ 197 (ಸಾರ್ವಜನಿಕ ಸೇವಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ತಡೆಯುವ) ಮತ್ತು ಅಪರಾಧ ದಂಡ ಪ್ರಕ್ರಿಯಾ ಸಂಹಿತೆಯ ಸೆಕ್ಷನ್‌ 170ರ (ಸಾರ್ವಜನಿಕ ನೌಕರನ ವಿರುದ್ಧ ಕಾನೂನು ಕ್ರಮಕೈಗೊಳ್ಳಲು ಮತ್ತು ವಿಚಾರಣೆಗೆ ಒಳಪಡಿಸಲು ಅಗತ್ಯವಿರುವ ಕೇಂದ್ರ ಅಥವಾ ರಾಜ್ಯ ಸರ್ಕಾರದ ಪೂರ್ವಾನುಮತಿ) ಅಡಿಯಲ್ಲಿ, ಅನುಮತಿಯ ಆದೇಶವಿಲ್ಲದೆ ಸಿಡಿಆರ್‌ ಕೋರಿದ್ದಾರೆ” ಎಂದು ಪೀಠಕ್ಕೆ ಮನದಟ್ಟು ಮಾಡಲು ಪ್ರಯತ್ನಿಸಿದ್ದರು.

ಆದರೆ, ಇದನ್ನು ಒಪ್ಪದ ಪೀಠವು, “ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಕನ್ನಡಿಗ ದಿವಂಗತ ಪುಟ್ಟಸ್ವಾಮಿ ಪ್ರಕರಣದಲ್ಲಿ ಸ್ಪಷ್ಟಪಡಿಸಿರುವಂತೆ, ಯಾವುದೇ ವ್ಯಕ್ತಿಯ ಸಿಡಿಆರ್ ದಾಖಲೆಗಳು ಗೋಪ್ಯತೆಯ ಹಕ್ಕಿನಿಂದ ನಿಯಂತ್ರಿಸಲಾಗುವ ವೈಯಕ್ತಿಕ ಮತ್ತು ಖಾಸಗಿ ವಿವರಗಳಾಗಿವೆ. ಹೀಗಾಗಿ, ನಿರ್ದಿಷ್ಟ ವ್ಯಕ್ತಿಯ ಸಿಡಿಆರ್ ಪಡೆಯುವ ಅಧಿಕಾರವನ್ನು ತನಿಖಾ ಅಧಿಕಾರಿ ಮಾತ್ರ ಚಲಾಯಿಸಬೇಕಾಗುತ್ತದೆ” ಎಂಬ ಅಂಶವನ್ನು ಉಲ್ಲೇಖಿಸಿದೆ.

“ಐಪಿಸಿ ಸೆಕ್ಷನ್‌ಗಳಾದ 354(ಡಿ) 409, 506, 509 ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್‌ 66(ಡಿ) ಮತ್ತು 66(ಇ) ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಿಗಾಗಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸಬೇಕು” ಎಂದು ಅರ್ಜಿದಾರರು ಕೋರಿದ್ದರು.

ಮುಸ್ಲಿಂ ಜಿಲ್ಲಾಧಿಕಾರಿಯನ್ನು ಪಾಕಿಸ್ತಾನಿ ಎಂದ ಬಿಜೆಪಿ ನಾಯಕ | ಕ್ಷಮೆಯಾಚಿಸುವಂತೆ ಸೂಚಿಸಿದ ಕರ್ನಾಟಕ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...