Homeಮುಖಪುಟತಂದೆ-ಮಗನ ನಕಲಿ ಎನ್‌ಕೌಂಟರ್ ಆರೋಪ: 7 ಮಂದಿ ಪೊಲೀಸರ ವಿರುದ್ಧ ಎಫ್ಐಆರ್ ದಾಖಲು

ತಂದೆ-ಮಗನ ನಕಲಿ ಎನ್‌ಕೌಂಟರ್ ಆರೋಪ: 7 ಮಂದಿ ಪೊಲೀಸರ ವಿರುದ್ಧ ಎಫ್ಐಆರ್ ದಾಖಲು

- Advertisement -
- Advertisement -

ನಾಲ್ಕು ವರ್ಷಗಳ ಕಾನೂನು ಹೋರಾಟದ ನಂತರ, ಗುಜರಾತ್‌ನ ಸುರೇಂದ್ರನಗರ ಜಿಲ್ಲೆಯಲ್ಲಿ ನಕಲಿ ಎನ್‌ಕೌಂಟರ್‌ನಲ್ಲಿ ತಂದೆ-ಮಗನನ್ನು ಹತ್ಯೆಗೈದ ಆರೋಪದ ಮೇಲೆ ಏಳು ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ವೀರೇಂದ್ರಸಿಂಹ ಎನ್ ಜಡೇಜಾ ಮತ್ತು ಅವರ ಅಧೀನ ಅಧಿಕಾರಿಗಳಾದ ರಾಜೇಶ್ ಸಾವಿಜಿಭಾಯಿ, ಕಿರೀಟ್‌ಭಾಯಿ ಗಣೇಶ್‌ಭಾಯಿ, ದಿಗ್ವಿಜಯ್‌ ಸಿನ್ಹ್‌ ಹರ್ದೀಪ್‌ ಸಿನ್ಹ್‌, ಪ್ರಹ್ಲಾದಭಾಯಿ ಪ್ರಭುಭಾಯಿ ಮತ್ತು ಮನುಭಾಯಿ ಗೋವಿಂದ್‌ಭಾಯಿ ಸೇರಿದಂತೆ ಏಳು ಪೊಲೀಸರ ವಿರುದ್ಧ ಶುಕ್ರವಾರ (ಮೇ.30) ಪಟ್ಡಿ ತಾಲೂಕಿನ ಬಜಾನಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏಳು ಪೊಲೀಸರ ವಿರುದ್ಧ ಕೊಲೆ ಸೇರಿದಂತೆ ಇತರ ಆರೋಪಗಳಿಗಾಗಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಧೃಂಗಾಧ್ರದ ಉಪ ಪೊಲೀಸ್ ವರಿಷ್ಠಾಧಿಕಾರಿ ಜೆ.ಡಿ. ಪುರೋಹಿತ್ ಅವರು ತಿಳಿಸಿದ್ದಾರೆ ಎಂದು ವರದಿಯಾಗಿದೆ. ಪ್ರಕರಣದ ತನಿಖಾಧಿಕಾರಿಯಾಗಿ ಪುರೋಹಿತ್ ಅವರನ್ನು ನೇಮಿಸಲಾಗಿದೆ.

ಪಟ್ಡಿ ತಾಲೂಕಿನಲ್ಲಿ 2021ರಲ್ಲಿ ಆಪಾದಿಯ ನಕಲಿ ಎನ್‌ಕೌಂಟರ್ ನಡೆದಿದೆ. ಪೊಲೀಸ್ ಕಾರ್ಯಾಚರಣೆಯ ಸಮಯದಲ್ಲಿ ಆರೋಪಿ ಪಿಎಸ್ಐ ಜಡೇಜಾ ನೇತೃತ್ವದ ತಂಡ ನಡೆಸಿದ ಗುಂಡಿನ ದಾಳಿಯಲ್ಲಿ ಹನೀಫ್ ಜಾಟ್ ಮಲಿಕ್ (44) ಮತ್ತು ಅವರ ಮಗ ಮದೀನ್ (14) ಸಾವನ್ನಪ್ಪಿದ್ದರು.

ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದೇವೆ ಎಂದು ಹೇಳುವ ಮೂಲಕ ತಮ್ಮನ್ನು ತಾವು ಸಮರ್ಥಿಸಿಕೊಂಡಿದ್ದರು. ಆದರೆ, ಮೃತರ ಕುಟುಂಬ ಸದಸ್ಯರು ಗುಜರಾತ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ, ತಂದೆ-ಮಗನನ್ನು ನಿರ್ದಯವಾಗಿ ಕೊಲ್ಲಲಾಗಿದೆ ಎಂದು ಆರೋಪಿಸಿದ್ದರು. ಹತ್ಯೆಗಳ ಬಗ್ಗೆ ತನಿಖೆ ನಡೆಸುವಂತೆ ಕೋರಿದ್ದರು.

ನವೆಂಬರ್ 6, 2021ರಂದು ಬಜಾನಾ ಪೊಲೀಸ್ ಠಾಣೆ ವ್ಯಾಪ್ತಿಯ ಗೆಡಿಯಾ ಗ್ರಾಮದಲ್ಲಿ ತನ್ನ ತಂದೆ ಮತ್ತು ಸಹೋದರನನ್ನು ಕ್ರೂರವಾಗಿ ಕೊಲ್ಲಲಾಯಿತು ಎಂದು ಆರೋಪಿಸಿ ಸೋಹಾನಾ ಮಲೇಕ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಗುಜರಾತ್ ಭಯೋತ್ಪಾದನೆ ಮತ್ತು ಸಂಘಟಿತ ಅಪರಾಧ ನಿಯಂತ್ರಣ (GUJCTOC) ಕಾಯ್ದೆಯಡಿಯಲ್ಲಿ ದಾಖಲಾದ ಪ್ರಕರಣದಲ್ಲಿ ಹನೀಫ್ ಬೇಕಾಗಿದ್ದ ಎಂದು ಪೊಲೀಸರು ಹೇಳಿಕೊಂಡಿದ್ದರು. ಹಲವಾರು ಲೂಟಿ ಮತ್ತು ಕಳ್ಳತನ ಪ್ರಕರಣಗಳಲ್ಲಿ ಹನೀಫ್ ಭಾಗಿಯಾಗಿದ್ದ ಎಂದು ಹೇಳಿಕೊಂಡಿದ್ದರು. ಹನೀಫ್ ಕುಖ್ಯಾತ “ಗೆಡಿಯಾ ಗ್ಯಾಂಗ್” ನ ಭಾಗವಾಗಿದ್ದ. 86 ಎಫ್‌ಐಆರ್‌ಗಳಲ್ಲಿ ಹೆಸರಿಸಲ್ಪಟ್ಟಿದ್ದ ಮತ್ತು 59 ಪ್ರಕರಣಗಳಲ್ಲಿ ಬೇಕಾಗಿದ್ದ ಎಂದಿದ್ದರು.

ನಿರ್ದಿಷ್ಟ ಮಾಹಿತಿ ಪಡೆದ ನಂತರ ಜಡೇಜಾ ನೇತೃತ್ವದ ಏಳು ಸದಸ್ಯರ ಪೊಲೀಸ್ ತಂಡ ಹನೀಫ್ ಅವರನ್ನು ಬಂಧಿಸಲು ಗ್ರಾಮಕ್ಕೆ ಹೋಗಿತ್ತು. ಈ ವೇಳೆ ಹನೀಫ್ ಮತ್ತು ಅವರ ಮಗ ತಪ್ಪಿಸಿಕೊಂಡು ಪರಾರಿಯಾಗಲು ಪ್ರಯತ್ನಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಅಲ್ಲದೆ, ಹನೀಫ್ ತನ್ನ ಮಗ ಮತ್ತು ಇತರರ ಸಹಾಯದಿಂದ ಪೊಲೀಸರ ಮೇಲೆ ಗುಂಡು ಹಾರಿಸಿದ್ದರು. ಈ ವೇಳೆ ಪೊಲೀಸರು ಪ್ರತಿ ಗುಂಡು ಹಾರಿಸಬೇಕಾಯಿತು. ಒಂದು ಗುಂಡು ಹನೀಫ್ ಎದೆಗೆ ತಗುಲಿದರೆ, ಇನ್ನೊಂದು ಗುಂಡು ಮಗ ಮದೀನ್ ಗೆ ತಗುಲಿತ್ತು ಎಂದು ತಿಳಿಸಿದ್ದಾರೆ.

2024ರಲ್ಲಿ ಗುಜರಾತ್ ಹೈಕೋರ್ಟ್ ಅರ್ಜಿಯನ್ನು ವಿಲೇವಾರಿ ಮಾಡಿ ಅರ್ಜಿದಾರರಿಗೆ ಸ್ಥಳೀಯ ನ್ಯಾಯಾಲಯವನ್ನು ಸಂಪರ್ಕಿಸಲು ಸ್ವಾತಂತ್ರ್ಯ ನೀಡಿತ್ತು. ನಂತರ, ಅರ್ಜಿದಾರರು ಮ್ಯಾಜಿಸ್ಟೀರಿಯಲ್ ನ್ಯಾಯಾಲಯದ ಮೊರೆ ಹೋಗಿದ್ದರು. ಮ್ಯಾಜಿಸ್ಟೀರಿಯಲ್ ನ್ಯಾಯಾಲಯ ತಪ್ಪಿತಸ್ಥ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ಆದೇಶಿಸಿದೆ ಎಂದು ವರದಿಯಾಗಿದೆ.

ಗೋಮಾಂಸ ಮಾರಾಟ ಆರೋಪ; ದೆಹಲಿ ವಿಶ್ವವಿದ್ಯಾಲಯ ಬಳಿಯ ಅಂಗಡಿ ಮಾಲೀಕನಿಗೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...