Homeಮುಖಪುಟರಕ್ಷಣಾ ಖರೀದಿಯಲ್ಲಿ ವಿಳಂಬ | ಅಸಮಾಧಾನ ವ್ಯಕ್ತಪಡಿಸಿದ ವಾಯುಪಡೆ ಮುಖ್ಯಸ್ಥರು

ರಕ್ಷಣಾ ಖರೀದಿಯಲ್ಲಿ ವಿಳಂಬ | ಅಸಮಾಧಾನ ವ್ಯಕ್ತಪಡಿಸಿದ ವಾಯುಪಡೆ ಮುಖ್ಯಸ್ಥರು

- Advertisement -
- Advertisement -

ಹಲವಾರು ರಕ್ಷಣಾ ಸಾಮಗ್ರಿಗಳ ಖರೀದಿ ಯೋಜನೆಗಳಲ್ಲಿ ವಿಳಂಬ ಮತ್ತು ಸೈನಿಕ ವೇದಿಕೆಗಳ ಪೂರೈಕೆ ವೇಳಾಪಟ್ಟಿಯನ್ನು ಪಾಲಿಸದಿರುವ ಬಗ್ಗೆ ಭಾರತೀಯ ವಾಯುಸೇನೆಯ ಮುಖ್ಯಸ್ಥ ಅಮರ್ ಪ್ರೀತ್ ಸಿಂಗ್ ಗುರುವಾರ ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ರಕ್ಷಣಾ ಖರೀದಿಯಲ್ಲಿ ವಿಳಂಬ

ಭಾರತೀಯ ಕೈಗಾರಿಕಾ ಒಕ್ಕೂಟದ ಕಾರ್ಯಕ್ರಮದಲ್ಲಿ ಮಾತನಾಡಿದ ಅಮರ್ ಪ್ರೀತ್ ಸಿಂಗ್, ಸಮಯಸೂಚಿಗಳನ್ನು ಪಾಲಿಸುವುದು ದೊಡ್ಡ ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ. ಅದಾಗ್ಯೂ, ಅವರು ಯಾವ ಯೋಜನೆಗಳನ್ನು ಉಲ್ಲೇಖಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ.

“ನನಗೆ ಗೊತ್ತಿರುವ ಹಾಗೆ, ಯಾವುದೇ ಯೋಜನೆಯೂ ಸಮಯಕ್ಕೆ ಮುಗಿದಿಲ್ಲ” ಎಂದು ಅವರು ಹೇಳಿದ್ದು, ಆದರೆ ಸೈನ್ಯವು “ತಪ್ಪು ಮಾಡಿದವರನ್ನು ತಪ್ಪು ಮಾಡಿದವರು ಎಂದು ಬಹಿರಂಗವಾಗಿ ಹೇಳದಿರಲು ಆದ್ಯತೆ ನೀಡಿದೆ” ಎಂದು ಅವರು ತಿಳಿಸಿದ್ದಾರೆ.

ಇದು ಪರಿಶೀಲಿಸಬೇಕಾದ ವಿಷಯ ಎಂದು ಹೇಳಿದ ಅವರು, “ಸಾಧಿಸಲಾಗದದ್ದನ್ನು ನಾವು ಏಕೆ ಭರವಸೆ ನೀಡಬೇಕು?” ಎಂದು ಹೇಳಿದ್ದಾರೆ.

“ಒಪ್ಪಂದಕ್ಕೆ ಸಹಿ ಹಾಕುವಾಗ, ಕೆಲವೊಮ್ಮೆ, ಅದು ಆಗುವುದಿಲ್ಲ ಎಂದು ನಮಗೆ ಖಚಿತ ಗೊತ್ತಿರುತ್ತದೆ. ಆದರೆ ನಾವು ಒಪ್ಪಂದಕ್ಕೆ ಸಹಿ ಹಾಕುತ್ತೇವೆ ಮತ್ತು ಅದರ ನಂತರ ಏನು ಮಾಡಬಹುದು ಎಂದು ನೋಡುತ್ತೇವೆ… ನಿಸ್ಸಂಶಯವಾಗಿ ನಂತರ ಪ್ರಕ್ರಿಯೆಯು ದುರ್ಬಲಗೊಳ್ಳುತ್ತದೆ.” ಎಂದು ಅವರು ಹೇಳಿದ್ದಾರೆ.

ವಾಯು ಶಕ್ತಿ ಇಲ್ಲದೆ ಯಾವುದೇ ಮಿಲಿಟರಿ ಕಾರ್ಯಾಚರಣೆಗಳನ್ನು ನಡೆಸಲಾಗುವುದಿಲ್ಲ ಎಂದು ಅಮರ್ ಪ್ರೀತ್ ಸಿಂಗ್ ಹೇಳಿದ್ದು, ಆಪರೇಷನ್ ಸಿಂಧೂರ ಅದಕ್ಕೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದ್ದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ವಾಯು ಸೇನೆಯ ವಿಷಯದಲ್ಲಿ ನಮ್ಮ ಗಮನವು, ನಮಗೆ ಸಾಮರ್ಥ್ಯವಿದೆ ಎಂದು ನಾವು ಖಚಿತಪಡಿಸಿಕೊಳ್ಳಬೇಕು. ನಾವು ಭಾರತದಲ್ಲಿ ಉತ್ಪಾದನೆಯ ಬಗ್ಗೆ ಮಾತ್ರ ಮಾತನಾಡಲು ಸಾಧ್ಯವಿಲ್ಲ, ನಾವು ಭಾರತದಲ್ಲಿ ವಿನ್ಯಾಸ ಮತ್ತು ಅಭಿವೃದ್ಧಿಯನ್ನು ಪ್ರಾರಂಭಿಸಬೇಕಾಗಿದೆ.” ಎಂದು ಅವರು ಹೇಳಿದ್ದಾರೆ.

“ಪ್ರಸ್ತುತ ಭೌಗೋಳಿಕ ರಾಜಕೀಯ ಪರಿಸ್ಥಿತಿಯು ಆತ್ಮನಿರ್ಭರ್ತ [ಸ್ವಾವಲಂಬನೆ] ಒಂದೇ ಪರಿಹಾರ ಎಂದು ನಮಗೆ ಅರಿತುಕೊಂಡಿದ್ದೇವೆ. ಆಪರೇಷನ್ ಸಿಂಧೂರ ಕಾರ್ಯಾಚರಣೆಯು ಸಶಸ್ತ್ರ ಪಡೆಗಳಿಗೆ ನಾವು ಎಲ್ಲಿಗೆ ಹೋಗುತ್ತಿದ್ದೇವೆ ಮತ್ತು ಭವಿಷ್ಯದಲ್ಲಿ ನಮಗೆ ಏನು ಬೇಕು ಎಂಬುದರ ಸ್ಪಷ್ಟ ಕಲ್ಪನೆಯನ್ನು ನೀಡಿದೆ” ಎಂದು ಅವರು ಹೇಳಿದ್ದಾರೆ.

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನಿಂದ 83 ತೇಜಸ್ ಎಂಕೆ 1ಎ ಫೈಟರ್ ಜೆಟ್‌ಗಳ ವಿತರಣೆಯಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ಅಮರ್ ಪ್ರೀತ್ ಸಿಂಗ್ ಅವರ ಹೇಳಿಕೆಗಳು ಬಂದಿವೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಲಘು ಯುದ್ಧ ವಿಮಾನದ ಒಪ್ಪಂದಕ್ಕೆ 2021 ರಲ್ಲಿ ಸರ್ಕಾರಿ ಸ್ವಾಮ್ಯದ ಏರೋಸ್ಪೇಸ್ ಮತ್ತು ರಕ್ಷಣಾ ಕಂಪನಿಯೊಂದಿಗೆ ಸಹಿ ಹಾಕಲಾಗಿತ್ತು.

ವಾಯುಪಡೆಯು 70 HTT-40 ಮೂಲ ತರಬೇತಿ ವಿಮಾನಗಳ ವಿತರಣೆಗಾಗಿ HAL ಜೊತೆ ಒಪ್ಪಂದಕ್ಕೆ ಸಹಿ ಹಾಕಿತ್ತು. ವಿಮಾನದ ಸೇರ್ಪಡೆ ಸೆಪ್ಟೆಂಬರ್‌ನಲ್ಲಿ ಪ್ರಾರಂಭವಾಗಬೇಕಿತ್ತು. ಆದರೆ ಅದು ವಿಳಂಬವಾಗಿತ್ತು. ರಕ್ಷಣಾ ಖರೀದಿಯಲ್ಲಿ ವಿಳಂಬ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕೇರಳದ 104 ಶಾಲೆಗಳನ್ನು ‘ಮಾದಕ ವಸ್ತು ತಾಣ’ಗಳೆಂದು ಗುರುತಿಸಿದ ಅಬಕಾರಿ ಇಲಾಖೆ; ವರದಿ

ಕೇರಳದ 104 ಶಾಲೆಗಳನ್ನು ‘ಮಾದಕ ವಸ್ತು ತಾಣ’ಗಳೆಂದು ಗುರುತಿಸಿದ ಅಬಕಾರಿ ಇಲಾಖೆ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...