Homeದಲಿತ್ ಫೈಲ್ಸ್ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ; ಮೂರು ದಶಕಗಳ ನಂತರ 32 ಜನರಿಗೆ ಶಿಕ್ಷೆ...

ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ; ಮೂರು ದಶಕಗಳ ನಂತರ 32 ಜನರಿಗೆ ಶಿಕ್ಷೆ ಪ್ರಕಟ

- Advertisement -
- Advertisement -

ಪ್ರಬಲ ಜಾತಿ ಸದಸ್ಯರು ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ನಡೆಸಿದ ನಂತರ ಆಗ್ರಾದ ಪನ್ವಾರಿ ಮತ್ತು ಹತ್ತಿರದ ಹಳ್ಳಿಗಳಲ್ಲಿ ಜಾತಿ ಹಿಂಸಾಚಾರ ಭುಗಿಲೆದ್ದಿದ್ದ ಮೂರು ದಶಕಗಳ ಹಿಂದಿನ ಪ್ರಕರಣದ ತೀರ್ಪು ಪ್ರಕಟವಾಗಿದ್ದು, ಸ್ಥಳೀಯ ನ್ಯಾಯಾಲಯವು ಶುಕ್ರವಾರ ಪ್ರಕರಣದಲ್ಲಿ 32 ಜನರಿಗೆ ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

97 ಪುಟಗಳ ತೀರ್ಪನ್ನು ಪ್ರಕಟಿಸಿದ ನ್ಯಾಯಾಧೀಶ ಪುಷ್ಕರ್ ಉಪಾಧ್ಯಾಯ ಅವರ ವಿಶೇಷ ಎಸ್‌ಸಿ/ಎಸ್‌ಟಿ ನ್ಯಾಯಾಲಯವು, ಪ್ರತಿ ಅಪರಾಧಿಗೆ ₹41,000 ದಂಡವನ್ನು ವಿಧಿಸಿದೆ. ಈ ಮೊತ್ತದ ಅರ್ಧದಷ್ಟು ಹಣವನ್ನು ಸಂತ್ರಸ್ತ ದಲಿತ ಕುಟುಂಬಗಳಿಗೆ ಪರಿಹಾರವಾಗಿ ನೀಡಲಾಗುತ್ತದೆ.

ಸಾಕ್ಷಾಧಾರಗಳ ಕೊರತೆಯಿಂದಾಗಿ ನ್ಯಾಯಾಲಯವು 15 ಜನರನ್ನು ಖುಲಾಸೆಗೊಳಿಸಿದ್ದು, 35 ಪುರುಷರನ್ನು ಅಪರಾಧಿಗಳು ಎಂದು ಘೋಷಿಸಿದೆ. ತೀರ್ಪು ಪ್ರಕಟಿಸಿದ  ಮೂರು ದಿನಗಳ ನಂತರ ಶಿಕ್ಷೆ ವಿಧಿಸಲಾಗಿದೆ. ಮೂಲ 72 ಆರೋಪಿಗಳಲ್ಲಿ 22 ಜನರು ದೀರ್ಘಕಾಲದ ವಿಚಾರಣೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ. ಶುಕ್ರವಾರ 32 ಅಪರಾಧಿಗಳನ್ನು ವಶಕ್ಕೆ ಪಡೆಯಲಾಗಿದ್ದರೆ, ಉಳಿದ ಮೂವರ ವಿರುದ್ಧ ನ್ಯಾಯಾಲಯಕ್ಕೆ ಹಾಜರಾಗದಿದ್ದಕ್ಕಾಗಿ ಜಾಮೀನು ರಹಿತ ವಾರಂಟ್‌ಗಳನ್ನು ಹೊರಡಿಸಲಾಗಿದೆ.

ರಾಜ್ಯ v/s ವಿಪ್ತಿ ರಾಮ್ ಮತ್ತು ಇತರರು ಎಂಬ ಶೀರ್ಷಿಕೆಯ ಈ ಪ್ರಕರಣವು ಜೂನ್ 21–22, 1990 ರಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದೆ. ಪನ್ವಾರಿಯಲ್ಲಿ ತನ್ನ ಮದುವೆ ಮೆರವಣಿಗೆಯಲ್ಲಿ ದಲಿತ ವರನೊಬ್ಬ ಕುದುರೆ ಸವಾರಿ ಮಾಡಿದ್ದು ಇದಕ್ಕೆ ಕಾರಣವಾಗಿತ್ತು. ದಲಿತರ ಕುದುರೆ ಮೆರವಣಿಗೆಗೆ ಜಾಟ್ ಜಾತಿ ಜನರು ಆಕ್ಷೇಪ ವ್ಯಕ್ತಪಡಿಸಿದ್ದರು. ನಂತರ ನಡೆದ ವಾಗ್ವಾದ, ಮರುದಿನ ನಡೆದ ಎರಡೂ ಕಡೆಯವರು ಗುಂಡಿನ ಚಕಮಕಿಯಲ್ಲಿ 50 ವರ್ಷದ ಸೋನಿ ರಾಮ್ ಜಾಟ್ ಸಾವನ್ನಪ್ಪಿದರು. ಇದರ ಪರಿಣಾಮವಾಗಿ ಹಲವಾರು ದಲಿತ ಮನೆಗಳನ್ನು ಸುಟ್ಟುಹಾಕಲಾಯಿತು. ಜೂನ್ 22 ರ ಮಧ್ಯಾಹ್ನದ ವೇಳೆಗೆ, ಹಿಂಸಾಚಾರವು ಅಕೋಲಾ ಮತ್ತು ಹತ್ತಿರದ ಇತರ ಹಳ್ಳಿಗಳಿಗೆ ಹರಡಿತು, ಅಲ್ಲಿ ದಲಿತರ ಮೇಲೆ ಹೆಚ್ಚಿನ ದಾಳಿಗಳು ವರದಿಯಾಗಿವೆ.

ಹಿಂಸಾಚಾರವು ಪ್ರಾಂತೀಯ ಸಶಸ್ತ್ರ ಕಾನ್‌ಸ್ಟಾಬ್ಯುಲರಿ ಮತ್ತು ಪೊಲೀಸ್ ಪಡೆಗಳ ಭಾರೀ ನಿಯೋಜನೆಗೆ ಕಾರಣವಾಯಿತು. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಒಂದು ತಿಂಗಳ ಕಾಲ ಕರ್ಫ್ಯೂ ವಿಧಿಸಲಾಯಿತು. ಹಿಂಸಾಚಾರದ ನಂತರ ಆಗಿನ ಕಾಂಗ್ರೆಸ್ ನಾಯಕ ಮತ್ತು ಮಾಜಿ ಪ್ರಧಾನಿ ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಅವರೊಂದಿಗೆ ಪನ್ವಾರಿ ಗ್ರಾಮಕ್ಕೆ ಭೇಟಿ ನೀಡಿದ್ದರು.

ಕಾಗರೋಲ್ ಪೊಲೀಸ್ ಠಾಣೆಯಲ್ಲಿ ಆಗಿನ ಪೊಲೀಸ್ ಅಧಿಕಾರಿ ಓಂವೀರ್ ಸಿಂಗ್ ರಾಣಾ ಪ್ರಕರಣ ದಾಖಲಿಸಿದ್ದರು. ಐಪಿಸಿ ಸೆಕ್ಷನ್ 148 (ಮಾರಕ ಆಯುಧಗಳಿಂದ ಗಲಭೆ), 149 (ಕಾನೂನುಬಾಹಿರ ಸಭೆ), 323 (ಸ್ವಯಂಪ್ರೇರಣೆಯಿಂದ ನೋವುಂಟುಮಾಡುವುದು), 144 (ಆಯುಧದೊಂದಿಗೆ ಕಾನೂನುಬಾಹಿರ ಸಭೆ ಸೇರುವುದು), 325 (ತೀವ್ರ ಗಾಯ ಉಂಟುಮಾಡುವುದು), ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್ 3/2/5 ರ ಅಡಿಯಲ್ಲಿ ಆರೋಪ ಹೊರಿಸಲಾಯಿತು.

ಹೆಚ್ಚುವರಿ ಜಿಲ್ಲಾ ಸರ್ಕಾರಿ ವಕೀಲ ಹೇಮಂತ್ ದೀಕ್ಷಿತ್, “ಅಕೋಲಾದಲ್ಲಿ ಕನಿಷ್ಠ 200–250 ಜನರು ಸ್ಥಳದಲ್ಲಿದ್ದರು. ಪ್ರಕರಣದಲ್ಲಿ ಒಟ್ಟು 72 ಜನರನ್ನು ಹೆಸರಿಸಲಾಯಿತು, ವಿಚಾರಣೆಯ ಸಮಯದಲ್ಲಿ 31 ಪ್ರಾಸಿಕ್ಯೂಷನ್ ಸಾಕ್ಷಿಗಳನ್ನು ವಿಚಾರಣೆ ನಡೆಸಲಾಯಿತು” ಎಂದು ಹೇಳಿದರು.

ಶುಕ್ರವಾರದ ವಿಚಾರಣೆಯ ಸಮಯದಲ್ಲಿ, ಪ್ರತಿವಾದಿಯ ಕಡೆಯವರು ದಾಳಿಕೋರರ ಪರವಾಗಿ ವಾದಿಸಿದರು. ಶಿಕ್ಷೆಗೊಳಗಾದ ಪುರುಷರು ಈಗ 80 ರಿಂದ 85 ವರ್ಷ ವಯಸ್ಸಿನವರು, ಕೃಷಿ ಹಿನ್ನೆಲೆಯಿಂದ ಬಂದವರು, ಯಾವುದೇ ಹಿಂದಿನ ಕ್ರಿಮಿನಲ್ ದಾಖಲೆಯನ್ನು ಹೊಂದಿಲ್ಲ ಎಂದು ಹೇಳಿದರು. ಪ್ರಮುಖ ಸಾಕ್ಷಿಗಳು ಪ್ರತಿಕೂಲ ಪ್ರತಿಕ್ರಿಯೆ ತೋರಿದ ನಂತರ ಮತ್ತು ಮೂಲ ಪ್ರಕರಣದ ಡೈರಿ ಕಾಣೆಯಾದ ನಂತರ 2022 ರಲ್ಲಿ ಬಿಜೆಪಿ ಶಾಸಕ ಚೌಧರಿ ಬಾಬು ಲಾಲ್ ಮತ್ತು ಇತರ ಏಳು ಜನರನ್ನು ಖುಲಾಸೆಗೊಳಿಸಲಾಯಿತು.

“ಘಟನೆಯ ಸಮಯದಲ್ಲಿ ಎಲ್ಲಾ ಆರೋಪಿಗಳು ಚಿಕ್ಕವರಾಗಿದ್ದರು. ಅಕೋಲಾದಲ್ಲಿ ನಡೆದ ಹಿಂಸಾಚಾರ ಎಷ್ಟು ಕ್ರೂರವಾಗಿತ್ತೆಂದರೆ ಅದು ದಲಿತ ಕುಟುಂಬಗಳ ಸಾಮೂಹಿಕ ವಲಸೆಗೆ ಕಾರಣವಾಯಿತು. ಆದ್ದರಿಂದ, ನಾವು ಗರಿಷ್ಠ ಶಿಕ್ಷೆಯನ್ನು ಕೋರಿದ್ದೇವೆ” ಎಂದು ದೀಕ್ಷಿತ್ ಪ್ರತಿವಾದಿಯ ವಾದಗಳನ್ನು ವಿರೋಧಿಸಿದರು.

ಈ ಮಧ್ಯೆ, ಅಪರಾಧಿಗಳು ತೀರ್ಪಿನ ವಿರುದ್ಧ ಅಲಹಾಬಾದ್ ಹೈಕೋರ್ಟ್‌ಗೆ ಹೋಗಲು ಯೋಜಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. “ಘಟನೆಯ ನಂತರ ಸರಿಯಾದ ತನಿಖೆ ನಡೆದಿಲ್ಲ. ಈಗ ಪರಿಸ್ಥಿತಿ ಶಾಂತಿಯುತವಾಗಿದೆ, ಊರು ತೊರೆದ ದಲಿತ ಕುಟುಂಬಗಳು ಹಿಂತಿರುಗಿದ್ದಾರೆ, ಮನೆಗಳನ್ನು ನಿರ್ಮಿಸಿದ್ದಾರೆ. ನಾವು ಇಂದು ಸಾಮರಸ್ಯದಿಂದ ಬದುಕುತ್ತಿದ್ದೇವೆ” ಎಂದು ಅಪರಾಧಿಗಳಲ್ಲಿ ಒಬ್ಬರ ಸಹಚರರು ಹೇಳಿದರು.

ಬೆಂಗಳೂರು| ರಾತ್ರೋರಾತ್ರಿ ದಲಿತರ ಮನೆ, ದೇವಸ್ಥಾನ ಧ್ವಂಸ ಆರೋಪ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...