Homeಮುಖಪುಟಛತ್ತೀಸ್‌ಗಢ| ಪಾದ್ರಿ ಜೋಸ್ ಥಾಮಸ್ ಕುಟುಂಬದ ಮೇಲೆ ಹಿಂದುತ್ವ ಗುಂಪಿನಿಂದ ಕಿರುಕುಳ

ಛತ್ತೀಸ್‌ಗಢ| ಪಾದ್ರಿ ಜೋಸ್ ಥಾಮಸ್ ಕುಟುಂಬದ ಮೇಲೆ ಹಿಂದುತ್ವ ಗುಂಪಿನಿಂದ ಕಿರುಕುಳ

- Advertisement -
- Advertisement -

ಛತ್ತೀಸ್‌ಗಢದ ಕವರ್ಧಾ ಜಿಲ್ಲೆಯಲ್ಲಿ ವಾಸಿಸುವ ಪಾದ್ರಿ ಜೋಸ್ ಥಾಮಸ್ ಮತ್ತು ಅವರ ಕುಟುಂಬಕ್ಕೆ ಹಿಂದುತ್ವ ಸಂಘಟನೆಗಳಾದ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಸದಸ್ಯರು ನಿರಂತರವಾಗಿ ಕಿರುಕುಳ ನೀಡಿದ್ದು, ಮನೆ ತೊರೆಯುವಂತೆ ಅವರನ್ನು ಒತ್ತಾಯಿಸಲಾಗಿದೆ.

ಮೇ 18 ರಂದು, ಬಜರಂಗದಳ ಮತ್ತು ವಿಎಚ್‌ಪಿ ನಾಯಕರ ನೇತೃತ್ವದ ಗುಂಪೊಂದು ಧಾರ್ಮಿಕ ಮತಾಂತರವನ್ನು ಆರೋಪಿಸಿ ಚರ್ಚ್‌ಗೆ ನುಗ್ಗಿತು. ಅವರು ‘ಜೈ ಶ್ರೀ ರಾಮ್’ ಘೋಷಣೆಗಳನ್ನು ಕೂಗಿ, ಒಳಗೆ ಇದ್ದ ಜನರ ಮೇಲೆ ಹಲ್ಲೆ ನಡೆಸಿದರು. ಅವರಿಗೆ ಹೆದರಿ, ಕೆಲವು ಅಪ್ರಾಪ್ತ ಹುಡುಗಿಯರು ಸ್ನಾನಗೃಹಗಳಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರು. ಆದರೆ, ಅವರರಿಗೂ ಗುಂಪು ಕಿರುಕುಳ ನೀಡಿದೆ ಎಂದು ಆರೋಪಿಸಲಾಗಿದೆ. ಪಾದ್ರಿ ಥಾಮಸ್ ತಮ್ಮ ಇನ್‌ಸ್ಟಾಗ್ರಾಮ್ ಪುಟದಲ್ಲಿ ಹಲ್ಲೆಯ ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದಾರೆ.

ಧಾರ್ಮಿಕ ಮತಾಂತರದ ಆರೋಪಗಳನ್ನು ಪಾದ್ರಿ ಥಾಮಸ್ ನಿರಾಕರಿಸಿದ್ದಾರೆ. ಅವರು ಕಳೆದ ಮೂರು ದಶಕಗಳಿಂದ ಚರ್ಚ್‌ನಲ್ಲಿ ಪೂಜೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಆದರೂ, ದಾಳಿಕೋರರನ್ನು ಬಂಧಿಸುವ ಬದಲು, ಪಾದ್ರಿ ಜೋಸ್ ಥಾಮಸ್ ಅವರನ್ನು ಬಂಧಿಸಲಾಗಿದೆ. ಇದಲ್ಲದೆ, ವೀಡಿಯೊ ಪುರಾವೆಗಳ ಹೊರತಾಗಿಯೂ ದಾಳಿಕೋರರ ವಿರುದ್ಧ ಇಲ್ಲಿಯವರೆಗೆ ಯಾವುದೇ ಎಫ್‌ಐಆರ್ ದಾಖಲಿಸಲಾಗಿಲ್ಲ.

ಪಾದ್ರಿ ಕುಟುಂಬವನ್ನು ದೀರ್ಘಕಾಲದಿಂದ ಗುರಿಯಾಗಿಸಿ ಕಿರುಕುಳ ನೀಡಲಾಗುತ್ತಿದೆ. 2010 ರಲ್ಲಿ, ಪಾದ್ರಿ ಜೋಸ್ ಥಾಮಸ್ ಅವರನ್ನು ‘ಬಲವಂತದ ಮತಾಂತರ’ದ ಆರೋಪದ ಮೇಲೆ ಬಂಧಿಸಿ 10 ದಿನಗಳ ಕಾಲ ಜೈಲಿನಲ್ಲಿರಿಸಲಾಗಿತ್ತು. ಆದರೆ, ನಂತರ ಸ್ಥಳೀಯ ನ್ಯಾಯಾಲಯವು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಅವರನ್ನು ಖುಲಾಸೆಗೊಳಿಸಿತು.

ಕೇರಳದ ಮೂಲದ ಈ ಕುಟುಂಬವು ಕಳೆದ 35 ವರ್ಷಗಳಿಂದ ಛತ್ತೀಸ್‌ಗಢದಲ್ಲಿ ವಾಸಿಸುತ್ತಿದೆ. ಅವರು ಕವರ್ಧಾದಲ್ಲಿ ಹೋಲಿ ಕಿಂಗ್‌ಡಮ್ ಇಂಗ್ಲಿಷ್ ಹೈಯರ್ ಸೆಕೆಂಡರಿ ಶಾಲೆ ಎಂಬ ಶಾಲೆಯನ್ನು ನಡೆಸುತ್ತಿದ್ದಾರೆ. ಜೋಸ್ ಥಾಮಸ್ ತಮ್ಮ ಇನ್‌ಸ್ಟಾಗ್ರಾಮ್ ಪುಟದಲ್ಲಿನ ವೀಡಿಯೊದಲ್ಲಿ, ವೈದ್ಯರು, ಎಂಜಿನಿಯರ್‌ಗಳು, ಚಾರ್ಟರ್ಡ್ ಅಕೌಂಟೆಂಟ್‌ಗಳು ಮತ್ತು ಸಿವಿಲ್ ನ್ಯಾಯಾಧೀಶರಂತಹ ಅನೇಕ ಅರ್ಹ ಜನರು ತಮ್ಮ ಶಾಲೆಯಿಂದ ಪದವಿ ಪಡೆದಿದ್ದಾರೆ ಎಂದು ಹೇಳುತ್ತಾರೆ.

ಶಾಲಾ ಶುಲ್ಕಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ರಾಜಕೀಯ ನಾಯಕರು ಅವರನ್ನು ನಿಯಮಿತವಾಗಿ ಕಿರುಕುಳ ನೀಡುತ್ತಾರೆ. ಶಾಲೆಯನ್ನು ಮುಚ್ಚುವ ಬೆದರಿಕೆಗಳನ್ನು ಎದುರಿಸುತ್ತಾರೆ. ಏಪ್ರಿಲ್ 29 ರಂದು ಜೋಸ್ ಥಾಮಸ್ ಅವರಿಗೆ ಬಿಜೆಪಿ ನಾಯಕ ರಾಜೇಂದ್ರ ಚಂದ್ರವಂಶಿ ಕರೆ ಮಾಡಿ ಸುಶೀಲ್ ಶಿಂಧೆ ಅವರ ಮಕ್ಕಳಿಗೆ ಟಿಸಿ (ವರ್ಗಾವಣೆ ಪ್ರಮಾಣಪತ್ರ) ನೀಡಬೇಕೆಂದು ಒತ್ತಾಯಿಸಿದರು.

ಟಿಸಿ ನೀಡಲು ಯಾವುದೇ ಅರ್ಜಿಯನ್ನು ನೀಡಲಾಗಿಲ್ಲ, ವಿದ್ಯಾರ್ಥಿಗಳು ಎರಡು ವರ್ಷಗಳಿಂದ ಶುಲ್ಕವನ್ನು ಬಾಕಿ ಉಳಿಸಿಕೊಂಡಿದ್ದಾರೆ ಎಂದು ಜೋಸ್ ಥಾಮಸ್ ಮಾಹಿತಿ ನೀಡಿದರು. ನಂತರ, ಪೊಲೀಸ್ ಅಧಿಕಾರಿಯೊಬ್ಬರು ಟಿಸಿ ನೀಡುವಂತೆ ಅವರನ್ನು ಕೇಳಿದರು. ಅವರು ಶುಲ್ಕದ ವಿಷಯವನ್ನು ವಿವರಿಸುವ ಪತ್ರವನ್ನು ಬರೆದು ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಸಲ್ಲಿಸಿದರು.

ನಂತರ ವಿಷಯವು ಉಲ್ಬಣಗೊಂಡಿತು, ಬಲಪಂಥೀಯ ಗುಂಪಿನ ನಾಯಕರು ಕುಟುಂಬಕ್ಕೆ ಕಿರುಕುಳ ನೀಡಲು ಪ್ರಾರಂಭಿಸಿದರು, ಸ್ಥಳೀಯ ಮಾಧ್ಯಮಗಳೊಂದಿಗೆ ಅವರ ‘ಬಲವಂತದ ಮತಾಂತರ’ದ ಕಥೆಯನ್ನು ಹರಡುವುದಾಗಿ ಹೇಳಿದರು. ಒತ್ತಡಕ್ಕೆ ಮಣಿದ ಕುಟುಂಬವು ಅಂತಿಮವಾಗಿ ಟಿಸಿಯನ್ನು ನೀಡಿತು. ಆದರೂ, ಮೇ 18 ರಂದು ಚರ್ಚ್‌ನಲ್ಲಿ ಅವರ ಮೇಲೆ ಇನ್ನೂ ಹಿಂಸಾತ್ಮಕ ದಾಳಿ ನಡೆಯಿತು.

ಜೋಸ್ ಥಾಮಸ್ ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ಕಷ್ಟವನ್ನು ವಿವರಿಸುವ ವೀಡಿಯೊಗಳನ್ನು ಅಪ್‌ಲೋಡ್ ಮಾಡಿದ್ದಾರೆ. ಅವರ ಕುಟುಂಬದ ಮೇಲಿನ ಕಿರುಕುಳವನ್ನು ನಿಲ್ಲಿಸುವಂತೆ ಮನವಿ ಮಾಡಿದ್ದಾರೆ.

ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ; ಮೂರು ದಶಕಗಳ ನಂತರ 32 ಜನರಿಗೆ ಶಿಕ್ಷೆ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...