Homeಮುಖಪುಟಆರೋಗ್ಯ ಸೌಲಭ್ಯಗಳ ಕೊರತೆ: ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಆದಿವಾಸಿ ಮಹಿಳೆ

ಆರೋಗ್ಯ ಸೌಲಭ್ಯಗಳ ಕೊರತೆ: ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಆದಿವಾಸಿ ಮಹಿಳೆ

ಕಲ್ಲಿನಿಂದ ಮಗುವಿನ ಹೊಕ್ಕುಳ ಬಳ್ಳಿ ಕತ್ತರಿಸಿದ ಸ್ಥಳೀಯರು

- Advertisement -
- Advertisement -

ಆರೋಗ್ಯ ಸೌಲಭ್ಯಗಳ ಕೊರತೆಯಿಂದ ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ 24 ವರ್ಷದ ಆದಿವಾಸಿ ಮಹಿಳೆಯೊಬ್ಬರು ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ್ದು, ಮಗುವಿನ ಹೊಕ್ಕುಳ ಬಳ್ಳಿಯನ್ನು ಸ್ಥಳೀಯರು ಕಲ್ಲಿನಿಂದ ಕತ್ತರಿಸಿದ್ದಾರೆ ಎಂದು ಹೇಳಲಾಗ್ತಿದೆ.

ವರದಿಗಳ ಪ್ರಕಾರ, ಮೇ 25 ಶಾಂತಾಬಾಯಿ ಬರೇಲಾ ಎಂಬ 24 ವರ್ಷದ ಮಹಿಳೆಯ ಹೆರಿಗೆ ದಿನಾಂಕ ಆಗಿತ್ತು. ಆದರೆ, ಮೇ 21ರಂದು ಆಕೆಗೆ ಹೊಟ್ಟೆಯಲ್ಲಿ ತೀವ್ರ ನೋವು ಕಾಣಿಸಿಕೊಂಡಿದೆ. ಈ ವೇಳೆ ಗಂಡ ವಿಶ್ವನಾಥ್ ಆಸ್ಪತ್ರೆಗೆ ಕರೆದೊಯ್ಯಲು ಆಂಬ್ಯುಲೆನ್ಸ್‌ಗೆ ಕರೆ ಮಾಡಿದ್ದಾರೆ. ಸುಮಾರು 30 ನಿಮಿಷ ಕಾದರೂ ಆಂಬ್ಯುಲೆನ್ಸ್ ಬಂದಿರಲಿಲ್ಲ. ಹಾಗಾಗಿ, ವಿಶ್ವನಾಥ್ ಹೆಂಡತಿಯನ್ನು ಬೈಕ್‌ನಲ್ಲಿ ಕುಳ್ಳಿರಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇನ್ನೇನು ಆಸ್ಪತ್ರೆ ತಲುಪಲು ಒಂದೂವರೆ ಕಿಲೋ ಮೀಟರ್ ಇರುವಾಗ ಮಹಿಳೆಗೆ ರಸ್ತೆಯಲ್ಲೇ ಹೆರಿಗೆಯಾಗಿದೆ.

ಇದಕ್ಕೆ ಸಂಬಂಧಿಸಿದ್ದು ಎನ್ನಲಾದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅದರಲ್ಲಿ ಮೂರ್ನಾಲ್ಕು ಮಹಿಳೆಯರು ಸೀರೆಯನ್ನು ಅಡ್ಡಲಾಗಿ ಹಿಡಿದು ರಸ್ತೆ ಬದಿಯಲ್ಲಿ ಮಹಿಳೆ ಹೆರಿಗೆ ಮಾಡಿಸಿದ ದೃಶ್ಯವಿದೆ. ಮಹಿಳೆಯ ಗಂಡ ಎನ್ನಲಾದ ವ್ಯಕ್ತಿಯೂ ಅಲ್ಲೇ ನಿಂತಿರುವುದನ್ನು ಕಾಣಬಹುದು.

ಜಲಗಾಂವ್ ಜಿಲ್ಲೆಯ ಚೋಪ್ರಾ ತಾಲೂಕಿನ ಬೋರ್ಮೆ ಗ್ರಾಮದ ಆದಿವಾಸಿ ಮಹಿಳೆಗೆ ರಸ್ತೆಯಲ್ಲಿ ಹೆರಿಗೆಯಾಗಿದೆ. ಈಕೆಯ ಮನೆಯಿಂದ ಸುಮಾರು 55 ಕಿಲೋ ಮೀಟರ್ ದೂರದ ವಿಜಾಪುರ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವಿದೆ. ಅಲ್ಲಿಗೆ ತಲುಪಲು ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿರಲಿಲ್ಲ ಎಂದು ವರದಿಗಳು ಹೇಳಿವೆ.

ಮಹಿಳೆಗೆ ರಸ್ತೆಯಲ್ಲೇ ಹೆರಿಗೆಯಾಗಿದ್ದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಜನರಿಗೆ ಅಗತ್ಯ ಆರೋಗ್ಯ ಸೌಲಭ್ಯಗಳನ್ನು ಒದಗಿಸಿಕೊಡದ ಮಹಾರಾಷ್ಟ್ರದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ವಂಚಿತ್ ಬಹುಜನ ಅಘಾಡಿ ಪಕ್ಷದ ಸಂಸ್ಥಾಪಕ ಪ್ರಕಾಶ್ ಅಂಬೇಡ್ಕರ್ ಈ ಘಟನೆ ಸಂಬಂಧ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

“ಮಹಿಳೆ ರಸ್ತೆಯಲ್ಲೇ ಮಗುವಿನ ಜನ್ಮ ನೀಡಿದ್ದು ಮಾತ್ರವಲ್ಲದೆ, ಮಗುವಿನ ಹೊಕ್ಕುಳ ಬಳ್ಳಿಯನ್ನು ಕಲ್ಲಿನ ಕತ್ತರಿಸಲಾಗಿದೆ. ಇದು ಕೇವಲ ದುರಂತ ಘಟನೆಯಲ್ಲ. ಇದು ದಶಕಗಳ ರಾಜಕೀಯ ವೈಫಲ್ಯದ ಖಂಡನೀಯ ದೋಷಾರೋಪಣೆಯಾಗಿದೆ. ಅಭಿವೃದ್ಧಿಯ ಭವ್ಯ ಭರವಸೆಗಳ ಹೊರತಾಗಿಯೂ, ತಳ ಮಟ್ಟದ ಜನರಿಗೆ ಅತ್ಯಂತ ಮೂಲಭೂತ ಆರೋಗ್ಯ ಸೇವೆಗಳನ್ನು ಒದಗಿಸುವಲ್ಲಿ ಪ್ರಸ್ತುತ ಬಿಜೆಪಿ ನೇತೃತ್ವದ ಸರ್ಕಾರವು ಸಂಪೂರ್ಣವಾಗಿ ವಿಫಲವಾಗಿದೆ” ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದಾರೆ.

“ಬಿಜೆಪಿ, ಶಿವಸೇನೆ, ಕಾಂಗ್ರೆಸ್, ಎನ್‌ಸಿಪಿ ಅಥವಾ ಇತರ ಸರ್ಕಾರಗಳು ಹಿಂದುಳಿದವರ ಆರೋಗ್ಯ ಮೂಲಸೌಕರ್ಯವನ್ನು ವ್ಯವಸ್ಥಿತವಾಗಿ ನಿರ್ಲಕ್ಷಿಸಿವೆ. ಈ ಪಕ್ಷಗಳು ಆಸ್ಪತ್ರೆಗಳ ಬದಲಿಗೆ ಮತ ಬ್ಯಾಂಕುಗಳನ್ನು ನಿರ್ಮಿಸಿಕೊಂಡಿದ್ದಾರೆ. ಉಳಿದಿರುವುದು ದುರ್ಬಲಗೊಂಡ ಮೂಲಸೌಕರ್ಯವಾಗಿದ್ದು, ತಳಮಟ್ಟದ ಜನರಿಗೆ ಹೆಚ್ಚು ಅಗತ್ಯವಿರುವಾಗ ಅದು ಅವರ ಕೈಬಿಡುತ್ತದೆ. ಸರ್ಕಾರಗಳು ಸಾರ್ವಜನಿಕ ಆರೋಗ್ಯವನ್ನು ಹಕ್ಕಲ್ಲ, ಘೋಷಣೆಯಾಗಿ ಪರಿಗಣಿಸಿದಾಗ ಮಾತ್ರ ಇದು ಸಂಭವಿಸುತ್ತದೆ. ಬೆಲೆಯನ್ನು ರಕ್ತದಲ್ಲಿ ಪಾವತಿಸಲಾಗುತ್ತಿದೆ. ಆರೋಗ್ಯ ಉಪಕರಣಗಳು ಇರಬೇಕಾದ ಸ್ಥಳಗಳಲ್ಲಿ ಕಲ್ಲುಗಳಿವೆ” ಎಂದು ಹೇಳಿದ್ದಾರೆ.

ರಸ್ತೆಯಲ್ಲಿ ದಾರಿಹೋಕರು ಮಹಿಳೆಗೆ ಹೆರಿಗೆ ಮಾಡಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರತಿಭಾ ಶಿಂಧೆ ಆರೋಪಿಸಿದ್ದಾರೆ. ಇದನ್ನು ಅಲ್ಲಗಳೆದಿರುವ ಜಿಲ್ಲಾಧಿಕಾರಿ ಆಯುಷ್ ಪ್ರಸಾದ್, ಅಂಗನವಾಡಿ ಕಾರ್ಯಕರ್ತೆ ಮತ್ತು ಸೂಲಗಿತ್ತಿಯೊಬ್ಬರು ಹೆರಿಗೆ ಮಾಡಿಸಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಆಸ್ಪತ್ರೆಗೆ ಬರುವ ಮಾರ್ಗ ಮಧ್ಯೆ ಹೆರಿಗೆ ನೋವು ಹೆಚ್ಚಾದ ಕಾರಣ ತರಬೇತಿ ಪಡೆದ ಸೂಲಗಿತ್ತಿ ಮತ್ತು ಅಂಗನವಾಡಿ ಸಹಾಯಕಿ ಹೆರಿಗೆ ಮಾಡಿಸಿದ್ದಾರೆ. ಹೆರಿಗೆಯಾದ ಬಳಿಕ ಮಹಿಳೆಯನ್ನು ಮತ್ತು ಮಗುವನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆತರಲಾಗಿದೆ ಎಂದು ಹೇಳಿದ್ದಾರೆ.

ಜಿಲ್ಲಾಧಿಕಾರಿಯ ಹೇಳಿಕೆ ಸುಳ್ಳು ಎಂದಿರುವ ಪ್ರತಿಭಾ ಶಿಂಧೆ, “ಯಾವುದೇ ಅಂಗನವಾಡಿ ಸಹಾಯಕಿ ಅಥವಾ ಸೂಲಗಿತ್ತಿ ಸ್ಥಳದಲ್ಲಿ ಇರಲಿಲ್ಲ. ಆಸ್ಪತ್ರೆಯಿಂದ ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿರಲಿಲ್ಲ. ಹಾಗಾಗಿ ಮಹಿಳೆಯ ಪತಿ ಬೈಕ್ಸ್‌ನಲ್ಲಿ ಆಕೆಯನ್ನು ಕರೆದೊಯ್ಯಲು ಮುಂದಾಗಿದ್ದರು. ಈ ವೇಳೆ ಮಾರ್ಗ ಮಧ್ಯ ಹೆರಿಗೆಯಾಗಿದೆ. ಸ್ಥಳೀಯ ಮಹಿಳೆಯರು ಮಹಿಳೆಯರ ನೆರವಿಗೆ ಬಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಘಟನೆಯು ಜಿಲ್ಲೆಯ ಸಾರ್ವಜನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಯಲ್ಲಿನ ಗಂಭೀರ ಕೊರೆತೆಯನ್ನು ತೋರಿಸುತ್ತದೆ ಎಂದಿರುವ ಶಿಂಧೆ, ಜಲಗಾಂವ್ ಜಿಲ್ಲೆಯಿಂದ ಮೂವರು ಮಂತ್ರಿಗಳಿದ್ದರೂ ಇಂತಹ ಅವ್ಯವಸ್ಥೆ ಇರುವುದು ದುರಂತ ಎಂದು ಕಿಡಿಕಾರಿದ್ದಾರೆ.

ಪ್ರಕರಣದ ಬಗ್ಗೆ ಜಿಲ್ಲಾ ಆರೋಗ್ಯ ಅಧಿಕಾರಿ ಮತ್ತು ಸಿವಿಲ್ ಸರ್ಜನ್ ಮೂಲಕ ತನಿಖೆಗೆ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಸಾದ್ ತಿಳಿಸಿದ್ದಾರೆ.

ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ; ಮೂರು ದಶಕಗಳ ನಂತರ 32 ಜನರಿಗೆ ಶಿಕ್ಷೆ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...