Homeಮುಖಪುಟಮುಸ್ಲಿಮರು ಜಿಮ್‌ನಲ್ಲಿ ತರಬೇತಿ ನೀಡುವಂತಿಲ್ಲ, ಪಡೆಯುವಂತಿಲ್ಲ: ಭೋಪಾಲ್ ಪೊಲೀಸ್ ಅಧಿಕಾರಿ

ಮುಸ್ಲಿಮರು ಜಿಮ್‌ನಲ್ಲಿ ತರಬೇತಿ ನೀಡುವಂತಿಲ್ಲ, ಪಡೆಯುವಂತಿಲ್ಲ: ಭೋಪಾಲ್ ಪೊಲೀಸ್ ಅಧಿಕಾರಿ

- Advertisement -
- Advertisement -

ಮುಸ್ಲಿಂ ಜಿಮ್ ಟ್ರೈನರ್‌ ಮತ್ತು ತರಬೇತಿ ಪಡೆಯುವವರು ಜಿಮ್‌ಗೆ ಪ್ರವೇಶಿಸುವುದನ್ನು ನಿಷೇಧಿಸುವಂತೆ ಮಧ್ಯಪ್ರದೇಶದ ಭೋಪಾಲ್‌ನ ಸಬ್ ಇನ್ಸ್‌ಪೆಕ್ಟರೊಬ್ಬರು ಜಿಮ್‌ ಮಾಲಿಕರಿಗೆ ಸೂಚಿಸುತ್ತಿರುವ ವಿಡಿಯೊ ವೈರಲ್ ಆಗಿದ್ದು ದೇಶದಾದ್ಯಂತ ಆಕ್ರೋಶ ವ್ಯಕ್ತಪವಾಗಿದೆ. ಭಜರಂಗದಳದ ದುಷ್ಕರ್ಮಿಗಳು ಅಯೋಧ್ಯಾ ನಗರ ಪ್ರದೇಶದ ಜಿಮ್‌ಗೆ ಭೇಟಿ ನೀಡಿ, ಜಿಮ್ ಆಪರೇಟರ್‌ನಿಂದ ಮುಸ್ಲಿಂ ಟ್ರೈನರ್‌ಗಳ ವಿವರಗಳನ್ನು ಕೇಳಿದಾಗ ಈ ಘಟನೆ ನಡೆದಿ ಎಂದು ವರದಿಯಾಗಿದೆ. ಮುಸ್ಲಿಮರು ಜಿಮ್‌ನಲ್ಲಿ

ಭೋಪಾಲ್‌ನಲ್ಲಿ ಜಿಮ್ ಮಾಲೀಕರೊಂದಿಗಿನ ಸಂವಾದದ ಸಂದರ್ಭದಲ್ಲಿ ಸಬ್ ಇನ್ಸ್‌ಪೆಕ್ಟರ್ ದಿನೇಶ್ ಶರ್ಮಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರು ಈ ವಿಡಿಯೋದಲ್ಲಿ ಮುಸ್ಲಿಂ ಟ್ರೈನರ್‌ ಮತ್ತು ತರಬೇತಿ ಪಡೆಯುವವರು ಜಿಮ್‌ಗೆ ಪ್ರವೇಶಿಸುವುದನ್ನು ನಿಷೇಧಿಸುವಂತೆ ಮಾಲೀಕರಿಗೆ ಸೂಚಿಸುತ್ತಿರುವುದು ಕೇಳಿಬರುತ್ತಿದೆ. 3–4 ದಿನಗಳ ಹಿಂದೆ ಈ ನಡೆದಿದೆ ಎಂದು ಹೇಳಲಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಸಾರ್ವಜನಿಕರ ಗಮನ ಸೆಳೆಯಿತು.

“ಯಾವುದೇ ಮುಸ್ಲಿಂ ಇಲ್ಲಿ ತರಬೇತಿ ನೀಡಲು ಅಥವಾ ಪಡೆಯಲು ಬರುವಂತಿಲ್ಲ. ನಾನು ಅದನ್ನು ನಿಮಗೆ ಸ್ಪಷ್ಟಪಡಿಸಿದ್ದೇನೆ” ಎಂದು ಪೊಲೀಸ್ ಅಧಿಕಾರಿ ಹೇಳುವುದು ವಿಡಿಯೊದಲ್ಲಿ ದಾಖಲಾಗಿದೆ. ವಿಡಿಯೋ ವೈರಲ್ ಆದ ನಂತರ ಹಿರಿಯ ಪೊಲೀಸ್ ಅಧಿಕಾರಿಗಳು ಈ ವಿಷಯವನ್ನು ಗಮನದಲ್ಲಿಟ್ಟುಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ಆಜ್ ತಕ್ ವರದಿ ಮಾಡಿದೆ.

ಭೋಪಾಲ್ ಪೊಲೀಸರ ಹೇಳಿಕೆಗೆ ಬಿಜೆಪಿ ಬೆಂಬಲ ನೀಡಿದ್ದು, ಆದರೆ ಕಾಂಗ್ರೆಸ್ ಇದನ್ನು ವಿರೋಧಿಸಿ, ಜಿಮ್ ತೆರೆಯುವುದು, ತರಬೇತಿ ನೀಡುವುದು ಅಪರಾಧವಲ್ಲ ಎಂದು ಹೇಳಿದೆ.

ಭೋಪಾಲ್‌ನ ಬಿಜೆಪಿ ಸಂಸದ ಅಲೋಕ್ ಶರ್ಮಾ ಪೊಲೀಸರನ್ನು ಬೆಂಬಲಿಸಿ ಹೇಳಿಕೆ ನೀಡಿದ್ದು, ಮುಸ್ಲಿಂ ಜಿಮ್ ಟ್ರೈನರ್‌ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದ್ದು, ಭೋಪಾಲ್‌ನಲ್ಲಿ ಟ್ರೈನರ್‌ಗಳ ಪಟ್ಟಿಯನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ. ಮಹಿಳಾ ಗ್ರಾಹಕರಿಗೆ ಮಹಿಳಾ ತರಬೇತುದಾರರನ್ನು ಮಾತ್ರ ನಿಯೋಜಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

“ಇಂದೋರ್‌ನಲ್ಲಿ ಸರಿಯಾದ ಕ್ರಮಗಳನ್ನು ತೆಗೆದುಕೊಂಡಂತೆ, ಈಗ ನಾವು ಭೋಪಾಲ್‌ನಲ್ಲಿ ಮಾಹಿತಿಯನ್ನು ಸಂಗ್ರಹಿಸುತ್ತಿದ್ದೇವೆ ಮತ್ತು ಶೀಘ್ರದಲ್ಲೇ ಜಿಮ್ ಟ್ರೈನರ್‌ಗಳ ಪಟ್ಟಿಯನ್ನು ಪೊಲೀಸರಿಗೆ ಹಸ್ತಾಂತರಿಸುತ್ತೇವೆ. ಸರ್ಕಾರ ಕಾನೂನಿನ ಪ್ರಕಾರ ಕಾರ್ಯನಿರ್ವಹಿಸುತ್ತದೆ, ಆದರೆ ನಾವು ಕೂಡ ನಮ್ಮ ಜವಾಬ್ದಾರಿಗಳನ್ನು ಪೂರೈಸುತ್ತೇವೆ. ಯಾರಿಗೂ ಲವ್ ಜಿಹಾದ್ ಮಾಡಲು ಸ್ವಾತಂತ್ರ್ಯ ನೀಡಲಾಗುವುದಿಲ್ಲ. ಇಲ್ಲಿ ಭೂ ಜಿಹಾದ್ ಕೂಡ ನಡೆಯುತ್ತಿದೆ.” ಎಂದು ಅಲೋಕ್ ಶರ್ಮಾ ಹೇಳಿದ್ದಾರೆ.

ಭೋಪಾಲ್ ಕೇವಲ ನವಾಬರ ಅಥವಾ ಯಾವುದೇ ಒಂದು ಸಮುದಾಯದ ನಗರವಲ್ಲ ಎಂದು ಅವರು ಮತ್ತಷ್ಟು ಪ್ರತಿಪಾದಿಸಿದ್ದಾರೆ. “ಇದು ಚಕ್ರವರ್ತಿ ಅಶೋಕ, ಚಂದ್ರಗುಪ್ತ ಮೌರ್ಯ, ಪರ್ಮಾರ್ ರಾಜವಂಶ ಮತ್ತು ರಾಣಿ ಕಮಲಪತಿಯ ನಾಡು. ಒಬೈದಿಯಾ ಶಾಲೆ, ರಶೀದಿಯಾ ಶಾಲೆ, ಸುಲ್ತಾನಿಯಾ ಜನಾನಾ ಆಸ್ಪತ್ರೆ ಮತ್ತು ಹಮೀದಿಯಾ ಆಸ್ಪತ್ರೆಯಂತಹ ಸಂಸ್ಥೆಗಳಿಗೆ ಭಾರತೀಯ ಐತಿಹಾಸಿಕ ವ್ಯಕ್ತಿಗಳ ಹೆಸರನ್ನು ಇಡಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

“ಭೋಪಾಲ್‌ನಾದ್ಯಂತ ಒಂದೇ ಕಾನೂನು ಅನ್ವಯಿಸಬೇಕು. ಯಾರೂ ಪಾಕಿಸ್ತಾನದಲ್ಲಿಲ್ಲ; ಎಲ್ಲರೂ ಭಾರತದಲ್ಲಿದ್ದಾರೆ – ಅದು ಖಾಜಿ ಕ್ಯಾಂಪ್ ಆಗಿರಲಿ ಅಥವಾ ಯಾವುದೇ ಇತರ ಪ್ರದೇಶವಾಗಲಿ.” ಎಂದು ಅವರು ಸ್ಥಳೀಯ ಆಡಳಿತವನ್ನು ಟೀಕಿಸಿದ್ದಾರೆ. ಕಲೆಕ್ಟರ್, ಪೊಲೀಸ್ ಆಯುಕ್ತರು, ಹೆಚ್ಚುವರಿ ಎಸ್‌ಪಿ ಮತ್ತು ಎಸ್‌ಡಿಎಂ ಸೇರಿದಂತೆ ಅಧಿಕಾರಿಗಳು ತಮ್ಮ ಕಚೇರಿಗಳಿಂದ ಹೊರಬಂದು ಕ್ಷೇತ್ರದಲ್ಲಿ ಹೆಚ್ಚು ಸಕ್ರಿಯರಾಗಬೇಕೆಂದು ಅವರು ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಆರಿಫ್ ಮಸೂದ್ ಸಂಸದರ ಹೇಳಿಕೆಗಳನ್ನು ಟೀಕಿಸಿದ್ದಾರೆ. “ಜಿಮ್ ತೆರೆಯುವುದು ಅಥವಾ ತರಬೇತಿ ನೀಡುವುದು ಅಪರಾಧವಲ್ಲ. ಯಾರಾದರೂ ತರಬೇತಿ ಪಡೆದಿದ್ದರೆ, ಅವರು ತರಬೇತಿ ನೀಡುತ್ತಾರೆ. ಯಾವುದೇ ಅನುಮಾನವಿದ್ದರೆ, ಅದನ್ನು ತನಿಖೆ ಮಾಡಿ. ಜನರು ತಮ್ಮ ಜಿಮ್‌ಗಳು ಮತ್ತು ತರಬೇತುದಾರರನ್ನು ಆಯ್ಕೆ ಮಾಡುತ್ತಾರೆಯೆ ಹೊರತು ಸಂಸದರು ಅಥವಾ ಶಾಸಕರಲ್ಲ” ಎಂದು ಅವರು ಹೇಳಿದ್ದಾರೆ.

“ಅವರು ಭೋಪಾಲ್‌ನ ಸಂಸದರು, ಭೋಪಾಲ್ ನಿವಾಸಿ ಮತ್ತು ನಮ್ಮ ಸ್ನೇಹಿತ. ಅವರಿಗೆ ವಹಿಸಲಾಗಿರುವ ಪ್ರಮುಖ ಅಭಿವೃದ್ಧಿ ಕಾರ್ಯಗಳಲ್ಲಿ ಅವರು ಕೆಲಸ ಮಾಡಬೇಕು” ಎಂದು ಶಾಸಕ ಮಸೂದ್ ಅವರು ಶರ್ಮಾ ಅವರಿಗೆ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೋದಿ ಸಂಪುಟಕ್ಕೆ ರಾಜೀನಾಮೆ ಘೋಷಿಸಲಿರುವ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್; ಕಾರಣವೇನು ಗೊತ್ತೆ!

ಮೋದಿ ಸಂಪುಟಕ್ಕೆ ರಾಜೀನಾಮೆ ಘೋಷಿಸಲಿರುವ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್; ಕಾರಣವೇನು ಗೊತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...