Homeಮುಖಪುಟಅಣ್ಣಾ ವಿಶ್ವವಿದ್ಯಾಲಯ ಲೈಂಗಿಕ ದೌರ್ಜನ್ಯ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಅಣ್ಣಾ ವಿಶ್ವವಿದ್ಯಾಲಯ ಲೈಂಗಿಕ ದೌರ್ಜನ್ಯ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

- Advertisement -
- Advertisement -

ತಮಿಳುನಾಡಿನ ಪ್ರತಿಷ್ಠಿತ ಅಣ್ಣಾ ವಿಶ್ವ ವಿದ್ಯಾಲಯದ ಲೈಂಗಿಕ ದೌರ್ಜನ್ಯ ಪ್ರಕರಣದ ಏಕೈಕ ಅಪರಾಧಿ 37 ವರ್ಷದ ಜ್ಞಾನಶೇಖರನ್‌ಗೆ ಚೆನ್ನೈನ ಮಹಿಳಾ ನ್ಯಾಯಾಲಯ ಸೋಮವಾರ (ಜೂ.2) 30 ವರ್ಷಗಳ ವಿನಾಯಿತಿ ಇಲ್ಲ ಜೀವಾವಧಿ ಶಿಕ್ಷೆ ವಿಧಿಸಿದೆ.

ಕಳೆದ ವಾರ, ನ್ಯಾಯಾಲಯವು ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 64(1) (ಅತ್ಯಾಚಾರ) ಸೇರಿದಂತೆ 11 ನಿಬಂಧನೆಗಳ ಅಡಿಯಲ್ಲಿ ಜ್ಞಾನಶೇಖರನ್‌ ದೋಷಿ ಎಂದು ಘೋಷಿಸಿತ್ತು. ಇಂದು (ಸೋಮವಾರ) ಶಿಕ್ಷೆ ಪ್ರಮಾಣ ಘೋಷಿಸುವುದಾಗಿ ತಿಳಿಸಿತ್ತು.

ಸೋಮವಾರ ಪುಳಲ್‌ನ ಕೇಂದ್ರ ಕಾರಾಗೃಹದಿಂದ ಪೊಲೀಸ್ ವ್ಯಾನ್‌ನಲ್ಲಿ ಜ್ಞಾನಶೇಖರನ್‌ ಅವರನ್ನು ನ್ಯಾಯಾಲಯದ ಆವರಣಕ್ಕೆ ಬಿಗಿ ಭದ್ರತೆಯ ನಡುವೆ ಕರೆತರಲಾಗಿತ್ತು. ವಿಚಾರಣಾ ನ್ಯಾಯಾಲಯದ (ಮಹಿಳಾ ನ್ಯಾಯಾಲಯ) ನ್ಯಾಯಾಧೀಶೆ ಎಂ. ರಾಜಲಕ್ಷ್ಮಿ ಅವರ ಮುಂದೆ ಅವರನ್ನು ಹಾಜರುಪಡಿಸಲಾಗಿತ್ತು.

ಶಿಕ್ಷೆಯನ್ನು ಓದಿದ ನ್ಯಾಯಾಧೀಶರು, “ಬಿಎನ್‌ಎಸ್‌ನ ಸೆಕ್ಷನ್ 64(1) ರ ಅಡಿಯಲ್ಲಿನ ಅಪರಾಧಕ್ಕಾಗಿ ನಿಮಗೆ ಕನಿಷ್ಠ 30 ವರ್ಷಗಳ ಅವಧಿಗೆ ವಿನಾಯಿತಿ ಇಲ್ಲದ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತಿದೆ. ಅಲ್ಲದೆ, ಈ ಸೆಕ್ಷನ್ ಅಡಿಯಲ್ಲಿ 25,000 ರೂಪಾಯಿ ದಂಡವನ್ನು ವಿಧಿಸಲಾಗುತ್ತಿದೆ. ನೀವು ದಂಡವನ್ನು ಪಾವತಿಸಲು ವಿಫಲವಾದರೆ, ಹೆಚ್ಚುವರಿಯಾಗಿ ಮೂರು ತಿಂಗಳ ಕಾಲ ಸರಳ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ” ಎಂದು ಹೇಳಿದ್ದಾಗಿ ವರದಿಯಾಗಿದೆ.

ಅಪರಾಧ ಸಾಬೀತಾದ ಕಾರಣ ನ್ಯಾಯಾಲಯವು ಒಂದು ತಿಂಗಳಿನಿಂದ 10 ವರ್ಷಗಳವರೆಗೆ ಪ್ರತ್ಯೇಕ ಶಿಕ್ಷೆಯನ್ನು ನೀಡಿದೆ ಮತ್ತು ಬಿಎನ್‌ಎಸ್, ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ತಮಿಳುನಾಡು ಮಹಿಳಾ ಕಿರುಕುಳ ನಿಷೇಧ ಕಾಯ್ದೆಯ 10 ಸೆಕ್ಷನ್‌ಗಳ ಅಡಿಯಲ್ಲಿ ಹೆಚ್ಚಿನ ದಂಡವನ್ನು ವಿಧಿಸಿದೆ. ಎಲ್ಲಾ ಶಿಕ್ಷೆಗಳು ಏಕಕಾಲದಲ್ಲಿ ಜಾರಿಯಲ್ಲಿರುತ್ತವೆ ಮತ್ತು ಜ್ಞಾನಶೇಖರ್‌ಗೆ ಒಟ್ಟು 90,000 ರೂಪಾಯಿ ದಂಡ ವಿಧಿಸಲಾಗಿದೆ.

ಪ್ರಕರಣದ ಸಂತ್ರಸ್ತೆಗೆ ರಾಜ್ಯ ಸರ್ಕಾರ ಪರಿಹಾರ ನೀಡಬೇಕೆಂದು ನ್ಯಾಯಾಧೀಶರು ಆದೇಶಿಸಿದ್ದಾರೆ.

ಏನಿದು ಪ್ರಕರಣ?

ಈ ಪ್ರಕರಣ ಡಿಸೆಂಬರ್ 23, 2024ರಂದು ನಡೆದ ಘಟನೆಗೆ ಸಂಬಂಧಿಸಿದೆ. ಪ್ರಕರಣದ ಸಂತ್ರಸ್ತೆ 19 ವರ್ಷದ ವಿದ್ಯಾರ್ಥಿನಿ ಮತ್ತು ಆಕೆಯ ಸ್ನೇಹಿತ ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಒಟ್ಟಿಗೆ ಕುಳಿತಿದ್ದರು. ಈ ವೇಳೆ ಬಿರಿಯಾನಿ ಅಂಗಡಿ ನಡೆಸುತ್ತಿದ್ದ ಜ್ಞಾನಶೇಖರನ್ ಸಂಜೆ ಕ್ಯಾಂಪಸ್‌ಗೆ ಪ್ರವೇಶಿಸಿ, ಇಬ್ಬರನ್ನು ಬ್ಲ್ಯಾಕ್‌ಮೇಲ್ ಮಾಡಿ, ನಿರ್ಜನ ಸ್ಥಳದಲ್ಲಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಆರೋಪಪಟ್ಟಿಯ ಪ್ರಕಾರ, ಆತ ತನ್ನ ಫೋನ್‌ನಲ್ಲಿ ಕೃತ್ಯದ ವಿಡಿಯೋವನ್ನು ಕೂಡ ಸೆರೆಹಿಡಿದಿದ್ದಾನೆ.

ರಾಜ್ಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದ ಈ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಮದ್ರಾಸ್ ಹೈಕೋರ್ಟ್ ನೇಮಿಸಿದ್ದ ಮಹಿಳಾ ಅಧಿಕಾರಿಗಳನ್ನು ಒಳಗೊಂಡಿದ್ದ ವಿಶೇಷ ತನಿಖಾ ತಂಡ (ಎಸ್‌ಐಟಿ) ನಡೆಸಿತ್ತು. ಏಕೈಕ ಅಪರಾಧಿ ಜ್ಞಾನಶೇಖರ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

ಜ್ಞಾನಶೇಖರನ್ ವಿರುದ್ಧ ಕಾನೂನಿನ 11 ನಿಬಂಧನೆಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಅವುಗಳಲ್ಲಿ ಬಿಎನ್‌ಎಸ್ ಸೆಕ್ಷನ್ 331(6) (ರಾತ್ರಿಯಲ್ಲಿ ಅತಿಕ್ರಮಣ ಮಾಡುವುದು), 126(2) (ಯಾವುದೇ ವ್ಯಕ್ತಿಯನ್ನು ತಪ್ಪಾಗಿ ತಡೆಹಿಡಿಯುವುದು), 140(4) (ವ್ಯಕ್ತಿಯನ್ನು ತೀವ್ರ ನೋಯಿಸುವ ಸಲುವಾಗಿ ಅಪಹರಿಸುವುದು), 75(2) (ಲೈಂಗಿಕ ಕಿರುಕುಳ) 64(1) (ಅತ್ಯಾಚಾರ) ಜೊತೆಗೆ ಬಿಎನ್‌ಎಸ್, ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ತಮಿಳುನಾಡು ಮಹಿಳಾ ಕಿರುಕುಳ ನಿಷೇಧ ಕಾಯ್ದೆಯ ಇತರ ನಿಬಂಧನೆಗಳ ಸೇರಿವೆ.

ಉತ್ತರ ಪ್ರದೇಶ| ಬಿಜೆಪಿ ನಾಯಕಿ ಮಗನ 130 ಅಶ್ಲೀಲ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...