Homeಮುಖಪುಟಮಗುವಿನ ಜನನ ಪ್ರಮಾಣಪತ್ರದಲ್ಲಿ 'ಪೋಷಕರು' ಎಂದು ನಮೋದಿಸಲು ಟ್ರಾನ್ಸ್‌ಜೆಂಡರ್ ಜೋಡಿಗೆ ಕೇರಳ ಹೈಕೋರ್ಟ್ ಅನುಮತಿ

ಮಗುವಿನ ಜನನ ಪ್ರಮಾಣಪತ್ರದಲ್ಲಿ ‘ಪೋಷಕರು’ ಎಂದು ನಮೋದಿಸಲು ಟ್ರಾನ್ಸ್‌ಜೆಂಡರ್ ಜೋಡಿಗೆ ಕೇರಳ ಹೈಕೋರ್ಟ್ ಅನುಮತಿ

- Advertisement -
- Advertisement -

ಮಗುವಿನ ಜನನ ಪ್ರಮಾಣಪತ್ರದಲ್ಲಿ ತಮ್ಮ ಹೆಸರನ್ನು ತಂದೆ-ತಾಯಿ ಬದಲಿಗೆ ‘ಪೋಷಕರು’ ಎಂದು ನಮೋದಿಸಲು ಟ್ರಾನ್ಸ್‌ಜೆಂಡರ್ ಜೋಡಿಗೆ ಕೇರಳ ಹೈಕೋರ್ಟ್ ಸೋಮವಾರ (ಜೂನ್ 2) ಅವಕಾಶ ನೀಡಿದೆ.

ಕೇರಳದಲ್ಲಿ ಮೊದಲ ಬಹಿರಂಗವಾಗಿ ಟ್ರಾನ್ಸ್‌ಜೆಂಡರ್ ದಂಪತಿಗಳಾದ ಟ್ರಾನ್ಸ್‌ಮ್ಯಾನ್ ಝಹಾದ್ (ಹುಟ್ಟಿನಲ್ಲೇ ಹೆಣ್ಣು ಎಂದು ಗೊತ್ತುಪಡಿಸಲಾಗಿದೆ ಆದರೆ ಪುರುಷ ಎಂದು ಗುರುತಿಸಲಾಗಿದೆ) ಮತ್ತು ಟ್ರಾನ್ಸ್‌ವುಮನ್ ಝಿಯಾ ಪಾವಲ್ (ಹುಟ್ಟಿನಲ್ಲೇ ಗಂಡು ಎಂದು ಗೊತ್ತುಪಡಿಸಲಾಗಿದೆ ಆದರೆ ಮಹಿಳೆ ಎಂದು ಗುರುತಿಸಲಾಗಿದೆ) ಅವರ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಝಿಯಾದ್ ರೆಹಮಾನ್ ಎಎ ಆದೇಶ ನೀಡಿದ್ದಾರೆ.

ಫೆಬ್ರವರಿ 2023ರಲ್ಲಿ ಝಹಾದ್ ತಮ್ಮ ಮಗುವಿಗೆ ಜನ್ಮ ನೀಡಿದಾಗ, ಈ ಟ್ರಾನ್ಸ್‌ಜೆಂಡರ್ ಜೋಡಿ ಮಾಧ್ಯಮಗಳ ಗಮನ ಸೆಳೆದಿದ್ದರು.

ಕೋಝಿಕ್ಕೋಡ್ ಪಾಲಿಕೆ ನೋಂದಾಯಿಸಿದ ಮಗುವಿನ ಜನನ ಪ್ರಮಾಣಪತ್ರದಲ್ಲಿ ತಾಯಿಯ ಹೆಸರನ್ನು ಝಹಾದ್ (ಟ್ರಾನ್ಸ್‌ಜೆಂಡರ್) ಮತ್ತು ತಂದೆಯ ಹೆಸರನ್ನು ಝಿಯಾ (ಟ್ರಾನ್ಸ್‌ಜೆಂಡರ್) ಎಂದು ದಾಖಲಿಸಲಾಗಿದೆ.

ಝಹಾದ್ ಮತ್ತು ಝಿಯಾ ತಮ್ಮ ಮಗುವಿನ ಜನನ ಪ್ರಮಾಣಪತ್ರದಲ್ಲಿನ ವಿವರಗಳನ್ನು ಬದಲಾಯಿಸಲು ಮತ್ತು ಅವರಿಬ್ಬರನ್ನೂ ತಾಯಿ ಮತ್ತು ತಂದೆಯ ಬದಲು ಕೇವಲ ‘ಪೋಷಕರು’ ಎಂದು ನಮೋದಿಸಲು ಪಾಲಿಕೆಗೆ ಮನವಿ ಮಾಡಿದ್ದರು.

ಪಾಲಿಕೆ ಅಧಿಕಾರಿಗಳು ಅವರ ಮನವಿಯನ್ನು ತಿರಸ್ಕರಿಸಿದ್ದರು. ಹಾಗಾಗಿ, ಜೋಡಿ ಹೈಕೋರ್ಟ್ ಮೊರೆ ಹೋಗಿದ್ದರು.

ತಮ್ಮ ಮನವಿಯನ್ನು ತಿರಸ್ಕರಿಸಿರುವುದು ನಮ್ಮ ಮಗುವಿನ ಮೂಲಭೂತ ಹಕ್ಕಿನ ನಿರಾಕರಣೆಯಾಗಿದೆ ಎಂದು ಜೋಡಿ ತಮ್ಮ ಅರ್ಜಿಯಲ್ಲಿ ಹೇಳಿದ್ದರು. ಅಲ್ಲದೆ, ಹೊಸ ಪ್ರಮಾಣಪತ್ರದ ನಿರಾಕರಣೆಯು ಮಹತ್ವದ NALSA ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿಗೆ ವಿರುದ್ಧವಾಗಿದೆ ಎಂದಿದ್ದರು.

ಇತರ ಹಲವು ದೇಶಗಳು ದಂಪತಿಗಳಿಗೆ ವಿಶೇಷವಾಗಿ ಸಲಿಂಗ ದಂಪತಿಗಳಿಗೆ ತಮ್ಮ ಮಗುವಿನ ಜನನ ಪ್ರಮಾಣಪತ್ರದಲ್ಲಿ ‘ತಾಯಿ, ತಂದೆ ಮತ್ತು ಪೋಷಕರ’ ನಡುವೆ ತಮ್ಮ ಶೀರ್ಷಿಕೆಯನ್ನು ಆಯ್ಕೆ ಮಾಡಲು ಅವಕಾಶ ನೀಡುತ್ತವೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

ಅರ್ಜಿದಾರರ ಪರ ವಕೀಲರಾದ ಪದ್ಮಾ ಲಕ್ಷ್ಮಿ, ಮರಿಯಮ್ಮ ಎಕೆ, ಇಪ್ಸಿತಾ ಓಜಾಲ್, ಪ್ರಶಾಂತ್ ಪದ್ಮನಾಭನ್, ​​ಮೀನಾಕ್ಷಿ ಕೆಬಿ ಮತ್ತು ಪೂಜಾ ಉನ್ನಿಕೃಷ್ಣನ್ ಅವರು ವಾದ ಮಂಡಿಸಿದ್ದರು.

ಅಣ್ಣಾ ವಿಶ್ವವಿದ್ಯಾಲಯ ಲೈಂಗಿಕ ದೌರ್ಜನ್ಯ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...