Homeಅಂತರಾಷ್ಟ್ರೀಯಜಿ7 ಶೃಂಗಸಭೆ| ಪ್ರಧಾನಿ ಮೋದಿಗೆ ಆಹ್ವಾನ ನೀಡದ ಕೆನಡಾ; ವರದಿ

ಜಿ7 ಶೃಂಗಸಭೆ| ಪ್ರಧಾನಿ ಮೋದಿಗೆ ಆಹ್ವಾನ ನೀಡದ ಕೆನಡಾ; ವರದಿ

- Advertisement -
- Advertisement -

ಕೆನಡಾದಲ್ಲಿ ನಡೆಯಲಿರುವ ಈ ಬಾರಿಯ ಜಿ7 ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇದುವರೆಗೆ ಯಾವುದೇ ಅಧಿಕೃತ ಆಹ್ವಾನ ಬಂದಿಲ್ಲ. ಒಂದು ವೇಳೆ ಬಂದಿದ್ದರೂ ಭಾಗವಹಿಸುತ್ತಿರಲಿಲ್ಲ ಎಂದು ವರದಿಗಳು ಹೇಳಿವೆ.

“ಜೂನ್ 15ರಿಂದ 17ರವರೆಗೆ ಕೆನಡಾಡದ ಆಲ್ಬರ್ಟಾದಲ್ಲಿ ಈ ವರ್ಷದ ಜಿ7 ಶೃಂಗಸಭೆ ನಡೆಯಲಿದೆ. ಕಳೆದ 6 ವರ್ಷಗಳಲ್ಲಿ ಮೊದಲ ಬಾರಿಗೆ ಪ್ರಧಾನಿ ಮೋದಿಗೆ ಆಹ್ವಾನ ಬಂದಿಲ್ಲ. ಒಂದು ವೇಳೆ ಬಂದಿದ್ದರೂ ಖಲಿಸ್ತಾನಿ ವಿಚಾರದಲ್ಲಿ ಭಾರತದ ಕಳವಳಗಳಿಗೆ ಕೆನಡಾ ಸ್ಪಂದಿಸುತ್ತದೆಯೇ? ಎಂದು ಇನ್ನೂ ಖಚಿತವಾಗದ ಕಾರಣ ಮೋದಿ ಭಾಗವಹಿಸುವುತ್ತಿರಲಿಲ್ಲ” ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಮೋದಿ ಅವರನ್ನು ಆಹ್ವಾನಿಸಲಾಗುತ್ತದೆಯೇ ಎಂಬುದನ್ನು ಕೆನಡಾದ ಜಿ7 ವಕ್ತಾರರು ಭಾನುವಾರ ತಡರಾತ್ರಿವರೆಗೆ ದೃಢಪಡಿಸಲಿಲ್ಲ ಎಂದು ವರದಿ ತಿಳಿಸಿದೆ.

ಫ್ರಾನ್ಸ್, ಜರ್ಮನಿ, ಇಟಲಿ, ಯುನೈಟೆಡ್ ಕಿಂಗ್‌ಡಂ (ಯುಕೆ) ಜಪಾನ್, ಯುನೈಟೆಡ್ ಸ್ಟೇಟ್ಸ್ (ಯುಎಸ್‌), ಯುರೋಪಿಯನ್ ಒಕ್ಕೂಟ (ಇಯು), ಐಎಮ್‌ಎಫ್‌, ವಿಶ್ವ ಬ್ಯಾಂಕ್ ಮತ್ತು ವಿಶ್ವಸಂಸ್ಥೆಗಳು ಶೃಂಗಸಭೆಯಲ್ಲಿ ಭಾಗವಹಿಸಲಿವೆ.

ದಕ್ಷಿಣ ಆಫ್ರಿಕಾ, ಉಕ್ರೇನ್ ಮತ್ತು ಆಸ್ಟ್ರೇಲಿಯಾ ಕೂಡ ಕೆನಡಾದಿಂದ ಆಹ್ವಾನಗಳನ್ನು ಸ್ವೀಕರಿಸಿವೆ ಎಂದು ವರದಿಯಾಗಿದ್ದರೂ, ಪ್ರಧಾನಿ ಮೋದಿಯವರ ಭೇಟಿಯ ಬಗ್ಗೆ ಅನಿಶ್ಚಿತತೆ ಮುಂದುವರೆದಿದೆ.

ಕಳೆದ ತಿಂಗಳು, ವಿದೇಶಾಂಗ ಸಚಿವಾಲಯವು ಎರಡು ಸಂದರ್ಭಗಳಲ್ಲಿ, ಜಿ 7 ಶೃಂಗಸಭೆಗಾಗಿ ಪ್ರಧಾನಿ ಮೋದಿ ಕೆನಡಾಕ್ಕೆ ಭೇಟಿ ನೀಡುವ ಬಗ್ಗೆ ‘ಯಾವುದೇ ಮಾಹಿತಿ ಇಲ್ಲ’ ಎಂದು ಹೇಳಿದೆ.

ಈ ನಡುವೆ, ಕೆನಡಾದ ವಿದೇಶಾಂಗ ಸಚಿವೆ ಅಂಕಿತಾ ಆನಂದ್, ಕೆನಡಾದ ಪತ್ರಿಕೆ ದಿ ಗ್ಲೋಬ್ ಅಂಡ್ ಮೇಲ್‌ಗೆ ನೀಡಿದ ಸಂದರ್ಶನದಲ್ಲಿ, ಹೊಸದಾಗಿ ಆಯ್ಕೆಯಾದ ಮಾರ್ಕ್ ಕಾರ್ನಿ ಸರ್ಕಾರವು ಭಾರತದೊಂದಿಗೆ ಸಂಬಂಧ ಸುಧಾರಿಸಲು ಆಸಕ್ತಿ ಹೊಂದಿದೆ ಎಂದು ಹೇಳಿದ್ದಾರೆ.

ಆದರೆ, ಕೆನಡಾ ನೆಲದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಅವರ ಹತ್ಯೆಯು ಎರಡೂ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಹದಗೆಡಿಸಿದೆ ಎಂದು ಅಂಕಿತಾ ಆನಂದ್ ಒಪ್ಪಿಕೊಂಡಿದ್ದಾರೆ.

ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ನರೇಂದ್ರ ಮೋದಿ ಸರ್ಕಾರ ಭಾಗಿಯಾಗಿದೆ ಎಂದು ಕೆನಡಾದ ಮಾಜಿ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ್ದರು. ಟ್ರುಡೊ ಅವರ ಆರೋಪಗಳನ್ನು ಭಾರತ ತಳ್ಳಿಹಾಕಿದೆ. ಆದರೆ, ಈ ವಿಚಾರ ಎರಡೂ ರಾಷ್ಟ್ರಗಳ ಸಂಬಂಧ ಹದೆಗೆಡಿಸಿದೆ.

ಪ್ಯಾಲೆಸ್ತೀನಿಯನ್ನರ ನೆರವು ವಿತರಣಾ ಸ್ಥಳದ ಮೇಲೆ ಇಸ್ರೇಲ್ ದಾಳಿ; ಕನಿಷ್ಠ 30 ಜನ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...