Homeಮುಖಪುಟಮದ್ರಾಸಿ ಕ್ಯಾಂಪ್ ತೆರವುಗೊಳಿಸಿದ ದೆಹಲಿ ಆಡಳಿತ: ನಿರಾಶ್ರಿತರ ಬೆನ್ನಿಗೆ ನಿಂತ ತಮಿಳುನಾಡು ಸರ್ಕಾರ

ಮದ್ರಾಸಿ ಕ್ಯಾಂಪ್ ತೆರವುಗೊಳಿಸಿದ ದೆಹಲಿ ಆಡಳಿತ: ನಿರಾಶ್ರಿತರ ಬೆನ್ನಿಗೆ ನಿಂತ ತಮಿಳುನಾಡು ಸರ್ಕಾರ

- Advertisement -
- Advertisement -

ನವದೆಹಲಿಯ ಜಂಗ್‌ಪುರ ಪ್ರದೇಶದ ಮದ್ರಾಸಿ ಕ್ಯಾಂಪ್‌ನ ಮನೆಗಳನ್ನು ಸರ್ಕಾರ ತೆರವುಗೊಳಿಸಿದ್ದು, ನಿರಾಶ್ರಿತರಾಗಿರುವ ಜನರು ತಮ್ಮ ಮೂಲ ಸ್ಥಳಕ್ಕೆ ಮರಳಲು ಬಯಸುವುದಾದರೆ, ಅವರಿಗೆ ಬೇಕಾದ ವ್ಯವಸ್ಥೆ ಮಾಡಿಕೊಡುವುದಾಗಿ ತಮಿಳುನಾಡು ಸರ್ಕಾರ ಭಾನುವಾರ ತಿಳಿಸಿದೆ.

ನವದೆಹಲಿಯ ಹಝ್ರತ್ ನಿಝಾಮುದ್ದೀನ್ ರೈಲು ನಿಲ್ದಾಣದ ಬಳಿಯ ಜಂಗ್‌ಪುರ ಪ್ರದೇಶದ ಬರಾಪುಲ್ಲಾ ಚರಂಡಿಯ ಬಳಿ ದಶಕಗಳಿಂದ ಮದ್ರಾಸಿ ಕ್ಯಾಂಪ್ ಇತ್ತು. ಇಲ್ಲಿ ಸುಮಾರು 370 ಮನೆಗಳಲ್ಲಿ ತಮಿಳುನಾಡು ಮೂಲದ ಜನರು ವಾಸಿಸುತ್ತಿದ್ದರು.

ದೆಹಲಿ ಹೈಕೋರ್ಟ್ ಆದೇಶದಂತೆ ದೆಹಲಿ ಅಭಿವೃದ್ದಿ ಪ್ರಾಧಿಕಾರ ಭಾನುವಾರ ಇಲ್ಲಿನ ಮನೆಗಳನ್ನು ತೆರವುಗೊಳಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮದ್ರಾಸಿ ಕ್ಯಾಂಪ್‌ನಿಂದಾಗಿ ಬರಾಪುಲ್ಲಾ ಚರಂಡಿ ಮುಚ್ಚಿಹೋಗಿ ನೀರು ಹರಿಯಲು ಜಾಗ ಇಲ್ಲ ಕಾರಣ ಮಳೆಗಾಲದಲ್ಲಿ ಆ ಪ್ರದೇಶ ಜಲಾವೃತ್ತ ಆಗುತ್ತಿತ್ತು. ಹಾಗಾಗಿ, ಕ್ಯಾಂಪ್ ಸ್ಥಳಾಂತರ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿತ್ತು ಎಂದು ವರದಿ ತಿಳಿಸಿದೆ.

ದೆಹಲಿ ಸರ್ಕಾರ ಮನೆಗಳನ್ನು ಧ್ವಂಸಗೊಳಿಸಿದ ಬೆನಲ್ಲೇ, ಸಂತ್ರಸ್ತರ ಜೊತೆ ಇರುವುದಾಗಿ ತಮಿಳುನಾಡು ಸರ್ಕಾರ ಘೋಷಿಸಿದೆ.

ಸಂತ್ರಸ್ತರಿಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಡಲು ನವದೆಹಲಿಯ ತಮಿಳುನಾಡು ಹೌಸ್‌ಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ನಿರ್ದೇಶನ ನೀಡಿದ್ದಾರೆ.

ವರದಿಗಳ ಪ್ರಕಾರ, ಮದ್ರಾಸಿ ಕ್ಯಾಂಪ್‌ ಅನ್ನು ‘ಅನಧಿಕೃತ ಅತಿಕ್ರಮಣ’ ಎಂದು ಹೇಳಿದ್ದ ದೆಹಲಿ ಹೈಕೋರ್ಟ್, ಮೇ 9 ರಂದು ಬರಾಪುಲ್ಲಾ ಚರಂಡಿಯ ಉದ್ದಕ್ಕೂ ಇರುವ ಪ್ರದೇಶವನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು. ಮದ್ರಾಸಿ ಕ್ಯಾಂಪ್ ಮಳೆಗಾಲದಲ್ಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಒಳಚರಂಡಿಯ ನೀರು ಹರಿಯಲು ಅಡ್ಡಿಯಾಗುತ್ತಿದೆ ಎಂದು ಹೇಳಿತ್ತು.

ದೆಹಲಿ ನಗರ ಆಶ್ರಯ ಸುಧಾರಣಾ ಮಂಡಳಿ ಕಾಯ್ದೆ ಮತ್ತು ದೆಹಲಿ ಕೊಳೆಗೇರಿ ಮತ್ತು ಜುಗ್ಗಿ ಝೋಪ್ರಿ ಪುನರ್ವಸತಿ ಮತ್ತು ಸ್ಥಳಾಂತರ ನೀತಿಯ ನಿಬಂಧನೆಗಳ ಅಡಿಯಲ್ಲಿ ಅರ್ಹ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಿ ಸ್ಥಳಾಂತರಿಸಬೇಕೆಂದು ನ್ಯಾಯಾಲಯ ನಿರ್ದೇಶಿಸಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದೆಹಲಿ ನಗರ ಆಶ್ರಯ ಸುಧಾರಣಾ ಮಂಡಳಿಯು ಕ್ಯಾಂಪ್‌ನಲ್ಲಿದ್ದ 370 ಕುಟುಂಬಗಳಲ್ಲಿ ಕೇವಲ 215 ಕುಟುಂಬಗಳಿಗೆ ಮಾತ್ರ ವಸತಿಗೆ ಅರ್ಹರು ಎಂದು ನಿರ್ಧರಿಸಿತ್ತು. ಈ ಕುಟುಂಬಗಳಿಗೆ ಕ್ಯಾಂಪ್‌ನಿಂದ 35 ಕಿ.ಮೀ ದೂರದಲ್ಲಿರುವ ಉತ್ತರದ ಉಪನಗರವಾದ ನರೇಲಾದಲ್ಲಿ ವಸತಿ ವ್ಯವಸ್ಥೆಯನ್ನು ಮಾಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಉಳಿದ 155 ಕುಟುಂಬಗಳು ದಾಖಲೆಗಳು ಅಥವಾ ಅರ್ಹತಾ ಮಾನದಂಡಗಳನ್ನು ಪೂರೈಸುವಲ್ಲಿ ವಿಫಲವಾಗಿವೆ ಎಂದು ವರದಿಯಾಗಿದೆ. ಇದರಿಂದ ಈ ಕುಟುಂಬಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಮದ್ರಾಸಿ ಕ್ಯಾಂಪ್‌ ಅಡುಗೆಯವರು ಮತ್ತು ದಿನಗೂಲಿ ಕಾರ್ಮಿಕರಾಗಿ ಉದ್ಯೋಗ ಅರಸಿ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದ ತಮಿಳು ಮಾತನಾಡುವ ವಲಸಿಗರಿಗೆ ಆಶ್ರಯ ನೀಡಿತ್ತು.

ಕಮಲ್ ಹಾಸನ್ ಭಾಷಾ ವಿವಾದ | ‘ಥಗ್ ಲೈಫ್’ ಬಹಿಷ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...