Homeಮುಖಪುಟಮದ್ರಾಸಿ ಕ್ಯಾಂಪ್ ತೆರವುಗೊಳಿಸಿದ ದೆಹಲಿ ಆಡಳಿತ: ನಿರಾಶ್ರಿತರ ಬೆನ್ನಿಗೆ ನಿಂತ ತಮಿಳುನಾಡು ಸರ್ಕಾರ

ಮದ್ರಾಸಿ ಕ್ಯಾಂಪ್ ತೆರವುಗೊಳಿಸಿದ ದೆಹಲಿ ಆಡಳಿತ: ನಿರಾಶ್ರಿತರ ಬೆನ್ನಿಗೆ ನಿಂತ ತಮಿಳುನಾಡು ಸರ್ಕಾರ

- Advertisement -
- Advertisement -

ನವದೆಹಲಿಯ ಜಂಗ್‌ಪುರ ಪ್ರದೇಶದ ಮದ್ರಾಸಿ ಕ್ಯಾಂಪ್‌ನ ಮನೆಗಳನ್ನು ಸರ್ಕಾರ ತೆರವುಗೊಳಿಸಿದ್ದು, ನಿರಾಶ್ರಿತರಾಗಿರುವ ಜನರು ತಮ್ಮ ಮೂಲ ಸ್ಥಳಕ್ಕೆ ಮರಳಲು ಬಯಸುವುದಾದರೆ, ಅವರಿಗೆ ಬೇಕಾದ ವ್ಯವಸ್ಥೆ ಮಾಡಿಕೊಡುವುದಾಗಿ ತಮಿಳುನಾಡು ಸರ್ಕಾರ ಭಾನುವಾರ ತಿಳಿಸಿದೆ.

ನವದೆಹಲಿಯ ಹಝ್ರತ್ ನಿಝಾಮುದ್ದೀನ್ ರೈಲು ನಿಲ್ದಾಣದ ಬಳಿಯ ಜಂಗ್‌ಪುರ ಪ್ರದೇಶದ ಬರಾಪುಲ್ಲಾ ಚರಂಡಿಯ ಬಳಿ ದಶಕಗಳಿಂದ ಮದ್ರಾಸಿ ಕ್ಯಾಂಪ್ ಇತ್ತು. ಇಲ್ಲಿ ಸುಮಾರು 370 ಮನೆಗಳಲ್ಲಿ ತಮಿಳುನಾಡು ಮೂಲದ ಜನರು ವಾಸಿಸುತ್ತಿದ್ದರು.

ದೆಹಲಿ ಹೈಕೋರ್ಟ್ ಆದೇಶದಂತೆ ದೆಹಲಿ ಅಭಿವೃದ್ದಿ ಪ್ರಾಧಿಕಾರ ಭಾನುವಾರ ಇಲ್ಲಿನ ಮನೆಗಳನ್ನು ತೆರವುಗೊಳಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮದ್ರಾಸಿ ಕ್ಯಾಂಪ್‌ನಿಂದಾಗಿ ಬರಾಪುಲ್ಲಾ ಚರಂಡಿ ಮುಚ್ಚಿಹೋಗಿ ನೀರು ಹರಿಯಲು ಜಾಗ ಇಲ್ಲ ಕಾರಣ ಮಳೆಗಾಲದಲ್ಲಿ ಆ ಪ್ರದೇಶ ಜಲಾವೃತ್ತ ಆಗುತ್ತಿತ್ತು. ಹಾಗಾಗಿ, ಕ್ಯಾಂಪ್ ಸ್ಥಳಾಂತರ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿತ್ತು ಎಂದು ವರದಿ ತಿಳಿಸಿದೆ.

ದೆಹಲಿ ಸರ್ಕಾರ ಮನೆಗಳನ್ನು ಧ್ವಂಸಗೊಳಿಸಿದ ಬೆನಲ್ಲೇ, ಸಂತ್ರಸ್ತರ ಜೊತೆ ಇರುವುದಾಗಿ ತಮಿಳುನಾಡು ಸರ್ಕಾರ ಘೋಷಿಸಿದೆ.

ಸಂತ್ರಸ್ತರಿಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಡಲು ನವದೆಹಲಿಯ ತಮಿಳುನಾಡು ಹೌಸ್‌ಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ನಿರ್ದೇಶನ ನೀಡಿದ್ದಾರೆ.

ವರದಿಗಳ ಪ್ರಕಾರ, ಮದ್ರಾಸಿ ಕ್ಯಾಂಪ್‌ ಅನ್ನು ‘ಅನಧಿಕೃತ ಅತಿಕ್ರಮಣ’ ಎಂದು ಹೇಳಿದ್ದ ದೆಹಲಿ ಹೈಕೋರ್ಟ್, ಮೇ 9 ರಂದು ಬರಾಪುಲ್ಲಾ ಚರಂಡಿಯ ಉದ್ದಕ್ಕೂ ಇರುವ ಪ್ರದೇಶವನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು. ಮದ್ರಾಸಿ ಕ್ಯಾಂಪ್ ಮಳೆಗಾಲದಲ್ಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಒಳಚರಂಡಿಯ ನೀರು ಹರಿಯಲು ಅಡ್ಡಿಯಾಗುತ್ತಿದೆ ಎಂದು ಹೇಳಿತ್ತು.

ದೆಹಲಿ ನಗರ ಆಶ್ರಯ ಸುಧಾರಣಾ ಮಂಡಳಿ ಕಾಯ್ದೆ ಮತ್ತು ದೆಹಲಿ ಕೊಳೆಗೇರಿ ಮತ್ತು ಜುಗ್ಗಿ ಝೋಪ್ರಿ ಪುನರ್ವಸತಿ ಮತ್ತು ಸ್ಥಳಾಂತರ ನೀತಿಯ ನಿಬಂಧನೆಗಳ ಅಡಿಯಲ್ಲಿ ಅರ್ಹ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಿ ಸ್ಥಳಾಂತರಿಸಬೇಕೆಂದು ನ್ಯಾಯಾಲಯ ನಿರ್ದೇಶಿಸಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದೆಹಲಿ ನಗರ ಆಶ್ರಯ ಸುಧಾರಣಾ ಮಂಡಳಿಯು ಕ್ಯಾಂಪ್‌ನಲ್ಲಿದ್ದ 370 ಕುಟುಂಬಗಳಲ್ಲಿ ಕೇವಲ 215 ಕುಟುಂಬಗಳಿಗೆ ಮಾತ್ರ ವಸತಿಗೆ ಅರ್ಹರು ಎಂದು ನಿರ್ಧರಿಸಿತ್ತು. ಈ ಕುಟುಂಬಗಳಿಗೆ ಕ್ಯಾಂಪ್‌ನಿಂದ 35 ಕಿ.ಮೀ ದೂರದಲ್ಲಿರುವ ಉತ್ತರದ ಉಪನಗರವಾದ ನರೇಲಾದಲ್ಲಿ ವಸತಿ ವ್ಯವಸ್ಥೆಯನ್ನು ಮಾಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಉಳಿದ 155 ಕುಟುಂಬಗಳು ದಾಖಲೆಗಳು ಅಥವಾ ಅರ್ಹತಾ ಮಾನದಂಡಗಳನ್ನು ಪೂರೈಸುವಲ್ಲಿ ವಿಫಲವಾಗಿವೆ ಎಂದು ವರದಿಯಾಗಿದೆ. ಇದರಿಂದ ಈ ಕುಟುಂಬಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಮದ್ರಾಸಿ ಕ್ಯಾಂಪ್‌ ಅಡುಗೆಯವರು ಮತ್ತು ದಿನಗೂಲಿ ಕಾರ್ಮಿಕರಾಗಿ ಉದ್ಯೋಗ ಅರಸಿ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದ ತಮಿಳು ಮಾತನಾಡುವ ವಲಸಿಗರಿಗೆ ಆಶ್ರಯ ನೀಡಿತ್ತು.

ಕಮಲ್ ಹಾಸನ್ ಭಾಷಾ ವಿವಾದ | ‘ಥಗ್ ಲೈಫ್’ ಬಹಿಷ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...