Homeಕರ್ನಾಟಕಪ್ರಾಮಾಣಿಕ ಪಶ್ಚಾತಾಪವಿಲ್ಲದ ಬಿಜೆಪಿಗರ ಕ್ಷಮೆ, ಕ್ಷಮೆಯೇ ಅಲ್ಲ; ಹಾನಿ ತಪ್ಪಿಸುವ ರಕ್ಷಣಾತ್ಮಕ ಆಟ: ಸಚಿವ ಪ್ರಿಯಾಂಕ್...

ಪ್ರಾಮಾಣಿಕ ಪಶ್ಚಾತಾಪವಿಲ್ಲದ ಬಿಜೆಪಿಗರ ಕ್ಷಮೆ, ಕ್ಷಮೆಯೇ ಅಲ್ಲ; ಹಾನಿ ತಪ್ಪಿಸುವ ರಕ್ಷಣಾತ್ಮಕ ಆಟ: ಸಚಿವ ಪ್ರಿಯಾಂಕ್ ಖರ್ಗೆ

- Advertisement -
- Advertisement -

ಪ್ರಾಮಾಣಿಕ ಪಶ್ಚಾತಾಪವಿಲ್ಲದೆ ಕೇಳುವ ಬಿಜೆಪಿಗರ ಕ್ಷಮೆ, ಕ್ಷಮೆಯೇ ಅಲ್ಲ, ಎದುರಾದ ಹಾನಿಯಿಂದ ತಪ್ಪಿಸಿಕೊಳ್ಳುವ ರಕ್ಷಣಾತ್ಮಕ ಆಟವಷ್ಟೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ಹೇಳಿದ್ದಾರೆ. ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಕ್ಷಮೆ ಕೇಳಿದ ಪರಿಷತ್ ಸದಸ್ಯ ರವಿಕುಮಾರ್ ಅವರು ಮೆರವಣಿಗೆಯಲ್ಲಿ ಪೊಲೀಸ್ ಠಾಣೆಗೆ ಹೋಗುವ ಬಗ್ಗೆ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ಅವರ ಕ್ಷಮೆ ಕೇವಲ ಬೂಟಾಟಿಕೆಯದ್ದು ಹೊರತು ಮನಃಪೂರ್ವಕವಾದುದಲ್ಲ ಎಂದು ಹೇಳಿದ್ದಾರೆ. ಪ್ರಾಮಾಣಿಕ ಪಶ್ಚಾತಾಪವಿಲ್ಲದ

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ ಅವರು, “ಕ್ಷಮೆ ಕೇಳುವುದರಲ್ಲಿ ಎರಡು ವಿಧ. ನೈಜ ಕ್ಷಮೆ ಮತ್ತು ಬಿಜೆಪಿಗರ ನಕಲಿ ಕ್ಷಮೆ! ನೈಜ ಕ್ಷಮೆಯ ಹಿಂದೆ ಪಶ್ಚಾತಾಪವಿರುತ್ತದೆ, ವಿಚಾರ ಪಕ್ವತೆ ಇರುತ್ತದೆ, ಜಾಗೃತಿ ಇರುತ್ತದೆ, ತಪ್ಪೆಸಗಿದ್ದಕ್ಕೆ ಗಿಲ್ಟ್ ಇರುತ್ತದೆ.

ಆದರೆ, ಬಿಜೆಪಿಯವರ ನಕಲಿ ಕ್ಷಮೆಗೆ ಕಾರಣಗಳೇ ಬೇರೆ, ಬಿಜೆಪಿಗರ ಕ್ಷಮೆಯಲ್ಲಿ ಪಶ್ಚಾತಾಪವಿರುವ ಬದಲು ಅಹಂಕಾರವಿರುತ್ತದೆ, ಅವರ ಕ್ಷಮೆಯ ಹಿಂದೆ ಅವಕಾಶವಾದಿತನ ಇರುತ್ತದೆ ಅಥವಾ ಕಾನೂನಿನ ಭಯವಿರುತ್ತದೆ, ಇಲ್ಲವೇ ಜನಾಕ್ರೋಶದ ಒತ್ತಡ ಇರುತ್ತದೆ ಅಷ್ಟೇ.” ಎಂದು ಅವರು ಹೇಳಿದ್ದಾರೆ.

ಬಿಜೆಪಿಗರದ್ದು ಸ್ವಯಂಪ್ರೇರಣೆಯ, ಜ್ಞಾನೋದಯದ ಕ್ಷಮೆ ಅಲ್ಲವೇ ಅಲ್ಲ. ಬಿಜೆಪಿಗರ ಮನಃಪೂರ್ವಕವಲ್ಲದ ದುರಹಂಕಾರದ ಕ್ಷಮೆಗೆ ಉದಾಹರಣೆ ಹಲವು ಇವೆ ಎಂದು ಅವರು ಹೇಳಿದ್ದಾರೆ.

ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಕ್ಷಮೆ ಕೇಳಿದ ಪರಿಷತ್ ಸದಸ್ಯ ರವಿಕುಮಾರ್ ಅವರು ಘನಂದಾರಿ ಕೆಲಸ ಮಾಡಿದವರಂತೆ ಮೆರವಣಿಗೆಯಲ್ಲಿ ಪೊಲೀಸ್ ಠಾಣೆಗೆ ಹೋಗುತ್ತಾರೆ ಎಂದರೆ ಅವರ ಕ್ಷಮೆ ಕೇವಲ ಬೂಟಾಟಿಕೆಯದ್ದು ಹೊರತು ಮನಃಪೂರ್ವಕವಾದುದಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ನಟ ಪ್ರಕಾಶ್ ರಾಜ್ ಅವರನ್ನು ಅವಹೇಳನ ಮಾಡಿದ್ದ ಪ್ರತಾಪ್ ಸಿಂಹ ಕಾನೂನಿನ ಒತ್ತಡಕ್ಕೆ ಕ್ಷಮೆ ಕೇಳಿದ್ದಾರೆ.
ಸೋಫಿಯಾ ಖುರೇಶಿಯವರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದ ವಿಜಯ್ ಷಾ ಜನಾಕ್ರೋಶಕ್ಕೆ ಕ್ಷಮೆ ಕೇಳಿದ್ದಾರೆ.
ನನಗೆ ನಾಯಿ ಎಂದಿದ್ದ ನಾರಾಯಣಸ್ವಾಮಿಯವರು ಜನಾಕ್ರೋಶದ ಒತ್ತಡಕ್ಕೆ ಕ್ಷಮೆ ಕೇಳಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಿಜೆಪಿಯವರು ಕ್ಷಮೆ ಕೇಳುವುದರಲ್ಲಿ ಸಾವರ್ಕರ್ ಅವರ ಬದ್ಧತೆಯನ್ನಾದರೂ ತೋರಿಸಬೇಕು ಎಂದು ಹೇಳಿರುವ ಅವರು, “ಸಾವರ್ಕರ್ ಮನಃಪೂರ್ವಕವಾಗಿ ಬ್ರಿಟಿಷರ ಕ್ಷಮೆ ಕೇಳಿ, ನಂತರ ಬ್ರಿಟಿಷರ ಜೊತೆ ನಿಂತು ಕೆಲಸ ಮಾಡಿದ್ದ ಅವರ ಪ್ರಾಮಾಣಿಕತೆಯನ್ನು ಅನುಸರಿಸಬೇಕು” ಎಂದು ಹೇಳಿದ್ದಾರೆ. ಪ್ರಾಮಾಣಿಕ ಪಶ್ಚಾತಾಪವಿಲ್ಲದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ನೀವು ಭಾಷಾತಜ್ಞರೋ?’..ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್‌ ಹಾಸನ್‌ಗೆ ಹೈಕೋರ್ಟ್ ತರಾಟೆ

‘ನೀವು ಭಾಷಾತಜ್ಞರೋ?’..ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್‌ ಹಾಸನ್‌ಗೆ ಹೈಕೋರ್ಟ್ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...