Homeಕರ್ನಾಟಕಪ್ರಾಮಾಣಿಕ ಪಶ್ಚಾತಾಪವಿಲ್ಲದ ಬಿಜೆಪಿಗರ ಕ್ಷಮೆ, ಕ್ಷಮೆಯೇ ಅಲ್ಲ; ಹಾನಿ ತಪ್ಪಿಸುವ ರಕ್ಷಣಾತ್ಮಕ ಆಟ: ಸಚಿವ ಪ್ರಿಯಾಂಕ್...

ಪ್ರಾಮಾಣಿಕ ಪಶ್ಚಾತಾಪವಿಲ್ಲದ ಬಿಜೆಪಿಗರ ಕ್ಷಮೆ, ಕ್ಷಮೆಯೇ ಅಲ್ಲ; ಹಾನಿ ತಪ್ಪಿಸುವ ರಕ್ಷಣಾತ್ಮಕ ಆಟ: ಸಚಿವ ಪ್ರಿಯಾಂಕ್ ಖರ್ಗೆ

- Advertisement -
- Advertisement -

ಪ್ರಾಮಾಣಿಕ ಪಶ್ಚಾತಾಪವಿಲ್ಲದೆ ಕೇಳುವ ಬಿಜೆಪಿಗರ ಕ್ಷಮೆ, ಕ್ಷಮೆಯೇ ಅಲ್ಲ, ಎದುರಾದ ಹಾನಿಯಿಂದ ತಪ್ಪಿಸಿಕೊಳ್ಳುವ ರಕ್ಷಣಾತ್ಮಕ ಆಟವಷ್ಟೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ಹೇಳಿದ್ದಾರೆ. ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಕ್ಷಮೆ ಕೇಳಿದ ಪರಿಷತ್ ಸದಸ್ಯ ರವಿಕುಮಾರ್ ಅವರು ಮೆರವಣಿಗೆಯಲ್ಲಿ ಪೊಲೀಸ್ ಠಾಣೆಗೆ ಹೋಗುವ ಬಗ್ಗೆ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ಅವರ ಕ್ಷಮೆ ಕೇವಲ ಬೂಟಾಟಿಕೆಯದ್ದು ಹೊರತು ಮನಃಪೂರ್ವಕವಾದುದಲ್ಲ ಎಂದು ಹೇಳಿದ್ದಾರೆ. ಪ್ರಾಮಾಣಿಕ ಪಶ್ಚಾತಾಪವಿಲ್ಲದ

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ ಅವರು, “ಕ್ಷಮೆ ಕೇಳುವುದರಲ್ಲಿ ಎರಡು ವಿಧ. ನೈಜ ಕ್ಷಮೆ ಮತ್ತು ಬಿಜೆಪಿಗರ ನಕಲಿ ಕ್ಷಮೆ! ನೈಜ ಕ್ಷಮೆಯ ಹಿಂದೆ ಪಶ್ಚಾತಾಪವಿರುತ್ತದೆ, ವಿಚಾರ ಪಕ್ವತೆ ಇರುತ್ತದೆ, ಜಾಗೃತಿ ಇರುತ್ತದೆ, ತಪ್ಪೆಸಗಿದ್ದಕ್ಕೆ ಗಿಲ್ಟ್ ಇರುತ್ತದೆ.

ಆದರೆ, ಬಿಜೆಪಿಯವರ ನಕಲಿ ಕ್ಷಮೆಗೆ ಕಾರಣಗಳೇ ಬೇರೆ, ಬಿಜೆಪಿಗರ ಕ್ಷಮೆಯಲ್ಲಿ ಪಶ್ಚಾತಾಪವಿರುವ ಬದಲು ಅಹಂಕಾರವಿರುತ್ತದೆ, ಅವರ ಕ್ಷಮೆಯ ಹಿಂದೆ ಅವಕಾಶವಾದಿತನ ಇರುತ್ತದೆ ಅಥವಾ ಕಾನೂನಿನ ಭಯವಿರುತ್ತದೆ, ಇಲ್ಲವೇ ಜನಾಕ್ರೋಶದ ಒತ್ತಡ ಇರುತ್ತದೆ ಅಷ್ಟೇ.” ಎಂದು ಅವರು ಹೇಳಿದ್ದಾರೆ.

ಬಿಜೆಪಿಗರದ್ದು ಸ್ವಯಂಪ್ರೇರಣೆಯ, ಜ್ಞಾನೋದಯದ ಕ್ಷಮೆ ಅಲ್ಲವೇ ಅಲ್ಲ. ಬಿಜೆಪಿಗರ ಮನಃಪೂರ್ವಕವಲ್ಲದ ದುರಹಂಕಾರದ ಕ್ಷಮೆಗೆ ಉದಾಹರಣೆ ಹಲವು ಇವೆ ಎಂದು ಅವರು ಹೇಳಿದ್ದಾರೆ.

ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಕ್ಷಮೆ ಕೇಳಿದ ಪರಿಷತ್ ಸದಸ್ಯ ರವಿಕುಮಾರ್ ಅವರು ಘನಂದಾರಿ ಕೆಲಸ ಮಾಡಿದವರಂತೆ ಮೆರವಣಿಗೆಯಲ್ಲಿ ಪೊಲೀಸ್ ಠಾಣೆಗೆ ಹೋಗುತ್ತಾರೆ ಎಂದರೆ ಅವರ ಕ್ಷಮೆ ಕೇವಲ ಬೂಟಾಟಿಕೆಯದ್ದು ಹೊರತು ಮನಃಪೂರ್ವಕವಾದುದಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ನಟ ಪ್ರಕಾಶ್ ರಾಜ್ ಅವರನ್ನು ಅವಹೇಳನ ಮಾಡಿದ್ದ ಪ್ರತಾಪ್ ಸಿಂಹ ಕಾನೂನಿನ ಒತ್ತಡಕ್ಕೆ ಕ್ಷಮೆ ಕೇಳಿದ್ದಾರೆ.
ಸೋಫಿಯಾ ಖುರೇಶಿಯವರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದ ವಿಜಯ್ ಷಾ ಜನಾಕ್ರೋಶಕ್ಕೆ ಕ್ಷಮೆ ಕೇಳಿದ್ದಾರೆ.
ನನಗೆ ನಾಯಿ ಎಂದಿದ್ದ ನಾರಾಯಣಸ್ವಾಮಿಯವರು ಜನಾಕ್ರೋಶದ ಒತ್ತಡಕ್ಕೆ ಕ್ಷಮೆ ಕೇಳಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಿಜೆಪಿಯವರು ಕ್ಷಮೆ ಕೇಳುವುದರಲ್ಲಿ ಸಾವರ್ಕರ್ ಅವರ ಬದ್ಧತೆಯನ್ನಾದರೂ ತೋರಿಸಬೇಕು ಎಂದು ಹೇಳಿರುವ ಅವರು, “ಸಾವರ್ಕರ್ ಮನಃಪೂರ್ವಕವಾಗಿ ಬ್ರಿಟಿಷರ ಕ್ಷಮೆ ಕೇಳಿ, ನಂತರ ಬ್ರಿಟಿಷರ ಜೊತೆ ನಿಂತು ಕೆಲಸ ಮಾಡಿದ್ದ ಅವರ ಪ್ರಾಮಾಣಿಕತೆಯನ್ನು ಅನುಸರಿಸಬೇಕು” ಎಂದು ಹೇಳಿದ್ದಾರೆ. ಪ್ರಾಮಾಣಿಕ ಪಶ್ಚಾತಾಪವಿಲ್ಲದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ನೀವು ಭಾಷಾತಜ್ಞರೋ?’..ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್‌ ಹಾಸನ್‌ಗೆ ಹೈಕೋರ್ಟ್ ತರಾಟೆ

‘ನೀವು ಭಾಷಾತಜ್ಞರೋ?’..ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್‌ ಹಾಸನ್‌ಗೆ ಹೈಕೋರ್ಟ್ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...