Homeಅಂತರಾಷ್ಟ್ರೀಯಭಾರತದ ರಾಷ್ಟ್ರ ಭಾಷೆ ಯಾವುದು?...ಸಂಸದೆ ಕನಿಮೋಳಿ ಕೊಟ್ಟ ಉತ್ತರ ವೈರಲ್

ಭಾರತದ ರಾಷ್ಟ್ರ ಭಾಷೆ ಯಾವುದು?…ಸಂಸದೆ ಕನಿಮೋಳಿ ಕೊಟ್ಟ ಉತ್ತರ ವೈರಲ್

- Advertisement -
- Advertisement -

ಭಾರತದ ರಾಷ್ಟ್ರ ಭಾಷೆ ಯಾವುದು? ಎಂಬ ಪ್ರಶ್ನೆಗೆ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷದ ಸಂಸದೆ ಕನಿಮೋಳಿ ನೀಡಿರುವ ಉತ್ತರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಭಯೋತ್ಪಾದನೆ ಕುರಿತ ಭಾರತದ ನಿಲುವನ್ನು ಜಗತ್ತಿಗೆ ತಿಳಿಸಲು ಸರ್ವಪಕ್ಷ ಸಂಸದರ ನಿಯೋಗಗಳು ವಿವಿಧ ರಾಷ್ಟ್ರಗಳಿಗೆ ತೆರಳಿದೆ. ಸ್ಪೇನ್‌ಗೆ ತೆರಳಿರುವ ನಿಯೋಗದಲ್ಲಿ ಸಂಸದೆ ಕನಿಮೋಳಿ ಇದ್ದಾರೆ. ಸ್ಪೇನ್‌ನ ರಾಜಧಾನಿ ಮ್ಯಾಡ್ರಿಡ್‌ನಲ್ಲಿ ಅನಿವಾಸಿ ಭಾರತೀಯ ಜೊತೆ ಆಯೋಜಿಸಿದ್ದ ಸಂವಾದಲ್ಲಿ ಕನಿಮೋಳಿ ಮಾತನಾಡಿದ್ದಾರೆ.

ಕಾರ್ಯಕ್ರಮದಲ್ಲಿ ವ್ಯಕ್ತಿಯೊಬ್ಬರು “ಭಾರತದ ರಾಷ್ಟ್ರ ಭಾಷೆ ಯಾವುದು?” ಎಂದು ಕನಿಮೋಳಿ ಅವರನ್ನು ಪ್ರಶ್ನಿಸಿದ್ದಾರೆ. ಅದಕ್ಕೆ ಉತ್ತರಿಸಿದ ಕನಿಮೋಳಿ ” ಭಾರತದ ರಾಷ್ಟ್ರ ಭಾಷೆ ವಿವಿಧತೆಯಲ್ಲಿ ಏಕತೆ” ಎಂದಿದ್ದಾರೆ. ಈ ಉತ್ತರ ಎಲ್ಲೆಡೆ ವೈರಲ್ ಆಗಿದೆ.

“ಭಾರತದ ರಾಷ್ಟ್ರೀಯ ಭಾಷೆ ವಿವಿಧತೆಯಲ್ಲಿ ಏಕತೆ. ಈ ನಿಯೋಗವು ಜಗತ್ತಿಗೆ ಕೊಡುವ ಸಂದೇಶವೂ ಅದೇ. ಅದು ಇಂದಿನ ಅತ್ಯಂತ ಮುಖ್ಯವಾದ ವಿಷಯ” ಎಂದು ಕನಿಮೋಳಿ ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ), ತ್ರಿಭಾಷಾ ನೀತಿ ಮೂಲಕ ಹಿಂದಿ ಹೇರಿಕೆ ಇತ್ಯಾದಿ ವಿಷಯಗಳಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರಗಳ ನಡುವೆ ತಿಕ್ಕಾಟ ಏರ್ಪಟ್ಟಿರುವ ಕನಿಮೋಳಿ ಅವರು ನೀಡಿರುವ ಉತ್ತರ ಮಹತ್ವವೆನಿಸಿಕೊಂಡಿದೆ.

ಭಯೋತ್ಪಾದನೆಯ ಕುರಿತ ಪ್ರಶ್ನೆಗೆ ಉತ್ತರಿಸಿದ ಕನಿಮೋಳಿ ಅವರು “ನಮ್ಮ ದೇಶದಲ್ಲಿ ಬಹಳಷ್ಟನ್ನು ಮಾಡಬೇಕಾಗಿದೆ ಮತ್ತು ನಾವು ಅದನ್ನೇ ಮಾಡಲು ಬಯಸುತ್ತೇವೆ. ದುರದೃಷ್ಟವಶಾತ್, ನಮ್ಮನ್ನು ಬೇರೆಡೆಗೆ ತಿರುಗಿಸಲಾಗುತ್ತಿದೆ. ನಾವು ಭಯೋತ್ಪಾದನೆಯನ್ನು ಎದುರಿಸಬೇಕಾಗಿದೆ, ಯುದ್ಧವು ಸಂಪೂರ್ಣವಾಗಿ ಅನಗತ್ಯ” ಎಂದು ಒತ್ತಿ ಹೇಳಿದ್ದಾರೆ. ಭಾರತ ಸುರಕ್ಷಿತ ಸ್ಥಳವಾಗಿದ್ದು, ಕಾಶ್ಮೀರ ಸುರಕ್ಷಿತವಾಗಿದೆ ಎಂದು ಸರ್ಕಾರ ಈ ಮೂಲಕ ಖಚಿತಪಡಿಸುತ್ತದೆ ಎಂದು ಎಂದಿದ್ದಾರೆ.

“ಭಾರತೀಯರಾಗಿ, ಭಾರತ ಸುರಕ್ಷಿತವಾಗಿದೆ ಎಂಬ ಸಂದೇಶವನ್ನು ನಾವು ಜಗತ್ತಿಗೆ ಸ್ಪಷ್ಟಪಡಿಸಬೇಕು. ಅವರು (ಭಯೋತ್ಪಾದಕರು) ಏನು ಬೇಕಾದರೂ ಪ್ರಯತ್ನಿಸಬಹುದು. ಆದರೆ, ಅವರು ನಮ್ಮನ್ನು ಹಳಿತಪ್ಪಿಸಲು ಸಾಧ್ಯವಿಲ್ಲ. ಕಾಶ್ಮೀರ ಸುರಕ್ಷಿತ ಸ್ಥಳವಾಗಿ ಉಳಿಯುವಂತೆ ನಾವು ಖಚಿತಪಡಿಸಿಕೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.

ಕನಿಮೋಳಿ ನೇತೃತ್ವದ ನಿಯೋಗದ ಐದು ರಾಷ್ಟ್ರಗಳ ಭೇಟಿಯ ಕೊನೆಯ ದೇಶ ಸ್ಪೇನ್ ಆಗಿತ್ತು. ಮೇ 31ರಂದು  ಅಲ್ಲಿಗೆ ತಲುಪಿದ ನಿಯೋಗ, ಜೂನ್ 2ರವರೆಗೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿತ್ತು. ನಿಯೋಗದಲ್ಲಿ ಸಮಾಜವಾದಿ ಪಕ್ಷದ ಸಂಸದ ರಾಜೀವ್ ಕುಮಾರ್ ರೈ, ಬಿಜೆಪಿಯ ಬ್ರಿಜೇಶ್ ಚೌಟ, ಎಎಪಿಯ ಅಶೋಕ್ ಮಿತ್ತಲ್, ಆರ್‌ಜೆಡಿಯ ಪ್ರೇಮ್ ಚಂದ್ ಗುಪ್ತಾ ಮತ್ತು ಮಾಜಿ ರಾಜತಾಂತ್ರಿಕ ಮಂಜೀವ್ ಸಿಂಗ್ ಪುರಿ ಇದ್ದರು.

ಜಿ7 ಶೃಂಗಸಭೆ| ಪ್ರಧಾನಿ ಮೋದಿಗೆ ಆಹ್ವಾನ ನೀಡದ ಕೆನಡಾ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...