Homeಮುಖಪುಟ"ವಾಕ್ ಸ್ವಾತಂತ್ರ್ಯ ಎಂದರೆ ಇನ್ನೊಬ್ಬರ ಭಾವನೆಗಳಿಗೆ ನೋವುಂಟು ಮಾಡುವುದು ಎಂದಲ್ಲ": ಶರ್ಮಿಸ್ತಾ ಪನೋಲಿಗೆ ಜಾಮೀನು ನೀಡಲು...

“ವಾಕ್ ಸ್ವಾತಂತ್ರ್ಯ ಎಂದರೆ ಇನ್ನೊಬ್ಬರ ಭಾವನೆಗಳಿಗೆ ನೋವುಂಟು ಮಾಡುವುದು ಎಂದಲ್ಲ”: ಶರ್ಮಿಸ್ತಾ ಪನೋಲಿಗೆ ಜಾಮೀನು ನೀಡಲು ಹೈಕೋರ್ಟ್ ನಕಾರ

- Advertisement -
- Advertisement -

“ವಾಕ್ ಸ್ವಾತಂತ್ರ್ಯ ಎಂದರೆ ಇನ್ನೊಬ್ಬರ ಭಾವನೆಗಳಿಗೆ ನೋವುಂಟು ಮಾಡುವುದು ಎಂದಲ್ಲ” ಎಂದ ಕಲ್ಕತ್ತಾ ಹೈಕೋರ್ಟ್, ಸೋಷಿಯಲ್ ಮೀಡಿಯಾ ಇನ್‌ಫ್ಲ್ಯುಯೆನ್ಸರ್ ಹಾಗೂ ಕಾನೂನು ವಿದ್ಯಾರ್ಥಿನಿ ಶರ್ಮಿಸ್ತಾ ಪನೋಲಿಗೆ ಮಧ್ಯಂತರ ಜಾಮೀನು ನೀಡಲು ಮಂಗಳವಾರ (ಜೂ.3) ನಿರಾಕರಿಸಿದೆ.

ಶರ್ಮಿಸ್ತಾ ಅವರ ಪೋಸ್ಟ್ ಒಂದು ಸಮುದಾಯದ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿವೆ. ಭಾರತವು ವೈವಿಧ್ಯಮಯ ದೇಶವಾಗಿರುವುದರಿಂದ, ಇತರರನ್ನು ನೋಯಿಸಲು ವಾಕ್ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳಬಾರದು ಎಂದು ನ್ಯಾಯಮೂರ್ತಿ ಪಾರ್ಥ ಸಾರಥಿ ಚಟರ್ಜಿ ಅವರು ಹೇಳಿದ್ದಾರೆ.

ಪ್ರವಾದಿ ಮುಹಮ್ಮದರನ್ನು ನಿಂದಿಸಿದ ಆರೋಪದ ಮೇಲೆ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಮತ್ತು ವಿವಾದಾತ್ಮಕ ವಿಡಿಯೋಗೆ ಸಂಬಂಧಿಸಿದಂತೆ ವಿವಿದೆಡೆ ದಾಖಲಾಗಿರುವ ಎಫ್‌ಐಆರ್‌ಗಳನ್ನು ಒಂದೆಡೆ ಕ್ರೋಢೀಕರಿಸುವಂತೆ ಕೋರಿ ಪನೋಲಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಚಟರ್ಜಿ ವಿಚಾರಣೆ ನಡೆಸಿದ್ದಾರೆ.

ಕೋಲ್ಕತ್ತಾದ ವಿಚಾರಣಾ ನ್ಯಾಯಾಲಯದ ಮೇ 31ರಂದು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದನ್ನೂ ಶರ್ಮಿಸ್ತಾ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಆದರೆ, ಮಧ್ಯಂತರ ಪರಿಹಾರ ನೀಡಲು ಹೈಕೋರ್ಟ್ ನಿರಾಕರಿಸಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಜೂನ್ 5ಕ್ಕೆ ನಿಗದಿಪಡಿಸಿದೆ.

ಪುಣೆಯ ಸಿಂಬಿಯೋಸಿಸ್ ಕಾನೂನು ಕಾಲೇಜಿನ ವಿದ್ಯಾರ್ಥಿನಿಯಾಗಿರುವ ಶರ್ಮಿಸ್ತಾ ಪನೋಲಿ, ಸಾಮಾಜಿಕ ಮಾಧ್ಯಮಗಳಾದ ಇನ್‌ಸ್ಟಾಗ್ರಾಮ್ ಮತ್ತು ಎಕ್ಸ್‌ನಲ್ಲಿ ಮುಸ್ಲಿಂ ಸಮುದಾಯ ಮತ್ತು ಪ್ರವಾದಿ ಮುಹಮ್ಮದರ ವಿರುದ್ಧ ನಿಂದನಾತ್ಮಕ ಪೋಸ್ಟ್ ಹಾಕಿದ ಆರೋಪವಿದೆ.

ಮೇ 14ರಂದು ಹಾಕಿದ್ದ ತನ್ನ ಪೋಸ್ಟ್ ವಿವಾದಕ್ಕೆ ತಿರುಗುತ್ತಿದ್ದಂತೆ, ಅದನ್ನು ಡಿಲಿಟ್ ಮಾಡಿ ಎಕ್ಸ್‌ನಲ್ಲಿ ಕ್ಷಮೆಯಾಚಿಸಿದ್ದರು. ಆದರೆ, ಮೇ 15,2025 ರಂದು ಅವರ ವಿರುದ್ಧ ಕೊಲ್ಕತ್ತಾದಲ್ಲಿ ಎಫ್‌ಐಆರ್ ದಾಖಲಾಗಿತ್ತು. ಎರಡು ದಿನಗಳ ನಂತರ ಮೇ 17,2025 ರಂದು ಶರ್ಮಿಸ್ತಾ ವಿರುದ್ದ ಬಂಧನ ವಾರೆಂಟ್ ಹೊರಡಿಸಲಾಗಿತ್ತು. ಮೇ 30ರಂದು ಕೋಲ್ಕತ್ತಾ ಪೊಲೀಸರು ಗುರುಗ್ರಾಮದಲ್ಲಿ ಶರ್ಮಿಸ್ತಾ ಅವರನ್ನು ಬಂಧಿಸಿದ್ದರು.

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತದ ಮಿಲಿಟರಿ ಪ್ರತಿಕ್ರಿಯೆಯ ಕುರಿತು ಪಾಕಿಸ್ತಾನಿ ಫಾಲೋವರ್ ಒಬ್ಬರು ಕೇಳಿದ್ದ ಪ್ರಶ್ನೆಗೆ ಉತ್ತರವಾಗಿ ಶರ್ಮಿಸ್ತಾ ಪನೋಲಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ಪೋಸ್ಟ್ ಹಾಕಿದ್ದರು.

ಆ ವಿಡಿಯೋದಲ್ಲಿ, ಅವರು ಇಸ್ಲಾಂ ಮತ್ತು ಪ್ರವಾದಿ ಮುಹಮ್ಮದರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು. ಬಾಲಿವುಡ್ ನಟರು ಭಯೋತ್ಪಾದಕ ದಾಳಿಯ ವಿಷಯದಲ್ಲಿ ಮೌನವಾಗಿರುವುದನ್ನು ಟೀಕಿಸಿದ್ದರು.

ಸುಮಾರು 22 ವರ್ಷ ವಯಸ್ಸಿನ ಶರ್ಮಿಸ್ತಾ ಅವರಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಒಟ್ಟಾರೆಯಾಗಿ ಸುಮಾರು 2 ಲಕ್ಷ ಫಾಲೋವರ್ಸ್ ಇದ್ದಾರೆ.

‘ನೀವು ಭಾಷಾತಜ್ಞರೋ?’..ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್‌ ಹಾಸನ್‌ಗೆ ಹೈಕೋರ್ಟ್ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...