Homeಕರ್ನಾಟಕಕ್ಷಮೆ ಕೇಳಲು ಕಮಲ್ ಹಾಸನ್‌ ನಕಾರ: ಕರ್ನಾಟಕದಲ್ಲಿ 'ಥಗ್‌ ಲೈಫ್‌' ಚಿತ್ರ ಬಿಡುಗಡೆ ಮುಂದೂಡಿಕೆ

ಕ್ಷಮೆ ಕೇಳಲು ಕಮಲ್ ಹಾಸನ್‌ ನಕಾರ: ಕರ್ನಾಟಕದಲ್ಲಿ ‘ಥಗ್‌ ಲೈಫ್‌’ ಚಿತ್ರ ಬಿಡುಗಡೆ ಮುಂದೂಡಿಕೆ

- Advertisement -
- Advertisement -

“ತಮಿಳಿನಿಂದ ಕನ್ನಡ ಹುಟ್ಟಿದೆ” ಎಂಬ ತನ್ನ ಹೇಳಿಕೆಯ ಹಿಂದೆ ಯಾವುದೇ ದುರುದ್ದೇಶ ಇಲ್ಲದಿರುವುದರಿಂದ ನಾನು ಕ್ಷಮೆ ಕೋರುವುದಿಲ್ಲ ಎಂದು ನಟ ಕಮಲ್‌ ಹಾಸನ್ ಹೈಕೋರ್ಟ್ ಮುಂದೆ ಹೇಳಿದ್ದಾರೆ ಎಂದು ವರದಿಯಾಗಿದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (ಕೆಎಫ್‌ಸಿಸಿ) ಜೊತೆಗೆ ಸಮಾಲೋಚನೆ ನಡೆಸುವವರೆಗೆ ಕರ್ನಾಟಕದಲ್ಲಿ ಕಮಲ್ ಹಾಸನ್ ನಟನೆಯ ‘ಥಗ್‌ ಲೈಫ್‌’ ಚಿತ್ರ ಬಿಡುಗಡೆ ಮಾಡದಿರಲು ರಾಜ್‌ಕಮಲ್‌ ಫಿಲ್ಮ್ಸ್‌ ಇಂಟರ್‌ನ್ಯಾಷನಲ್‌ ಸಂಸ್ಥೆ ನಿರ್ಧರಿಸಿದೆ. ಈ ವಿಚಾರವನ್ನು ಹೈಕೋರ್ಟ್‌ಗೆ ತಿಳಿಸಿದೆ. ಹಾಗಾಗಿ, ಕೋರ್ಟ್ ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಿದೆ.

ಕಮಲ್ ಹಾಸನ್ ಹೇಳಿಕೆ ಕನ್ನಡಿಗರಲ್ಲಿ ಆಕ್ರೋಶ ಉಂಟು ಮಾಡಿರುವ ಹಿನ್ನೆಲೆ, ‘ಥಗ್‌ ಲೈಫ್‌’ ಚಿತ್ರ ಬಿಡುಗಡೆ ಕರ್ನಾಟಕದಲ್ಲಿ ಅವಕಾಶ ಮತ್ತು ಸೂಕ್ತ ಭದ್ರತೆ ಒದಗಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ರಾಜ್‌ಕಮಲ್‌ ಫಿಲ್ಮ್ಸ್‌ ಇಂಟರ್‌ನ್ಯಾಷನಲ್‌ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿ ನಾರಾಯಣ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಇಂದು (ಮಂಗಳವಾರ) ವಿಚಾರಣೆ ನಡೆಸಿತು.

ಮಧ್ಯಾಹ್ನದ ಊಟದ ವಿರಾಮಕ್ಕೂ ಮುನ್ನ ವಿ ನಾರಾಯಣ್‌ ಅವರ ಅರ್ಜಿಯನ್ನು ಸುದೀರ್ಘ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಕಮಲ್‌ ಹಾಸನ್‌ ಕನ್ನಡಿಗರ ಕ್ಷಮೆ ಕೋರುವ ಮೂಲಕ ವಿವಾದಕ್ಕೆ ಅಂತ್ಯ ಹಾಡಲು ಮೌಖಿಕ ಸಲಹೆ ನೀಡಿತ್ತು.

ಈ ಸಂಬಂಧ ಕಮಲ್ ಹಾಸನ್ ಅವರ ಸೂಚನೆ ಪಡೆದು ವಾದಿಸುವುದಾಗಿ ಪೀಠಕ್ಕೆ ತಿಳಿಸಿದ್ದ ಹಿರಿಯ ವಕೀಲ ಧ್ಯಾನ್‌ ಚಿನ್ನಪ್ಪ ಅವರು, ಮಧ್ಯಾಹ್ನದ ನಂತರದ ವಿಚಾರಣೆಯಲ್ಲಿ ಕೆಎಫ್‌ಸಿಸಿಗೆ ಕಮಲ್‌ ಹಾಸನ್‌ ಬರೆದಿರುವ ಪತ್ರವನ್ನು ಓದಿದರು. “ಸದ್ಯಕ್ಕೆ ಕರ್ನಾಟಕದಲ್ಲಿ ಚಿತ್ರ ಬಿಡುಗಡೆ ಮಾಡದಿರಲು ಕಮಲ್‌ ಹಾಸನ್‌ ತೀರ್ಮಾನಿಸಿದ್ದಾರೆ. ಹೀಗಾಗಿ, ಪೊಲೀಸ್‌ ರಕ್ಷಣೆ ಕೋರುವುದಿಲ್ಲ, ಈ ನಡುವೆ, ಕೆಎಫ್‌ಸಿಸಿ ಜೊತೆ ಸಮಾಲೋಚನೆ ನಡೆಸಲು ಅವರು ನಿರ್ಧರಿಸಿದ್ದಾರೆ” ಎಂದು ಹೇಳಿದ್ದಾರೆ.

ಧ್ಯಾನ್‌ ಚಿನ್ನಪ್ಪ ಅವರು, “ಕನ್ನಡ ನಾಡು ಮತ್ತು ಕರ್ನಾಟಕದ ಬಗ್ಗೆ ಪ್ರೀತಿ ಇದೆ ಎಂದು ಕಮಲ್‌ ಹಾಸನ್ ಹೇಳಿದ್ದಾರೆ. ದುರುದ್ದೇಶವಿದ್ದರೆ ಮಾತ್ರ ಕ್ಷಮೆ ಕೋರಬೇಕು ಎಂದು ಕೆಎಫ್‌ಸಿಸಿಗೆ ಬರೆದಿರುವ ಪತ್ರದಲ್ಲಿ ಅವರು ಘೋಷಣೆ ಮಾಡಿದ್ದಾರೆ, ಸ್ಪಷ್ಟನೆ ನೀಡಿಲ್ಲ. ಕರ್ನಾಟಕದಲ್ಲಿ ಚಿತ್ರ ಬಿಡುಗಡೆಯನ್ನು ವಿಳಂಬಿಸಬಹುದು ಎಂದಿದ್ದಾರೆ. ಹೀಗಾಗಿ, ಸಿನಿಮಾ ಬಿಡುಗಡೆಗೆ ಪೊಲೀಸರ ರಕ್ಷಣೆಯ ವಿಚಾರ ಮುಂದು ಮಾಡುವುದಿಲ್ಲ. ಕೆಎಫ್‌ಸಿಸಿ ಜೊತೆ ಸಮಾಲೋಚನೆ ನಡೆಸಲಾಗುವುದು ಎಂದಿದ್ದಾರೆ” ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪೀಠವ “ಅಹಂ ಮುಂದೆ ಮಾಡಿದ್ದೀರಿ. ಅದು ಕಮಲ್‌ ಹಾಸನ್‌ ಅಥವಾ ಬೇರೆ ಯಾರೇ ಆಗಿರಬಹುದು. ಇದು ಜನರ ಭಾವನೆಗಳಿಗೆ ಹಾನಿ ಮಾಡುವ ವಿಚಾರವಾಗಿದೆ. ಕಮಲ್‌ ಹಾಸನ್‌ ಹೇಳಿಕೆಯಿಂದ ಇಷ್ಟೆಲ್ಲಾ ಆಗಿದ್ದು, ಇದೆಲ್ಲವನ್ನೂ ಅವರ ಹೇಳಿಕೆಯೇ ನಿಲ್ಲಿಸಬಹುದು. ಕೆಎಫ್‌ಸಿಸಿಗೆ ಬರೆದಿರುವ ಪತ್ರದಲ್ಲಿ ಕ್ಷಮೆ ವಿಚಾರ ಹೊರತುಪಡಿಸಿ ಉಳಿದೆಲ್ಲವೂ ಇದೆ” ಎಂದಿದೆ.

ಅಂತಿಮವಾಗಿ ಕೇಂದ್ರ, ರಾಜ್ಯ ಸರ್ಕಾರ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೋಟಿಸ್‌ ಜಾರಿಗೊಳಿಸಿ, ವಿಚಾರಣೆಯನ್ನು ಜೂನ್‌ 10ಕ್ಕೆ ಮುಂದೂಡಿದೆ.

‘ನೀವು ಭಾಷಾತಜ್ಞರೋ?’..ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್‌ ಹಾಸನ್‌ಗೆ ಹೈಕೋರ್ಟ್ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...