Homeಕರ್ನಾಟಕಕ್ಷಮೆ ಕೇಳಲು ಕಮಲ್ ಹಾಸನ್‌ ನಕಾರ: ಕರ್ನಾಟಕದಲ್ಲಿ 'ಥಗ್‌ ಲೈಫ್‌' ಚಿತ್ರ ಬಿಡುಗಡೆ ಮುಂದೂಡಿಕೆ

ಕ್ಷಮೆ ಕೇಳಲು ಕಮಲ್ ಹಾಸನ್‌ ನಕಾರ: ಕರ್ನಾಟಕದಲ್ಲಿ ‘ಥಗ್‌ ಲೈಫ್‌’ ಚಿತ್ರ ಬಿಡುಗಡೆ ಮುಂದೂಡಿಕೆ

- Advertisement -
- Advertisement -

“ತಮಿಳಿನಿಂದ ಕನ್ನಡ ಹುಟ್ಟಿದೆ” ಎಂಬ ತನ್ನ ಹೇಳಿಕೆಯ ಹಿಂದೆ ಯಾವುದೇ ದುರುದ್ದೇಶ ಇಲ್ಲದಿರುವುದರಿಂದ ನಾನು ಕ್ಷಮೆ ಕೋರುವುದಿಲ್ಲ ಎಂದು ನಟ ಕಮಲ್‌ ಹಾಸನ್ ಹೈಕೋರ್ಟ್ ಮುಂದೆ ಹೇಳಿದ್ದಾರೆ ಎಂದು ವರದಿಯಾಗಿದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (ಕೆಎಫ್‌ಸಿಸಿ) ಜೊತೆಗೆ ಸಮಾಲೋಚನೆ ನಡೆಸುವವರೆಗೆ ಕರ್ನಾಟಕದಲ್ಲಿ ಕಮಲ್ ಹಾಸನ್ ನಟನೆಯ ‘ಥಗ್‌ ಲೈಫ್‌’ ಚಿತ್ರ ಬಿಡುಗಡೆ ಮಾಡದಿರಲು ರಾಜ್‌ಕಮಲ್‌ ಫಿಲ್ಮ್ಸ್‌ ಇಂಟರ್‌ನ್ಯಾಷನಲ್‌ ಸಂಸ್ಥೆ ನಿರ್ಧರಿಸಿದೆ. ಈ ವಿಚಾರವನ್ನು ಹೈಕೋರ್ಟ್‌ಗೆ ತಿಳಿಸಿದೆ. ಹಾಗಾಗಿ, ಕೋರ್ಟ್ ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಿದೆ.

ಕಮಲ್ ಹಾಸನ್ ಹೇಳಿಕೆ ಕನ್ನಡಿಗರಲ್ಲಿ ಆಕ್ರೋಶ ಉಂಟು ಮಾಡಿರುವ ಹಿನ್ನೆಲೆ, ‘ಥಗ್‌ ಲೈಫ್‌’ ಚಿತ್ರ ಬಿಡುಗಡೆ ಕರ್ನಾಟಕದಲ್ಲಿ ಅವಕಾಶ ಮತ್ತು ಸೂಕ್ತ ಭದ್ರತೆ ಒದಗಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ರಾಜ್‌ಕಮಲ್‌ ಫಿಲ್ಮ್ಸ್‌ ಇಂಟರ್‌ನ್ಯಾಷನಲ್‌ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿ ನಾರಾಯಣ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಇಂದು (ಮಂಗಳವಾರ) ವಿಚಾರಣೆ ನಡೆಸಿತು.

ಮಧ್ಯಾಹ್ನದ ಊಟದ ವಿರಾಮಕ್ಕೂ ಮುನ್ನ ವಿ ನಾರಾಯಣ್‌ ಅವರ ಅರ್ಜಿಯನ್ನು ಸುದೀರ್ಘ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಕಮಲ್‌ ಹಾಸನ್‌ ಕನ್ನಡಿಗರ ಕ್ಷಮೆ ಕೋರುವ ಮೂಲಕ ವಿವಾದಕ್ಕೆ ಅಂತ್ಯ ಹಾಡಲು ಮೌಖಿಕ ಸಲಹೆ ನೀಡಿತ್ತು.

ಈ ಸಂಬಂಧ ಕಮಲ್ ಹಾಸನ್ ಅವರ ಸೂಚನೆ ಪಡೆದು ವಾದಿಸುವುದಾಗಿ ಪೀಠಕ್ಕೆ ತಿಳಿಸಿದ್ದ ಹಿರಿಯ ವಕೀಲ ಧ್ಯಾನ್‌ ಚಿನ್ನಪ್ಪ ಅವರು, ಮಧ್ಯಾಹ್ನದ ನಂತರದ ವಿಚಾರಣೆಯಲ್ಲಿ ಕೆಎಫ್‌ಸಿಸಿಗೆ ಕಮಲ್‌ ಹಾಸನ್‌ ಬರೆದಿರುವ ಪತ್ರವನ್ನು ಓದಿದರು. “ಸದ್ಯಕ್ಕೆ ಕರ್ನಾಟಕದಲ್ಲಿ ಚಿತ್ರ ಬಿಡುಗಡೆ ಮಾಡದಿರಲು ಕಮಲ್‌ ಹಾಸನ್‌ ತೀರ್ಮಾನಿಸಿದ್ದಾರೆ. ಹೀಗಾಗಿ, ಪೊಲೀಸ್‌ ರಕ್ಷಣೆ ಕೋರುವುದಿಲ್ಲ, ಈ ನಡುವೆ, ಕೆಎಫ್‌ಸಿಸಿ ಜೊತೆ ಸಮಾಲೋಚನೆ ನಡೆಸಲು ಅವರು ನಿರ್ಧರಿಸಿದ್ದಾರೆ” ಎಂದು ಹೇಳಿದ್ದಾರೆ.

ಧ್ಯಾನ್‌ ಚಿನ್ನಪ್ಪ ಅವರು, “ಕನ್ನಡ ನಾಡು ಮತ್ತು ಕರ್ನಾಟಕದ ಬಗ್ಗೆ ಪ್ರೀತಿ ಇದೆ ಎಂದು ಕಮಲ್‌ ಹಾಸನ್ ಹೇಳಿದ್ದಾರೆ. ದುರುದ್ದೇಶವಿದ್ದರೆ ಮಾತ್ರ ಕ್ಷಮೆ ಕೋರಬೇಕು ಎಂದು ಕೆಎಫ್‌ಸಿಸಿಗೆ ಬರೆದಿರುವ ಪತ್ರದಲ್ಲಿ ಅವರು ಘೋಷಣೆ ಮಾಡಿದ್ದಾರೆ, ಸ್ಪಷ್ಟನೆ ನೀಡಿಲ್ಲ. ಕರ್ನಾಟಕದಲ್ಲಿ ಚಿತ್ರ ಬಿಡುಗಡೆಯನ್ನು ವಿಳಂಬಿಸಬಹುದು ಎಂದಿದ್ದಾರೆ. ಹೀಗಾಗಿ, ಸಿನಿಮಾ ಬಿಡುಗಡೆಗೆ ಪೊಲೀಸರ ರಕ್ಷಣೆಯ ವಿಚಾರ ಮುಂದು ಮಾಡುವುದಿಲ್ಲ. ಕೆಎಫ್‌ಸಿಸಿ ಜೊತೆ ಸಮಾಲೋಚನೆ ನಡೆಸಲಾಗುವುದು ಎಂದಿದ್ದಾರೆ” ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪೀಠವ “ಅಹಂ ಮುಂದೆ ಮಾಡಿದ್ದೀರಿ. ಅದು ಕಮಲ್‌ ಹಾಸನ್‌ ಅಥವಾ ಬೇರೆ ಯಾರೇ ಆಗಿರಬಹುದು. ಇದು ಜನರ ಭಾವನೆಗಳಿಗೆ ಹಾನಿ ಮಾಡುವ ವಿಚಾರವಾಗಿದೆ. ಕಮಲ್‌ ಹಾಸನ್‌ ಹೇಳಿಕೆಯಿಂದ ಇಷ್ಟೆಲ್ಲಾ ಆಗಿದ್ದು, ಇದೆಲ್ಲವನ್ನೂ ಅವರ ಹೇಳಿಕೆಯೇ ನಿಲ್ಲಿಸಬಹುದು. ಕೆಎಫ್‌ಸಿಸಿಗೆ ಬರೆದಿರುವ ಪತ್ರದಲ್ಲಿ ಕ್ಷಮೆ ವಿಚಾರ ಹೊರತುಪಡಿಸಿ ಉಳಿದೆಲ್ಲವೂ ಇದೆ” ಎಂದಿದೆ.

ಅಂತಿಮವಾಗಿ ಕೇಂದ್ರ, ರಾಜ್ಯ ಸರ್ಕಾರ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೋಟಿಸ್‌ ಜಾರಿಗೊಳಿಸಿ, ವಿಚಾರಣೆಯನ್ನು ಜೂನ್‌ 10ಕ್ಕೆ ಮುಂದೂಡಿದೆ.

‘ನೀವು ಭಾಷಾತಜ್ಞರೋ?’..ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್‌ ಹಾಸನ್‌ಗೆ ಹೈಕೋರ್ಟ್ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...