Homeಕರ್ನಾಟಕಕ್ಷಮೆ ಕೇಳಲು ಕಮಲ್ ಹಾಸನ್‌ ನಕಾರ: ಕರ್ನಾಟಕದಲ್ಲಿ 'ಥಗ್‌ ಲೈಫ್‌' ಚಿತ್ರ ಬಿಡುಗಡೆ ಮುಂದೂಡಿಕೆ

ಕ್ಷಮೆ ಕೇಳಲು ಕಮಲ್ ಹಾಸನ್‌ ನಕಾರ: ಕರ್ನಾಟಕದಲ್ಲಿ ‘ಥಗ್‌ ಲೈಫ್‌’ ಚಿತ್ರ ಬಿಡುಗಡೆ ಮುಂದೂಡಿಕೆ

- Advertisement -
- Advertisement -

“ತಮಿಳಿನಿಂದ ಕನ್ನಡ ಹುಟ್ಟಿದೆ” ಎಂಬ ತನ್ನ ಹೇಳಿಕೆಯ ಹಿಂದೆ ಯಾವುದೇ ದುರುದ್ದೇಶ ಇಲ್ಲದಿರುವುದರಿಂದ ನಾನು ಕ್ಷಮೆ ಕೋರುವುದಿಲ್ಲ ಎಂದು ನಟ ಕಮಲ್‌ ಹಾಸನ್ ಹೈಕೋರ್ಟ್ ಮುಂದೆ ಹೇಳಿದ್ದಾರೆ ಎಂದು ವರದಿಯಾಗಿದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (ಕೆಎಫ್‌ಸಿಸಿ) ಜೊತೆಗೆ ಸಮಾಲೋಚನೆ ನಡೆಸುವವರೆಗೆ ಕರ್ನಾಟಕದಲ್ಲಿ ಕಮಲ್ ಹಾಸನ್ ನಟನೆಯ ‘ಥಗ್‌ ಲೈಫ್‌’ ಚಿತ್ರ ಬಿಡುಗಡೆ ಮಾಡದಿರಲು ರಾಜ್‌ಕಮಲ್‌ ಫಿಲ್ಮ್ಸ್‌ ಇಂಟರ್‌ನ್ಯಾಷನಲ್‌ ಸಂಸ್ಥೆ ನಿರ್ಧರಿಸಿದೆ. ಈ ವಿಚಾರವನ್ನು ಹೈಕೋರ್ಟ್‌ಗೆ ತಿಳಿಸಿದೆ. ಹಾಗಾಗಿ, ಕೋರ್ಟ್ ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಿದೆ.

ಕಮಲ್ ಹಾಸನ್ ಹೇಳಿಕೆ ಕನ್ನಡಿಗರಲ್ಲಿ ಆಕ್ರೋಶ ಉಂಟು ಮಾಡಿರುವ ಹಿನ್ನೆಲೆ, ‘ಥಗ್‌ ಲೈಫ್‌’ ಚಿತ್ರ ಬಿಡುಗಡೆ ಕರ್ನಾಟಕದಲ್ಲಿ ಅವಕಾಶ ಮತ್ತು ಸೂಕ್ತ ಭದ್ರತೆ ಒದಗಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ರಾಜ್‌ಕಮಲ್‌ ಫಿಲ್ಮ್ಸ್‌ ಇಂಟರ್‌ನ್ಯಾಷನಲ್‌ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿ ನಾರಾಯಣ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಇಂದು (ಮಂಗಳವಾರ) ವಿಚಾರಣೆ ನಡೆಸಿತು.

ಮಧ್ಯಾಹ್ನದ ಊಟದ ವಿರಾಮಕ್ಕೂ ಮುನ್ನ ವಿ ನಾರಾಯಣ್‌ ಅವರ ಅರ್ಜಿಯನ್ನು ಸುದೀರ್ಘ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಕಮಲ್‌ ಹಾಸನ್‌ ಕನ್ನಡಿಗರ ಕ್ಷಮೆ ಕೋರುವ ಮೂಲಕ ವಿವಾದಕ್ಕೆ ಅಂತ್ಯ ಹಾಡಲು ಮೌಖಿಕ ಸಲಹೆ ನೀಡಿತ್ತು.

ಈ ಸಂಬಂಧ ಕಮಲ್ ಹಾಸನ್ ಅವರ ಸೂಚನೆ ಪಡೆದು ವಾದಿಸುವುದಾಗಿ ಪೀಠಕ್ಕೆ ತಿಳಿಸಿದ್ದ ಹಿರಿಯ ವಕೀಲ ಧ್ಯಾನ್‌ ಚಿನ್ನಪ್ಪ ಅವರು, ಮಧ್ಯಾಹ್ನದ ನಂತರದ ವಿಚಾರಣೆಯಲ್ಲಿ ಕೆಎಫ್‌ಸಿಸಿಗೆ ಕಮಲ್‌ ಹಾಸನ್‌ ಬರೆದಿರುವ ಪತ್ರವನ್ನು ಓದಿದರು. “ಸದ್ಯಕ್ಕೆ ಕರ್ನಾಟಕದಲ್ಲಿ ಚಿತ್ರ ಬಿಡುಗಡೆ ಮಾಡದಿರಲು ಕಮಲ್‌ ಹಾಸನ್‌ ತೀರ್ಮಾನಿಸಿದ್ದಾರೆ. ಹೀಗಾಗಿ, ಪೊಲೀಸ್‌ ರಕ್ಷಣೆ ಕೋರುವುದಿಲ್ಲ, ಈ ನಡುವೆ, ಕೆಎಫ್‌ಸಿಸಿ ಜೊತೆ ಸಮಾಲೋಚನೆ ನಡೆಸಲು ಅವರು ನಿರ್ಧರಿಸಿದ್ದಾರೆ” ಎಂದು ಹೇಳಿದ್ದಾರೆ.

ಧ್ಯಾನ್‌ ಚಿನ್ನಪ್ಪ ಅವರು, “ಕನ್ನಡ ನಾಡು ಮತ್ತು ಕರ್ನಾಟಕದ ಬಗ್ಗೆ ಪ್ರೀತಿ ಇದೆ ಎಂದು ಕಮಲ್‌ ಹಾಸನ್ ಹೇಳಿದ್ದಾರೆ. ದುರುದ್ದೇಶವಿದ್ದರೆ ಮಾತ್ರ ಕ್ಷಮೆ ಕೋರಬೇಕು ಎಂದು ಕೆಎಫ್‌ಸಿಸಿಗೆ ಬರೆದಿರುವ ಪತ್ರದಲ್ಲಿ ಅವರು ಘೋಷಣೆ ಮಾಡಿದ್ದಾರೆ, ಸ್ಪಷ್ಟನೆ ನೀಡಿಲ್ಲ. ಕರ್ನಾಟಕದಲ್ಲಿ ಚಿತ್ರ ಬಿಡುಗಡೆಯನ್ನು ವಿಳಂಬಿಸಬಹುದು ಎಂದಿದ್ದಾರೆ. ಹೀಗಾಗಿ, ಸಿನಿಮಾ ಬಿಡುಗಡೆಗೆ ಪೊಲೀಸರ ರಕ್ಷಣೆಯ ವಿಚಾರ ಮುಂದು ಮಾಡುವುದಿಲ್ಲ. ಕೆಎಫ್‌ಸಿಸಿ ಜೊತೆ ಸಮಾಲೋಚನೆ ನಡೆಸಲಾಗುವುದು ಎಂದಿದ್ದಾರೆ” ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪೀಠವ “ಅಹಂ ಮುಂದೆ ಮಾಡಿದ್ದೀರಿ. ಅದು ಕಮಲ್‌ ಹಾಸನ್‌ ಅಥವಾ ಬೇರೆ ಯಾರೇ ಆಗಿರಬಹುದು. ಇದು ಜನರ ಭಾವನೆಗಳಿಗೆ ಹಾನಿ ಮಾಡುವ ವಿಚಾರವಾಗಿದೆ. ಕಮಲ್‌ ಹಾಸನ್‌ ಹೇಳಿಕೆಯಿಂದ ಇಷ್ಟೆಲ್ಲಾ ಆಗಿದ್ದು, ಇದೆಲ್ಲವನ್ನೂ ಅವರ ಹೇಳಿಕೆಯೇ ನಿಲ್ಲಿಸಬಹುದು. ಕೆಎಫ್‌ಸಿಸಿಗೆ ಬರೆದಿರುವ ಪತ್ರದಲ್ಲಿ ಕ್ಷಮೆ ವಿಚಾರ ಹೊರತುಪಡಿಸಿ ಉಳಿದೆಲ್ಲವೂ ಇದೆ” ಎಂದಿದೆ.

ಅಂತಿಮವಾಗಿ ಕೇಂದ್ರ, ರಾಜ್ಯ ಸರ್ಕಾರ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೋಟಿಸ್‌ ಜಾರಿಗೊಳಿಸಿ, ವಿಚಾರಣೆಯನ್ನು ಜೂನ್‌ 10ಕ್ಕೆ ಮುಂದೂಡಿದೆ.

‘ನೀವು ಭಾಷಾತಜ್ಞರೋ?’..ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್‌ ಹಾಸನ್‌ಗೆ ಹೈಕೋರ್ಟ್ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...