Homeಮುಖಪುಟಹೇಮಾ ಸಮಿತಿ ವರದಿ| ತನಿಖೆಗೆ ಸಂತ್ರಸ್ತರ ಅಸಹಕಾರ: ಕೆಲ ಪ್ರಕರಣಗಳನ್ನು ಕೈಬಿಡಲು ಮುಂದಾದ ಎಸ್‌ಐಟಿ

ಹೇಮಾ ಸಮಿತಿ ವರದಿ| ತನಿಖೆಗೆ ಸಂತ್ರಸ್ತರ ಅಸಹಕಾರ: ಕೆಲ ಪ್ರಕರಣಗಳನ್ನು ಕೈಬಿಡಲು ಮುಂದಾದ ಎಸ್‌ಐಟಿ

- Advertisement -
- Advertisement -

ಮಲಯಾಳಂ ಚಲನಚಿತ್ರೋದ್ಯಮದಲ್ಲಿನ ಮಹಿಳೆಯರ ಮೇಲಿನ ಲೈಂಗಿಕ ಶೋಷಣೆ ಮತ್ತು ಸ್ತ್ರೀದ್ವೇಷದ ಕುರಿತು ಹೇಮಾ ಸಮಿತಿ ನೀಡಿದ ವರದಿಗೆ ಸಂಬಂಧಿಸಿದ ಕೆಲ ಪ್ರಕರಣಗಳನ್ನು ಕೈಬಿಡಲು ಕೇರಳ ಪೊಲೀಸರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಾಕಷ್ಟು ಸಾಕ್ಷ್ಯಗಳನ್ನು ಸಂಗ್ರಹಿಸಲು ಸಾಧ್ಯವಾಗುತ್ತಿಲ್ಲ. ಸಂತ್ರಸ್ತರು ತನಿಖೆಗೆ ಅಸಹಕಾರ ತೋರುತ್ತಿದ್ದಾರೆ. ಆದ್ದರಿಂದ 35 ಕ್ರಿಮಿನಲ್ ಪ್ರಕರಣಗಳಲ್ಲಿ ‘ಫರ್ದರ್ ಆಕ್ಷನ್ ಡ್ರಾಪ್ಡ್’ (ಎಫ್‌ಎಡಿ) ವರದಿಗಳನ್ನು ಸಲ್ಲಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಅಧಿಕೃತ ಮೂಲಗಳ ಪ್ರಕಾರ, ಎಸ್‌ಐಟಿ ಮತ್ತು ನ್ಯಾಯಾಲಯ ಪದೇ ಪದೇ ಸಮನ್ಸ್ ಜಾರಿ ಮಾಡಿದರೂ, ಸಂತ್ರಸ್ತರು ಪ್ರಕರಣಗಳಿಗೆ ಸಂಬಂಧಿಸಿದಂತೆ ಹೇಳಿಕೆಗಳನ್ನು ನೀಡಲು ನಿರಾಕರಿಸಿದ್ದಾರೆ ಎಂದು ವರದಿ ಹೇಳಿದೆ.

ತನಿಖೆಯಲ್ಲಿ ಯಾವುದೇ ಪ್ರಗತಿ ಕಾಣದ ಕಾರಣ 21 ಪ್ರಕರಣಗಳಲ್ಲಿ ಎಫ್‌ಎಡಿ ವರದಿಗಳನ್ನು ಸಲ್ಲಿಸಲಾಗಿದೆ. ಉಳಿದ 14 ಪ್ರಕರಣಗಳನ್ನು ಕೂಡ ತಾತ್ಕಾಲಿಕವಾಗಿ ಕೈಬಿಡುವ ಸಾಧ್ಯತೆಯಿದೆ ಎಂದು ತನಿಖೆಯ ನೋಡಲ್ ಅಧಿಕಾರಿ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕಿ ಜಿ. ಪೂಂಗುಝಿಲಿ ತಿಳಿಸಿದ್ದಾರೆ.

“ಶಾಶ್ವತವಾಗಿ ಪ್ರಕರಣಗಳನ್ನು ಕೈಬಿಟ್ಟಿಲ್ಲ”

“ಕಾನೂನು ಹಾಗೂ ಕಾರ್ಯವಿಧಾನಗಳ ಭಾಗವಾಗಿ ಸದ್ಯಕ್ಕೆ ಪ್ರಕರಣಗಳಲ್ಲಿ ತನಿಖೆಯನ್ನು ಅಂತ್ಯಗೊಳಿಸಲಾಗುತ್ತಿದೆ. ಆದರೆ, ಯಾವುದೇ ಪ್ರಕರಣಗಳನ್ನು ಶಾಶ್ವತವಾಗಿ ಕೈಬಿಡುವುದಿಲ್ಲ. ಸಂತ್ರಸ್ತರು ಯಾವುದೇ ಹಂತದಲ್ಲೂ ಮುಂದೆ ಬಂದು ಹೇಳಿಕೆ ದಾಖಲಿಸಲು ಅವಕಾಶವಿದೆ. ಹಾಗೇನಾದರು ಆದರೆ, ತನಿಖೆ ಮುಂದುವರಿಯಲಿದೆ” ಎಂದು ಪೂಂಗುಝಿಲಿ ಸ್ಪಷ್ಟಪಡಿಸಿದ್ದಾಗಿ ವರದಿ ಹೇಳಿದೆ.

ಎಸ್‌ಐಟಿ ಸಂತ್ರಸ್ತರಿಗೆ ಮೂರು ಸುತ್ತಿನ ನೋಟಿಸ್‌ಗಳನ್ನು ನೀಡಿದೆ. ನ್ಯಾಯಾಲಯ ಕೂಡ ಮೂರು ಬಾರಿ ಸಮನ್ಸ್ ಜಾರಿ ಮಾಡಿದೆ. ಆದರೂ, ಸಂತ್ರಸ್ತರಿಂದ ಯಾವುದೇ ಪ್ರತಿಕ್ರಿಯೆಗಳು ಬಂದಿಲ್ಲ. ಇಂತಹ ಸ್ಥಿತಿಯಲ್ಲಿ ಮುಂದಿನ ತನಿಖೆ ಅಸಾಧ್ಯವಾಗಿದೆ ಎಂದು ಪೂಂಗುಝಿಲಿ ಹೇಳಿದ್ದಾರೆ.

ಈ ಹಿನ್ನಡೆಯ ಹೊರತಾಗಿಯೂ, ಹೇಮಾ ಸಮಿತಿ ವರದಿ ಮತ್ತು ಸಂತ್ರಸ್ತರ ಆರೋಪಗಳನ್ನು ಆಧರಿಸಿ ದಾಖಲಾಗಿರುವ ಸುಮಾರು 70 ಇತರ ಪ್ರಕರಣಗಳ ಪೊಲೀಸ್ ತನಿಖೆಗಳು ಮುಂದುವರೆದಿವೆ. ಇವುಗಳಲ್ಲಿ, ಸುಮಾರು 25 ಪ್ರಕರಣಗಳಲ್ಲಿ ಈಗಾಗಲೇ ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಲಾಗಿದೆ.

ಗಮನಾರ್ಹವಾಗಿ, ಈಗಾಗಲೇ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಶಾಸಕ ಎಂ. ಮುಖೇಶ್, ಸಿದ್ದಿಕ್, ಜಯಸೂರ್ಯ, ಎಡವೇಲ ಬಾಬು, ಮಣಿಯನ್‌ಪಿಳ್ಳೈ ರಾಜು ಮತ್ತು ರಂಜಿತ್ ಸೇರಿದಂತೆ ಮಲಯಾಳಂ ಚಲನಚಿತ್ರೋದ್ಯಮದ ಪ್ರಮುಖ ವ್ಯಕ್ತಿಗಳ ಹೆಸರಿದೆ.

ಮಲಯಾಳಂ ಚಿತ್ರೋದ್ಯಮದಲ್ಲಿ ಮಹಿಳಾ ಕಲಾವಿದರು ಅನುಭವಿಸುತ್ತಿರುವ ಲೈಂಗಿಕ ಮತ್ತು ಇತರ ಶೋಷಣೆಗಳ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಜುಲೈ 2017 ರಲ್ಲಿ ಹೇಮಾ ಸಮಿತಿಯನ್ನು ಸರ್ಕಾರ ರಚಿಸಿತ್ತು. ಈ ಸಮಿತಿ 31 ಡಿಸೆಂಬರ್ 2019ರಂದು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಈ ವರದಿಯನ್ನು ಸುಮಾರು ಐದು ವರ್ಷಗಳ ಬಳಿಕ,19 ಆಗಸ್ಟ್ 2024ರಂದು ಬಹಿರಂಗಗೊಳಿಸಲಾಗಿದೆ.

“ವಾಕ್ ಸ್ವಾತಂತ್ರ್ಯ ಎಂದರೆ ಇನ್ನೊಬ್ಬರ ಭಾವನೆಗಳಿಗೆ ನೋವುಂಟು ಮಾಡುವುದು ಎಂದಲ್ಲ”: ಶರ್ಮಿಸ್ತಾ ಪನೋಲಿಗೆ ಜಾಮೀನು ನೀಡಲು ಹೈಕೋರ್ಟ್ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...