Homeಮುಖಪುಟವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛ ಮಾಡಿಸುವಂತೆ ಸೂಚಿಸಿದ ಐಎಎಸ್‌ ಅಧಿಕಾರಿ: ರಾಷ್ಟ್ರೀಯ ಎಸ್‌ಸಿ ಆಯೋಗದಿಂದ ನೋಟಿಸ್

ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛ ಮಾಡಿಸುವಂತೆ ಸೂಚಿಸಿದ ಐಎಎಸ್‌ ಅಧಿಕಾರಿ: ರಾಷ್ಟ್ರೀಯ ಎಸ್‌ಸಿ ಆಯೋಗದಿಂದ ನೋಟಿಸ್

- Advertisement -
- Advertisement -

ಐಎಎಸ್‌ ಅಧಿಕಾರಿಯೊಬ್ಬರು ತೆಲಂಗಾಣದ ವೆಲ್ಫೇರ್ (ಕಲ್ಯಾಣ) ಶಾಲೆಗಳ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸುವಂತೆ ಸೂಚಿಸಿದ ಆರೋಪ ಕೇಳಿ ಬಂದಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ ನೋಟಿಸ್ ಜಾರಿ ಮಾಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆಯೋಗವು 15 ದಿನಗಳಲ್ಲಿ ಕ್ರಮ ಕೈಗೊಂಡ ವರದಿಯನ್ನು ಕೋರಿದೆ.

ತೆಲಂಗಾಣದ ಸಮಾಜ ಕಲ್ಯಾಣ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿಯ ಕಾರ್ಯದರ್ಶಿ ಎಸ್. ಅಲಗು ವರ್ಷಿಣಿ ಅವರು, ಕಲ್ಯಾಣ ಹಾಸ್ಟೆಲ್‌ಗಳು ಮತ್ತು ತರಗತಿ ಕೊಠಡಿಗಳಲ್ಲಿ ವಿದ್ಯಾರ್ಥಿಗಳ ದಿನಚರಿಯಲ್ಲಿ ಶುಚಿಗೊಳಿಸುವ ಕೆಲಸಗಳನ್ನು ಸೇರಿಸುವಂತೆ ಶಾಲಾ ಪ್ರಾಂಶುಪಾಲರಿಗೆ ನಿರ್ದೇಶನ ನೀಡಿದ್ದಾರೆ ಎಂಬ ಆಡಿಯೊ ಕ್ಲಿಪ್ ಆನ್‌ಲೈನ್‌ನಲ್ಲಿ ವ್ಯಾಪಕವಾಗಿ ವೈರಲ್ ಆದ ನಂತರ ನೋಟಿಸ್ ನೀಡಲಾಗಿದೆ.

ರಾಜ್ಯ ಸಮಾಜ ಕಲ್ಯಾಣ ಇಲಾಖೆಯಡಿ ಬರುವ ತೆಲಂಗಾಣ ಸಮಾಜ ಕಲ್ಯಾಣ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ಪರಿಶಿಷ್ಟ ಜಾತಿ ಸಮುದಾಯಗಳ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಒದಗಿಸುತ್ತದೆ.

ಸಮಾಜ ಕಲ್ಯಾಣ ಸಂಘದಿಂದ ನಡೆಸಲ್ಪಡುವ ಸಂಸ್ಥೆಗಳ ವಿದ್ಯಾರ್ಥಿಗಳು ಅತ್ಯಂತ ಬಡ ಹಿನ್ನೆಲೆಯಿಂದ ಬಂದವರು. ಹಾಗಾಗಿ, ಅವರು ಮನೆಯಲ್ಲಿದ್ದಾಗಲೂ ತಮ್ಮನ್ನು ತಾವು ಹೇಗೆ ನೋಡಿಕೊಳ್ಳಬೇಕೆಂದು ಕಲಿಯಬೇಕಾಗಿದೆ ಎಂದು ವರ್ಷಿಣಿ ಹೇಳುತ್ತಿರುವುದು ಆಡಿಯೋದಲ್ಲಿ ಕೇಳಿಬಂದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

“ಅವರು (ವಿದ್ಯಾರ್ಥಿಗಳು) ತಮ್ಮ ಕೊಠಡಿ ಸ್ವಚ್ಛಗೊಳಿಸುವ ಕೆಲಸ ಮಾಡಬೇಕು. ಇಲ್ಲದಿದ್ದರೆ ಅವರ ಕೊಠಡಿಗಳನ್ನು ಯಾರು ಸ್ವಚ್ಛಗೊಳಿಸುತ್ತಾರೆ? ಒಬ್ಬರು ಕಸ ಗುಡಿಸುವರು ಒಂದು ಸಲ ಸ್ವಚ್ಛ ಮಾಡಿದರೆ, ಇತರ ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ಏಕೆ ಸ್ವಚ್ಛ ಮಾಡಬಾರದು? ಅವರು ತಮ್ಮ ಶೌಚಾಲಯಗಳನ್ನು ಏಕೆ ಸ್ವಚ್ಛಗೊಳಿಸಲು ಸಾಧ್ಯವಿಲ್ಲ? ಅದರಲ್ಲಿ ತಪ್ಪೇನು?” ಎಂದು ವರ್ಷಿಣಿ ಹೇಳಿರುವುದಾಗಿ ಆರೋಪಿಸಲಾಗಿದೆ.

ತನ್ನ ನಿರ್ದೇಶನಕ್ಕೆ ಆಕ್ಷೇಪ ವ್ಯಕ್ತಪಡಿಸುವ ಪೋಷಕರಿಗೆ ಶೋಕಾಸ್ ನೋಟಿಸ್ ನೀಡಲಾಗುವುದು ಎಂದು ವರ್ಷಿಣಿ ಹೇಳಿದ್ದಾರೆ ಎನ್ನಲಾಗಿದೆ.

ವರ್ಷಿಣಿ ಅವರ ಮಾತು ಬೆಳಕಿಗೆ ಬಂದ ನಂತರ, ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ನಾಯಕ ಮತ್ತು ಸಂಘದ ಮಾಜಿ ಕಾರ್ಯದರ್ಶಿ ಆರ್.ಎಸ್. ಪ್ರವೀಣ್ ಕುಮಾರ್, ವರ್ಷಿಣಿ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

“ಈ ಸಂಪೂರ್ಣ ಶಿಕ್ಷಣ ಪ್ರಯೋಗ” ಸೋ ಕಾಲ್ಡ್ ಶ್ರೀಮಂತ ಸಮಾಜ ಎಂದು ಕರೆಯಲ್ಪಡುವವರಿಂದ ಮತ್ತು ಅವರ ಮಕ್ಕಳ ಪ್ರೀತಿಯ ಮನೆ, ಅಂತಾರಾಷ್ಟ್ರೀಯ ಶಾಲೆಗಳಿಂದ ಪ್ರಾರಂಭವಾಗಬೇಕು. ಅಲ್ಲದೆ ಬಡ ಮಕ್ಕಳಿಂದ ಅಲ್ಲ” ಎಂದು ಪ್ರವೀಣ್ ಕುಮಾರ್ ಸಾಮಾಜಿಕ ಮಾಧ್ಯಮಗಳಲ್ಲಿ ಹೇಳಿದ್ದಾರೆ.

“ದಮನಿತ ಸಮುದಾಯಗಳು/ಕುಟುಂಬಗಳ ಮಕ್ಕಳು ಪ್ರತಿದಿನ ತೊಟ್ಟಿಲಿನಿಂದ ಸಮಾಧಿಯವರೆಗೆ ಪ್ರತಿದಿನ ತಮ್ಮನ್ನು ತಾವು ಸಹಾಯ ಮಾಡಿಕೊಳ್ಳುವುದನ್ನು ಬಿಟ್ಟು ಬೇರೆ ದಾರಿಯಿಲ್ಲದೆ ಉಳಿದಿದ್ದಾರೆ. ಏಕೆಂದರೆ, ಅವರಿಗೆ ತಮ್ಮ ಹೊರೆಯನ್ನು ಬೇರೆಯವರ ಮೇಲೆ ಹೊರಿಸಲು ಇಷ್ಟವಿಲ್ಲ” ಎಂದಿದ್ದಾರೆ.

“ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ರಾಜ್ಯ ಸರ್ಕಾರದ ಕಾರ್ಯದರ್ಶಿ ತಮ್ಮ ಮಕ್ಕಳನ್ನು ಒಂದು ತಿಂಗಳ ಕಾಲ ಕಲ್ಯಾಣ ಹಾಸ್ಟೆಲ್‌ಗಳಲ್ಲಿ ಇರಿಸಿ, ಮೊದಲು ಅವರಿಂದ ಈ ಸ್ವ-ಸಹಾಯವನ್ನು ಮಾಡಿಸಲಿ. ಬಡವರಿಗೆ ಧರ್ಮೋಪದೇಶ ಮಾಡುವುದು ತುಂಬಾ ಸುಲಭ. ಏಕೆಂದರೆ ಅವರಿಗೆ ಬೇರೆ ಆಯ್ಕೆ ಇಲ್ಲದ ಕಾರಣ ಅವರು ಪ್ರತಿಯಾಗಿ ಪ್ರಶ್ನೆಗಳನ್ನು ಕೇಳುವುದಿಲ್ಲ” ಎಂದು ಕುಮಾರ್ ಹೇಳಿದ್ದಾರೆ.

ಆಡಿಯೋ ಕ್ಲಿಪ್ ಅನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡಿರುವ ಬಿಆರ್‌ಎಸ್ ಎಂಎಲ್‌ಸಿ ಕೆ. ಕವಿತಾ, “ಐಎಎಸ್ ಅಧಿಕಾರಿಯ ಆಘಾತಕಾರಿ ನಡವಳಿಕೆಯಲ್ಲಿ ಕಾಂಗ್ರೆಸ್ ಸರ್ಕಾರದ ಬಡವರ ವಿರೋಧಿ ನಡೆ ಕಾಣುತ್ತಿದೆ” ಎಂದಿದ್ದಾರೆ.

“ಬಿಆರ್‌ಎಸ್ ಸರ್ಕಾರದ ಅವಧಿಯಲ್ಲಿ ಪ್ರತಿ ಸಮಾಜ ಕಲ್ಯಾಣ ಶಾಲೆಗೆ ಶುಚಿಗೊಳಿಸುವ ಕಾರ್ಯಗಳಿಗಾಗಿ ನಾಲ್ಕು ತಾತ್ಕಾಲಿಕ ಕಾರ್ಮಿಕರನ್ನು ನೇಮಿಸಿಕೊಳ್ಳಲು ತಿಂಗಳಿಗೆ 40,000 ರೂ.ಗಳನ್ನು ನೀಡಲಾಗುತ್ತಿತ್ತು” ಎಂದು ಕವಿತಾ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ. “ಈ ವರ್ಷದ ಮೇ ತಿಂಗಳಿನಿಂದ ಕಾಂಗ್ರೆಸ್ ಸರ್ಕಾರ ಇದನ್ನು ನಿಲ್ಲಿಸಿದೆ” ಎಂದಿದ್ದಾರೆ.

“ರಾಜ್ಯ ಸರ್ಕಾರವು 240 ಶಾಲೆಗಳಲ್ಲಿ ಸಹಾಯಕ ಪಾಲಕರನ್ನು ಹೊಂದುವುದನ್ನು ರದ್ದುಗೊಳಿಸಿದೆ. ವಿದ್ಯಾರ್ಥಿಗಳು ವಾರ್ಡನ್‌ಗಳ ಜವಾಬ್ದಾರಿ ತೆಗೆದುಕೊಳ್ಳಲು ಮತ್ತು ಅಡುಗೆಮನೆಗಳನ್ನು ನಿರ್ವಹಿಸಲು ಒತ್ತಾಯಿಸಿದೆ” ಎಂದು ಅವರು ಆರೋಪಿಸಿದ್ದಾರೆ.

“ಈಗ ಅಧಿಕಾರಿ ಶಾಲೆಗಳಲ್ಲಿ ಶೌಚಾಲಯಗಳನ್ನು ಸ್ವಚ್ಛಗೊಳಿಸಲು ಮಕ್ಕಳನ್ನು ಒತ್ತಾಯಿಸುತ್ತಿದ್ದಾರೆ. ಅವರ ಹೇಳಿಕೆಯು ತಳ ಸಮುದಾಯಗಳ ವಿದ್ಯಾರ್ಥಿಗಳನ್ನು ಜಾತಿ ಮತ್ತು ವರ್ಗ ಪಕ್ಷಪಾತದಿಂದ ರಕ್ಷಿಸಲು ಗುರುಕುಲಗಳನ್ನು ಸ್ಥಾಪಿಸುವ ಪರಿಕಲ್ಪನೆಗೆ ವಿರುದ್ಧವಾಗಿದೆ. ಈ ನಡವಳಿಕೆಯು ತಾರತಮ್ಯ, ಶೋಷಣೆ ಮತ್ತು ಮಕ್ಕಳ ಹಕ್ಕುಗಳು ಮತ್ತು ಘನತೆಯ ಮೂಲ ತತ್ವಗಳನ್ನು ಉಲ್ಲಂಘಿಸುತ್ತದೆ” ಎಂದು ಕವಿತಾ ಹೇಳಿದ್ದಾರೆ.

ರಾಜ್ಯ ಸರ್ಕಾರವು ಐಎಎಸ್ ಅಧಿಕಾರಿಯನ್ನು ತೆಗೆದುಹಾಕಲು ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

ಐಎಎಸ್ ಅಧಿಕಾರಿ ವರ್ಷಿಣಿ ಅವರು ಮಾಧ್ಯಮಗಳೊಂದಿಗೆ ಹಂಚಿಕೊಂಡ ಮತ್ತೊಂದು ಆಡಿಯೋ ಕ್ಲಿಪ್‌ನಲ್ಲಿ, “ಈ ವಿಷಯವನ್ನು ರಾಜಕೀಯಗೊಳಿಸಬೇಡಿ. ನನ್ನ ಮಾತುಗಳನ್ನು ತಿರುಚಬೇಡಿ ಎಂದು ಮನವಿ ಮಾಡಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಶಾಲೆಗಳಲ್ಲಿ ನೈರ್ಮಲ್ಯ ಸಿಬ್ಬಂದಿ ಇಲ್ಲ ಎಂಬ ಆರೋಪಗಳು ಆಧಾರರಹಿತವೆಂದು ಅವರು ಹೇಳಿಕೊಂಡಿದ್ದು, ಮನೆಯಲ್ಲಿ ಪೋಷಕರಿಗೆ ಮಕ್ಕಳು ಸಹಾಯ ಮಾಡುವುದು ‘ಸಾಮಾನ್ಯ ದಿನನಿತ್ಯದ ಚಟುವಟಿಕೆ’. ಅದು ಅವರು ‘ಜಾಗೃತ ವ್ಯಕ್ತಿ’ ಯಾಗಿ ಬೆಳೆಯಲು ಸಹಾಯ ಮಾಡುತ್ತದೆ” ಎಂದಿದ್ದಾರೆ.

“ನೀವು ವಿದೇಶಕ್ಕೆ ಹೋದರೆ ಅಥವಾ ಬೇರೆ ರಾಜ್ಯಕ್ಕೆ ಹೋದರೆ, ನಿಮ್ಮ ದೈನಂದಿನ ಕೆಲಸವನ್ನು ನೀವೇ ಮಾಡಬೇಕು. ಕೊಠಡಿಗಳನ್ನು ಸ್ವಚ್ಛಗೊಳಿಸುವುದು, ಸ್ನಾನಗೃಹಗಳನ್ನು ತೊಳೆಯುವುದು ಮತ್ತು ಬಟ್ಟೆ ಒಗೆಯುವುದು ಸ್ವತಃ ಮಾಡಬೇಕಾಗಿದೆ. ಜೊತೆಗೆ ಅಧ್ಯಯನದತ್ತ ಗಮನ ಹರಿಸಬೇಕು. ಹಠಾತ್ ರೂಪಾಂತರವು ಸಾಮಾನ್ಯವಾಗಿ ಮಕ್ಕಳಿಗೆ ಸಮಯ ತೆಗೆದುಕೊಳ್ಳುತ್ತದೆ” ಎಂದು ಹೇಳಿದ್ದಾರೆ.

ಹೇಮಾ ಸಮಿತಿ ವರದಿ| ತನಿಖೆಗೆ ಸಂತ್ರಸ್ತರ ಅಸಹಕಾರ: ಕೆಲ ಪ್ರಕರಣಗಳನ್ನು ಕೈಬಿಡಲು ಮುಂದಾದ ಎಸ್‌ಐಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...