Homeಮುಖಪುಟಪುಟ್ಟ ಮಗುವಿನ ಬಿರಿಯಾನಿ ಕೋರಿಕೆಗೆ ಸ್ಪಂದಿಸಿದ ಕೇರಳ ಸರ್ಕಾರ: ಅಂಗನವಾಡಿಗಳ ಆಹಾರದ ಮೆನು ಪರಿಷ್ಕರಣೆ

ಪುಟ್ಟ ಮಗುವಿನ ಬಿರಿಯಾನಿ ಕೋರಿಕೆಗೆ ಸ್ಪಂದಿಸಿದ ಕೇರಳ ಸರ್ಕಾರ: ಅಂಗನವಾಡಿಗಳ ಆಹಾರದ ಮೆನು ಪರಿಷ್ಕರಣೆ

- Advertisement -
- Advertisement -

ಅಂಗನವಾಡಿಯಲ್ಲಿ ಉಪ್ಪಿಟ್ಟಿನ ಬದಲು ಬಿರಿಯಾನಿ ಮತ್ತು ಚಿಕನ್ ಫ್ರೈ ನೀಡುವಂತೆ ಕೇರಳದ ಮಗುವೊಂದು ವಿನಂತಿಸುವ ವಿಡಿಯೋ ಕಳೆದ ಫೆಬ್ರವರಿಯಲ್ಲಿ ವೈರಲ್ ಆಗಿತ್ತು. ಈ ಕುರಿತು ಪ್ರತಿಕ್ರಿಯಿಸಿದ್ದ ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ವೀಣಾ ಜಾರ್ಜ್ ಅವರು, ಅಂಗನವಾಡಿ ಕೇಂದ್ರಗಳ ಆಹಾರದ ಮೆನು ಪರಿಷ್ಕರಿಸುವ ಬಗ್ಗೆ ಯೋಚಿಸುತ್ತೇವೆ ಎಂದಿದ್ದರು.

ಅದರಂತೆ ಈಗ ರಾಜ್ಯದ 33,120 ಅಂಗನವಾಡಿ ಕೇಂದ್ರಗಳ ಆಹಾರದ ಮೆನು ಪರಿಷ್ಕರಣೆಯಾಗಿದೆ. ಬಿರಿಯಾನಿ, ಪಲಾವ್‌ನಂತಹ ವೈವಿಧ್ಯಮಯ ಆಹಾರಗಳು ಸೇರ್ಪಡೆಯಾಗಿವೆ.

ಮಂಗಳವಾರ, ಪತ್ತನಂತಿಟ್ಟ ಜಿಲ್ಲೆಯಲ್ಲಿ ಅಂಗನವಾಡಿಗಳ ರಾಜ್ಯಮಟ್ಟದ ಪುನರಾರಂಭವನ್ನು ಉದ್ಘಾಟಿಸಿದ ಸಚಿವೆ ವೀಣಾ ಜಾರ್ಜ್, “ಸಂಕುನಂತಹ ಮಕ್ಕಳ ಕೋರಿಕೆಗಳನ್ನು ಸ್ವೀಕರಿಸುವ ಮೂಲಕ ಸರ್ಕಾರವು ಆಹಾರ ಮೆನುವನ್ನು ಪರಿಷ್ಕರಿಸಿದೆ” ಎಂದು ಹೇಳಿದ್ದಾರೆ.

“ಎಲ್ಲಾ ಅಂಗನವಾಡಿಗಳಲ್ಲಿ ಮೆನು ಪರಿಷ್ಕರಿಸುವುದು ಮತ್ತು ಏಕರೂಪದ ಆಹಾರ ವಿತರಿಸುವುದು ಮುಖ್ಯ ಎಂದು ನಾವು ಅರಿತುಕೊಂಡಿದ್ದೇವೆ. ನಾವು ಈಗಾಗಲೇ ಮಕ್ಕಳಿಗೆ ಮೊಟ್ಟೆ ಕೊಡುತ್ತಿರುವುದರಿಂದ, ಹೊಸದಾಗಿ ಮೊಟ್ಟೆ ಬಿರಿಯಾನಿ ಮತ್ತು ಪಲಾವ್ ಅನ್ನು ಪರಿಚಯಿಸಲು ನಿರ್ಧರಿಸಿದ್ದೇವೆ. ಪ್ರಸ್ತುತ ವಾರದಲ್ಲಿ ಎರಡು ದಿನ ಹಾಲು, ಮೊಟ್ಟೆ ಕೊಡಲಾಗ್ತಿದೆ. ಅದನ್ನು ಮೂರು ದಿನಗಳಿಗೆ ವಿಸ್ತರಿಸುವ ಬಗ್ಗೆ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರ ಗುಂಪಿನಿಂದ ಮನವಿ ಬಂದಿದೆ. ಇದಕ್ಕೆ ಹಣಕಾಸು ಇಲಾಖೆ ಹಣವನ್ನು ಅನುಮೋದನೆ ನೀಡಲಿದೆ” ಎಂದಿದ್ದಾರೆ.

ಪರಿಷ್ಕೃತ ಆಹಾರ ಮೆನುವಿನಲ್ಲಿ ಹಾಲು ಮತ್ತು ಮೊಟ್ಟೆ ಜೊತೆಗೆ ಪಿಡಿ (ಅಕ್ಕಿ ಡಂಪ್ಲಿಂಗ್ಸ್), ಹೆಸರುಕಾಳಿನ ಕರಿ, ಅನ್ನ, ನ್ಯೂಟ್ರಿ ಲಡ್ಡೂ, ಸೋಯಾ ಡ್ರೈ ಫ್ರೈ, ಹುರಿದ ತರಕಾರಿಗಳು ಮತ್ತು ಮುರಿದ ಗೋಧಿ ಪುಲಾವ್ ಮುಂತಾದ ಭಕ್ಷ್ಯಗಳಿವೆ.

ಅಂಗನವಾಡಿಗಳಲ್ಲಿ ಮಕ್ಕಳ ದೈಹಿಕ, ಮಾನಸಿಕ ಮತ್ತು ಬೌದ್ಧಿಕ ಯೋಗಕ್ಷೇಮವನ್ನು ಪರಿಶೀಲಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ‘ಕುಂಜೂಸ್’ ಎಂಬ ಹೊಸ ಉಪಕ್ರಮವನ್ನು ಈ ವರ್ಷದಿಂದ ಪ್ರಾರಂಭಿಸಿದೆ. ಸುಮಾರು 5 ಲಕ್ಷಕ್ಕೂ ಹೆಚ್ಚು ಮಕ್ಕಳ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯಗಳನ್ನು ನಿರ್ಣಯಿಸಲು ಶಿಕ್ಷಕರಿಗೆ ಸಹಾಯ ಮಾಡುವ ‘ಕುಂಜೂಸ್’ ಕಾರ್ಡ್‌ಗಳನ್ನು ವಿತರಿಸಲಾಗಿದೆ ಎಂದು ಸಚಿವೆ ವೀಣಾ ಜಾರ್ಚ್ ತಿಳಿಸಿದ್ದಾರೆ.

ಇಡುಕ್ಕಿ ಜಿಲ್ಲೆಯ ದೇವಿಕುಳಂ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಕೇಂದ್ರ -1ರ ‘ಶಂಕು’ ಎಂದು ಅಕ್ಕರೆಯಿಂದ ಕರೆಯಲ್ಪಡುವ ಮಗು ಪ್ರಜುಲ್ ಎಸ್‌ ಸುಂದರ್ ಬಿರಿಯಾನಿ ಬೇಕು ಎಂದು ತನ್ನ ಆಸೆಯನ್ನು ವ್ಯಕ್ತಪಡಿಸಿತ್ತು. ಮಗುವಿನ ತಾಯಿ ಅದನ್ನು ವಿಡಿಯೋ ಮಾಡಿ ಹರಿಬಿಟ್ಟಿದ್ದರು.

ಜೆಎನ್‌ಯು ಅಧಿಕೃತ ದಾಖಲೆಗಳಲ್ಲಿ ‘ಕುಲಪತಿ’ ಬದಲಿಗೆ ‘ಕುಲಗುರು’ ಪದ ಬಳಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...