Homeಮುಖಪುಟಏಳು ವರ್ಷಗಳ ವಿಳಂಬ; ಜನಗಣತಿ ವೇಳಾಪಟ್ಟಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

ಏಳು ವರ್ಷಗಳ ವಿಳಂಬ; ಜನಗಣತಿ ವೇಳಾಪಟ್ಟಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

- Advertisement -
- Advertisement -

ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯ ವೇಳಾಪಟ್ಟಿಯನ್ನು ಕೇಂದ್ರ ಸರ್ಕಾರ ಬುಧವಾರ (ಜೂ.4) ಪ್ರಕಟಿಸಿದೆ. ದೇಶದಾದ್ಯಂತ ಮಾರ್ಚ್ 1, 2027 ರಿಂದ ಗಣತಿ ಪ್ರಾರಂಭವಾಗಲಿದೆಯಾದರೂ, ಲಡಾಖ್, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಂತ ಹಿಮ ಪ್ರದೇಶಗಳ ರಾಜ್ಯಗಳಲ್ಲಿ ಅಕ್ಟೋಬರ್ 1, 2026ರಂದು ಗಣತಿ ಪ್ರಾರಂಭವಾಗಲಿದೆ ಎಂದು ಸರ್ಕಾರ ತಿಳಿಸಿದೆ. ಏಳು ವರ್ಷಗಳ ವಿಳಂಬ

ದೇಶದಾದ್ಯಂತ ಕೊನೆಯ ಬಾರಿ ಜನಗಣತಿ 2011ರಲ್ಲಿ ನಡೆಸಲಾಗಿತ್ತು. ಹತ್ತು ವರ್ಷಗಳ ನಂತರ 2021ರಲ್ಲಿ ಗಣತಿ ಮಾಡಬೇಕಾಗಿತ್ತು. ಆದರೆ, ಕೊರೊನಾ ಕಾರಣ ನೀಡಿ ಸರ್ಕಾರ ಗಣತಿ ಮುಂದೂಡಿತ್ತು. ಕೊರೊನಾ ಬಳಿಕವೂ ತಾಂತ್ರಿಕ ಮತ್ತು ಆಡಳಿತಾತ್ಮಕ ಸಮಸ್ಯೆಗಳ ಕಾರಣ ನೀಡಿ ಗಣತಿ ಮುಂದೂಡಲಾಗಿತ್ತು. ಆದ್ದರಿಂದ ಏಳು ವರ್ಷಗಳ ವಿಳಂಬದ ನಂತರ ಈಗ ಗಣತಿ ನಡೆಸಲು ಸರ್ಕಾರ ಮುಂದಾಗಿದೆ.

“ಜನಸಂಖ್ಯಾ ಗಣತಿ-2027 ಅನ್ನು ಜಾತಿ ಗಣತಿಯೊಂದಿಗೆ ಎರಡು ಹಂತಗಳಲ್ಲಿ ನಡೆಸಲು ನಿರ್ಧರಿಸಲಾಗಿದೆ. ಜನಸಂಖ್ಯಾ ಗಣತಿ-2027 ರ ಉಲ್ಲೇಖ ದಿನಾಂಕವು ಮಾರ್ಚ್, 2027ರ ಮೊದಲ ದಿನದ 00:00 ಗಂಟೆಗಳು ಆಗಿರುತ್ತದೆ” ಎಂದು ಕೇಂದ್ರ ಗೃಹ ಸಚಿವಾಲಯ (MHAS) ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಲಡಾಖ್ ಮತ್ತು ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಗಳು, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಿಗೆ ಉಲ್ಲೇಖ ದಿನಾಂಕವು ಅಕ್ಟೋಬರ್, 2026 ರ ಮೊದಲ ದಿನದ 00.00 ಗಂಟೆಗಳು” ಎಂದು ಗೃಹ ಸಚಿವಾಲಯ ಹೇಳಿದೆ.

“ಜನಸಂಖ್ಯಾ ಗಣತಿಯನ್ನು ನಡೆಸುವ ಉದ್ದೇಶಕ್ಕಾಗಿ ಅಧಿಸೂಚನೆಯನ್ನು ಮೇಲಿನ ಉಲ್ಲೇಖ ದಿನಾಂಕಗಳೊಂದಿಗೆ 1948 ರ ಜನಗಣತಿ ಕಾಯ್ದೆಯ ಸೆಕ್ಷನ್ 3 ರ ನಿಬಂಧನೆಗಳ ಪ್ರಕಾರ, ಜೂನ್ 16, 2025 ರಂದು ಅಧಿಕೃತ ಗೆಜೆಟ್‌ನಲ್ಲಿ ತಾತ್ಕಾಲಿಕವಾಗಿ ಪ್ರಕಟಿಸಲಾಗುವುದು” ಎಂದು ಗೃಹ ಸಚಿವಾಲಯ ತಿಳಿಸಿದೆ.

ಭಾರತದ ಜನಗಣತಿಯನ್ನು 1948 ರ ಜನಗಣತಿ ಕಾಯ್ದೆ ಮತ್ತು 1990 ರ ಜನಗಣತಿ ನಿಯಮಗಳ ಅಡಿಯಲ್ಲಿ ನಡೆಸಲಾಗುತ್ತದೆ.

ಭಾರತದ ಕೊನೆಯ ಜನಗಣತಿಯನ್ನು 2011ರಲ್ಲಿ ಎರಡು ಹಂತಗಳಲ್ಲಿ ನಡೆಸಲಾಗಿತ್ತು. ಮೊದಲನೆಯದು ಮನೆ ಪಟ್ಟಿ (HLO),ಇದನ್ನು 2010 ರ ಏಪ್ರಿಲ್ 1 ರಿಂದ ಸೆಪ್ಟೆಂಬರ್ 30 ರ ನಡುವೆ ನಡೆಸಲಾಗಿತ್ತು ಮತ್ತು ಎರಡನೆಯದು ಜನಸಂಖ್ಯಾ ಗಣತಿ (PE), ಇದನ್ನು 2011ರ ಫೆಬ್ರವರಿ 9 ರಿಂದ 28 ರ ನಡುವೆ ನಡೆಸಲಾಗಿತ್ತು.

2021ರ ಜನಗಣತಿಯನ್ನು ಎರಡು ಹಂತಗಳಲ್ಲಿ ಇದೇ ರೀತಿ ನಡೆಸಲು ಪ್ರಸ್ತಾಪಿಸಲಾಗಿತ್ತು. ಮೊದಲ ಹಂತ 2020ರ ಏಪ್ರಿಲ್ -ಸೆಪ್ಟೆಂಬರ್ ನಡುವೆ ಮತ್ತು ಎರಡನೇ ಹಂತ 2021ರ ಫೆಬ್ರವರಿಯಲ್ಲಿ ನಡೆಸಲು ಉದ್ದೇಶಿಸಲಾಗಿತ್ತು.

“2021ರಲ್ಲಿ ಜನಗಣತಿಯ ಮೊದಲ ಹಂತದ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿತ್ತು. ಏಪ್ರಿಲ್ 1, 2020 ರಿಂದ ಕೆಲವು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಕ್ಷೇತ್ರಕಾರ್ಯವನ್ನು ಪ್ರಾರಂಭಿಸಲು ನಿರ್ಧರಿಸಲಾಗಿತ್ತು. ಆದರೆ, ದೇಶಾದ್ಯಂತ ಕೊರೊನಾ ಸಾಂಕ್ರಾಮಿಕ ರೋಗ ಹರಡಿದ ಕಾರಣ ಜನಗಣತಿ ಕಾರ್ಯವನ್ನು ಮುಂದೂಡಲಾಯಿತು” ಎಂದು ಗೃಹ ಸಚಿವಾಲಯ ತಿಳಿಸಿದೆ.

ಕಳೆದ ಏಪ್ರಿಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯ ಸಭೆಯ ನಂತರ, ಜನಗಣತಿಯ ಜೊತೆಗೆ ಜಾತಿ ಆಧಾರಿತ ಗಣತಿ ನಡೆಸಲು ತೀರ್ಮಾನಿಸಿರುವುದಾಗಿ ಸರ್ಕಾರ ತಿಳಿಸಿತ್ತು. “ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿರುವ ಮೋದಿ ಸರ್ಕಾರ ಇಂದು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ” ಎಂದು ಗೃಹ ಸಚಿವ ಅಮಿತ್ ಶಾ ಎಕ್ಸ್‌ನಲ್ಲಿ ಅಂದು ಹೇಳಿದ್ದರು.

ಸ್ವಾತಂತ್ರ್ಯದ ನಂತರ, 1951ರಿಂದ ದೇಶದ ಜನಸಂಖ್ಯಾ ಗಣತಿಯನ್ನು ಪ್ರತಿ 10 ವರ್ಷಗಳಿಗೊಮ್ಮೆ ನಡೆಸಲಾಗುತ್ತಿದೆ. ಭಾರತದ ಜನಗಣತಿಯನ್ನು ಮೊದಲು 1872 ರಲ್ಲಿ ಭಾರತದಲ್ಲಿ ಪರಿಚಯಿಸಲಾಯಿತು. ಜನಗಣತಿ ಸಮಯದಲ್ಲಿ ನಾಗರಿಕರಿಗೆ ಕೇಳಲು ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರ ಕಚೇರಿ 31 ಪ್ರಶ್ನೆಗಳನ್ನು ಸಿದ್ಧಪಡಿಸಿತ್ತು.

2011 ರ ಮಾಹಿತಿಯ ಪ್ರಕಾರ, ಭಾರತದ ಒಟ್ಟು ಜನಸಂಖ್ಯೆ 121 ಕೋಟಿ, ಲಿಂಗ ಅನುಪಾತವು 1,000 ಪುರುಷರಿಗೆ 940 ಮಹಿಳೆಯರು, ಸಾಕ್ಷರತಾ ಪ್ರಮಾಣವು 74.04 ಪ್ರತಿಶತ ಆಗಿತ್ತು. ಜೊತೆಗೆ 2001 ರಿಂದ 2011 ರವರೆಗೆ ಜನಸಂಖ್ಯಾ ಬೆಳವಣಿಗೆ 17.64 ಪ್ರತಿಶತದಷ್ಟಿತ್ತು. ಏಳು ವರ್ಷಗಳ ವಿಳಂಬ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಜುಲೈ 21 ರಿಂದ ಆಗಸ್ಟ್ 12 ರವರೆಗೆ ಸಂಸತ್ತಿನ ಮಳೆಗಾಲದ ಅಧಿವೇಶನ

ಜುಲೈ 21 ರಿಂದ ಆಗಸ್ಟ್ 12 ರವರೆಗೆ ಸಂಸತ್ತಿನ ಮಳೆಗಾಲದ ಅಧಿವೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...