Homeಮುಖಪುಟಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಮೇಲೆ FIR!

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಮೇಲೆ FIR!

- Advertisement -
- Advertisement -

ಪ್ರಮುಖ ರಿಯಲ್ ಎಸ್ಟೇಟ್ ಗ್ರೂಪ್ ಆಮ್ರಪಾಲಿ ಜೊತೆಗಿನ ಒಡನಾಟ ಭಾರತ ಕ್ರೀಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ದೋನಿಗೆ ಉರುಳಾಗಿ ಪರಿಣಾಮಿಸಿದೆ. ಅಮ್ರಪಾಲಿ ಹಗರಣದ ಪಿತೂರಿಯಲ್ಲಿ ಎಂ.ಎಸ್.ಧೋನಿ ಭಾಗಿಯಾಗಿದ್ದಾರೆಂದು ಆರೋಪಿಸಿ ಎಫ್.ಐ.ಆರ್ ದಾಖಲಿಸಲಾಗಿದೆ.

ಆಮ್ರಪಾಲಿ ರಿಯಲ್ ಎಸ್ಟೇಟ್ ಗ್ರೂಪ್‌ನ ರಾಯಭಾರಿಯಾಗಿದ್ದ ಧೋನಿ ಮತ್ತು ಬಿಲ್ಡರ್ ಅನಿಲ್ ಶರ್ಮ ಹೆಸರಾಂತ ವ್ಯಕ್ತಿಗಳಾಗಿದ್ದು ಅವರ ಮೇಲಿನ ನಂಬಿಕೆಯಿಂದಲೇ ನಾವು ಪ್ಲಾಟುಗಳನ್ನು ಕೊಂಡಕೊಳ್ಳಲು ಹಣ ಹೂಡಿಕೆ ಮಾಡಿದ್ದಾಗಿ ಎಫ್.ಐ.ಆರ್ ನಲ್ಲಿ ಬಾಧಿತರು ಹೇಳಿಕೊಂಡಿದ್ದಾರೆ.

ಆಮ್ರಪಾಲಿ ಸಂಸ್ಥೆ ಪ್ಲಾಟ್‌ಗಳನ್ನು ನೀಡುವ ನೆಪದಲ್ಲಿ ದೊಡ್ಡ ಮೊತ್ತದಲ್ಲಿ ಹಣ ಸಂಗ್ರಹಿಸಿ ನಂತರ ಬೇರೆ ಕಂಪನಿಗಳಿಗೆ ನಿಯಮಗಳಿಗೆ ವಿರುದ್ಧವಾಗಿ ಹಣ ವರ್ಗಾಯಿಸಿದೆ ಎಂದು ಆರೋಪಿಸಲಾಗಿದೆ. ಹೀಗೆ ವರ್ಗಾಯಿಸಿದ ಕಂಪನಿಗಳಲ್ಲಿ ಎಂ.ಎಸ್.ಧೋನಿಯ ಹೆಂಡತಿ ಸಾಕ್ಷಿ ಧೋನಿಯ ಕಂಪನಿಯೂ ಕೂಡ ಇದೆ ಎಂದು ಹೇಳಲಾಗಿದೆ.

ಜುಲೈ 23ರಿಂದ ಇಲ್ಲಿಯವರೆಗೆ ಎಫ್‌ಐಆರ್ ದಾಖಲಿಸಿರುವ ಏಳು ಖರೀದಿದಾರರ ಗುಂಪುಗಳು ಒ2 ವ್ಯಾಲಿ, ಲಾ ರೆಸಿಡೆಂಟಿಯಾ, ಸಿಲಿಕಾನ್ ಸಿಟಿ, ಕರಿಸ್ಟಲ್ ಹೋಮ್ಸ್, ಲೀಜರ್ ವ್ಯಾಲಿ, ಆದರ್ಶ್ ಆವಾಸ್ ಯೋಜನೆ ಮತ್ತು ಕಿಂಗ್ಸ್ವುಡ್‌ನ ವಸತಿ ಯೋಜನೆಗಳಿಗೆ ಸೇರಿವೆ. ಎಫ್‌ಐಆರ್‌ಗಳಲ್ಲಿ ಅನಿಲ್ ಕೆ ಶರ್ಮಾ ಮತ್ತು ಇತರ ನಿರ್ದೇಶಕರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ.

ಆದರೆ ಎಂ.ಎಸ್.ಧೋನಿ ಪಾತ್ರವನ್ನು ಪರಿಶೀಲಿಸುವಂತೆ ನಾವು ತನಿಖಾ ಸಂಸ್ಥೆಗೆ ವಿನಂತಿಸಿಲಾಗಿದೆ. ನೋಯ್ಢಾ ಪ್ರಾಧಿಕಾರಗಳಿಂದ ಯಾವುದೇ ಅನುಮೋದನೆ ಪಡೆಯದೆ ಡೆವಲಪರ್ ಈ ಎಲ್ಲಾ ಯೋಜನೆಗಳನ್ನು ಪ್ರಾರಭಿಸಿದ್ದಾರೆ ಎನ್ನುವ ಆರೋಪವು ಆಮ್ರಪಾಲಿ ಸಂಸ್ಥೆಯ ಮೇಲಿದೆ.

ಇದನ್ನೂ ಓದಿ: ರಿಯಲ್ ಎಸ್ಟೇಟ್ ಹಗರಣದ ಕೇಸಿನಿಂದ ಬಚಾವಾಗಲು ಬಿಜೆಪಿ ಸೇರಿದರಾ ಗೌತಮ್ ಗಂಭೀರ್

ಠೇವಣಿದಾರರ ಜೊತೆಗಿನ ಒಪ್ಪಂದದ ಪ್ರಕಾರ ಆಮ್ರಪಾಲಿ ಕಂಪನಿ ಪ್ಲಾಟ್‌ಗಳನ್ನು ಹಸ್ತಾಂತರಿಸಿಲ್ಲ ಎಂದು ಸುಪ್ರೀಂಕೋರ್ಟ್‌ಗೆ ದೂರುಗಳು ಹೋಗಿದ್ದವು. ಇದರಿಂದ ಸುಪ್ರೀಂಕೋರ್ಟ್ 2017ರಲ್ಲಿ ತನಿಖೆಗೆ ಆದೇಶಿಸಿತ್ತು . ನ್ಯಾಯಾಲದಿಂದ ನೇಮಕಗೊಂಡ ಲೆಕ್ಕಪರಿಶೋಧಕರು ಕಂಪನಿಯ ಖಾತೆಯನ್ನು ಪರಿಶೀಲಿಸಿ ಈ ಸಂಸ್ಥೆ ಸಾವಿರಾರು ಕೋಟಿ ಜನಸಾಮಾನ್ಯರ ಹಣವನ್ನು ಸಂಗ್ರಹಿಸಿರುವುದನ್ನು ಬಹಿರಂಗಪಡಿಸಲಾಯಿತು.

2003ರಲ್ಲಿ ಸ್ಥಾಪನೆಯಾದ ಅಮ್ರಪಾಲಿ ಗ್ರೂಪ್ ತನ್ನ ಸಿ.ಎಂ.ಡಿ ಅನಿಲ್ ಶರ್ಮಾರ ಆಡಳಿತದಲ್ಲಿ 2010ರ ವೇಳೆಗೆ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಯಾಗಿ ಹೊರಹೊಮ್ಮಿತು. ಹಾಗೇಯೇ ಶಿಕ್ಷಣ, ಮನರಂಜನೆ, ಎಫ್.ಎಮ್.ಸಿ.ಜಿ, ಮೂಲಸೌಕರ್ಯ, ಹೋಟೆಲ್‌ಗೆ ಸಂಬಂಧಿಸಿದಂತೆ 150 ಕಂಪನಿಗಳನ್ನು ಈ ಸಮಯದಲ್ಲಿ ಹೊಸದಾಗಿ ಪ್ರಾರಂಭಿಸಿದರು. ಈ ಎಲ್ಲಾ ಚುಟುವಟಿಕೆಗಳಲ್ಲಿ ಆಮ್ರಪಾಲಿ ಸಂಸ್ಥೆ ಜನಸಾಮಾನ್ಯರ ಹಣವನ್ನು ದೊಡ್ಡ ಮಟ್ಟದಲ್ಲಿ ದುರುಪಯೋಗ ಪಡಿಸಿಕೊಂಡಿರುವ ಆರೋಪ ಹೊತ್ತಿಕೊಂಡಿದೆ. ಈಗ ಈ ಸಂಸ್ಥೆಯ ಜೊತೆಗಿದ್ದ ಧೋನಿಗೂ ಇದರ ಬಿಸಿ ತಟ್ಟಿದಂತೆ ಕಾಣುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...