Homeಮುಖಪುಟನ್ಯಾಯಾಧೀಶರ ವರ್ಗಾವಣೆಯಿಂದಾಗಿ ದೆಹಲಿ ಗಲಭೆ ಪ್ರಕರಣದ 17,000 ಪುಟಗಳ ಆರೋಪಪಟ್ಟಿ ಮರುಮಂಡನೆ; ಸಂತ್ರಸ್ತರಿಗೆ ಹತಾಶೆ

ನ್ಯಾಯಾಧೀಶರ ವರ್ಗಾವಣೆಯಿಂದಾಗಿ ದೆಹಲಿ ಗಲಭೆ ಪ್ರಕರಣದ 17,000 ಪುಟಗಳ ಆರೋಪಪಟ್ಟಿ ಮರುಮಂಡನೆ; ಸಂತ್ರಸ್ತರಿಗೆ ಹತಾಶೆ

- Advertisement -
- Advertisement -

ನವದೆಹಲಿ: ನ್ಯಾಯಾಧೀಶರ ವರ್ಗಾವಣೆಯಿಂದಾಗಿ 2020ರ ದೆಹಲಿ ಗಲಭೆ ಪ್ರಕರಣದ ತೀರ್ಪು ಮತ್ತೊಮ್ಮೆ ನಿಧಾನಗತಿಗೆ ಕಾರಣವಾಗಿದೆ. ಈ ಬೆಳವಣಿಗೆ ಪ್ರಕರಣದ ಮುಸ್ಲಿಂ ಸಂತ್ರಸ್ತ ಕುಟುಂಬಗಳು ಮತ್ತು ಆರೋಪಿಗಳಲ್ಲಿ ಹತಾಶೆಯನ್ನು ಮೂಡಿಸಿದೆ.

ಈ ಪ್ರಕರಣವನ್ನು ಹೊಸ ನ್ಯಾಯಾಧೀಶರಿಗೆ ವರ್ಗಾಯಿಸಿದ ನಂತರ ದೆಹಲಿ ಪೊಲೀಸರು ಈಗ 17,000 ಪುಟಗಳ ಆರೋಪಪಟ್ಟಿಯನ್ನು ಹೊಸದಾಗಿ ಮಂಡಿಸಬೇಕಾಗುತ್ತದೆ. ಇದು ಕಾನೂನು ತಜ್ಞರು ಮತ್ತು ಸಮುದಾಯದ ಮುಖಂಡರು ಸೇರಿದಂತೆ ಹಲವಾರು ಕಡೆಗಳಿಂದ ಟೀಕೆಗೆ ಕಾರಣವಾಗಿದೆ. ನ್ಯಾಯಾಧೀಶರ ವರ್ಗಾವಣೆಯ ಕಾರಣದಿಂದಾಗುವ ಈ ವಿಳಂಬವನ್ನು ನಮಗೆ ನ್ಯಾಯ ನಿರಾಕರಿಸುವ ವಿಶಾಲ ಮಾದರಿಯ ಭಾಗವೆಂದು ಸಂತ್ರಸ್ತರು  ಪರಿಗಣಿಸುತ್ತಾರೆ.

2020ರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ಅತ್ಯಂತ ಗಂಬೀರ ಕೋಮುಗಲಭೆ ಉಂಟಾಗಿತ್ತು.  ಈ ಹಿಂಸಾಚಾರದಲ್ಲಿ 53 ಜನರು ಜೀವ ಕಳೆದುಕೊಂಡಿದ್ದರು. ಅವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದರು ಮತ್ತು 700ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಘಟನೆ ನಡೆದು 4 ವರ್ಷಗಳು ಕಳೆದಿವೆ, ಆದರೆ ಪ್ರಕರಣವನ್ನು ನ್ಯಾಯಾಲಯದಲ್ಲಿ ಎಳೆದಾಡಲಾಗುತ್ತಿದೆ.

ಸೋಮವಾರದಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಲಲಿತ್ ಕುಮಾರ್ ನಿರ್ದೇಶನ ನೀಡಿ, ಗಲಭೆಯ ಆರೋಪಗಳ ಕುರಿತು ವಾದಗಳನ್ನು ಪೂರ್ಣಗೊಳಿಸಲು ಎಷ್ಟು ಸಮಯ ಬೇಕಾಗುತ್ತದೆ ಎಂಬುದನ್ನು ಪ್ರಾಸಿಕ್ಯೂಷನ್ ಮತ್ತು ಪ್ರತಿವಾದಿ ವಕೀಲರು ಸ್ಪಷ್ಟಪಡಿಸುವಂತೆ ಕೇಳಿದರು. “ನಾವು ವಾದಗಳನ್ನು ಮತ್ತು ಆರೋಪಗಳ ರಚನೆಯನ್ನು ವೇಗಗೊಳಿಸಬೇಕು. ಇದು ಅನಿರ್ದಿಷ್ಟವಾಗಿ ಮುಂದುವರಿಯಲು ಬಿಡಬಾರದು” ಎಂದು ಅವರು ಹೇಳಿದರು. ಮುಂದಿನ ವಿಚಾರಣೆಯನ್ನು ನಾಳೆಗೆ (ಜೂನ್ 6) ಮುಂದೂಡಲಾಗಿದೆ.

ಈ ಹಿಂದೆ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ನ್ಯಾಯಾಧೀಶ ಸಮೀರ್ ಬಾಜ್‌ಪೈ ಅವರ ವರ್ಗಾವಣೆಯ ನಂತರ ಈ ಪ್ರಕರಣವು ನ್ಯಾಯಾಧೀಶ ಲಲಿತ್ ಕುಮಾರ್ ಮುಂದೆ ಬಂದಿದೆ. ಎಎಸ್‌ಜೆ ಲಲಿತ್ ಕುಮಾರ್ ಈಗ ಅಧಿಕಾರ ವಹಿಸಿಕೊಂಡಿದ್ದಾರೆ. ಡಿಸೆಂಬರ್ 2023ರಲ್ಲಿ ನ್ಯಾಯಾಧೀಶ ಅಮಿತಾಬ್ ರಾವತ್ ಅವರು ತಾವು  ವರ್ಗಾವಣೆಯಾಗುವ ಮೊದಲು ಈ ಪ್ರಕರಣದ ದೈನಂದಿನ ವಿಚಾರಣೆಗೆ ಆದೇಶಿಸಿದ್ದರು.  ಅವರ ಈ ಆದೇಶವನ್ನು ನಂತರ ಬಂದ  ನ್ಯಾಯಾಧೀಶ ಬಾಜ್‌ಪೈ ಬದಲಾಯಿಸಿದ್ದರು. ನ್ಯಾಯಾಂಗ ಪುನರ್ರಚನೆಯಿಂದಾಗಿ ಪ್ರಕರಣಕ್ಕೆ ಅಡ್ಡಿಯಾಗುತ್ತಿರುವುದು ಇದು ಮೂರನೇ ಬಾರಿಯಾಗಿದೆ. ಮತ್ತೊಂದು ವಿಳಂಬದ ಸುದ್ದಿ ಮುಸ್ಲಿಂ ಸಮುದಾಯದ ಅನೇಕರನ್ನು ಕೆರಳಿಸಿದೆ.

ಈ ಗಲಭೆಯಲ್ಲಿ ಸಹೋದರನನ್ನು ಕಳೆದುಕೊಂಡಿರುವ ಮೊಹಮ್ಮದ್ ರಿಜ್ವಾನ್ ಅವರು, “ನಾವು ನ್ಯಾಯಕ್ಕಾಗಿ ಕಳೆದ 4 ವರ್ಷಗಳಿಂದಲೂ ಕಾಯುತ್ತಿದ್ದೇವೆ. ನಾವು ಪ್ರತಿ ಬಾರಿ ತೀರ್ಪಿಗಾಗಿ ಕಾಯುತ್ತಿರುವಾಗ ಅವರು ನ್ಯಾಯಾಧೀಶರನ್ನು ಬದಲಾಯಿಸುತ್ತಾರೆ. ಸತ್ಯ ಹೊರಬರುವುದನ್ನು ಅವರು ಬಯಸುತ್ತಿಲ್ಲ ಎಂದು ಕಾಣುತ್ತಿದೆ” ಎಂದರು.

ಆರೋಪಿಗಳಲ್ಲಿ ಒಬ್ಬರನ್ನು ಪ್ರತಿನಿಧಿಸುತ್ತಿರುವ ವಕೀಲೆ ಫರಾನಾಜ್ ಅವರು, ‘ನ್ಯಾಯಾಧೀಶರ ನಿರಂತರ ಬದಲಾವಣೆ ಸಾಮಾನ್ಯವಲ್ಲ. ನ್ಯಾಯ ನೀಡುವುದಕ್ಕಿಂತ ಪ್ರಕರಣವನ್ನು ವಿಳಂಬ ಮಾಡುವುದರಲ್ಲಿ ರಾಜ್ಯವು ಹೆಚ್ಚು ಆಸಕ್ತಿ ತೋರುತ್ತಿದೆ. ಏತನ್ಮಧ್ಯೆ, ಮುಗ್ಧ ಜನರು ಕಠಿಣ ಕಾನೂನುಗಳ ಅಡಿಯಲ್ಲಿ ಜೈಲಿನಲ್ಲಿ ಕೊಳೆಯುತ್ತಿದ್ದಾರೆ” ಎಂದರು.

ಪ್ರಕರಣದ ಆರೋಪಿಗಳಲ್ಲಿ ತಾಹಿರ್ ಹುಸೇನ್, ಉಮರ್ ಖಾಲಿದ್, ಖಾಲಿದ್ ಸೈಫಿ, ಇಶ್ರತ್ ಜಹಾನ್, ಗುಲ್ಫಿಶಾ ಫಾತಿಮಾ, ಮೀರನ್ ಹೈದರ್ ಮತ್ತು ಶಾರ್ಜೀಲ್ ಇಮಾಮ್ ಸೇರಿದ್ದಾರೆ. ಇವರೆಲ್ಲರೂ ಮುಸ್ಲಿಮರು ಮತ್ತು ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಮತ್ತು ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿಯಲ್ಲಿ ಬಂಧಿಸಲ್ಪಟ್ಟಿದ್ದಾರೆ. ಅವರಲ್ಲಿ ಹಲವರು ವಿಚಾರಣೆಯಿಲ್ಲದೆ ವರ್ಷಗಳ ಕಾಲ ಜೈಲಿನಲ್ಲಿ ಕಳೆದಿದ್ದಾರೆ.

ಸಹ ಆರೋಪಿಗಳಲ್ಲಿ ಒಬ್ಬರಾದ ಶಿಫಾ-ಉರ್-ರೆಹಮಾನ್ ಈಗಾಗಲೇ ಮೂರು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದಾರೆ. ರಾಜ್ಯವು ಯಾವುದೇ ನಿಜವಾದ ಪುರಾವೆಗಳನ್ನು ಒದಗಿಸಲು ವಿಫಲವಾಗಿದೆ ಎಂದು ಅವರ ಕುಟುಂಬ ಹೇಳಿಕೊಂಡಿದೆ. ಅವರ ಪತ್ನಿ ಸಬಿಹಾ ಅವರು, “ನಮ್ಮ ಮಕ್ಕಳು ತಮ್ಮ ತಂದೆಯಿಲ್ಲದೆ ಬೆಳೆಯುತ್ತಿದ್ದಾರೆ. ಪ್ರತಿ ಕೆಲವು ತಿಂಗಳಿಗೊಮ್ಮೆ ನ್ಯಾಯಾಲಯವು ಈ ಬಾರಿ ಅಂತಿಮವಾಗಿ ತೀರ್ಪು ನೀಡುತ್ತದೆ ಎಂದು ನಮಗೆ ಹೇಳಲಾಗುತ್ತದೆ. ಆದರೆ ಈಗ ಮತ್ತೆ ಅದನ್ನೇ ಹೇಳುತ್ತಿದ್ದಾರೆ. ನಮಗೆ ಈಗ ಏನೂ ದೋಚದಾಗಿದೆ” ಎಂದರು.

ನ್ಯಾಯಾಧೀಶರು ಬದಲಾಗಿರುವುದರಿಂದ ದೆಹಲಿ ಪೊಲೀಸರು 17,000 ಪುಟಗಳ ಚಾರ್ಜ್‌ಶೀಟ್ ಸೇರಿದಂತೆ ಎಲ್ಲಾ ಪುರಾವೆಗಳನ್ನು ಮತ್ತೊಮ್ಮೆ ನ್ಯಾಯಾಲಯದಲ್ಲಿ ಹಾಜರುಪಡಿಸಬೇಕಾಗುತ್ತದೆ. ಈ ಹಿಂದೆಯೇ ವಾದಗಳನ್ನು ಪೂರ್ಣಗೊಳಿಸಿದ್ದ ವಿಶೇಷ ಸಾರ್ವಜನಿಕ ಅಭಿಯೋಜಕರಾದ ಅಮಿತ್ ಪ್ರಸಾದ್ ಮತ್ತು ಮಧುಕರ್ ಪಾಂಡೆ ಕೂಡ ತಮ್ಮ ಸಲ್ಲಿಕೆಗಳನ್ನು ಪುನರಾರಂಭಿಸಬೇಕಾಗುತ್ತದೆ.

ನ್ಯಾಯಾಲಯದಲ್ಲಿ ನ್ಯಾಯಾಧೀಶ ಲಲಿತ್ ಕುಮಾರ್ ಎಲ್ಲಾ ವಕೀಲರನ್ನು ವಾದಗಳನ್ನು ಪೂರ್ಣಗೊಳಿಸಲು ತಮ್ಮ ವೇಳಾಪಟ್ಟಿಯನ್ನು ಸಲ್ಲಿಸುವಂತೆ ಕೇಳಿಕೊಂಡರು. “ಇದು ಅಂತ್ಯವಿಲ್ಲದ ಪ್ರಕ್ರಿಯೆಯಲ್ಲ. ಎರಡೂ ಕಡೆಯವರು ಸಹಕರಿಸಬೇಕು” ಎಂದು ಅವರು ಈ ವಾರ ಕಿಕ್ಕಿರಿದ ನ್ಯಾಯಾಲಯದಲ್ಲಿ ಹೇಳಿದರು.

ಆದಾಗ್ಯೂ ನ್ಯಾಯವನ್ನು ಉದ್ದೇಶಪೂರ್ವಕವಾಗಿ ವಿಳಂಬಗೊಳಿಸಲು ಇಂತಹ ಪುನರಾರಂಭಗಳನ್ನು ಬಳಸಲಾಗುತ್ತಿದೆ ಎಂದು ವಿಮರ್ಶಕರು ವಾದಿಸುತ್ತಾರೆ. ಮಾನವ ಹಕ್ಕುಗಳ ವಕೀಲ ಫೈಸಲ್ ಖಾನ್ ಅವರು, “ರಾಜ್ಯವು ಗಂಭೀರವಾಗಿದ್ದರೆ ಈ ರೀತಿ ಮತ್ತೆ ಮತ್ತೆ ಸಂಭವಿಸಲು ಬಿಡುತ್ತಿರಲಿಲ್ಲ. ಜನರು ನ್ಯಾಯಾಂಗದ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುತ್ತಿದ್ದಾರೆ” ಎಂದರು.

ದೆಹಲಿ ಪೊಲೀಸರ ಆರೋಪಪಟ್ಟಿಯಲ್ಲಿ ಗಲಭೆಗಳು ಸಿಎಎ ವಿರೋಧಿ ಪ್ರತಿಭಟನೆಗಳ ಸಮಯದಲ್ಲಿ ನಡೆದ ಪೂರ್ವಯೋಜಿತ ಪಿತೂರಿ ಎಂದು ಆರೋಪಿಸಲಾಗಿದೆ. ಇದು ಮುಸ್ಲಿಂ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಹಿಂಸಾಚಾರಕ್ಕೆ ಸಂಚು ರೂಪಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

ಆದರೆ ವಕೀಲರು ಮತ್ತು  ಕಾರ್ಯಕರ್ತರು ಇದನ್ನು ತಿರಸ್ಕರಿಸಿದ್ದಾರೆ. ಹಿಂದೂ ಗುಂಪುಗಳು ಮುಸ್ಲಿಂ ನೆರೆಹೊರೆಗಳು, ಮಸೀದಿಗಳು ಮತ್ತು ಅಂಗಡಿಗಳ ಮೇಲೆ ದಾಳಿ ಮಾಡುತ್ತಿರುವುದನ್ನು ತೋರಿಸುವ ವೀಡಿಯೊಗಳು ಮತ್ತು ಸಾಕ್ಷಿಗಳ ಸಾಕ್ಷ್ಯಗಳನ್ನು ಇವರು ತೋರಿಸಿದ್ದಾರೆ.

ಹಿರಿಯ ಕಾರ್ಯಕರ್ತೆ ಕವಿತಾ ಕೃಷ್ಣನ್ ಅವರು, “ನಿಜವಾದ ಗಲಭೆಕೋರರ ವಿರುದ್ಧ ಸಾಕಷ್ಟು ಪುರಾವೆಗಳಿವೆ. ಅವರಲ್ಲಿ ಹೆಚ್ಚಿನವರು ಬಹುಸಂಖ್ಯಾತ ಸಮುದಾಯದವರಾಗಿದ್ದಾರೆ. ಮುಸ್ಲಿಮರನ್ನು ಮಾತ್ರ ಬಂಧಿಸಿರುವುದು ಆಘಾತಕಾರಿ. ಇದು ಕೇವಲ ಅನ್ಯಾಯವಲ್ಲ, ಭಿನ್ನಾಭಿಪ್ರಾಯದ ಧ್ವನಿಗಳನ್ನು ಮೌನಗೊಳಿಸುವ ಪಿತೂರಿಯಾಗಿದೆ” ಎಂದಿದ್ದಾರೆ.

ಗಲಭೆಗೆ ಮುನ್ನ ದ್ವೇಷ ಭಾಷಣ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳದಿದ್ದಕ್ಕಾಗಿ ಮತ್ತು ಪಕ್ಷಪಾತದ ತನಿಖೆಗಾಗಿ ದೆಹಲಿ ಪೊಲೀಸರನ್ನು ಆಮ್ನೆಸ್ಟಿ ಇಂಟರ್‌ನ್ಯಾಷನಲ್‌ನ 2021ರ ವರದಿಯು ಟೀಕಿಸಿತ್ತು. ಬಹಿರಂಗವಾಗಿ ಹಿಂಸಾಚಾರಕ್ಕೆ ಕರೆ ನೀಡಿದ ಬಿಜೆಪಿ ನಾಯಕರ ವಿರುದ್ಧ ಯಾವುದೇ ಸರಿಯಾದ ಕ್ರಮ ಕೈಗೊಳ್ಳಲಾಗಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಗಲಭೆಯಲ್ಲಿ ತನ್ನ ಮಗನನ್ನು ಕಳೆದುಕೊಂಡ ಅಸ್ಮಾ ಬೇಗಂ ಅವರು, “ಅವರು ನನ್ನ ಮಗನನ್ನು ಹತ್ಯೆ ಮಾಡಿ, ನಮ್ಮ ಮನೆಯನ್ನು ಸುಟ್ಟುಹಾಕಿದರು. ಈಗ ಅವರು ನ್ಯಾಯಾಲಯದಲ್ಲಿ ನಮ್ಮ ಭರವಸೆಯನ್ನು ಹಿಸುಕುತ್ತಿದ್ದಾರೆ. ನ್ಯಾಯಾಧೀಶರು ಬದಲಾಗುತ್ತಲೇ ಇದ್ದರೆ, ನಮಗೆ ನ್ಯಾಯ ಹೇಗೆ ಸಿಗುತ್ತದೆ?” ಎಂದು ಕಣ್ಣೀರು ಹಾಕುತ್ತಾ ಹೇಳಿದರು.

ಪ್ರಸ್ತುತ ಹೀಗೆ ಮುಂದುವರಿದರೆ ಪ್ರಕರಣವು ಇನ್ನೂ ಹಲವಾರು ವರ್ಷಗಳವರೆಗೆ ಎಳೆಯಬಹುದು ಎಂದು ಕಾನೂನು ತಜ್ಞರು ಅಭಿಪ್ರಾಯಿಸಿದ್ದಾರೆ. ವಿಚಾರಣೆ ಪ್ರಾರಂಭವಾಗುವ ಹೊತ್ತಿಗೆ ಹೆಚ್ಚಿನ ಸಾಕ್ಷ್ಯಗಳು ದುರ್ಬಲವಾಗಬಹುದು ಮತ್ತು ಸಾಕ್ಷಿಗಳು ಇನ್ನು ಮುಂದೆ ಪ್ರಮುಖ ವಿವರಗಳನ್ನು ನೆನಪಿಸಿಕೊಳ್ಳದಿರಬಹುದು ಎಂದು ಹಲವರು ಅಭಿಪ್ರಾಯಿಸಿದ್ದಾರೆ.

2020ರ ದೆಹಲಿ ಗಲಭೆ ಪ್ರಕರಣವು ಈಗ ನ್ಯಾಯವ್ಯವಸ್ಥೆಯಲ್ಲಿ ತಮ್ಮ ಸ್ಥಾನದ ಬಗ್ಗೆ ಮುಸ್ಲಿಮರಲ್ಲಿ ಹೆಚ್ಚುತ್ತಿರುವ ಹತಾಶೆಯ ಸಂಕೇತವಾಗಿದೆ. ಪ್ರತಿ ವಿಳಂಬದೊಂದಿಗೆ, ಭರವಸೆಗಳು ಸ್ವಲ್ಪ ಹೆಚ್ಚು ಕುಸಿಯುತ್ತವೆ.
ಈಗ ಬೇಡಿಕೆ ಸ್ಪಷ್ಟವಾಗಿದೆ. ಇಂತಹ ವಿಳಂಬವನ್ನು ನಿಲ್ಲಿಸಿ, ನೆಪಗಳನ್ನು ನಿಲ್ಲಿಸಿ ಮತ್ತು ವಿಚಾರಣೆಯನ್ನು ಪ್ರಾರಂಭಿಸಿ ಎಂದು ಸೀಲಾಂಪುರದ ಸಮಾಜ ಸೇವಕ ಮೊಹಮ್ಮದ್ ಆರಿಫ್ ಹೇಳುತ್ತಾರೆ.

ಮುಂದಿನ ವಿಚಾರಣೆಯನ್ನು ಜೂನ್ 6 ಕ್ಕೆ ನಿಗದಿಪಡಿಸಲಾಗಿದೆ. ಆದರೆ ಅನೇಕರು ದೆಹಲಿಯ ಮುಸ್ಲಿಮರಿಗೆ ನ್ಯಾಯ ಎಂದಾದರೂ ಸಿಗುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ.

ಬೇಷರತ್‌ ಗಾಝಾ ಕದನ ವಿರಾಮ ನಿರ್ಣಯಕ್ಕೆ ವಿಶ್ವಸಂಸ್ಥೆಯಲ್ಲಿ ಅಮೆರಿಕ ಮತ್ತೆ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...