Homeಮುಖಪುಟಪೊಲೀಸ್ ಕಿರುಕುಳದ ಆರೋಪ ಮಾಡಿದ ಪತ್ರಕರ್ತರು: ಮಧ್ಯಂತರ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್ ನಕಾರ

ಪೊಲೀಸ್ ಕಿರುಕುಳದ ಆರೋಪ ಮಾಡಿದ ಪತ್ರಕರ್ತರು: ಮಧ್ಯಂತರ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್ ನಕಾರ

- Advertisement -
- Advertisement -

ಭಿಂಡ್ ಪೊಲೀಸರಿಂದ ಕಸ್ಟಡಿ ಹಿಂಸಾಚಾರ, ಜಾತಿ ಆಧಾರಿತ ನಿಂದನೆ ಮತ್ತು ಜೀವ ಬೆದರಿಕೆ ಆರೋಪ ಮಾಡಿರುವ ಮಧ್ಯಪ್ರದೇಶ ಮೂಲದ ಇಬ್ಬರು ಪತ್ರಕರ್ತರ ಪರವಾಗಿ ಯಾವುದೇ ಮಧ್ಯಂತರ ಆದೇಶ ಹೊರಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು, ಶಶಿಕಾಂತ್ ಜಾತವ್ ಮತ್ತು ಅಮರಕಾಂತ್ ಸಿಂಗ್ ಚೌಹಾಣ್ ಎಂಬ ಇಬ್ಬರು ಪತ್ರಕರ್ತರಿಗೆ ಸಂಬಂಧಿಸಿದ ಪ್ರಕರಣದ ನಿಖರ ಸ್ವರೂಪದ ಬಗ್ಗೆ ಅರಿವು ಮೂಡಿಸದ ಹೊರತು, ಬಂಧನದಿಂದ ರಕ್ಷಣೆ ನೀಡುವ ಮಧ್ಯಂತರ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ ಎಂದು ಹೇಳಿರುವುದಾಗಿ ವರದಿ ತಿಳಿಸಿದೆ.

ಅರ್ಜಿದಾರರು ಈಗಾಗಲೇ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ ಎಂಬುವುದನ್ನು ತಿಳಿಸಬೇಕಿತ್ತು ಎಂದು ನ್ಯಾಯಾಲಯ ಹೇಳಿದೆ. ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರರ ಪರ ವಕೀಲೆ ವಾರಿಷಾ ಫರಾಸತ್, ವರದಿಯ ಪ್ರಕಾರ, ಇದು ಮಧ್ಯಪ್ರದೇಶದ ಪ್ರಕರಣ ಆಗಿರುವುದರಿಂದ ದೆಹಲಿ ಹೈಕೋರ್ಟ್ ಈ ವಿಷಯವನ್ನು ಕೈಗೆತ್ತಿಕೊಳ್ಳಲು ಅಧಿಕಾರ ವ್ಯಾಪ್ತಿಯನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.

ಅರ್ಜಿದಾರರಿಗೆ ಮಧ್ಯಪ್ರದೇಶ ಹೈಕೋರ್ಟ್‌ಗೆ ಹೋಗಲು ತಡೆಯಾಗಿರುವುದು ಏನು? ಎಂದು ನ್ಯಾಯಾಲಯ ಪ್ರಶ್ನಿಸಿದೆ ಮತ್ತು ಆರೋಪಗಳನ್ನು ಹೊರಿಸಲಾಗಿರುವ ಭಿಂಡ್ ಎಸ್‌ಪಿ ಅಜಿತ್ ಯಾದವ್ ಅವರನ್ನು ಅರ್ಜಿಯಲ್ಲಿ ಪಕ್ಷವಾಗಿ ಸೇರಿಸಲಾಗಿಲ್ಲ ಎಂದಿದೆ.

ನಂತರ ನ್ಯಾಯಾಲಯ ಮಧ್ಯ ಪ್ರದೇಶ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ, ಪ್ರಕರಣದ ಮುಂದಿನ ವಿಚಾರಣೆಯನ್ನು ಜೂನ್ 9ಕ್ಕೆ ನಿಗದಿ ಮಾಡಿದೆ.

ಸ್ವರಾಜ್ ಎಕ್ಸ್‌ಪ್ರೆಸ್‌ನ ಅಮರ್‌ಕಾಂತ್ ಸಿಂಗ್ ಚೌಹಾಣ್ ಮತ್ತು ದೈನಿಕ್ ಬೆಜೋರ್ ರತ್ನದ ಶಶಿಕಾಂತ್ ಜಾತವ್ ಅವರು ಮೇ 1ರಂದು ತಮ್ಮನ್ನು ಅಪಹರಿಸಿ, ಕಸ್ಟಡಿಯಲ್ಲಿ ಹಲ್ಲೆ ನಡೆಸಿ, ಭಿಂಡ್‌ನ ಪೊಲೀಸ್ ಠಾಣೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಅಸಿತ್ ಯಾದವ್ ಮತ್ತು ಅವರ ಸಹೋದ್ಯೋಗಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ನ್ಯಾಯಾಲಯದ ಮೊರೆ ಹೋಗಿದ್ದರು.

ತಮ್ಮ ವರದಿಗಳ ಮೂಲಕ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದ್ದಕ್ಕಾಗಿ ತಮ್ಮನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಪತ್ರಕರ್ತರು ಆರೋಪಿಸಿದ್ದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ತಮ್ಮ ರಿಟ್ ಅರ್ಜಿಯಲ್ಲಿ, ಚೌಹಾಣ್ ಮತ್ತು ಜಾತವ್ ಅವರು ಮಧ್ಯಪ್ರದೇಶ ಪೊಲೀಸರು ತಮ್ಮ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್‌ ಅನ್ನು ಕೋರಿದ್ದರು. ಆದರೆ, ನ್ಯಾಯಾಲಯ ರಕ್ಷಣೆ ಒದಗಿಸಲು ನಿರಾಕರಿಸಿದೆ.

ಆದಾಗ್ಯೂ, ಜೀವಕ್ಕೆ ಬೆದರಿಕೆ ಇದ್ದರೆ ಅರ್ಜಿದಾರರ ರಕ್ಷಣೆಗೆ ಬರುವುದಾಗಿ ನ್ಯಾಯಾಲಯ ಭರವಸೆ ನೀಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಮೇ 19ರಂದು, ಪೊಲೀಸರಿಂದ ಕಿರುಕುಳ ಅನುಭವಿಸಿದ ನಂತರ ಇಬ್ಬರು ಪತ್ರಕರ್ತರು ದೆಹಲಿಗೆ ಪಲಾಯನ ಮಾಡಿದ್ದರು. ನಂತರ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಭಾರತೀಯ ಪತ್ರಿಕಾ ಮಂಡಳಿಗೆ ಸಹ ದೂರು ನೀಡಿದ್ದರು ಎಂದು ವರದಿಗಳು ಹೇಳಿವೆ.

ಪೊಲೀಸ್ ವರಿಷ್ಠಾಧಿಕಾರಿಯ ಕೊಠಡಿಯಲ್ಲಿ 5ಕ್ಕೂ ಹೆಚ್ಚು ಪತ್ರಕರ್ತರು ಇದ್ದರು. ಅವರು ನಾವು ತಲುಪುವ ಮೊದಲು ದೈಹಿಕ ಕಿರುಕುಳಕ್ಕೆ ಒಳಗಾಗಿದ್ದರು ಎಂದು ಪತ್ರಕರ್ತರು ಆರೋಪಿಸಿದ್ದಾರೆ.

ಸ್ಥಳೀಯ ಪೊಲೀಸರೊಂದಿಗೆ ಸೇರಿ ಚಂಬಲ್ ನದಿಯಲ್ಲಿ ನಡೆಸುತ್ತಿರುವ ಮರಳು ಮಾಫಿಯಾ ವರದಿಗಳು ಪ್ರಕಟಿಸಿದ ಬಗ್ಗೆ ಎಸ್‌ಪಿ ಅಸಿತ್ ಯಾದವ್ ಅವರಿಗೆ ಅಸಮಾಧಾನ ಇತ್ತು ಎಂದು ಚೌಹಾಣ್ ಮತ್ತು ಗೋಯಲ್ ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಹಲ್ಲೆಗೆ ಸಂಬಂಧಿಸಿದ ಎಲ್ಲಾ ಆರೋಪಗಳನ್ನು ಕೈಬಿಡುವಂತೆ ಯಾದವ್ ಮತ್ತು ಇತರ ಪೊಲೀಸ್ ಅಧಿಕಾರಿಗಳು ತಮ್ಮ ಮೇಲೆ ಒತ್ತಡ ಹೇರಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಯಾದವ್ ಎಲ್ಲಾ ಆರೋಪಗಳನ್ನು ಸುಳ್ಳು ಎಂದು ತಳ್ಳಿಹಾಕಿದ್ದು, “ಅವರು ಪತ್ರಕರ್ತರಲ್ಲ, ಅವರು ಬ್ಲ್ಯಾಕ್‌ಮೇಲರ್‌ಗಳು” ಎಂದು ಮೇ ತಿಂಗಳಲ್ಲಿ ನ್ಯೂಸ್‌ಲಾಂಡ್ರಿಗೆ ತಿಳಿಸಿದ್ದರು ಎನ್ನಲಾಗಿದೆ.

ಮೇ 28ರಂದು, ದೆಹಲಿ ಹೈಕೋರ್ಟ್ ಚೌಹಾಣ್ ಅವರಿಗೆ ಎರಡು ತಿಂಗಳ ಕಾಲ ರಕ್ಷಣೆ ನೀಡುವಂತೆ ದೆಹಲಿ ಪೊಲೀಸರಿಗೆ ಆದೇಶಿಸಿತ್ತು. ಈ ರಕ್ಷಣೆ ಇನ್ನೂ ಜಾರಿಯಲ್ಲಿದೆ ಎಂದು ಲೈವ್ ಲಾ ವರದಿ ಮಾಡಿದೆ.

“ಈ ಮಧ್ಯೆ, ನ್ಯಾಯವ್ಯಾಪ್ತಿಯ [ಮಧ್ಯಪ್ರದೇಶ] ಹೈಕೋರ್ಟ್ ಅನ್ನು ಸಂಪರ್ಕಿಸಿ ಮತ್ತು ಅಲ್ಲಿ ನೀವು ಪರಿಹಾರ ಪಡೆಯಿರಿ” ಎಂದು ನ್ಯಾಯಾಲಯವು ಚೌಹಾಣ್ ಅವರಿಗೆ ಮೌಖಿಕವಾಗಿ ನಿರ್ದೇಶಿಸಿತ್ತು.

ಜಾತವ್ ಕೂಡ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಈ ವಿಷಯವನ್ನು ಇನ್ನೂ ಕೈಗೆತ್ತಿಕೊಂಡಿಲ್ಲ. ಪ್ರಕರಣವನ್ನು ಜುಲೈ 14 ರಂದು ವಿಚಾರಣೆ ನಡೆಸಲು ಮರು ಅಧಿಸೂಚನೆ ಹೊರಡಿಸಲಾಗಿದೆ.

ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಅವಕಾಶ ಮಾಡಿಕೊಟ್ಟ ಬಿಜೆಪಿ ಮಾಜಿ ಪದಾಧಿಕಾರಿ, ಪ್ರಿಯಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...