Homeಮುಖಪುಟಪೊಲೀಸ್ ಕಿರುಕುಳದ ಆರೋಪ ಮಾಡಿದ ಪತ್ರಕರ್ತರು: ಮಧ್ಯಂತರ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್ ನಕಾರ

ಪೊಲೀಸ್ ಕಿರುಕುಳದ ಆರೋಪ ಮಾಡಿದ ಪತ್ರಕರ್ತರು: ಮಧ್ಯಂತರ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್ ನಕಾರ

- Advertisement -
- Advertisement -

ಭಿಂಡ್ ಪೊಲೀಸರಿಂದ ಕಸ್ಟಡಿ ಹಿಂಸಾಚಾರ, ಜಾತಿ ಆಧಾರಿತ ನಿಂದನೆ ಮತ್ತು ಜೀವ ಬೆದರಿಕೆ ಆರೋಪ ಮಾಡಿರುವ ಮಧ್ಯಪ್ರದೇಶ ಮೂಲದ ಇಬ್ಬರು ಪತ್ರಕರ್ತರ ಪರವಾಗಿ ಯಾವುದೇ ಮಧ್ಯಂತರ ಆದೇಶ ಹೊರಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು, ಶಶಿಕಾಂತ್ ಜಾತವ್ ಮತ್ತು ಅಮರಕಾಂತ್ ಸಿಂಗ್ ಚೌಹಾಣ್ ಎಂಬ ಇಬ್ಬರು ಪತ್ರಕರ್ತರಿಗೆ ಸಂಬಂಧಿಸಿದ ಪ್ರಕರಣದ ನಿಖರ ಸ್ವರೂಪದ ಬಗ್ಗೆ ಅರಿವು ಮೂಡಿಸದ ಹೊರತು, ಬಂಧನದಿಂದ ರಕ್ಷಣೆ ನೀಡುವ ಮಧ್ಯಂತರ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ ಎಂದು ಹೇಳಿರುವುದಾಗಿ ವರದಿ ತಿಳಿಸಿದೆ.

ಅರ್ಜಿದಾರರು ಈಗಾಗಲೇ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ ಎಂಬುವುದನ್ನು ತಿಳಿಸಬೇಕಿತ್ತು ಎಂದು ನ್ಯಾಯಾಲಯ ಹೇಳಿದೆ. ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರರ ಪರ ವಕೀಲೆ ವಾರಿಷಾ ಫರಾಸತ್, ವರದಿಯ ಪ್ರಕಾರ, ಇದು ಮಧ್ಯಪ್ರದೇಶದ ಪ್ರಕರಣ ಆಗಿರುವುದರಿಂದ ದೆಹಲಿ ಹೈಕೋರ್ಟ್ ಈ ವಿಷಯವನ್ನು ಕೈಗೆತ್ತಿಕೊಳ್ಳಲು ಅಧಿಕಾರ ವ್ಯಾಪ್ತಿಯನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.

ಅರ್ಜಿದಾರರಿಗೆ ಮಧ್ಯಪ್ರದೇಶ ಹೈಕೋರ್ಟ್‌ಗೆ ಹೋಗಲು ತಡೆಯಾಗಿರುವುದು ಏನು? ಎಂದು ನ್ಯಾಯಾಲಯ ಪ್ರಶ್ನಿಸಿದೆ ಮತ್ತು ಆರೋಪಗಳನ್ನು ಹೊರಿಸಲಾಗಿರುವ ಭಿಂಡ್ ಎಸ್‌ಪಿ ಅಜಿತ್ ಯಾದವ್ ಅವರನ್ನು ಅರ್ಜಿಯಲ್ಲಿ ಪಕ್ಷವಾಗಿ ಸೇರಿಸಲಾಗಿಲ್ಲ ಎಂದಿದೆ.

ನಂತರ ನ್ಯಾಯಾಲಯ ಮಧ್ಯ ಪ್ರದೇಶ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ, ಪ್ರಕರಣದ ಮುಂದಿನ ವಿಚಾರಣೆಯನ್ನು ಜೂನ್ 9ಕ್ಕೆ ನಿಗದಿ ಮಾಡಿದೆ.

ಸ್ವರಾಜ್ ಎಕ್ಸ್‌ಪ್ರೆಸ್‌ನ ಅಮರ್‌ಕಾಂತ್ ಸಿಂಗ್ ಚೌಹಾಣ್ ಮತ್ತು ದೈನಿಕ್ ಬೆಜೋರ್ ರತ್ನದ ಶಶಿಕಾಂತ್ ಜಾತವ್ ಅವರು ಮೇ 1ರಂದು ತಮ್ಮನ್ನು ಅಪಹರಿಸಿ, ಕಸ್ಟಡಿಯಲ್ಲಿ ಹಲ್ಲೆ ನಡೆಸಿ, ಭಿಂಡ್‌ನ ಪೊಲೀಸ್ ಠಾಣೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಅಸಿತ್ ಯಾದವ್ ಮತ್ತು ಅವರ ಸಹೋದ್ಯೋಗಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ನ್ಯಾಯಾಲಯದ ಮೊರೆ ಹೋಗಿದ್ದರು.

ತಮ್ಮ ವರದಿಗಳ ಮೂಲಕ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದ್ದಕ್ಕಾಗಿ ತಮ್ಮನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಪತ್ರಕರ್ತರು ಆರೋಪಿಸಿದ್ದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ತಮ್ಮ ರಿಟ್ ಅರ್ಜಿಯಲ್ಲಿ, ಚೌಹಾಣ್ ಮತ್ತು ಜಾತವ್ ಅವರು ಮಧ್ಯಪ್ರದೇಶ ಪೊಲೀಸರು ತಮ್ಮ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್‌ ಅನ್ನು ಕೋರಿದ್ದರು. ಆದರೆ, ನ್ಯಾಯಾಲಯ ರಕ್ಷಣೆ ಒದಗಿಸಲು ನಿರಾಕರಿಸಿದೆ.

ಆದಾಗ್ಯೂ, ಜೀವಕ್ಕೆ ಬೆದರಿಕೆ ಇದ್ದರೆ ಅರ್ಜಿದಾರರ ರಕ್ಷಣೆಗೆ ಬರುವುದಾಗಿ ನ್ಯಾಯಾಲಯ ಭರವಸೆ ನೀಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಮೇ 19ರಂದು, ಪೊಲೀಸರಿಂದ ಕಿರುಕುಳ ಅನುಭವಿಸಿದ ನಂತರ ಇಬ್ಬರು ಪತ್ರಕರ್ತರು ದೆಹಲಿಗೆ ಪಲಾಯನ ಮಾಡಿದ್ದರು. ನಂತರ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಭಾರತೀಯ ಪತ್ರಿಕಾ ಮಂಡಳಿಗೆ ಸಹ ದೂರು ನೀಡಿದ್ದರು ಎಂದು ವರದಿಗಳು ಹೇಳಿವೆ.

ಪೊಲೀಸ್ ವರಿಷ್ಠಾಧಿಕಾರಿಯ ಕೊಠಡಿಯಲ್ಲಿ 5ಕ್ಕೂ ಹೆಚ್ಚು ಪತ್ರಕರ್ತರು ಇದ್ದರು. ಅವರು ನಾವು ತಲುಪುವ ಮೊದಲು ದೈಹಿಕ ಕಿರುಕುಳಕ್ಕೆ ಒಳಗಾಗಿದ್ದರು ಎಂದು ಪತ್ರಕರ್ತರು ಆರೋಪಿಸಿದ್ದಾರೆ.

ಸ್ಥಳೀಯ ಪೊಲೀಸರೊಂದಿಗೆ ಸೇರಿ ಚಂಬಲ್ ನದಿಯಲ್ಲಿ ನಡೆಸುತ್ತಿರುವ ಮರಳು ಮಾಫಿಯಾ ವರದಿಗಳು ಪ್ರಕಟಿಸಿದ ಬಗ್ಗೆ ಎಸ್‌ಪಿ ಅಸಿತ್ ಯಾದವ್ ಅವರಿಗೆ ಅಸಮಾಧಾನ ಇತ್ತು ಎಂದು ಚೌಹಾಣ್ ಮತ್ತು ಗೋಯಲ್ ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಹಲ್ಲೆಗೆ ಸಂಬಂಧಿಸಿದ ಎಲ್ಲಾ ಆರೋಪಗಳನ್ನು ಕೈಬಿಡುವಂತೆ ಯಾದವ್ ಮತ್ತು ಇತರ ಪೊಲೀಸ್ ಅಧಿಕಾರಿಗಳು ತಮ್ಮ ಮೇಲೆ ಒತ್ತಡ ಹೇರಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಯಾದವ್ ಎಲ್ಲಾ ಆರೋಪಗಳನ್ನು ಸುಳ್ಳು ಎಂದು ತಳ್ಳಿಹಾಕಿದ್ದು, “ಅವರು ಪತ್ರಕರ್ತರಲ್ಲ, ಅವರು ಬ್ಲ್ಯಾಕ್‌ಮೇಲರ್‌ಗಳು” ಎಂದು ಮೇ ತಿಂಗಳಲ್ಲಿ ನ್ಯೂಸ್‌ಲಾಂಡ್ರಿಗೆ ತಿಳಿಸಿದ್ದರು ಎನ್ನಲಾಗಿದೆ.

ಮೇ 28ರಂದು, ದೆಹಲಿ ಹೈಕೋರ್ಟ್ ಚೌಹಾಣ್ ಅವರಿಗೆ ಎರಡು ತಿಂಗಳ ಕಾಲ ರಕ್ಷಣೆ ನೀಡುವಂತೆ ದೆಹಲಿ ಪೊಲೀಸರಿಗೆ ಆದೇಶಿಸಿತ್ತು. ಈ ರಕ್ಷಣೆ ಇನ್ನೂ ಜಾರಿಯಲ್ಲಿದೆ ಎಂದು ಲೈವ್ ಲಾ ವರದಿ ಮಾಡಿದೆ.

“ಈ ಮಧ್ಯೆ, ನ್ಯಾಯವ್ಯಾಪ್ತಿಯ [ಮಧ್ಯಪ್ರದೇಶ] ಹೈಕೋರ್ಟ್ ಅನ್ನು ಸಂಪರ್ಕಿಸಿ ಮತ್ತು ಅಲ್ಲಿ ನೀವು ಪರಿಹಾರ ಪಡೆಯಿರಿ” ಎಂದು ನ್ಯಾಯಾಲಯವು ಚೌಹಾಣ್ ಅವರಿಗೆ ಮೌಖಿಕವಾಗಿ ನಿರ್ದೇಶಿಸಿತ್ತು.

ಜಾತವ್ ಕೂಡ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಈ ವಿಷಯವನ್ನು ಇನ್ನೂ ಕೈಗೆತ್ತಿಕೊಂಡಿಲ್ಲ. ಪ್ರಕರಣವನ್ನು ಜುಲೈ 14 ರಂದು ವಿಚಾರಣೆ ನಡೆಸಲು ಮರು ಅಧಿಸೂಚನೆ ಹೊರಡಿಸಲಾಗಿದೆ.

ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಅವಕಾಶ ಮಾಡಿಕೊಟ್ಟ ಬಿಜೆಪಿ ಮಾಜಿ ಪದಾಧಿಕಾರಿ, ಪ್ರಿಯಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...