Homeಮುಖಪುಟಸೇನೆಯ ವಿರುದ್ಧ ಮಾನನಷ್ಟ ಹೇಳಿಕೆ ಆರೋಪ: ರಾಹುಲ್ ಗಾಂಧಿ ವಿರುದ್ಧದ ಸಮನ್ಸ್ ರದ್ಧತಿಗೆ ನಿರಾಕರಿಸಿದ ಅಲಹಾಬಾದ್...

ಸೇನೆಯ ವಿರುದ್ಧ ಮಾನನಷ್ಟ ಹೇಳಿಕೆ ಆರೋಪ: ರಾಹುಲ್ ಗಾಂಧಿ ವಿರುದ್ಧದ ಸಮನ್ಸ್ ರದ್ಧತಿಗೆ ನಿರಾಕರಿಸಿದ ಅಲಹಾಬಾದ್ ಹೈಕೋರ್ಟ್

- Advertisement -
- Advertisement -

ಲಕ್ನೋ: ಭಾರತೀಯ ಸೇನೆಯ ಕುರಿತು ಹೇಳಿಕೆಗಳಿಗಾಗಿ ತಮ್ಮ ವಿರುದ್ಧದ ಸಮನ್ಸ್ ರದ್ದುಗೊಳಿಸುವಂತೆ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ವಾಕ್ ಸ್ವಾತಂತ್ರ್ಯದ ಹಕ್ಕು ಸಶಸ್ತ್ರ ಪಡೆಗಳ ವಿರುದ್ಧ ಮಾನನಷ್ಟ ಹೇಳಿಕೆಗಳನ್ನು ನೀಡುವುದಕ್ಕೆ ವಿಸ್ತರಿಸುವುದಿಲ್ಲ ಎಂದು ಅದು ಹೇಳಿದೆ.

ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ ಅವರ ಪೀಠವು ರಾಹುಲ್ ಗಾಂಧಿಯವರ ಮನವಿಯನ್ನು ತಿರಸ್ಕರಿಸಿದೆ. ಮಾನನಷ್ಟ ಪ್ರಕರಣ ಮತ್ತು ಫೆಬ್ರವರಿ 2025ರಲ್ಲಿ ಲಕ್ನೋದ ಜನಪ್ರತಿನಿಧಿಗಳ ನ್ಯಾಯಾಲಯವು ನೀಡಿದ ಸಮನ್ಸ್ ಆದೇಶವನ್ನು ಪ್ರಶ್ನಿಸಿ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. “ನಿಸ್ಸಂದೇಹವಾಗಿ, ಭಾರತದ ಸಂವಿಧಾನದ ವಿಧಿ 19(1)(ಎ) ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಖಾತರಿಪಡಿಸುತ್ತದೆ. [ಆದರೆ] ಈ ಸ್ವಾತಂತ್ರ್ಯವು ಸಮಂಜಸವಾದ ನಿರ್ಬಂಧಗಳಿಗೆ ಒಳಪಟ್ಟಿರುತ್ತದೆ ಮತ್ತು ಯಾವುದೇ ವ್ಯಕ್ತಿಗೆ ಮಾನನಷ್ಟಕರ ಅಥವಾ ಭಾರತೀಯ ಸೇನೆಗೆ ಮಾನನಷ್ಟಕರವಾದ ಹೇಳಿಕೆಗಳನ್ನು ನೀಡುವ ಸ್ವಾತಂತ್ರ್ಯವನ್ನು ಇದು ಒಳಗೊಂಡಿಲ್ಲ” ಎಂದು ಹೇಳಿದರು.

ಗಡಿ ರಸ್ತೆಗಳ ಸಂಘಟನೆಯ (BRO) ಮಾಜಿ ನಿರ್ದೇಶಕ ಉದಯ್ ಶಂಕರ್ ಶ್ರೀವಾಸ್ತವ ಅವರು ಸಲ್ಲಿಸಿರುವ ಮತ್ತು ಪ್ರಸ್ತುತ ಲಕ್ನೋದ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಮಾನನಷ್ಟ ಮೊಕದ್ದಮೆಯಲ್ಲಿ ಗಾಂಧಿಯವರು 2022ರ ಡಿಸೆಂಬರ್ 16ರಂದು ತಮ್ಮ ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಮಾಡಿದ ಅವಹೇಳನಕಾರಿ ಹೇಳಿಕೆಗಳು ಎಂದು ಹೇಳಲಾಗಿದೆ.

2022ರ ಡಿಸೆಂಬರ್ 9ರಂದು ಭಾರತ ಮತ್ತು ಚೀನಾದ ಸೇನೆಗಳ ನಡುವಿನ ಘರ್ಷಣೆಗೆ ಸಂಬಂಧಿಸಿದಂತೆ ಗಾಂಧಿಯವರ ಆಕ್ಷೇಪಾರ್ಹ ಹೇಳಿಕೆಗಳು ಭಾರತೀಯ ಸೇನೆಯ ಮಾನಹಾನಿಯನ್ನುಂಟುಮಾಡಿವೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಆ ಸಮಯದಲ್ಲಿ ಗಾಂಧಿಯವರು, “ಕೆಲವು ಜನರು ಭಾರತ್ ಜೋಡೋ ಯಾತ್ರೆ ಕುರಿತು ಪ್ರಶ್ನಿಸುತ್ತಾರೆ. ಆದರೆ ಚೀನಾ ಭಾರತದ 2,000 ಚದರ ಕಿ.ಮೀ. ಪ್ರದೇಶವನ್ನು ವಶಪಡಿಸಿಕೊಂಡು, 20 ಭಾರತೀಯ ಸೈನಿಕರನ್ನು ಕೊಂದು, ಅರುಣಾಚಲ ಪ್ರದೇಶದಲ್ಲಿ ನಮ್ಮ ಸೈನಿಕರನ್ನು ಥಳಿಸಿದ್ದರ ಕುರಿತು ಅವರು ಒಂದೇ ಒಂದು ಪ್ರಶ್ನೆಯನ್ನು ಕೇಳುವುದಿಲ್ಲ. ಹಾಗೆಯೇ ಭಾರತೀಯ ಮಾಧ್ಯಮಗಳು ಇದರ ಬಗ್ಗೆ ಕೇಳುವುದಿಲ್ಲ. ಇದು ನಿಜವಲ್ಲವೇ? ರಾಷ್ಟ್ರವು ಇದನ್ನೆಲ್ಲಾ ನೋಡುತ್ತಿದೆ. ಜನರಿಗೆ ತಿಳಿದಿಲ್ಲ ಎಂದು ನಟಿಸಬೇಡಿ…” ಎಂದಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ.

ರಾಹುಲ್ ಗಾಂಧಿ ಅವರು ಲಕ್ನೋ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ಇದು ಪ್ರಾಥಮಿಕವಾಗಿ ಅವರ ಹೇಳಿಕೆಗಳು ಭಾರತೀಯ ಸೇನೆ ಮತ್ತು ಅವರ ಕುಟುಂಬಗಳ ಸ್ಥೈರ್ಯ ಕುಗ್ಗಿಸುವಂತೆ ಕಂಡುಬಂದಿದೆ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಸೇನಾ ಅಧಿಕಾರಿಯನ್ನಾಗಲಿ ಅಥವಾ ವೈಯಕ್ತಿಕವಾಗಿ ಯಾರನ್ನು ಮಾನಹಾನಿಗೊಳಿಸಿಲ್ಲ ಎಂದು ರಾಹುಲ್ ವಾದಿಸಿದರೂ, ಹೈಕೋರ್ಟ್ ಇದನ್ನು ತಿರಸ್ಕರಿಸಿತು. ಸೆಕ್ಷನ್ 199(1) Cr.P.C. ಅಡಿಯಲ್ಲಿ ಪರೋಕ್ಷವಾಗಿ ಪ್ರಭಾವಿತರಾದವರನ್ನು ಸಹ “ಸಂತ್ರಸ್ತ ವ್ಯಕ್ತಿಗಳು” ಎಂದು ಪರಿಗಣಿಸಬಹುದು ಎಂದು ಉಲ್ಲೇಖಿಸಿತು.

ರಾಹುಲ್ ಗಾಂಧಿಯವರ ಅರ್ಜಿಯನ್ನು ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್, ಈ ಪ್ರಾಥಮಿಕ ಹಂತದಲ್ಲಿ ಸ್ಪರ್ಧಾತ್ಮಕ ಹಕ್ಕುಗಳನ್ನು ಮೌಲ್ಯಮಾಪನ ಮಾಡುವ ಅಗತ್ಯವಿಲ್ಲ ಎಂದು ಹೇಳಿತು.

ಎಲ್ಲಾ ಸಂಬಂಧಿತ ಸಂಗತಿಗಳನ್ನು ಪರಿಗಣಿಸಿ ಮತ್ತು ಪ್ರಾಥಮಿಕವಾಗು ಮೇಲ್ನೋಟಕ್ಕೆ ಪ್ರಕರಣ ಅಸ್ತಿತ್ವದಲ್ಲಿದೆ ಎಂಬ ಅಭಿಪ್ರಾಯವನ್ನು ರೂಪಿಸಿದ ನಂತರ “ವಿಚಾರಣಾ ನ್ಯಾಯಾಲಯವು ಸೆಕ್ಷನ್ 500 ಐಪಿಸಿ ಅಡಿಯಲ್ಲಿ ಅಪರಾಧಕ್ಕಾಗಿ ವಿಚಾರಣೆಯನ್ನು ಎದುರಿಸಲು ಅರ್ಜಿದಾರರಿಗೆ ಸಮನ್ಸ್ ಹೊರಡಿಸುವ ನಿರ್ಧಾರಕ್ಕೆ ಸರಿಯಾಗಿ ಬಂದಿದೆ” ಎಂದು ಅಭಿಪ್ರಾಯಿಸಿ, ಗಾಂಧಿಯವರಿಗೆ ಸಮನ್ಸ್ ನೀಡುವ ವಿಚಾರಣಾ ನ್ಯಾಯಾಲಯದ ನಿರ್ಧಾರವನ್ನು ಅದು ಎತ್ತಿಹಿಡಿದಿದೆ.

2025ರ ಫೆಬ್ರವರಿ 11ರಂದು ಆಕ್ಷೇಪಾರ್ಹ ಸಮನ್ಸ್ ಆದೇಶವು … ಹಸ್ತಕ್ಷೇಪಕ್ಕೆ ಕಾರಣವಾಗುವ ಯಾವುದೇ ಕಾನೂನುಬಾಹಿರತೆಯಿಂದ ಕೂಡಿಲ್ಲ ಮತ್ತು ಸೆಕ್ಷನ್ 482 ಸಿಆರ್.ಪಿ.ಸಿ. ಅಡಿಯಲ್ಲಿ ಅರ್ಜಿಯು ಅರ್ಹತೆಯನ್ನು ಹೊಂದಿಲ್ಲ ಮತ್ತು ಅದನ್ನು ವಜಾಗೊಳಿಸಲಾಗಿದೆ ಎಂದು ತೀರ್ಪು ನೀಡಿ ಅರ್ಜಿಯನ್ನು ವಜಾಗೊಳಿಸಿತು.

ರಾಹುಲ್ ಗಾಂಧಿ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದರೂ, ಅವರು ಇನ್ನು ಮುಂದೆ ಯಾವುದೇ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡದಂತೆ ಸ್ಪಷ್ಟವಾಗಿ ನಿರ್ಬಂಧಿಸಿತ್ತು. ಅವರ ಹಿರಿಯ ವಕೀಲರು ಸಹ ಭವಿಷ್ಯದಲ್ಲಿ ಅಂತಹ ಹೇಳಿಕೆಗಳನ್ನು ನೀಡುವುದಿಲ್ಲ ಎಂದು ಮೌಖಿಕ ಭರವಸೆ ನೀಡಿದ್ದರು.

ಬೆಂಗಳೂರು ಕಾಲ್ತುಳಿತ ಹಿನ್ನಲೆ | ಬೃಹತ್ ಕಾರ್ಯಕ್ರಮಗಳಿಗೆ ಹೊಸ ಮಾರ್ಗಸೂಚಿ ರೂಪಿಸಲಿರುವ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...