Homeಕರ್ನಾಟಕಕೆ.ಆರ್‌ ಪೇಟೆ ದಲಿತನ ಸಜೀವ ದಹನ ಪ್ರಕರಣ: ಕೆಳ ಹಂತದ ಪೊಲೀಸ್ ಅಧಿಕಾರಿ ಅಮಾನತು

ಕೆ.ಆರ್‌ ಪೇಟೆ ದಲಿತನ ಸಜೀವ ದಹನ ಪ್ರಕರಣ: ಕೆಳ ಹಂತದ ಪೊಲೀಸ್ ಅಧಿಕಾರಿ ಅಮಾನತು

- Advertisement -
- Advertisement -

ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ತಾಲೂಕಿನ ಕತ್ತರಘಟ್ಟದಲ್ಲಿ ದಲಿತ ಯುವಕ ಜಯಕುಮಾರ್ ಅವರ ಆಪಾದಿತ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಓರ್ವ ಕೆಳ ಹಂತದ ಅಧಿಕಾರಿಯನ್ನು ಅಮಾನತು ಮಾಡಿದೆ.

ಪ್ರಕರಣದ ಎನ್‌ಸಿಆರ್ ದಾಖಲಿಸಿದ ಎಎಸ್‌ಐ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. ಮೃತ ಜಯಕುಮಾರ್ ಅವರಿಗೆ ಜೀವ ಬೆದರಿಕೆ ಇದೆ ಎಂಬ ಮಾಹಿತಿಯನ್ನು ಗಂಭೀರವಾಗಿ ಪರಿಗಣಿಸಿ ಮೇಲಾಧಿಕಾರಿಗಳ ಗಮನಕ್ಕೆ ತರದೆ ನಿರ್ಲಕ್ಷ್ಯ ಮಾಡಿದ ಕಾರಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಎಎಸ್‌ಪಿ ತಿಮ್ಮಯ್ಯ ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ಸರ್ಕಲ್ ಇನ್‌ಸ್ಟೆಕ್ಟರ್ ಆನಂದೆಗೌಡ, ಸಬ್ ಇನ್‌ಸ್ಟೆಕ್ಟರ್ ಸುಬ್ಬಯ್ಯ ಮತ್ತು ಡಿವೈಎಸ್‌ಪಿ ಚೆಲುವರಾಜು ಅವರನ್ನು ಅಮಾನತು ಮಾಡುವಂತೆ ಹೋರಾಟಗಾರರು ಆಗ್ರಹಿಸುತ್ತಿದ್ದಾರೆ ಎಂಬ ನಮ್ಮ ಪ್ರಶ್ನೆಗೆ ಉತ್ತರಿಸಿದ ಎಎಸ್‌ಪಿ,”ಪ್ರಕರಣದಲ್ಲಿ ಸದ್ಯಕ್ಕೆ ಅನಿಲ್‌ ಕುಮಾರ್ ಎಂಬವರ ವಿರುದ್ದ ಮಾತ್ರ ದೂರು ದಾಖಲಾಗಿದೆ. ಅದರ ತನಿಖೆ ಮುಂದುವರಿದಿದೆ. ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳ ಲೋಪ ಕಂಡು ಬಂದರೆ ಮುಂದಿನ ದಿನಗಳಲ್ಲಿ ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

ಎಎಸ್‌ಐ ಕುಮಾರ್ ಅವರು ಕೆಳ ಹಂತದ ಅಧಿಕಾರಿ ಜೊತೆಗೆ ಎಸ್‌ಟಿ ಸಮುದಾಯದವರು ಎಂಬ ಕಾರಣಕ್ಕೆ ಅಮಾನತುಗೊಳಿಸಿ ಕೈತೊಳೆದುಕೊಳ್ಳಲಾಗಿದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಇಲ್ಲ ಆ ರೀತಿಯಾಗಿ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಪ್ರಕರಣದಲ್ಲಿ ಕುಮಾರ್ ಅವರ ನಿರ್ಲಕ್ಷ್ಯ ಕಂಡು ಬಂದಿದೆ. ಹಾಗಾಗಿ, ನಮ್ಮ ವ್ಯಾಪ್ತಿಯಲ್ಲಿ ಕ್ರಮ ಕೈಗೊಂಡಿದ್ದೇವೆ” ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿರುವ ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್‌) ನಾಯಕ ಗುರುಪ್ರಸಾದ್ ಕೆರೆಗೋಡು ಅವರು, “ಎಎಸ್‌ಐ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ ಎಂಬ ಮಾಹಿತಿ ದೊರೆತಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಪ್ರತಿಕ್ರಿಯಿಸುತ್ತೇನೆ. ಅಗತ್ಯವಿದ್ದರೆ ಪತ್ರಿಕಾ ಪ್ರಕಟನೆ ಮೂಲಕ ಪ್ರತಿಕ್ರಿಯೆ ನೀಡುತ್ತೇನೆ ಎಂದಿದ್ದಾರೆ.

ಮಂಡ್ಯ ಜಿಲ್ಲೆಯ ಡಿಎಸ್‌ಎಸ್‌ ಮುಖಂಡ ಬಸ್ತಿ ರಂಗಯ್ಯ ಅವರು ಮಾತನಾಡಿ, “ವಾಡಿಕೆಯಂತೆ ಕೆಳ ಹಂತದ ಅಧಿಕಾರಿಯನ್ನು ಅಮಾನತು ಮಾಡಿ ಪೊಲೀಸರು ಕೈ ತೊಳೆದುಕೊಂಡಿದ್ದಾರೆ. ಮೇಲಾಧಿಕಾರಿಗಳಿಗೆ ಮಾಹಿತಿಯಿಲ್ಲದೆ ಕೆಳ ಹಂತದವರು ಏನೂ ಮಾಡಲು ಸಾಧ್ಯವಿಲ್ಲ. ಹಾಗಾಗಿ, ಜಯಕುಮಾರ್ ಅವರಿಗೆ ಬೆದರಿಕೆ ಇರುವ ಬಗ್ಗೆ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ಇತ್ತು. ಆದರೆ, ಅವರು ನಿರ್ಲಕ್ಷ್ಯ ವಹಿಸಿದ್ದಾರೆ. ಆದ್ದರಿಂದ ಡಿವೈಎಸ್‌ಪಿ ಆದಿಯಾಗಿ ಸಂಬಂಧಿಸಿದ ಎಲ್ಲರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

“ಪ್ರಕರಣದ ತನಿಖೆ ನಾವು ಆರೋಪ ಮಾಡುತ್ತಿರುವ ಅಧಿಕಾರಿಗಳ ವ್ಯಾಪ್ತಿಯಲ್ಲೇ ನಡೆಯುತ್ತಿದೆ. ಅವರು ತಮ್ಮ ಮೇಲಿನ ಆರೋಪ ಮುಚ್ಚಿ ಹಾಕಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಾರೆ. ಆದ್ದರಿಂದ ವಿಶೇಷ ತಂಡದಿಂದ ತನಿಖೆ ಮಾಡಿಸಬೇಕು ಎಂಬುವುದು ನಮ್ಮ ಒತ್ತಾಯವಾಗಿದೆ” ಎಂದಿದ್ದಾರೆ.

ಕತ್ತರಘಟ್ಟದಲ್ಲಿ ದಲಿತ ಯುವಕ ಜಯಕುಮಾರ್ ಅವರನ್ನು ಹುಲ್ಲಿನ ಮೆದೆಗೆ ದೂಡಿ ಸಜೀವವಾಗಿ ಸುಟ್ಟಿರುವ ಆರೋಪವಿದೆ. ಜಯಕುಮಾರ್‌ ಜಮೀನಿನಲ್ಲಿ ಕಳೆದ ಐದಾರು ವರ್ಷಗಳಿಂದ ಅಕ್ರಮವಾಗಿ ಹುಲ್ಲುಮೆದೆ ಹಾಕಿದ್ದಲ್ಲದೆ ಮಾನಸಿಕವಾಗಿ, ದೈಹಿಕವಾಗಿ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ, ಮೇ 16ರಂದು ಜಯಕುಮಾರ್ ಕೆ.ರ್.ಪೇಟೆ ಪೊಲೀಸ್ ಠಾಣೆಯಲ್ಲಿ ಅನಿಲ್‌ ಕುಮಾರ್ ಎಂಬಾತನ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ದೂರು ನೀಡಿದ್ದರು. ಮರುದಿನವೇ ಅವರನ್ನು ಅಮಾನುಷವಾಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ರೌಡಿಶೀಟರ್ ಹಾಗೂ ಪೋಕ್ಸೋ ಕಾಯ್ದೆಯಡಿ ಸೆರೆವಾಸ ಕಂಡಿದ್ದ ಅನಿಲ್‌ ಕುಮಾರ್ ಬಗ್ಗೆ ಅರಿವಿದ್ದ ಸ್ಥಳೀಯ ಪೊಲೀಸರು ಸಕಾಲಿಕ ಮುನ್ನೆಚರಿಕೆ ವಹಿಸದ ಕಾರಣ ಅಮಾಯಕ ದಲಿತನೊಬ್ಬನ ದಾರುಣ ಹತ್ಯೆ ನಡೆದಿದೆ ಎಂದು ದಲಿತ, ಜನರಪರ, ಪ್ರಗತಿಪರ ಸಂಘಟನೆಗಳು ಆರೋಪ ಮಾಡಿವೆ. ಜಯಕುಮಾರ್ ಅವರ ಸಾವಿನ ನ್ಯಾಯಕ್ಕೆ ಆಗ್ರಹಿಸಿ ಮೇ 27ರಂದು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ‘ಕೆ.ಆರ್ ಪೇಟೆ’ ಚಲೋ ಕೂಡ ನಡೆದಿದೆ.

ಕೆ.ಆರ್.ಪೇಟೆ ಚಲೋ: ಸರಕಾರಕ್ಕೆ ದಲಿತ ಜಯಕುಮಾರ್‌ ಹತ್ಯೆಯ ಕುರಿತು ಕೆಲ ಬೇಡಿಕೆ ಸಲ್ಲಿಸಿದ ಪ್ರತಿಭಟನಾ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...